Homeಕ್ರೀಡೆಒಲಂಪಿಕ್‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

ಒಲಿಂಪಿಕ್ಸ್‌‌ ಕ್ರೀಡಾ ಕೂಟದಲ್ಲಿ ಭಾರತೀಯ ಮಹಿಳಾ ಹಾಕಿ ತಂಡ ಮೊದಲ ಬಾರಿ ಸಮಿಫೈನಲ್‌ಗೆ ತಲುಪಿ ಇತಿಹಾಸ ನಿರ್ಮಿಸಿತ್ತು

- Advertisement -
- Advertisement -

ಒಲಿಂಪಿಕ್ಸ್‌ ಕ್ರೀಡಾ ಕೂಟದ ಇತಿಹಾಸದಲ್ಲೇ ಭಾರತೀಯ ಮಹಿಳಾ ಹಾಕಿ ತಂಡ ಮೊದಲ ಬಾರಿಗೆ ಸಮಿಫೈನಲ್ ತಲುಪಿದ್ದು, ಸೆಮಿಫೈನಲ್‌‌ನಲ್ಲಿ ಅರ್ಜೆಂಟೀನಾ ವಿರುದ್ದ 1-2 ಗೋಲ್ ಅಂತರದಲ್ಲಿ ಸೋತಿತ್ತು. ಶುಕ್ರವಾರ (ನಾಳೆ) ಗ್ರೇಟ್‌ ಬ್ರಿಟನ್‌ ತಂಡದ ವಿರುದ್ದ ಕಂಚಿಗಾಗಿ ಆಡಲಿದೆ. ಆದರೆ ಈ ಮಧ್ಯೆ ಭಾರತ ತಲೆ ತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಸೆಮಿಫೈನಲ್‌ನಲ್ಲಿ ಸೋತ ಕೆಲವೆ ಗಂಟೆಗಳ ಅಂತರದಲ್ಲಿ ಮಹಿಳಾ ತಂಡದ ಪ್ರಮುಖ ಆಟಗಾರ್ತಿ ‘ವಂದನಾ ಕಟಾರಿಯಾ’ ಅವರು ದಲಿತೆ ಎನ್ನುವ ಕಾರಣಕ್ಕೆ ಜಾತಿ ನಿಂದನೆಗೆ ಒಳಗಾಗಿದ್ದಾರೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ವಂದನಾ ಕಟಾರಿಯಾ ಒಲಿಂಪಿಕ್ಸ್‌ನಲ್ಲಿ ಹ್ಯಾಟ್ರಿಕ್ ಗೋಲ್‌ ಸಾಧಿಸಿದ ಭಾರತದ ಮೊದಲ ಮಹಿಳಾ ಹಾಕಿ ಆಟಗಾರ್ತಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಭಾರತೀಯ ಮಹಿಳಾ ತಂಡ ಸೋತ ಕೆಲವೆ ಗಂಟೆಗಲ್ಲಿ ಹರಿದ್ವಾರದ ರೋಷನಾಬಾದ್ ಹಳ್ಳಿಯಲ್ಲಿರುವ ಹಾಕಿ ಆಟಗಾರ್ತಿ ವಂದನಾ ಕಟಾರಿಯಾ ಅವರ ಮನೆಯ ಹತ್ತಿರ ಇಬ್ಬರು ಮೇಲ್ಜಾತಿಯ ವ್ಯಕ್ತಿಗಳು ಆಗಮಿಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ: ಮಹಿಳಾ ಹಾಕಿ ತಂಡದ ದಿಟ್ಟ ಆಟಗಾರ್ತಿ ಲಾಲ್‌ರೆಮ್ಸಿಯಾಮಿ

ದುಷ್ಕರ್ಮಿಗಳು ಪಟಾಕಿ ಸಿಡಿಸಿ, ಅಣಕು ಸಂಭ್ರಮಾಚರಣೆ ಮಾಡಿ ನೃತ್ಯ ಮಾಡಿದ್ದು, “ತಂಡದಲ್ಲಿ ಹೆಚ್ಚು ದಲಿತ ಆಟಗಾರರು ಇರುವುದರಿಂದಲೇ ಆಟ ಸೋತಿದೆ” ಎಂದು ಜಾತಿ ನಿಂದನೆ ಮಾಡಿದ್ದಾರೆ ಎಂದು ವಂದನಾ ಅವರ ಕುಟುಂಬವು ಆರೋಪಿಸಿದೆ ಎಂದು ಪತ್ರಿಕೆ ತಿಳಿಸಿದೆ.

“ಪಂದ್ಯವು ಸೋತಿದ್ದರ ಬಗ್ಗೆ ನಮಗೆ ಬೇಸರವಿದೆ. ಆದರೆ ತಂಡವು ಹೋರಾಟ ನಡೆಸಿಯೆ ಪಂದ್ಯದಲ್ಲಿ ಸೋತಿದೆ. ಅದರ ಬಗ್ಗೆ ನಮಗೆ ಹೆಮ್ಮೆಯಿದೆ” ಎಂದು ವಂದನಾ ಅವರ ಸಹೋದರ ಶೇಖರ್‌ ಅವರು ತಿಳಿಸಿದ್ದಾರೆ ಎಂದು TOI ಉಲ್ಲೇಖ ಮಾಡಿದೆ.

“ಪಂದ್ಯ ಸೋತ ದುಃಖದಲ್ಲಿದಾಗ, ಇದ್ದಕ್ಕಿದ್ದಂತೆ ದೊಡ್ಡ ಶಬ್ದಗಳು ಕೇಳಿ ಬಂದವು. ನಮ್ಮ ಮನೆಯ ಹೊರಗೆ ಪಟಾಕಿ ಸಿಡಿಸಲಾಗಿತ್ತು. ನಾವು ಹೊರಗೆ ತೆರಳಿ ನೋಡಿದಾಗ ನಮಗೆ ತಿಳಿದಿರುವ ನಮ್ಮದೆ ಹಳ್ಳಿಯ ಮೇಲ್ಜಾತಿಯ ಇಬ್ಬರು ವ್ಯಕ್ತಿಗಳು ಮನೆಯ ಮುಂದೆ ನೃತ್ಯ ಮಾಡುತ್ತಿದ್ದರು” ಎಂದು ಶೇಖರ್‌ ಹೇಳಿದ್ದಾರೆ.

ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ 

ಮನೆಯ ಹೊರಗಿನ ಗಲಾಟೆಯನ್ನು ತಡೆಯಲು ವಂದನಾ ಅವರ ಕುಟುಂಬವು ಪ್ರಯತ್ನಿಸಿದಾಗ ಆರೋಪಿಗಳು ಮತ್ತಷ್ಟು ಆಕ್ರೋಶಗೊಂಡು, ಜಾತಿ ನಿಂದನೆ ಮಾಡಿ ಕುಟುಂಬವನ್ನು ಅವಮಾನಿಸಿದ್ದಾರೆ ಎನ್ನಲಾಗಿದೆ.

“ತಂಡದಲ್ಲಿ ಹಲವಾರು ದಲಿತ ಆಟಗಾರರನ್ನು ಸೇರಿಸಿದ್ದರಿಂದಲೇ ಪಂದ್ಯ ಸೋತಿದೆ. ಕೇವಲ ಹಾಕಿ ಮಾತ್ರವಲ್ಲ, ಪ್ರತಿ ಕ್ರೀಡೆಯಲ್ಲೂ ದಲಿತರನ್ನು ಹೊರಗಿಡಬೇಕು ಎಂದು ಅವರು ಹೇಳಿದ್ದಾರೆ. ಇದು ಖಂಡತವಾಗಿಯೂ ಜನಾಂಗೀಯ ನಿಂದನೆಯಾಗಿದೆ” ಎಂದು ಶೇಖರ್ ಅವರು ಸಲ್ಲಿಸಿದ ದೂರಿನಲ್ಲಿ ತಿಳಿಸಿದ್ದಾರೆ.

ದೂರು ಸ್ವೀಕರಿಸಿರುವ ಪೊಲೀಸರು ಇನ್ನೂ ಎಫ್‌ಐಆರ್‌ ದಾಖಲಿಸಿಲ್ಲ ಎಂದು ವರದಿ ಹೇಳಿದೆ. ದೂರಿನ ಆಧಾರಲ್ಲಿ ಒಬ್ಬನನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. “ನಾವು ದೂರು ಸ್ವೀಕರಿಸಿದ್ದೇವೆ ಮತ್ತು ವಿಚಾರಣೆ ನಡೆಯುತ್ತಿದೆ, ನಂತರ ಪ್ರಕರಣ ದಾಖಲಿಸಲಾಗುವುದು” ಎಂದು ಸಿಡ್ಕಲ್‌ ಪೊಲೀಸ್ ಠಾಣೆಯ ಅಧಿಕಾರಿ  ಹೇಳಿದ್ದಾರೆಂದು TOI ವರದಿ ಮಾಡಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಇತಿಹಾಸ ನಿರ್ಮಿಸಿದ ಭಾರತೀಯ ಮಹಿಳಾ ಹಾಕಿ ತಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದರೂ ವಂದನಾ ಕಟಾರಿಯ ದಲಿತೆ ಎಂಬ ಕಾರಣಕ್ಕೆ ಹಂಗಿಸಲ್ಪಡುವುದು ಕೊಳೆತ ಮನಸ್ಥಿತಿಯ ದ್ಯೋತಕ. ವಂದನಾ, ಚಿಂತಿಸಬೇಡ, ನೀನು ನಮ್ಮೆಲ್ಲರ ಹೆಮ್ಮೆ!

  2. ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದರೂ ವಂದನಾ ಕಟಾರಿಯ ದಲಿತೆ ಎಂಬ ಕಾರಣಕ್ಕೆ ಹಂಗಿಸಲ್ಪಡುವುದು ದುರದ್ರಷ್ಟಕರ ಎದೆಗುಂದದೆ ಮುನ್ನಡೆಯಿರಿ ಎಂತಹಾ ವಿಪರ್ಯಾಸ ನೋಡಿ ಈ ಕಾಲಘಟ್ಟದಲ್ಲಿ ಈ ಕೆಟ್ಟ ಮನಸ್ಸು/ ಕೊಳಕು ಮನಸ್ಸಿರುವ ಜನರಿಂದಲೇ ಈ ದೇಶ ಈಗೆ.ತಾವು ಧೃತಿಗೆಡದೆ ಮುನ್ನೂಗ್ಗಿ ನಿಮ್ಮ ಜೊತೆಗೆ ನಾವಿದ್ದೇವೆ ವಂದನಾ ನಮ್ಮೆಲ್ಲರ ಆಸ್ತಿ, ನಮ್ಮ ಹೆಮ್ಮೆಯ ಪುತ್ರಿ ಚಂತೆಬೇಡ.

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...