Homeಮುಖಪುಟಮೇ 3 ರಂದು ರಾಜ್ಯಾದ್ಯಂತ ಬಸವ ಜಯಂತಿ ಆಚರಿಸಲು ನಿರ್ಧರಿಸಿದ ತೆಲಂಗಾಣ ಸರ್ಕಾರ

ಮೇ 3 ರಂದು ರಾಜ್ಯಾದ್ಯಂತ ಬಸವ ಜಯಂತಿ ಆಚರಿಸಲು ನಿರ್ಧರಿಸಿದ ತೆಲಂಗಾಣ ಸರ್ಕಾರ

ಇತ್ತೀಚಿನ ದಿನಗಳಲ್ಲಿ ದಾರ್ಶನಿಕ ಬಸವಣ್ಣನವರನ್ನು ನೆನಪಿಸಿಕೊಳ್ಳುವ ಕ್ರಿಯೆ ಕರ್ನಾಟಕ ಮಾತ್ರವಲ್ಲದೆ ದಕ್ಷಿಣದ ಇತರ ರಾಜ್ಯಗಳಲ್ಲಿಯೂ ಜರುಗುತ್ತಿದೆ.

- Advertisement -
- Advertisement -

ಮೇ 3 ರಂದು ರಾಜ್ಯದೆಲ್ಲೆಡೆ ಮಹಾತ್ಮ ಬಸವೇಶ್ವರ ಜಯಂತಿ ಆಚರಿಸುವಂತೆ ತೆಲಂಗಾಣ ಸರ್ಕಾರ ಆದೇಶಿಸಿದೆ. ಇನ್ನು ಮುಂದೆ ಅಕ್ಷಯ ತೃತೀಯದಂದು ಪ್ರತಿ ವರ್ಷ ತೆಲಂಗಾಣ ರಾಜ್ಯಾದ್ಯಂತ ಬಸವ ಜಯಂತಿ ನಡೆಯಲಿದೆ ಎಂದು ಘೋಷಿಸಿದೆ.

ತೆಲಂಗಾಣ ಸರ್ಕಾರದ ಈ ನಡೆಯನ್ನು ಜಾಗತಿಕ ಲಿಂಗಾಯತ ಮಹಾಸಭಾ ಸ್ವಾಗತಿಸಿದೆ. ಈ ಕುರಿತು ಟ್ವೀಟ್ ಮಾಡಿದ್ದು, “ಬಸವ ಜಯಂತಿಯನ್ನು ತೆಲಂಗಾಣ ರಾಜ್ಯದಲ್ಲಿ ಆಚರಿಸಲು ನಿರ್ಧರಿಸಿದ್ದಕ್ಕಾಗಿ ಶರಣು ಶರಣಾರ್ಥಿ. ನಿಮ್ಮ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ ತೆಲಂಗಾಣದ ಎಲ್ಲಾ ನಾಗರಿಕರಿಗೆ ಬಸವ ಜಯಂತಿ 2022ರ ಶುಭಾಶಯಗಳು” ಎಂದು ತಿಳಿಸಿದೆ.

 

ಇತ್ತೀಚಿನ ದಿನಗಳಲ್ಲಿ ದಾರ್ಶನಿಕ ಬಸವಣ್ಣನವರನ್ನು ನೆನಪಿಸಿಕೊಳ್ಳುವ ಕ್ರಿಯೆ ಕರ್ನಾಟಕ ಮಾತ್ರವಲ್ಲದೆ ದಕ್ಷಿಣದ ಇತರ ರಾಜ್ಯಗಳಲ್ಲಿಯೂ ಜರುಗುತ್ತಿದೆ. ಕಳೆದ ವರ್ಷ ಬಸವ ಜಯಂತಿಯ ದಿನ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ರವರು ಕನ್ನಡದಲ್ಲಿ ಬಸವಣ್ಣನವರ ವಚನವನ್ನು ಟ್ವೀಟ್‌ ಮಾಡುವ ಮೂಲಕ ಸಾವಿರಾರು ಕನ್ನಡ ಅಭಿಮಾನಿಗಳ ಮನಗೆದ್ದಿದ್ದರು.

ಬಸವ ಜಯಂತಿ ಶುಭಾಷಯಗಳು ಎಂಬ ವಾಕ್ಯಗಳಿಂದ ಆರಂಭವಾಗಿದ್ದ ಅವರ ಟ್ವೀಟ್‌ “ನಮ್ಮೊಳಗಿನ ಭಿನ್ನಾಭಿಪ್ರಾಯಗಳನ್ನು ನಿವಾರಿಸಲು ಮಹಾನ್‌ ಬಸವಣ್ಣನವರು ಮಾರ್ಗದರ್ಶಕರಾಗಲಿ. ನಾವು ವಿಭಜಿತವಾಗಿದ್ದರೆ ಈ ಸಾಂಕ್ರಾಮಿಕದ ವಿರುದ್ಧ ಜಯಿಸಲು ಸಾಧ್ಯವಿಲ್ಲ. ಗೆಲ್ಲಲ್ಲು ಅದು ನಮ್ಮ ಒಗ್ಗಟ್ಟನ್ನು ಕೇಳುತ್ತದೆ” ಎಂದು ಪಿಣರಾಯಿ ವಿಜಯನ್‌ ತಿಳಿಸಿದ್ದರು.

ಮುಂದುವರಿದು ”ಇವನಾರವ ಇವನಾರವ ಇವನಾರವನೆಂದು ಎನಿಸದಿರಯ್ಯ. ಇವ ನಮ್ಮವ ಇವ ನಮ್ಮವ, ಇವ ನಮ್ಮವನೆಂದು ಎನಿಸಯ್ಯ.” ಎಂಬ ಬಸವಣ್ಣನವರ ಖ್ಯಾತ ವಚನವನ್ನು ಟ್ವೀಟ್‌ ಮಾಡುವ ಮೂಲಕ ಬಸವಣ್ಣನವರನ್ನು ಸ್ಮರಿಸಿದ್ದರು.

ಇದನ್ನೂ ಓದಿ: ’ಅವ ನಮ್ಮವ, ಅವ ನಮ್ಮವ’ ಎಂದ ಕ್ರಾಂತಿಕಾರಿ ಬಸವಣ್ಣನ ಚಿಂತನೆಗಳು ಇಂದಿನ ವಿಷಮತೆಗೆ ಲಸಿಕೆ..: ಜಿ.ಬಿ ಪಾಟೀಲ್

ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿರುವ ತೆಲಂಗಾಣ ಸಿಎಂ ಕೆ.ಸಿ ಚಂದ್ರಶೇಖರ್ ರಾವ್ ಈ ವರ್ಷದಿಂದ ತೆಲಂಗಾನದಲ್ಲಿ ಬಸವ ಜಯಂತಿ ಆಚರಿಸಲು ಆದೇಶಿಸಿದ್ದಾರೆ. ಆ ಮೂಲಕ ಬಸವಣ್ಣನವರ ಸತ್ಯ, ನ್ಯಾಯ ಮತ್ತು ಸಮಾನತೆ ಪರವಾಗಿನ ವಿಚಾರಗಳು ಎಲ್ಲಾ ಜನರಿಗೂ ತಲುಪಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...