HomeಮುಖಪುಟSIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್ ಅಳಲು ತೋಡಿಕೊಂಡಿದ್ದಾರೆ.

“ಇಡೀ ವೃತ್ತಿಜೀವನವನ್ನು ಪತ್ರಿಕೋದ್ಯಮದಲ್ಲೇ ಕಳೆದು, ದೇಶದ ಪ್ರಸಿದ್ಧ ಪತ್ರಿಕೆಯೊಂದರ ಸಂಪಾದಕನಾಗಿದ್ದ ನನಗೇ ಇಂತಹ ಪರಿಸ್ಥಿತಿ ಎದುರಾಗಿರುವಾಗ, ಸಮಾಜದ ಕಟ್ಟಕಡೆಯ ಮತ್ತು ಸೌಲಭ್ಯವಂಚಿತ ಜನರ ಸ್ಥಿತಿ ಏನಾಗಿರಬೇಡ” ಎಂದು ರಾಜಗೋಪಾಲ್ ಕಳವಳ ವ್ಯಕ್ತಪಡಿಸಿದ್ದಾರೆ.

ರಾಜಗೋಪಾಲ್ ಅವರು ಪಶ್ಚಿಮ ಬಂಗಾಳದ ಕೋಲ್ಕತ್ತಾದ ಬ್ಯಾಲಿಗಂಜ್ ವಿಧಾನಸಭಾ ಕ್ಷೇತ್ರದ ಮತದಾರರಾಗಿದ್ದರು. ಆದರೆ, ಇತ್ತೀಚೆಗೆ ನಡೆದ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಅವರ ಹೆಸರನ್ನು ಕಿತ್ತುಹಾಕಲಾಗಿದೆ. ಪರಿಣಾಮ, ಅವರ ಪಾಸ್‌ಪೋರ್ಟ್ ನವೀಕರಣದ ಅರ್ಜಿಗೆ ಕೋಲ್ಕತ್ತಾ ಪೊಲೀಸರು ಪ್ರತಿಕೂಲ ವರದಿ ನೀಡಿದ್ದಾರೆ. ಇದರಿಂದಾಗಿ ರಾಜ್‌ಗೋಪಾಲ್ ಅವರು ತಮ್ಮ ನಾಗರಿಕತ್ವವನ್ನು ಸಾಬೀತುಪಡಿಸಲು ಹೋರಾಡುವಂತಾಗಿದೆ.

“ಈ ವರ್ಷದ ಮಾರ್ಚ್‌ನಲ್ಲಿ ನಡೆದ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ನನ್ನ ತಂದೆಯ ಹೆಸರನ್ನು 2002ರ ಮತಪಟ್ಟಿಯಲ್ಲಿ ಪತ್ತೆಹಚ್ಚಲು ಸಾಧ್ಯವಾಗಿಲ್ಲ ಎಂಬ ಕಾರಣ ನೀಡಿ, ‘ತಾರ್ಕಿಕ ವ್ಯತ್ಯಾಸ’ದ (ಲಾಜಿಕಲ್ ಡಿಸ್ಕ್ರಿಪೆನ್ಸಿ) ಆಧಾರದಲ್ಲಿ ನನ್ನ ಹೆಸರನ್ನು ಮತದಾರ ಪಟ್ಟಿಯಿಂದ ಅಳಿಸಿ ಹಾಕಲಾಗಿದೆ. ನನ್ನ ತಂದೆ ಒಬ್ಬ ಗಾಂಧಿವಾದಿ, ನಿವೃತ್ತ ಪ್ರೊಫೆಸರ್ ಮತ್ತು ಕೇರಳದ ಗಾಂಧಿ ಸ್ಮಾರಕ ನಿಧಿಯ ಮಾಜಿ ರಾಜ್ಯ ಕಾರ್ಯದರ್ಶಿಯಾಗಿದ್ದರು. ಅವರು 2016ರಲ್ಲಿ ನಿಧನರಾದರು. ನಾನು ನನ್ನ ಎಸ್ಎಸ್‌ಎಲ್‌ಸಿ ಅಂಕಪಟ್ಟಿಯನ್ನು ಸಲ್ಲಿಸಿದ್ದರೂ, ಅಧಿಕಾರಿಗಳು ಯಾವುದೇ ಕಾರಣ ನೀಡದೆ ನನ್ನ ಅಪೀಲನ್ನು ತಿಸ್ಕರಿಸಿದ್ದಾರೆ. ಈಗ, ಸುಪ್ರೀಂ ಕೋರ್ಟ್‌ ರಚಿಸಿರುವ ನ್ಯಾಯಮಂಡಳಿಯ ಎದುರು ನನ್ನ ಅಪೀಲು ಅರ್ಜಿ ವಿಚಾರಣೆಗೆ ಬಾಕಿ ಇದೆ. ಈ ಪರಿಸ್ಥಿತಿಯಲ್ಲಿ ನಾನು ನನ್ನ ಪಾಸ್‌ಪೋರ್ಟ್‌ಅನ್ನು ನವೀಕರಣ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ರಾಜಗೋಪಾಲ್‌ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತದಾರರ ಪಟ್ಟಿಯಿಂದ ಹೆಸರು ಕಿತ್ತುಹಾಕಿದ ಪರಿಣಾಮವಾಗಿ ರಾಜಗೋಪಾಲ್ ಅವರ ಪಾಸ್‌ಪೋರ್ಟ್ ನವೀಕರಣಕ್ಕೆ ದೊಡ್ಡ ಕಂಟಕ ಎದುರಾಗಿದೆ. 2026ರ ಮಾರ್ಚ್ 19ರಂದು ಅವರ ಬಯೋಮೆಟ್ರಿಕ್ ಪ್ರಕ್ರಿಯೆ ಪೂರ್ಣಗೊಂಡಿತ್ತು. ಆದರೂ, ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಕಾರಣ ಪೊಲೀಸರು ವೆರಿಫಿಕೇಶನ್ ಪ್ರಕ್ರಿಯೆಯನ್ನು ಅಂತಿಮಗೊಳಿಸಿಲ್ಲ. ಬದಲಾಗಿ, ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆಗಿರುವುದನ್ನು ಉಲ್ಲೇಖಿಸಿ ಕೋಲ್ಕತ್ತಾ ಪೊಲೀಸರು ಪ್ರತಿಕೂಲ ವರದಿ ಕಳುಹಿಸಿದ್ದಾರೆ. ಪರಿಣಾಮ, ಪಾಸ್‌ಪೋರ್ಟ್‌ಅನ್ನು ನವೀಕರಿಸಲು ಸಾಧ್ಯವಿಲ್ಲ ಎಂದು ಪಾಸ್‌ಪೋರ್ಟ್ ಪ್ರಾಧಿಕಾರವು ರಾಜಗೋಪಾಲ್ ಅವರಿಗೆ ಅಧಿಕೃತವಾಗಿ ತಿಳಿಸಿದೆ.

ಈ ಪಾಸ್‌ಪೋರ್ಟ್ ಬಿಕ್ಕಟ್ಟಿನಿಂದಾಗಿ, ಕ್ಯಾಲಿಫೋರ್ನಿಯಾದಲ್ಲಿ ಪತ್ರಕರ್ತೆಯಾಗಿರುವ ತಮ್ಮ ಮಗಳ ವಿವಾಹಕ್ಕೂ ಹಾಜರಾಗಲು ಸಾಧ್ಯವಾಗಿಲ್ಲ ಎಂದು ರಾಜಗೋಪಾಲ್ ಬೇಸರ ವ್ಯಕ್ತಪಡಿಸಿದ್ದಾರೆ.

ಸದ್ಯ ನಾಗರಿಕ ಹಕ್ಕುಗಳ ಅನಿಶ್ಚಿತ ಸ್ಥಿತಿಯಲ್ಲಿರುವ ರಾಜಗೋಪಾಲ್ ಅವರು, ತಮ್ಮ ಹೆತ್ತವರ ಅಸ್ತಿತ್ವವನ್ನು ಸಾಬೀತುಪಡಿಸಲು ದಶಕಗಳಷ್ಟು ಹಳೆಯ ದಾಖಲೆಗಳನ್ನು ಮರುಸೃಷ್ಟಿಸುವ ಹೋರಾಟದಲ್ಲಿ ತೊಡಗಿದ್ದಾರೆ. 1965ರಲ್ಲಿ ಅವರ ತಾಯಿ ಬೋಧಿಸುತ್ತಿದ್ದ ಕಾಲೇಜು ಮತ್ತು 1959ರಲ್ಲಿ ಅವರು ಉತ್ತೀರ್ಣರಾದ ಶಾಲೆಗೆ ಪತ್ರ ಬರೆದು ದಾಖಲೆಗಳನ್ನು ಕೋರುತ್ತಿದ್ದಾರೆ. ಹಾಗೆಯೇ ಕೇರಳದಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ಕೋಮುವಾದದ ವಿರುದ್ಧ ತಮ್ಮ ತಂದೆ ನಡೆಸಿದ ಹೋರಾಟಗಳ ಪತ್ರಿಕಾ ವರದಿಗಳು ಅಥವಾ ಛಾಯಾಚಿತ್ರಗಳಿಗಾಗಿ ಹಳೆಯ ಹೋರಾಟಗಾರರನ್ನು ಸಂಪರ್ಕಿಸುತ್ತಿದ್ದಾರೆ.

“ನಾನು ಪ್ರಸ್ತುತ ನಾಗರಿಕ ಅನಿಶ್ಚಿತತೆಯ ಸ್ಥಿತಿಯಲ್ಲಿದ್ದೇನೆ. ಇತ್ತೀಚೆಗಷ್ಟೇ ಸರ್ಕಾರ ಪಾಸ್‌ಪೋರ್ಟ್ ಪೌರತ್ವಕ್ಕೆ ಯಾವುದೇ ಪುರಾವೆಯಲ್ಲ ಎಂದು ಪುನರುಚ್ಚರಿಸಿದೆ. ನನ್ನ ಹೆಚ್ಚಿನ ಸಮಯವು ಈಗ ಹಲವಾರು ದಶಕಗಳಷ್ಟು ಹಳೆಯದಾದ ಕುಟುಂಬದ ದಾಖಲೆಗಳನ್ನು ಮರುನಿರ್ಮಾಣ ಮಾಡಲು ಮತ್ತು ದಾಖಲೆಗಳನ್ನು ಭದ್ರಪಡಿಸಿಕೊಳ್ಳುವ ಪ್ರಯತ್ನಗಳಿಗಾಗಿಯೇ ವ್ಯಯವಾಗುತ್ತಿದೆ” ಎಂದು ರಾಜ್‌ಗೋಪಾಲ್ ಹೇಳಿದ್ದಾರೆ.

ಕಳವಳ ವ್ಯಕ್ತಪಡಿಸಿದ ಸಾಮಾಜಿಕ ಪ್ರಮುಖರು

ರಾಜ್‌ಗೋಪಾಲ್ ಅವರ ಪ್ರಕರಣದ ಕುರಿತು ವಿವಿಧ ರಾಜಕೀಯ ಪಕ್ಷಗಳ ನಾಯಕರು ಸೇರಿದಂತೆ ಸಾಮಾಜಿಕ ಪ್ರಮುಖರು ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.

ಟಿಎಂಸಿ ಸಂಸದೆ ಸಾಗರಿಕಾ ಘೋಷ್ ಪ್ರತಿಕ್ರಿಯಿಸಿ, “ಸ್ತಬ್ದಗೊಳಿಸುವ ಮತ್ತು ಹೃದಯ ವಿದ್ರಾವಕವಾದ ವರದಿ. ಟೆಲಿಗ್ರಾಫ್‌ (The Telegraph) ಪತ್ರಿಕೆಯ ಮಾಜಿ ಸಂಪಾದಕರಾದ ಆರ್. ರಾಜಗೋಪಾಲ್ ಅವರಿಗೇ ಈ ಪರಿಸ್ಥಿತಿ ಎದುರಾಗಬಹುದಾದರೆ, ಇವರಿಗಿಂತ ತೀರಾ ಕಡಿಮೆ ಅವಕಾಶಗಳನ್ನು ಹೊಂದಿರುವ ಸಾಮಾನ್ಯ ನಾಗರಿಕರು ಇನ್ನೆಷ್ಟು ಕಷ್ಟಗಳನ್ನು ಅನುಭವಿಸುತ್ತಿರಬಹುದು ಎಂಬುದನ್ನು ಕಲ್ಪಿಸಿಕೊಳ್ಳಿ. ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲಾಗಿದೆ. ಮತದಾನದ ಹಕ್ಕನ್ನು ನಿರಾಕರಿಸಲಾಗಿದೆ. ಈ ಹೆಸರು ತೆಗೆದುಹಾಕುವಿಕೆಗೆ ಸಂಬಂಧಿಸಿದ ಪ್ರತಿಕೂಲ ಪೊಲೀಸ್ ವರದಿಯ ಕಾರಣದಿಂದಾಗಿ ಪಾಸ್‌ಪೋರ್ಟ್ ನವೀಕರಣವನ್ನು 100 ದಿನಗಳವರೆಗೆ ತಡೆಹಿಡಿಯಲಾಗಿದೆ. ವಿದೇಶದಲ್ಲಿ ನಡೆಯಬೇಕಿದ್ದ ಸ್ವಂತ ಮಗಳ ಮದುವೆಗೆ ಹೋಗಲು ಸಾಧ್ಯವಾಗದೆ ವಂಚಿತರಾಗಿದ್ದಾರೆ. ಇದಾದ ನಂತರ ಪಾಸ್‌ಪೋರ್ಟ್ ಪೌರತ್ವಕ್ಕೆ “ಪುರಾವೆಯಲ್ಲ” ಎಂದು ಹೇಳಲಾಗಿದೆ. ಮೂಲಭೂತ ನಾಗರಿಕ ಹಕ್ಕುಗಳ ನಿಧಾನಗತಿಯ ಸವೆತವು ಹೀಗೆಯೇ ಇರುತ್ತದೆ. ಇದಕ್ಕಿಂತಲೂ ಹೆಚ್ಚು ಆತಂಕಕಾರಿ ಸಂಗತಿಯೆಂದರೆ, ಮುಖ್ಯವಾಹಿನಿಯ ಬಹುತೇಕ ಮಾಧ್ಯಮಗಳು ಈ ಬಗ್ಗೆ ಮೌನ ವಹಿಸಿರುವುದು. ಇಂತಹ ಹೀನಾಯವಾದ ಕಥೆಗಳನ್ನು ಏಕೆ ಕಣ್ಣಿಗೆ ಕಾಣದಂತೆ ಮರೆಮಾಡಲಾಗುತ್ತಿದೆ?” ಎಂದು ಬರೆದುಕೊಂಡಿದ್ದಾರೆ.

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಅವರು ಎಸ್‌ಐಆರ್ ಪ್ರಕ್ರಿಯೆ ಜನರನ್ನು ಮತದಾನದ ಹಕ್ಕಿನಿಂದ ವಂಚಿತಗೊಳಿಸಲು ಮತ್ತು “ಬಿಜೆಪಿಯ ವಿಭಜಕ ಹಿಂದುತ್ವ ಕಾರ್ಯಸೂಚಿಯನ್ನು ಮುಂದುವರಿಸಲು ಪೌರತ್ವವನ್ನು ನಿರ್ಧರಿಸಲು” ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

“ಎಸ್‌ಐಆರ್ ಪ್ರಕ್ರಿಯೆಯು ನಮ್ಮ ದೇಶದ ಬಡ ಮತ್ತು ದುರ್ಬಲ ವರ್ಗದವರನ್ನು ಮತದಾನದ ಹಕ್ಕಿನಿಂದ ವಂಚಿತಗೊಳಿಸುತ್ತದೆ ಎಂದು ಸಿಪಿಐ(ಎಂ) ಆರಂಭದಿಂದಲೂ ಎಚ್ಚರಿಸಿತ್ತು. ಆದರೆ ಈಗ, ಆರ್. ರಾಜಗೋಪಾಲ್ ಅವರಂತಹ ಪ್ರಖ್ಯಾತ ಸಂಪಾದಕರು ಮತ್ತು ಹೆಸರಾಂತ ಪತ್ರಕರ್ತರಿಗೂ ಸಹ ಅವರ ಮತದಾನದ ಹಕ್ಕನ್ನು ನಿರಾಕರಿಸಲಾಗಿದೆ” ಎಂದು ಬೇಬಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ರಾಜ್‌ಗೋಪಾಲ್ ಅವರ ಪ್ರಕರಣದ ಕುರಿತು ಭಾರೀ ಚರ್ಚೆಗಳು ನಡೆಯುತ್ತಿವೆ. ಎಸ್‌ಐಆರ್‌ನ ಬಗ್ಗೆ ಪ್ರತಿಪಕ್ಷಗಳು ಮತ್ತು ಜನಪರ ಸಂಘಟನೆಗಳು ಆರಂಭದಿಂದಲೂ ಹೇಳಿಕೊಂಡು ಬಂದಿದ್ದ ಆತಂಕಗಳು ಈಗ ನಿಜವಾಗುತ್ತಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...