Homeಕರ್ನಾಟಕಕಾಂಗ್ರೆಸ್ ಆಪರೇಷನ್ ಹಸ್ತ ಮಾಡಿದ್ದು ಸರಿಯೇ?: ಎಚ್.ಡಿ ಕುಮಾರಸ್ವಾಮಿ ಪ್ರಶ್ನೆ

ಕಾಂಗ್ರೆಸ್ ಆಪರೇಷನ್ ಹಸ್ತ ಮಾಡಿದ್ದು ಸರಿಯೇ?: ಎಚ್.ಡಿ ಕುಮಾರಸ್ವಾಮಿ ಪ್ರಶ್ನೆ

- Advertisement -
- Advertisement -

ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ “ಪ್ರಜಾಪ್ರಭುತ್ವ ಉಳಿಸಿ” ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು ಬೆಂಬಲ ನೀಡಿದ BSPಯ ಎಲ್ಲ ಶಾಸಕರನ್ನೂ ಕಾಂಗ್ರೆಸ್ ಸೆಳೆದಿಲ್ಲವೇ? ಇದು ಖರೀದಿಯಲ್ಲವೇ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಸರ್ಕಾರ ರಚಿಸಲು ಬೆಂಬಲ ಕೊಟ್ಟವರನ್ನೇ ಕುತಂತ್ರದಿಂದ ಸೆಳೆದುಕೊಳ್ಳುವುದು, ಇಡೀ ಪಕ್ಷವನ್ನೇ ವಿಲೀನ ಮಾಡಿಸಿಕೊಳ್ಳುವುದು ಪ್ರಜಾಪ್ರಭುತ್ವ ನಡೆಯೇ? ಸಮಾನ ಮನಸ್ಕ ಪಕ್ಷಗಳನ್ನು ಒಡೆದು ಶಾಸಕರನ್ನು ಸೆಳೆಯುತ್ತಿದ್ದರೆ ನಿಮಗೆ ಯಾರು ಬೆಂಬಲ ಕೊಟ್ಟಾರು. ಈ ತಪ್ಪುಗಳು ನಿಮಗೆ ಕಾಣುತ್ತಿಲ್ಲವೇ ಎಂದು ಎಚ್‌ಡಿಕೆ ಕೇಳಿದ್ದಾರೆ.

ಶಾಸಕರ ಖರೀದಿ ವಿಚಾರವಾಗಿ ದೊಡ್ಡ ಗಂಟಲು ಮಾಡುತ್ತಿರುವ ಕಾಂಗ್ರೆಸ್ ಹಿಂದೆ ಜೆಡಿಎಸ್ ಅನ್ನು ಒಡೆದಿಲ್ಲವೇ? ಒಡೆಯಲು ಪ್ರಯತ್ನಗಳನ್ನು ಮಾಡಲಿಲ್ಲವೇ? ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಂಟು ಮಂದಿಯನ್ನು ಕೇವಲ ರಾಜ್ಯಸಭೆ ಚುನಾವಣೆಗಾಗಿ ಖರೀದಿಸಲಿಲ್ಲವೇ? ಇದು ಪ್ರಜಾಸತ್ತಾತ್ಮಕವೇ? ಖರೀದಿ ವಿಚಾರದಲ್ಲಿ ಎರಡೂ ಪಕ್ಷಗಳೂ ‘ಅಪರಾಧಿ’ಗಳೇ ಎಂದಿದ್ದಾರೆ.

ಎಸ್.ಎಂ ಕೃಷ್ಣ ಅವರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ನಮ್ಮ ಶಾಸಕರನ್ನು ಖರೀದಿ ಮಾಡಿರಲಿಲ್ಲವೇ? 2018ರ ವಿಧಾನಸಭೆ ಚುನಾವಣೆ ನಂತರ ನಮ್ಮ ಶಾಸಕರನ್ನು ಖರೀದಿಸಿ ಸ್ವತಂತ್ರವಾಗಿ ಸರ್ಕಾರ ರಚಿಸಲು ಹೊಂಚು ಹಾಕಿರಲಿಲ್ಲವೇ? ಕಾಂಗ್ರೆಸ್ ಬಳಿ ಈ ಪ್ರಶ್ನೆಗಳಿಗೆ ಉತ್ತರಿಸಲು ನೈತಿಕತೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.

2004ರ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಇದೇ ಕಾಂಗ್ರೆಸ್ ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿತ್ತು. ಇದನ್ನು ಮನಗಂಡೇ ನಾನು ಕ್ಷಿಪ್ರ ರಾಜಕೀಯ ಕ್ರಾಂತಿ ಮಾಡಬೇಕಾಯಿತು. ಪಕ್ಷಗಳನ್ನು ಒಡೆಯುವ, ಶಾಸಕರನ್ನು ಖರೀದಿಸುವ ವ್ಯವಹಾರದಲ್ಲಿ ಕಾಂಗ್ರೆಸ್ ನಿಪುಣ. ‘ಕುದುರೆ ವ್ಯಾಪಾರ’ ಎಂಬ ಭಾಷೆ ಹುಟ್ಟಿದ್ದೇ ಕಾಂಗ್ರೆಸ್‌ನಿಂದ ಎಂದು ಟೀಕಿಸಿದ್ದಾರೆ.

ಪಕ್ಷಾಂತರ ನಿಷೇಧ ಕಾಯ್ದೆ ಪರಿಣಾಮಕಾರಿಯಾಗಿಲ್ಲ.‌ ಆದ್ದರಿಂದಲೇ ಈ ಪ್ರಜಾಪ್ರಭುತ್ವ ವಿರೋಧಿ ಪ್ರಹಸನಗಳು ನಡೆಯುತ್ತಿವೆ. ಹಾಗಾಗಿ ಪಕ್ಷಾಂತರ ಮಾಡಿದ ವ್ಯಕ್ತಿ, ಆತನ ಕುಟುಂಬಕ್ಕೆ 2 ಅವಧಿಗೆ ಚುನಾವಣೆ ನಿರ್ಬಂಧಿಸುವ ಮತ್ತು ಈ ಅವಧಿಯಲ್ಲಿ ಯಾವುದೇ ಅಧಿಕಾರ ಹೊಂದದಂತೆ ಮಾಡುವುದು ಸೂಕ್ತ. ಇದರತ್ತ ಚರ್ಚೆಗಳಾದರೂ ನಡೆಯಲಿ. ಪ್ರಜಾಪ್ರಭುತ್ವ ಉಳಿಯಲಿ ಎಂದಿದ್ದಾರೆ.

ಪ್ರಜಾಪ್ರಭುತ್ವ ಉಳಿಸಲು ಪ್ರಾಣ ನೀಡುವುದಾಗಿ ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಹೇಳುತ್ತಿದ್ದರು. ಸ್ವಾಮಿ, ಜೀವ ಅಮೂಲ್ಯ. ನೀವು ಪ್ರಾಣ ಕೊಡುವುದು ಬೇಡ. ಕಾಂಗ್ರೆಸ್‌ ನಡೆದು ಬಂದ ದಾರಿಯನ್ನು ಒಂದು ಬಾರಿ ನೆನಪಿಸಿಕೊಳ್ಳಿ. ನಂತರ ಪಕ್ಷಾಂತರ ನಿಷೇಧ ಕಾಯ್ದೆಯನ್ನು ಸದೃಢಗೊಳಿಸುವತ್ತ ಚಿಂತನೆ ಮಾಡಿ. ಪ್ರಜಾಪ್ರಭುತ್ವ ತಂತಾನೆ ಉಳಿಯುತ್ತದೆ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಯಡಿಯೂರಪ್ಪ ಆಪರೇಷನ್ ಕಮಲದ ಪಿತಾಮಹ: ಸಿದ್ದರಾಮಯ್ಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...