Homeಮುಖಪುಟಮೇ 3 ರಂದು ರಾಜ್ಯಾದ್ಯಂತ ಬಸವ ಜಯಂತಿ ಆಚರಿಸಲು ನಿರ್ಧರಿಸಿದ ತೆಲಂಗಾಣ ಸರ್ಕಾರ

ಮೇ 3 ರಂದು ರಾಜ್ಯಾದ್ಯಂತ ಬಸವ ಜಯಂತಿ ಆಚರಿಸಲು ನಿರ್ಧರಿಸಿದ ತೆಲಂಗಾಣ ಸರ್ಕಾರ

ಇತ್ತೀಚಿನ ದಿನಗಳಲ್ಲಿ ದಾರ್ಶನಿಕ ಬಸವಣ್ಣನವರನ್ನು ನೆನಪಿಸಿಕೊಳ್ಳುವ ಕ್ರಿಯೆ ಕರ್ನಾಟಕ ಮಾತ್ರವಲ್ಲದೆ ದಕ್ಷಿಣದ ಇತರ ರಾಜ್ಯಗಳಲ್ಲಿಯೂ ಜರುಗುತ್ತಿದೆ.

- Advertisement -
- Advertisement -

ಮೇ 3 ರಂದು ರಾಜ್ಯದೆಲ್ಲೆಡೆ ಮಹಾತ್ಮ ಬಸವೇಶ್ವರ ಜಯಂತಿ ಆಚರಿಸುವಂತೆ ತೆಲಂಗಾಣ ಸರ್ಕಾರ ಆದೇಶಿಸಿದೆ. ಇನ್ನು ಮುಂದೆ ಅಕ್ಷಯ ತೃತೀಯದಂದು ಪ್ರತಿ ವರ್ಷ ತೆಲಂಗಾಣ ರಾಜ್ಯಾದ್ಯಂತ ಬಸವ ಜಯಂತಿ ನಡೆಯಲಿದೆ ಎಂದು ಘೋಷಿಸಿದೆ.

ತೆಲಂಗಾಣ ಸರ್ಕಾರದ ಈ ನಡೆಯನ್ನು ಜಾಗತಿಕ ಲಿಂಗಾಯತ ಮಹಾಸಭಾ ಸ್ವಾಗತಿಸಿದೆ. ಈ ಕುರಿತು ಟ್ವೀಟ್ ಮಾಡಿದ್ದು, “ಬಸವ ಜಯಂತಿಯನ್ನು ತೆಲಂಗಾಣ ರಾಜ್ಯದಲ್ಲಿ ಆಚರಿಸಲು ನಿರ್ಧರಿಸಿದ್ದಕ್ಕಾಗಿ ಶರಣು ಶರಣಾರ್ಥಿ. ನಿಮ್ಮ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ ತೆಲಂಗಾಣದ ಎಲ್ಲಾ ನಾಗರಿಕರಿಗೆ ಬಸವ ಜಯಂತಿ 2022ರ ಶುಭಾಶಯಗಳು” ಎಂದು ತಿಳಿಸಿದೆ.

 

ಇತ್ತೀಚಿನ ದಿನಗಳಲ್ಲಿ ದಾರ್ಶನಿಕ ಬಸವಣ್ಣನವರನ್ನು ನೆನಪಿಸಿಕೊಳ್ಳುವ ಕ್ರಿಯೆ ಕರ್ನಾಟಕ ಮಾತ್ರವಲ್ಲದೆ ದಕ್ಷಿಣದ ಇತರ ರಾಜ್ಯಗಳಲ್ಲಿಯೂ ಜರುಗುತ್ತಿದೆ. ಕಳೆದ ವರ್ಷ ಬಸವ ಜಯಂತಿಯ ದಿನ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ರವರು ಕನ್ನಡದಲ್ಲಿ ಬಸವಣ್ಣನವರ ವಚನವನ್ನು ಟ್ವೀಟ್‌ ಮಾಡುವ ಮೂಲಕ ಸಾವಿರಾರು ಕನ್ನಡ ಅಭಿಮಾನಿಗಳ ಮನಗೆದ್ದಿದ್ದರು.

ಬಸವ ಜಯಂತಿ ಶುಭಾಷಯಗಳು ಎಂಬ ವಾಕ್ಯಗಳಿಂದ ಆರಂಭವಾಗಿದ್ದ ಅವರ ಟ್ವೀಟ್‌ “ನಮ್ಮೊಳಗಿನ ಭಿನ್ನಾಭಿಪ್ರಾಯಗಳನ್ನು ನಿವಾರಿಸಲು ಮಹಾನ್‌ ಬಸವಣ್ಣನವರು ಮಾರ್ಗದರ್ಶಕರಾಗಲಿ. ನಾವು ವಿಭಜಿತವಾಗಿದ್ದರೆ ಈ ಸಾಂಕ್ರಾಮಿಕದ ವಿರುದ್ಧ ಜಯಿಸಲು ಸಾಧ್ಯವಿಲ್ಲ. ಗೆಲ್ಲಲ್ಲು ಅದು ನಮ್ಮ ಒಗ್ಗಟ್ಟನ್ನು ಕೇಳುತ್ತದೆ” ಎಂದು ಪಿಣರಾಯಿ ವಿಜಯನ್‌ ತಿಳಿಸಿದ್ದರು.

ಮುಂದುವರಿದು ”ಇವನಾರವ ಇವನಾರವ ಇವನಾರವನೆಂದು ಎನಿಸದಿರಯ್ಯ. ಇವ ನಮ್ಮವ ಇವ ನಮ್ಮವ, ಇವ ನಮ್ಮವನೆಂದು ಎನಿಸಯ್ಯ.” ಎಂಬ ಬಸವಣ್ಣನವರ ಖ್ಯಾತ ವಚನವನ್ನು ಟ್ವೀಟ್‌ ಮಾಡುವ ಮೂಲಕ ಬಸವಣ್ಣನವರನ್ನು ಸ್ಮರಿಸಿದ್ದರು.

ಇದನ್ನೂ ಓದಿ: ’ಅವ ನಮ್ಮವ, ಅವ ನಮ್ಮವ’ ಎಂದ ಕ್ರಾಂತಿಕಾರಿ ಬಸವಣ್ಣನ ಚಿಂತನೆಗಳು ಇಂದಿನ ವಿಷಮತೆಗೆ ಲಸಿಕೆ..: ಜಿ.ಬಿ ಪಾಟೀಲ್

ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿರುವ ತೆಲಂಗಾಣ ಸಿಎಂ ಕೆ.ಸಿ ಚಂದ್ರಶೇಖರ್ ರಾವ್ ಈ ವರ್ಷದಿಂದ ತೆಲಂಗಾನದಲ್ಲಿ ಬಸವ ಜಯಂತಿ ಆಚರಿಸಲು ಆದೇಶಿಸಿದ್ದಾರೆ. ಆ ಮೂಲಕ ಬಸವಣ್ಣನವರ ಸತ್ಯ, ನ್ಯಾಯ ಮತ್ತು ಸಮಾನತೆ ಪರವಾಗಿನ ವಿಚಾರಗಳು ಎಲ್ಲಾ ಜನರಿಗೂ ತಲುಪಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....