Homeಕರ್ನಾಟಕಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ: ಸಚಿವ ಮಧು ಬಂಗಾರಪ್ಪ

ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ: ಸಚಿವ ಮಧು ಬಂಗಾರಪ್ಪ

- Advertisement -
- Advertisement -

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ಬಳಿಕ, ಪಠ್ಯಪುಸ್ತಕ ಪರಿಷ್ಕರಣೆ ಮಾಡಬೇಕು ಎಂದು ನಾಡಿನ ಪ್ರಜ್ಞಾವಂತರು ಮುಖ್ಯಮಂತ್ರಿಯವರು ಮನವಿ ಮಾಡಿದ್ದರು. ”ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ. ಮಕ್ಕಳಿಗೆ ಅವಶ್ಯಕತೆ ಇಲ್ಲದ್ದನ್ನು ತಜ್ಞರು ಪರಿಶೀಲಿಸಿ ತೀರ್ಮಾನಿಸುತ್ತಾರೆ. ಮುಂದಿನ ಸಂಪುಟದಲ್ಲೇ ಚರ್ಚೆ ಮಾಡಲಾಗುತ್ತದೆ” ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”’ಆರಂಭದಲ್ಲಿ ಸೇತು ಬಂಧ ಇರಲಿದೆ. ಮಕ್ಕಳು ಪಠ್ಯಕ್ಕೆ ಹೋಗಲ್ಲ. ಮತ್ತು ಪಠ್ಯದಲ್ಲಿ ಏನು ಓದಿಸಬೇಕು, ಯಾವುದು ಬೇಡ ಎಂಬುದನ್ನು ನಿರ್ಧರಿಸಲಾಗುತ್ತದೆ” ಎಂದರು ವಿವರಿಸಿದರು.

”ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬದಲಾವಣೆ ಮಾಡಿಯೇ ಮಾಡುತ್ತೇವೆ. ಈ ವರ್ಷ ಮಾಡಲ್ಲ ಮುಂದಿನ ವರ್ಷ ಅಂತೆಲ್ಲ ಕೆಲವು ಮಾಧ್ಯಮಗಳಲ್ಲಿ ಬರುತ್ತಿವೆ. ಮಕ್ಕಳು ತಪ್ಪು ಓದಬಾರದು, ತಪ್ಪು ಪಠ್ಯಗಳನ್ನು ಮುಂದಿನ ವರ್ಷದ ತನಕ ಕಾಯಬೇಕಿಲ್ಲ. ಹೀಗಾಗಿ ತಜ್ಞರೂ ಕೂಡ ಅದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ” ಎಂದರು.

”ಇದು ಬಹಳ ಸೂಕ್ಷ್ಮ ವಿಚಾರ. ಮಕ್ಕಳ ಹಿತದೃಷ್ಟಿಯಿಂದ ಕ್ರಮ ತೆಗೆದುಕೊಳ್ಳುತ್ತೇವೆ. ಮಕ್ಕಳ ಭವಿಷ್ಯಕ್ಕೆ ಒಳ್ಳೆಯ ಅಂಶ ಉಳಿಸಲಾಗುತ್ತದೆ. ಪಠ್ಯಪರಿಷ್ಕರಣೆಯಾಗಬೇಕೆಂದು ಸಾಹಿತಿಗಳು ಸಿಎಂಗೆ ಮನವಿ ಕೊಟ್ಟಿದ್ದಾರೆ. ಮುಖ್ಯಮಂತ್ರಿಯವರು ಕೂಡ ಆಸಕ್ತಿ ತೋರಿಸಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆ ಮಾಡುತ್ತೇವೆ” ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೆವು ಅದರಂತೆ ಮಾಡುತ್ತೇವೆ” ಎಂದರು.

”ತಜ್ಞರು ಪಕ್ಷಕ್ಕೆ ಸೀಮಿತವಾಗಿರಲ್ಲ. ಅವರು ಕೊಡುವ ಸಲಹೆ ಪರಿಗಣಿಸಲಾಗುತ್ತದೆ. ತಪ್ಪು ತಿಳುವಳಿಕೆ ತಕ್ಷಣ ತಡೆ ಹಿಡಿಯಬೇಕಾಗುತ್ತದೆ. ಅದನ್ನು ನಾವು ಮಾಡುತ್ತೇವೆ. ಯಾವ ಪಠ್ಯ ಬೇಡ ಎಂದು ತಜ್ಞರು ಸೂಚಿಸುತ್ತಾರೋ ಅದನ್ನು ಬೋಧಿಸದಂತೆ ತಿಳಿಸಲು ಅವಕಾಶವಿದೆ” ಎಂದರು.

”ಸಪ್ಲಿಮೆಂಟ್ ಮಾದರಿಯ ಪುಸ್ತಕ ನೀಡುತ್ತೇವೆ. ಯಾವ ಪಾಠ ಮಾಡಬೇಕು, ಯಾವುದು ಮಾಡಬಾರದು ಎಂಬುದನ್ನೂ ತಿಳಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ ವಿಚಾರ: ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಕೇಸರೀಕರಣಕ್ಕೆ ಬ್ರೇಕ್ ಹಾಕುವ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಮಕ್ಕಳ ಒಳಿತಿಗೆ ಸರಿಯಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಅದು ಇದು ಅಂತ ಏನೂ ಇಲ್ಲ. ತುಂಬಾ ಸೂಕ್ಷ್ಮ ವಿಚಾರಗಳಿವು. ಹಾಗಾಗಿ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಬೇಕಿದೆ. ದೊಡ್ಡ ಮಟ್ಟದ ಚರ್ಚೆಗಳ ಅವಶ್ಯಕತೆಯಿದೆ. ಹಾಗಾಗಿ ಮಕ್ಕಳ ಒಳಿತನ್ನ ನೋಡಿಯೇ ಮಾಡಬೇಕು. ಮಕ್ಕಳಿಗೆ ಒಳಿತಾಗುವಂತೆ ನಾವು ಮಾಡ್ತೇವೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

”ಶಿಕ್ಷಕರ ನೇಮಕದಲ್ಲಿ ಎರಡು ಸಮಸ್ಯೆ ಇದೆ. ಕಾನೂನಿನ ತೊಡಕಿದೆ ಅದನ್ನು ಎಜಿ ಅವರ ಚರ್ಚೆ ಮಾತನಾಡಲಾಗುತ್ತದೆ. ಶಿಕ್ಷಕರ ಕೊರತೆ ಇದೆ. ಅತಿಥಿ ಶಿಕ್ಷಕರೇ ಸಮಸ್ಯೆಗೆ ಪರಿಹಾರವಲ್ಲ. ಹೀಗಾಗಿ ಆದಷ್ಟು ಶೀಘ್ರವಾಗಿ ಪರಿಹರಿಸಲಾಗುತ್ತದೆ” ಎಂದು ತಿಳಿಸಿದರು.

ಪಠ್ಯಪುಸ್ತಕ ಮರು ಪರಿಷ್ಕರಣೆಗೆ ಸಾಹಿತಿ ಕುಂ. ವೀರಭದ್ರಪ್ಪ ಬೆಂಬಲ:

ಪಠ್ಯಪುಸ್ತಕ ಮರು ಪರಿಷ್ಕರಣೆಗೆ ಸಾಹಿತಿ ಕುಂ. ವೀರಭದ್ರಪ್ಪ ಬೆಂಬಲ ಸೂಚಿಸಿದ್ದಾರೆ. ಹಿಂದಿನ ಸರ್ಕಾರ ಪಠ್ಯ ಪುಸ್ತಕದಲ್ಲಿ ಭಾರಿ ಲೋಪ ಎಸಗಿದೆ ಎಂದು ಅವರು ದೂರಿದ್ದಾರೆ.

”ಹಿಂದಿನ ಸರ್ಕಾರ ಪಠ್ಯ ಪುಸ್ತಕದಲ್ಲಿ ಭಾರಿ ಲೋಪ ಎಸಗಿದೆ. ಕೆಲವು ಹುಸಿ ದೇಶ ಭಕ್ತರನ್ನು ಬಿಂಬಿಸುವ ಪ್ರಯತ್ನವನ್ನು ಬಿಜೆಪಿ ಸರ್ಕಾರ ಮಾಡಿತ್ತು. ರೋಹಿತ್ ಚಕ್ರತೀರ್ಥ ಎಂಬ ಅಪಕ್ವ ವ್ಯಕ್ತಿಯನ್ನು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷನನ್ನಾಗಿ ಮಾಡಿತ್ತು. ಅವರು ಮಾಡಿದ ತಪ್ಪನ್ನು ಸರಿಪಡಿಸಬೇಕು. ಹೊಸ ಪಠ್ಯಪುಸ್ತಕ ಜಾರಿಗೆ ತರಬೇಕು. ಬರಗೂರು ರಾಮಚಂದ್ರಪ್ಪ ಜಾರಿಗೆ ತಂದಿದ್ದ ಪುಸ್ತಕಗಳೇ ಮತ್ತೆ ಬರಬೇಕು” ಎಂದು ಅವರು ಆಗ್ರಹಿಸಿದ್ದಾರೆ.

”ಬಿಜೆಪಿಯವರು ಹೇಳುವುದು ಭಾರತೀಯತೆ ಅಲ್ಲ, ಅವರು ಹೇಳುವುದು ಹಿಂದುತ್ವ. ದೇಶದ ಎಲ್ಲರ ಹಿತಾಸಕ್ತಿ ಕಾಪಾಡುವುದು ಭಾರತೀಯತೆ. ಬಿಜೆಪಿಯವರು ಹೇಳುವ ಭಾರತೀಯತೆ ಒಪ್ಪಲು ಸಾಧ್ಯವಿಲ್ಲ. ಬಿಜೆಪಿಯವರು ಹೇಳುವುದು ಆರ್​​​ಎಸ್​​ಎಸ್ ಪ್ರಣೀತ ಭಾರತೀಯತೆ. ಅಂಬೇಡ್ಕರ್, ಗಾಂಧಿ ಆಶಯದ ಭಾರತೀಯತೆ ಅಲ್ಲ. ಹಳೇಯ ಪಠ್ಯಕ್ರಮವನ್ನು ಸರ್ಕಾರ ಜಾರಿಗೆ ತರಬೇಕು” ಎಂದು ವೀರಭದ್ರಪ್ಪ ಹೇಳಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿದ್ದ ಪಠ್ಯ ಪರಿಷ್ಕರಣೆಗೆ ಪ್ರತಿಪಕ್ಷಗಳಿಂದ ಭಾರೀ ಆಕ್ಷೇಪ ವ್ಯಕ್ತವಾಗಿತ್ತು. ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ರಾಜಕೀಯ ಆಯಾಮ ಪಡೆದುಕೊಂಡು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...