Homeಕರ್ನಾಟಕಕಾಂಗ್ರೆಸ್ ಆಪರೇಷನ್ ಹಸ್ತ ಮಾಡಿದ್ದು ಸರಿಯೇ?: ಎಚ್.ಡಿ ಕುಮಾರಸ್ವಾಮಿ ಪ್ರಶ್ನೆ

ಕಾಂಗ್ರೆಸ್ ಆಪರೇಷನ್ ಹಸ್ತ ಮಾಡಿದ್ದು ಸರಿಯೇ?: ಎಚ್.ಡಿ ಕುಮಾರಸ್ವಾಮಿ ಪ್ರಶ್ನೆ

- Advertisement -
- Advertisement -

ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ “ಪ್ರಜಾಪ್ರಭುತ್ವ ಉಳಿಸಿ” ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು ಬೆಂಬಲ ನೀಡಿದ BSPಯ ಎಲ್ಲ ಶಾಸಕರನ್ನೂ ಕಾಂಗ್ರೆಸ್ ಸೆಳೆದಿಲ್ಲವೇ? ಇದು ಖರೀದಿಯಲ್ಲವೇ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಸರ್ಕಾರ ರಚಿಸಲು ಬೆಂಬಲ ಕೊಟ್ಟವರನ್ನೇ ಕುತಂತ್ರದಿಂದ ಸೆಳೆದುಕೊಳ್ಳುವುದು, ಇಡೀ ಪಕ್ಷವನ್ನೇ ವಿಲೀನ ಮಾಡಿಸಿಕೊಳ್ಳುವುದು ಪ್ರಜಾಪ್ರಭುತ್ವ ನಡೆಯೇ? ಸಮಾನ ಮನಸ್ಕ ಪಕ್ಷಗಳನ್ನು ಒಡೆದು ಶಾಸಕರನ್ನು ಸೆಳೆಯುತ್ತಿದ್ದರೆ ನಿಮಗೆ ಯಾರು ಬೆಂಬಲ ಕೊಟ್ಟಾರು. ಈ ತಪ್ಪುಗಳು ನಿಮಗೆ ಕಾಣುತ್ತಿಲ್ಲವೇ ಎಂದು ಎಚ್‌ಡಿಕೆ ಕೇಳಿದ್ದಾರೆ.

ಶಾಸಕರ ಖರೀದಿ ವಿಚಾರವಾಗಿ ದೊಡ್ಡ ಗಂಟಲು ಮಾಡುತ್ತಿರುವ ಕಾಂಗ್ರೆಸ್ ಹಿಂದೆ ಜೆಡಿಎಸ್ ಅನ್ನು ಒಡೆದಿಲ್ಲವೇ? ಒಡೆಯಲು ಪ್ರಯತ್ನಗಳನ್ನು ಮಾಡಲಿಲ್ಲವೇ? ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಂಟು ಮಂದಿಯನ್ನು ಕೇವಲ ರಾಜ್ಯಸಭೆ ಚುನಾವಣೆಗಾಗಿ ಖರೀದಿಸಲಿಲ್ಲವೇ? ಇದು ಪ್ರಜಾಸತ್ತಾತ್ಮಕವೇ? ಖರೀದಿ ವಿಚಾರದಲ್ಲಿ ಎರಡೂ ಪಕ್ಷಗಳೂ ‘ಅಪರಾಧಿ’ಗಳೇ ಎಂದಿದ್ದಾರೆ.

ಎಸ್.ಎಂ ಕೃಷ್ಣ ಅವರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ನಮ್ಮ ಶಾಸಕರನ್ನು ಖರೀದಿ ಮಾಡಿರಲಿಲ್ಲವೇ? 2018ರ ವಿಧಾನಸಭೆ ಚುನಾವಣೆ ನಂತರ ನಮ್ಮ ಶಾಸಕರನ್ನು ಖರೀದಿಸಿ ಸ್ವತಂತ್ರವಾಗಿ ಸರ್ಕಾರ ರಚಿಸಲು ಹೊಂಚು ಹಾಕಿರಲಿಲ್ಲವೇ? ಕಾಂಗ್ರೆಸ್ ಬಳಿ ಈ ಪ್ರಶ್ನೆಗಳಿಗೆ ಉತ್ತರಿಸಲು ನೈತಿಕತೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.

2004ರ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಇದೇ ಕಾಂಗ್ರೆಸ್ ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿತ್ತು. ಇದನ್ನು ಮನಗಂಡೇ ನಾನು ಕ್ಷಿಪ್ರ ರಾಜಕೀಯ ಕ್ರಾಂತಿ ಮಾಡಬೇಕಾಯಿತು. ಪಕ್ಷಗಳನ್ನು ಒಡೆಯುವ, ಶಾಸಕರನ್ನು ಖರೀದಿಸುವ ವ್ಯವಹಾರದಲ್ಲಿ ಕಾಂಗ್ರೆಸ್ ನಿಪುಣ. ‘ಕುದುರೆ ವ್ಯಾಪಾರ’ ಎಂಬ ಭಾಷೆ ಹುಟ್ಟಿದ್ದೇ ಕಾಂಗ್ರೆಸ್‌ನಿಂದ ಎಂದು ಟೀಕಿಸಿದ್ದಾರೆ.

ಪಕ್ಷಾಂತರ ನಿಷೇಧ ಕಾಯ್ದೆ ಪರಿಣಾಮಕಾರಿಯಾಗಿಲ್ಲ.‌ ಆದ್ದರಿಂದಲೇ ಈ ಪ್ರಜಾಪ್ರಭುತ್ವ ವಿರೋಧಿ ಪ್ರಹಸನಗಳು ನಡೆಯುತ್ತಿವೆ. ಹಾಗಾಗಿ ಪಕ್ಷಾಂತರ ಮಾಡಿದ ವ್ಯಕ್ತಿ, ಆತನ ಕುಟುಂಬಕ್ಕೆ 2 ಅವಧಿಗೆ ಚುನಾವಣೆ ನಿರ್ಬಂಧಿಸುವ ಮತ್ತು ಈ ಅವಧಿಯಲ್ಲಿ ಯಾವುದೇ ಅಧಿಕಾರ ಹೊಂದದಂತೆ ಮಾಡುವುದು ಸೂಕ್ತ. ಇದರತ್ತ ಚರ್ಚೆಗಳಾದರೂ ನಡೆಯಲಿ. ಪ್ರಜಾಪ್ರಭುತ್ವ ಉಳಿಯಲಿ ಎಂದಿದ್ದಾರೆ.

ಪ್ರಜಾಪ್ರಭುತ್ವ ಉಳಿಸಲು ಪ್ರಾಣ ನೀಡುವುದಾಗಿ ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಹೇಳುತ್ತಿದ್ದರು. ಸ್ವಾಮಿ, ಜೀವ ಅಮೂಲ್ಯ. ನೀವು ಪ್ರಾಣ ಕೊಡುವುದು ಬೇಡ. ಕಾಂಗ್ರೆಸ್‌ ನಡೆದು ಬಂದ ದಾರಿಯನ್ನು ಒಂದು ಬಾರಿ ನೆನಪಿಸಿಕೊಳ್ಳಿ. ನಂತರ ಪಕ್ಷಾಂತರ ನಿಷೇಧ ಕಾಯ್ದೆಯನ್ನು ಸದೃಢಗೊಳಿಸುವತ್ತ ಚಿಂತನೆ ಮಾಡಿ. ಪ್ರಜಾಪ್ರಭುತ್ವ ತಂತಾನೆ ಉಳಿಯುತ್ತದೆ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಯಡಿಯೂರಪ್ಪ ಆಪರೇಷನ್ ಕಮಲದ ಪಿತಾಮಹ: ಸಿದ್ದರಾಮಯ್ಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...