Homeಮುಖಪುಟಮೇ 3 ರಂದು ರಾಜ್ಯಾದ್ಯಂತ ಬಸವ ಜಯಂತಿ ಆಚರಿಸಲು ನಿರ್ಧರಿಸಿದ ತೆಲಂಗಾಣ ಸರ್ಕಾರ

ಮೇ 3 ರಂದು ರಾಜ್ಯಾದ್ಯಂತ ಬಸವ ಜಯಂತಿ ಆಚರಿಸಲು ನಿರ್ಧರಿಸಿದ ತೆಲಂಗಾಣ ಸರ್ಕಾರ

ಇತ್ತೀಚಿನ ದಿನಗಳಲ್ಲಿ ದಾರ್ಶನಿಕ ಬಸವಣ್ಣನವರನ್ನು ನೆನಪಿಸಿಕೊಳ್ಳುವ ಕ್ರಿಯೆ ಕರ್ನಾಟಕ ಮಾತ್ರವಲ್ಲದೆ ದಕ್ಷಿಣದ ಇತರ ರಾಜ್ಯಗಳಲ್ಲಿಯೂ ಜರುಗುತ್ತಿದೆ.

- Advertisement -
- Advertisement -

ಮೇ 3 ರಂದು ರಾಜ್ಯದೆಲ್ಲೆಡೆ ಮಹಾತ್ಮ ಬಸವೇಶ್ವರ ಜಯಂತಿ ಆಚರಿಸುವಂತೆ ತೆಲಂಗಾಣ ಸರ್ಕಾರ ಆದೇಶಿಸಿದೆ. ಇನ್ನು ಮುಂದೆ ಅಕ್ಷಯ ತೃತೀಯದಂದು ಪ್ರತಿ ವರ್ಷ ತೆಲಂಗಾಣ ರಾಜ್ಯಾದ್ಯಂತ ಬಸವ ಜಯಂತಿ ನಡೆಯಲಿದೆ ಎಂದು ಘೋಷಿಸಿದೆ.

ತೆಲಂಗಾಣ ಸರ್ಕಾರದ ಈ ನಡೆಯನ್ನು ಜಾಗತಿಕ ಲಿಂಗಾಯತ ಮಹಾಸಭಾ ಸ್ವಾಗತಿಸಿದೆ. ಈ ಕುರಿತು ಟ್ವೀಟ್ ಮಾಡಿದ್ದು, “ಬಸವ ಜಯಂತಿಯನ್ನು ತೆಲಂಗಾಣ ರಾಜ್ಯದಲ್ಲಿ ಆಚರಿಸಲು ನಿರ್ಧರಿಸಿದ್ದಕ್ಕಾಗಿ ಶರಣು ಶರಣಾರ್ಥಿ. ನಿಮ್ಮ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ ತೆಲಂಗಾಣದ ಎಲ್ಲಾ ನಾಗರಿಕರಿಗೆ ಬಸವ ಜಯಂತಿ 2022ರ ಶುಭಾಶಯಗಳು” ಎಂದು ತಿಳಿಸಿದೆ.

 

ಇತ್ತೀಚಿನ ದಿನಗಳಲ್ಲಿ ದಾರ್ಶನಿಕ ಬಸವಣ್ಣನವರನ್ನು ನೆನಪಿಸಿಕೊಳ್ಳುವ ಕ್ರಿಯೆ ಕರ್ನಾಟಕ ಮಾತ್ರವಲ್ಲದೆ ದಕ್ಷಿಣದ ಇತರ ರಾಜ್ಯಗಳಲ್ಲಿಯೂ ಜರುಗುತ್ತಿದೆ. ಕಳೆದ ವರ್ಷ ಬಸವ ಜಯಂತಿಯ ದಿನ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ರವರು ಕನ್ನಡದಲ್ಲಿ ಬಸವಣ್ಣನವರ ವಚನವನ್ನು ಟ್ವೀಟ್‌ ಮಾಡುವ ಮೂಲಕ ಸಾವಿರಾರು ಕನ್ನಡ ಅಭಿಮಾನಿಗಳ ಮನಗೆದ್ದಿದ್ದರು.

ಬಸವ ಜಯಂತಿ ಶುಭಾಷಯಗಳು ಎಂಬ ವಾಕ್ಯಗಳಿಂದ ಆರಂಭವಾಗಿದ್ದ ಅವರ ಟ್ವೀಟ್‌ “ನಮ್ಮೊಳಗಿನ ಭಿನ್ನಾಭಿಪ್ರಾಯಗಳನ್ನು ನಿವಾರಿಸಲು ಮಹಾನ್‌ ಬಸವಣ್ಣನವರು ಮಾರ್ಗದರ್ಶಕರಾಗಲಿ. ನಾವು ವಿಭಜಿತವಾಗಿದ್ದರೆ ಈ ಸಾಂಕ್ರಾಮಿಕದ ವಿರುದ್ಧ ಜಯಿಸಲು ಸಾಧ್ಯವಿಲ್ಲ. ಗೆಲ್ಲಲ್ಲು ಅದು ನಮ್ಮ ಒಗ್ಗಟ್ಟನ್ನು ಕೇಳುತ್ತದೆ” ಎಂದು ಪಿಣರಾಯಿ ವಿಜಯನ್‌ ತಿಳಿಸಿದ್ದರು.

ಮುಂದುವರಿದು ”ಇವನಾರವ ಇವನಾರವ ಇವನಾರವನೆಂದು ಎನಿಸದಿರಯ್ಯ. ಇವ ನಮ್ಮವ ಇವ ನಮ್ಮವ, ಇವ ನಮ್ಮವನೆಂದು ಎನಿಸಯ್ಯ.” ಎಂಬ ಬಸವಣ್ಣನವರ ಖ್ಯಾತ ವಚನವನ್ನು ಟ್ವೀಟ್‌ ಮಾಡುವ ಮೂಲಕ ಬಸವಣ್ಣನವರನ್ನು ಸ್ಮರಿಸಿದ್ದರು.

ಇದನ್ನೂ ಓದಿ: ’ಅವ ನಮ್ಮವ, ಅವ ನಮ್ಮವ’ ಎಂದ ಕ್ರಾಂತಿಕಾರಿ ಬಸವಣ್ಣನ ಚಿಂತನೆಗಳು ಇಂದಿನ ವಿಷಮತೆಗೆ ಲಸಿಕೆ..: ಜಿ.ಬಿ ಪಾಟೀಲ್

ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿರುವ ತೆಲಂಗಾಣ ಸಿಎಂ ಕೆ.ಸಿ ಚಂದ್ರಶೇಖರ್ ರಾವ್ ಈ ವರ್ಷದಿಂದ ತೆಲಂಗಾನದಲ್ಲಿ ಬಸವ ಜಯಂತಿ ಆಚರಿಸಲು ಆದೇಶಿಸಿದ್ದಾರೆ. ಆ ಮೂಲಕ ಬಸವಣ್ಣನವರ ಸತ್ಯ, ನ್ಯಾಯ ಮತ್ತು ಸಮಾನತೆ ಪರವಾಗಿನ ವಿಚಾರಗಳು ಎಲ್ಲಾ ಜನರಿಗೂ ತಲುಪಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...