Homeಕ್ರೀಡೆಒಲಂಪಿಕ್‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

ಒಲಿಂಪಿಕ್ಸ್‌‌ ಕ್ರೀಡಾ ಕೂಟದಲ್ಲಿ ಭಾರತೀಯ ಮಹಿಳಾ ಹಾಕಿ ತಂಡ ಮೊದಲ ಬಾರಿ ಸಮಿಫೈನಲ್‌ಗೆ ತಲುಪಿ ಇತಿಹಾಸ ನಿರ್ಮಿಸಿತ್ತು

- Advertisement -
- Advertisement -

ಒಲಿಂಪಿಕ್ಸ್‌ ಕ್ರೀಡಾ ಕೂಟದ ಇತಿಹಾಸದಲ್ಲೇ ಭಾರತೀಯ ಮಹಿಳಾ ಹಾಕಿ ತಂಡ ಮೊದಲ ಬಾರಿಗೆ ಸಮಿಫೈನಲ್ ತಲುಪಿದ್ದು, ಸೆಮಿಫೈನಲ್‌‌ನಲ್ಲಿ ಅರ್ಜೆಂಟೀನಾ ವಿರುದ್ದ 1-2 ಗೋಲ್ ಅಂತರದಲ್ಲಿ ಸೋತಿತ್ತು. ಶುಕ್ರವಾರ (ನಾಳೆ) ಗ್ರೇಟ್‌ ಬ್ರಿಟನ್‌ ತಂಡದ ವಿರುದ್ದ ಕಂಚಿಗಾಗಿ ಆಡಲಿದೆ. ಆದರೆ ಈ ಮಧ್ಯೆ ಭಾರತ ತಲೆ ತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಸೆಮಿಫೈನಲ್‌ನಲ್ಲಿ ಸೋತ ಕೆಲವೆ ಗಂಟೆಗಳ ಅಂತರದಲ್ಲಿ ಮಹಿಳಾ ತಂಡದ ಪ್ರಮುಖ ಆಟಗಾರ್ತಿ ‘ವಂದನಾ ಕಟಾರಿಯಾ’ ಅವರು ದಲಿತೆ ಎನ್ನುವ ಕಾರಣಕ್ಕೆ ಜಾತಿ ನಿಂದನೆಗೆ ಒಳಗಾಗಿದ್ದಾರೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ವಂದನಾ ಕಟಾರಿಯಾ ಒಲಿಂಪಿಕ್ಸ್‌ನಲ್ಲಿ ಹ್ಯಾಟ್ರಿಕ್ ಗೋಲ್‌ ಸಾಧಿಸಿದ ಭಾರತದ ಮೊದಲ ಮಹಿಳಾ ಹಾಕಿ ಆಟಗಾರ್ತಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಭಾರತೀಯ ಮಹಿಳಾ ತಂಡ ಸೋತ ಕೆಲವೆ ಗಂಟೆಗಲ್ಲಿ ಹರಿದ್ವಾರದ ರೋಷನಾಬಾದ್ ಹಳ್ಳಿಯಲ್ಲಿರುವ ಹಾಕಿ ಆಟಗಾರ್ತಿ ವಂದನಾ ಕಟಾರಿಯಾ ಅವರ ಮನೆಯ ಹತ್ತಿರ ಇಬ್ಬರು ಮೇಲ್ಜಾತಿಯ ವ್ಯಕ್ತಿಗಳು ಆಗಮಿಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ: ಮಹಿಳಾ ಹಾಕಿ ತಂಡದ ದಿಟ್ಟ ಆಟಗಾರ್ತಿ ಲಾಲ್‌ರೆಮ್ಸಿಯಾಮಿ

ದುಷ್ಕರ್ಮಿಗಳು ಪಟಾಕಿ ಸಿಡಿಸಿ, ಅಣಕು ಸಂಭ್ರಮಾಚರಣೆ ಮಾಡಿ ನೃತ್ಯ ಮಾಡಿದ್ದು, “ತಂಡದಲ್ಲಿ ಹೆಚ್ಚು ದಲಿತ ಆಟಗಾರರು ಇರುವುದರಿಂದಲೇ ಆಟ ಸೋತಿದೆ” ಎಂದು ಜಾತಿ ನಿಂದನೆ ಮಾಡಿದ್ದಾರೆ ಎಂದು ವಂದನಾ ಅವರ ಕುಟುಂಬವು ಆರೋಪಿಸಿದೆ ಎಂದು ಪತ್ರಿಕೆ ತಿಳಿಸಿದೆ.

“ಪಂದ್ಯವು ಸೋತಿದ್ದರ ಬಗ್ಗೆ ನಮಗೆ ಬೇಸರವಿದೆ. ಆದರೆ ತಂಡವು ಹೋರಾಟ ನಡೆಸಿಯೆ ಪಂದ್ಯದಲ್ಲಿ ಸೋತಿದೆ. ಅದರ ಬಗ್ಗೆ ನಮಗೆ ಹೆಮ್ಮೆಯಿದೆ” ಎಂದು ವಂದನಾ ಅವರ ಸಹೋದರ ಶೇಖರ್‌ ಅವರು ತಿಳಿಸಿದ್ದಾರೆ ಎಂದು TOI ಉಲ್ಲೇಖ ಮಾಡಿದೆ.

“ಪಂದ್ಯ ಸೋತ ದುಃಖದಲ್ಲಿದಾಗ, ಇದ್ದಕ್ಕಿದ್ದಂತೆ ದೊಡ್ಡ ಶಬ್ದಗಳು ಕೇಳಿ ಬಂದವು. ನಮ್ಮ ಮನೆಯ ಹೊರಗೆ ಪಟಾಕಿ ಸಿಡಿಸಲಾಗಿತ್ತು. ನಾವು ಹೊರಗೆ ತೆರಳಿ ನೋಡಿದಾಗ ನಮಗೆ ತಿಳಿದಿರುವ ನಮ್ಮದೆ ಹಳ್ಳಿಯ ಮೇಲ್ಜಾತಿಯ ಇಬ್ಬರು ವ್ಯಕ್ತಿಗಳು ಮನೆಯ ಮುಂದೆ ನೃತ್ಯ ಮಾಡುತ್ತಿದ್ದರು” ಎಂದು ಶೇಖರ್‌ ಹೇಳಿದ್ದಾರೆ.

ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ 

ಮನೆಯ ಹೊರಗಿನ ಗಲಾಟೆಯನ್ನು ತಡೆಯಲು ವಂದನಾ ಅವರ ಕುಟುಂಬವು ಪ್ರಯತ್ನಿಸಿದಾಗ ಆರೋಪಿಗಳು ಮತ್ತಷ್ಟು ಆಕ್ರೋಶಗೊಂಡು, ಜಾತಿ ನಿಂದನೆ ಮಾಡಿ ಕುಟುಂಬವನ್ನು ಅವಮಾನಿಸಿದ್ದಾರೆ ಎನ್ನಲಾಗಿದೆ.

“ತಂಡದಲ್ಲಿ ಹಲವಾರು ದಲಿತ ಆಟಗಾರರನ್ನು ಸೇರಿಸಿದ್ದರಿಂದಲೇ ಪಂದ್ಯ ಸೋತಿದೆ. ಕೇವಲ ಹಾಕಿ ಮಾತ್ರವಲ್ಲ, ಪ್ರತಿ ಕ್ರೀಡೆಯಲ್ಲೂ ದಲಿತರನ್ನು ಹೊರಗಿಡಬೇಕು ಎಂದು ಅವರು ಹೇಳಿದ್ದಾರೆ. ಇದು ಖಂಡತವಾಗಿಯೂ ಜನಾಂಗೀಯ ನಿಂದನೆಯಾಗಿದೆ” ಎಂದು ಶೇಖರ್ ಅವರು ಸಲ್ಲಿಸಿದ ದೂರಿನಲ್ಲಿ ತಿಳಿಸಿದ್ದಾರೆ.

ದೂರು ಸ್ವೀಕರಿಸಿರುವ ಪೊಲೀಸರು ಇನ್ನೂ ಎಫ್‌ಐಆರ್‌ ದಾಖಲಿಸಿಲ್ಲ ಎಂದು ವರದಿ ಹೇಳಿದೆ. ದೂರಿನ ಆಧಾರಲ್ಲಿ ಒಬ್ಬನನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. “ನಾವು ದೂರು ಸ್ವೀಕರಿಸಿದ್ದೇವೆ ಮತ್ತು ವಿಚಾರಣೆ ನಡೆಯುತ್ತಿದೆ, ನಂತರ ಪ್ರಕರಣ ದಾಖಲಿಸಲಾಗುವುದು” ಎಂದು ಸಿಡ್ಕಲ್‌ ಪೊಲೀಸ್ ಠಾಣೆಯ ಅಧಿಕಾರಿ  ಹೇಳಿದ್ದಾರೆಂದು TOI ವರದಿ ಮಾಡಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಇತಿಹಾಸ ನಿರ್ಮಿಸಿದ ಭಾರತೀಯ ಮಹಿಳಾ ಹಾಕಿ ತಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದರೂ ವಂದನಾ ಕಟಾರಿಯ ದಲಿತೆ ಎಂಬ ಕಾರಣಕ್ಕೆ ಹಂಗಿಸಲ್ಪಡುವುದು ಕೊಳೆತ ಮನಸ್ಥಿತಿಯ ದ್ಯೋತಕ. ವಂದನಾ, ಚಿಂತಿಸಬೇಡ, ನೀನು ನಮ್ಮೆಲ್ಲರ ಹೆಮ್ಮೆ!

  2. ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದರೂ ವಂದನಾ ಕಟಾರಿಯ ದಲಿತೆ ಎಂಬ ಕಾರಣಕ್ಕೆ ಹಂಗಿಸಲ್ಪಡುವುದು ದುರದ್ರಷ್ಟಕರ ಎದೆಗುಂದದೆ ಮುನ್ನಡೆಯಿರಿ ಎಂತಹಾ ವಿಪರ್ಯಾಸ ನೋಡಿ ಈ ಕಾಲಘಟ್ಟದಲ್ಲಿ ಈ ಕೆಟ್ಟ ಮನಸ್ಸು/ ಕೊಳಕು ಮನಸ್ಸಿರುವ ಜನರಿಂದಲೇ ಈ ದೇಶ ಈಗೆ.ತಾವು ಧೃತಿಗೆಡದೆ ಮುನ್ನೂಗ್ಗಿ ನಿಮ್ಮ ಜೊತೆಗೆ ನಾವಿದ್ದೇವೆ ವಂದನಾ ನಮ್ಮೆಲ್ಲರ ಆಸ್ತಿ, ನಮ್ಮ ಹೆಮ್ಮೆಯ ಪುತ್ರಿ ಚಂತೆಬೇಡ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...