Homeಕ್ರೀಡೆಒಲಂಪಿಕ್‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

ಒಲಿಂಪಿಕ್ಸ್‌‌ ಕ್ರೀಡಾ ಕೂಟದಲ್ಲಿ ಭಾರತೀಯ ಮಹಿಳಾ ಹಾಕಿ ತಂಡ ಮೊದಲ ಬಾರಿ ಸಮಿಫೈನಲ್‌ಗೆ ತಲುಪಿ ಇತಿಹಾಸ ನಿರ್ಮಿಸಿತ್ತು

- Advertisement -
- Advertisement -

ಒಲಿಂಪಿಕ್ಸ್‌ ಕ್ರೀಡಾ ಕೂಟದ ಇತಿಹಾಸದಲ್ಲೇ ಭಾರತೀಯ ಮಹಿಳಾ ಹಾಕಿ ತಂಡ ಮೊದಲ ಬಾರಿಗೆ ಸಮಿಫೈನಲ್ ತಲುಪಿದ್ದು, ಸೆಮಿಫೈನಲ್‌‌ನಲ್ಲಿ ಅರ್ಜೆಂಟೀನಾ ವಿರುದ್ದ 1-2 ಗೋಲ್ ಅಂತರದಲ್ಲಿ ಸೋತಿತ್ತು. ಶುಕ್ರವಾರ (ನಾಳೆ) ಗ್ರೇಟ್‌ ಬ್ರಿಟನ್‌ ತಂಡದ ವಿರುದ್ದ ಕಂಚಿಗಾಗಿ ಆಡಲಿದೆ. ಆದರೆ ಈ ಮಧ್ಯೆ ಭಾರತ ತಲೆ ತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಸೆಮಿಫೈನಲ್‌ನಲ್ಲಿ ಸೋತ ಕೆಲವೆ ಗಂಟೆಗಳ ಅಂತರದಲ್ಲಿ ಮಹಿಳಾ ತಂಡದ ಪ್ರಮುಖ ಆಟಗಾರ್ತಿ ‘ವಂದನಾ ಕಟಾರಿಯಾ’ ಅವರು ದಲಿತೆ ಎನ್ನುವ ಕಾರಣಕ್ಕೆ ಜಾತಿ ನಿಂದನೆಗೆ ಒಳಗಾಗಿದ್ದಾರೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ವಂದನಾ ಕಟಾರಿಯಾ ಒಲಿಂಪಿಕ್ಸ್‌ನಲ್ಲಿ ಹ್ಯಾಟ್ರಿಕ್ ಗೋಲ್‌ ಸಾಧಿಸಿದ ಭಾರತದ ಮೊದಲ ಮಹಿಳಾ ಹಾಕಿ ಆಟಗಾರ್ತಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಭಾರತೀಯ ಮಹಿಳಾ ತಂಡ ಸೋತ ಕೆಲವೆ ಗಂಟೆಗಲ್ಲಿ ಹರಿದ್ವಾರದ ರೋಷನಾಬಾದ್ ಹಳ್ಳಿಯಲ್ಲಿರುವ ಹಾಕಿ ಆಟಗಾರ್ತಿ ವಂದನಾ ಕಟಾರಿಯಾ ಅವರ ಮನೆಯ ಹತ್ತಿರ ಇಬ್ಬರು ಮೇಲ್ಜಾತಿಯ ವ್ಯಕ್ತಿಗಳು ಆಗಮಿಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ: ಮಹಿಳಾ ಹಾಕಿ ತಂಡದ ದಿಟ್ಟ ಆಟಗಾರ್ತಿ ಲಾಲ್‌ರೆಮ್ಸಿಯಾಮಿ

ದುಷ್ಕರ್ಮಿಗಳು ಪಟಾಕಿ ಸಿಡಿಸಿ, ಅಣಕು ಸಂಭ್ರಮಾಚರಣೆ ಮಾಡಿ ನೃತ್ಯ ಮಾಡಿದ್ದು, “ತಂಡದಲ್ಲಿ ಹೆಚ್ಚು ದಲಿತ ಆಟಗಾರರು ಇರುವುದರಿಂದಲೇ ಆಟ ಸೋತಿದೆ” ಎಂದು ಜಾತಿ ನಿಂದನೆ ಮಾಡಿದ್ದಾರೆ ಎಂದು ವಂದನಾ ಅವರ ಕುಟುಂಬವು ಆರೋಪಿಸಿದೆ ಎಂದು ಪತ್ರಿಕೆ ತಿಳಿಸಿದೆ.

“ಪಂದ್ಯವು ಸೋತಿದ್ದರ ಬಗ್ಗೆ ನಮಗೆ ಬೇಸರವಿದೆ. ಆದರೆ ತಂಡವು ಹೋರಾಟ ನಡೆಸಿಯೆ ಪಂದ್ಯದಲ್ಲಿ ಸೋತಿದೆ. ಅದರ ಬಗ್ಗೆ ನಮಗೆ ಹೆಮ್ಮೆಯಿದೆ” ಎಂದು ವಂದನಾ ಅವರ ಸಹೋದರ ಶೇಖರ್‌ ಅವರು ತಿಳಿಸಿದ್ದಾರೆ ಎಂದು TOI ಉಲ್ಲೇಖ ಮಾಡಿದೆ.

“ಪಂದ್ಯ ಸೋತ ದುಃಖದಲ್ಲಿದಾಗ, ಇದ್ದಕ್ಕಿದ್ದಂತೆ ದೊಡ್ಡ ಶಬ್ದಗಳು ಕೇಳಿ ಬಂದವು. ನಮ್ಮ ಮನೆಯ ಹೊರಗೆ ಪಟಾಕಿ ಸಿಡಿಸಲಾಗಿತ್ತು. ನಾವು ಹೊರಗೆ ತೆರಳಿ ನೋಡಿದಾಗ ನಮಗೆ ತಿಳಿದಿರುವ ನಮ್ಮದೆ ಹಳ್ಳಿಯ ಮೇಲ್ಜಾತಿಯ ಇಬ್ಬರು ವ್ಯಕ್ತಿಗಳು ಮನೆಯ ಮುಂದೆ ನೃತ್ಯ ಮಾಡುತ್ತಿದ್ದರು” ಎಂದು ಶೇಖರ್‌ ಹೇಳಿದ್ದಾರೆ.

ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ 

ಮನೆಯ ಹೊರಗಿನ ಗಲಾಟೆಯನ್ನು ತಡೆಯಲು ವಂದನಾ ಅವರ ಕುಟುಂಬವು ಪ್ರಯತ್ನಿಸಿದಾಗ ಆರೋಪಿಗಳು ಮತ್ತಷ್ಟು ಆಕ್ರೋಶಗೊಂಡು, ಜಾತಿ ನಿಂದನೆ ಮಾಡಿ ಕುಟುಂಬವನ್ನು ಅವಮಾನಿಸಿದ್ದಾರೆ ಎನ್ನಲಾಗಿದೆ.

“ತಂಡದಲ್ಲಿ ಹಲವಾರು ದಲಿತ ಆಟಗಾರರನ್ನು ಸೇರಿಸಿದ್ದರಿಂದಲೇ ಪಂದ್ಯ ಸೋತಿದೆ. ಕೇವಲ ಹಾಕಿ ಮಾತ್ರವಲ್ಲ, ಪ್ರತಿ ಕ್ರೀಡೆಯಲ್ಲೂ ದಲಿತರನ್ನು ಹೊರಗಿಡಬೇಕು ಎಂದು ಅವರು ಹೇಳಿದ್ದಾರೆ. ಇದು ಖಂಡತವಾಗಿಯೂ ಜನಾಂಗೀಯ ನಿಂದನೆಯಾಗಿದೆ” ಎಂದು ಶೇಖರ್ ಅವರು ಸಲ್ಲಿಸಿದ ದೂರಿನಲ್ಲಿ ತಿಳಿಸಿದ್ದಾರೆ.

ದೂರು ಸ್ವೀಕರಿಸಿರುವ ಪೊಲೀಸರು ಇನ್ನೂ ಎಫ್‌ಐಆರ್‌ ದಾಖಲಿಸಿಲ್ಲ ಎಂದು ವರದಿ ಹೇಳಿದೆ. ದೂರಿನ ಆಧಾರಲ್ಲಿ ಒಬ್ಬನನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. “ನಾವು ದೂರು ಸ್ವೀಕರಿಸಿದ್ದೇವೆ ಮತ್ತು ವಿಚಾರಣೆ ನಡೆಯುತ್ತಿದೆ, ನಂತರ ಪ್ರಕರಣ ದಾಖಲಿಸಲಾಗುವುದು” ಎಂದು ಸಿಡ್ಕಲ್‌ ಪೊಲೀಸ್ ಠಾಣೆಯ ಅಧಿಕಾರಿ  ಹೇಳಿದ್ದಾರೆಂದು TOI ವರದಿ ಮಾಡಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಇತಿಹಾಸ ನಿರ್ಮಿಸಿದ ಭಾರತೀಯ ಮಹಿಳಾ ಹಾಕಿ ತಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದರೂ ವಂದನಾ ಕಟಾರಿಯ ದಲಿತೆ ಎಂಬ ಕಾರಣಕ್ಕೆ ಹಂಗಿಸಲ್ಪಡುವುದು ಕೊಳೆತ ಮನಸ್ಥಿತಿಯ ದ್ಯೋತಕ. ವಂದನಾ, ಚಿಂತಿಸಬೇಡ, ನೀನು ನಮ್ಮೆಲ್ಲರ ಹೆಮ್ಮೆ!

  2. ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದರೂ ವಂದನಾ ಕಟಾರಿಯ ದಲಿತೆ ಎಂಬ ಕಾರಣಕ್ಕೆ ಹಂಗಿಸಲ್ಪಡುವುದು ದುರದ್ರಷ್ಟಕರ ಎದೆಗುಂದದೆ ಮುನ್ನಡೆಯಿರಿ ಎಂತಹಾ ವಿಪರ್ಯಾಸ ನೋಡಿ ಈ ಕಾಲಘಟ್ಟದಲ್ಲಿ ಈ ಕೆಟ್ಟ ಮನಸ್ಸು/ ಕೊಳಕು ಮನಸ್ಸಿರುವ ಜನರಿಂದಲೇ ಈ ದೇಶ ಈಗೆ.ತಾವು ಧೃತಿಗೆಡದೆ ಮುನ್ನೂಗ್ಗಿ ನಿಮ್ಮ ಜೊತೆಗೆ ನಾವಿದ್ದೇವೆ ವಂದನಾ ನಮ್ಮೆಲ್ಲರ ಆಸ್ತಿ, ನಮ್ಮ ಹೆಮ್ಮೆಯ ಪುತ್ರಿ ಚಂತೆಬೇಡ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...