Homeಕರ್ನಾಟಕಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ: ಸಚಿವ ಮಧು ಬಂಗಾರಪ್ಪ

ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ: ಸಚಿವ ಮಧು ಬಂಗಾರಪ್ಪ

- Advertisement -
- Advertisement -

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ಬಳಿಕ, ಪಠ್ಯಪುಸ್ತಕ ಪರಿಷ್ಕರಣೆ ಮಾಡಬೇಕು ಎಂದು ನಾಡಿನ ಪ್ರಜ್ಞಾವಂತರು ಮುಖ್ಯಮಂತ್ರಿಯವರು ಮನವಿ ಮಾಡಿದ್ದರು. ”ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ. ಮಕ್ಕಳಿಗೆ ಅವಶ್ಯಕತೆ ಇಲ್ಲದ್ದನ್ನು ತಜ್ಞರು ಪರಿಶೀಲಿಸಿ ತೀರ್ಮಾನಿಸುತ್ತಾರೆ. ಮುಂದಿನ ಸಂಪುಟದಲ್ಲೇ ಚರ್ಚೆ ಮಾಡಲಾಗುತ್ತದೆ” ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”’ಆರಂಭದಲ್ಲಿ ಸೇತು ಬಂಧ ಇರಲಿದೆ. ಮಕ್ಕಳು ಪಠ್ಯಕ್ಕೆ ಹೋಗಲ್ಲ. ಮತ್ತು ಪಠ್ಯದಲ್ಲಿ ಏನು ಓದಿಸಬೇಕು, ಯಾವುದು ಬೇಡ ಎಂಬುದನ್ನು ನಿರ್ಧರಿಸಲಾಗುತ್ತದೆ” ಎಂದರು ವಿವರಿಸಿದರು.

”ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬದಲಾವಣೆ ಮಾಡಿಯೇ ಮಾಡುತ್ತೇವೆ. ಈ ವರ್ಷ ಮಾಡಲ್ಲ ಮುಂದಿನ ವರ್ಷ ಅಂತೆಲ್ಲ ಕೆಲವು ಮಾಧ್ಯಮಗಳಲ್ಲಿ ಬರುತ್ತಿವೆ. ಮಕ್ಕಳು ತಪ್ಪು ಓದಬಾರದು, ತಪ್ಪು ಪಠ್ಯಗಳನ್ನು ಮುಂದಿನ ವರ್ಷದ ತನಕ ಕಾಯಬೇಕಿಲ್ಲ. ಹೀಗಾಗಿ ತಜ್ಞರೂ ಕೂಡ ಅದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ” ಎಂದರು.

”ಇದು ಬಹಳ ಸೂಕ್ಷ್ಮ ವಿಚಾರ. ಮಕ್ಕಳ ಹಿತದೃಷ್ಟಿಯಿಂದ ಕ್ರಮ ತೆಗೆದುಕೊಳ್ಳುತ್ತೇವೆ. ಮಕ್ಕಳ ಭವಿಷ್ಯಕ್ಕೆ ಒಳ್ಳೆಯ ಅಂಶ ಉಳಿಸಲಾಗುತ್ತದೆ. ಪಠ್ಯಪರಿಷ್ಕರಣೆಯಾಗಬೇಕೆಂದು ಸಾಹಿತಿಗಳು ಸಿಎಂಗೆ ಮನವಿ ಕೊಟ್ಟಿದ್ದಾರೆ. ಮುಖ್ಯಮಂತ್ರಿಯವರು ಕೂಡ ಆಸಕ್ತಿ ತೋರಿಸಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆ ಮಾಡುತ್ತೇವೆ” ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೆವು ಅದರಂತೆ ಮಾಡುತ್ತೇವೆ” ಎಂದರು.

”ತಜ್ಞರು ಪಕ್ಷಕ್ಕೆ ಸೀಮಿತವಾಗಿರಲ್ಲ. ಅವರು ಕೊಡುವ ಸಲಹೆ ಪರಿಗಣಿಸಲಾಗುತ್ತದೆ. ತಪ್ಪು ತಿಳುವಳಿಕೆ ತಕ್ಷಣ ತಡೆ ಹಿಡಿಯಬೇಕಾಗುತ್ತದೆ. ಅದನ್ನು ನಾವು ಮಾಡುತ್ತೇವೆ. ಯಾವ ಪಠ್ಯ ಬೇಡ ಎಂದು ತಜ್ಞರು ಸೂಚಿಸುತ್ತಾರೋ ಅದನ್ನು ಬೋಧಿಸದಂತೆ ತಿಳಿಸಲು ಅವಕಾಶವಿದೆ” ಎಂದರು.

”ಸಪ್ಲಿಮೆಂಟ್ ಮಾದರಿಯ ಪುಸ್ತಕ ನೀಡುತ್ತೇವೆ. ಯಾವ ಪಾಠ ಮಾಡಬೇಕು, ಯಾವುದು ಮಾಡಬಾರದು ಎಂಬುದನ್ನೂ ತಿಳಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ ವಿಚಾರ: ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಕೇಸರೀಕರಣಕ್ಕೆ ಬ್ರೇಕ್ ಹಾಕುವ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಮಕ್ಕಳ ಒಳಿತಿಗೆ ಸರಿಯಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಅದು ಇದು ಅಂತ ಏನೂ ಇಲ್ಲ. ತುಂಬಾ ಸೂಕ್ಷ್ಮ ವಿಚಾರಗಳಿವು. ಹಾಗಾಗಿ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಬೇಕಿದೆ. ದೊಡ್ಡ ಮಟ್ಟದ ಚರ್ಚೆಗಳ ಅವಶ್ಯಕತೆಯಿದೆ. ಹಾಗಾಗಿ ಮಕ್ಕಳ ಒಳಿತನ್ನ ನೋಡಿಯೇ ಮಾಡಬೇಕು. ಮಕ್ಕಳಿಗೆ ಒಳಿತಾಗುವಂತೆ ನಾವು ಮಾಡ್ತೇವೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

”ಶಿಕ್ಷಕರ ನೇಮಕದಲ್ಲಿ ಎರಡು ಸಮಸ್ಯೆ ಇದೆ. ಕಾನೂನಿನ ತೊಡಕಿದೆ ಅದನ್ನು ಎಜಿ ಅವರ ಚರ್ಚೆ ಮಾತನಾಡಲಾಗುತ್ತದೆ. ಶಿಕ್ಷಕರ ಕೊರತೆ ಇದೆ. ಅತಿಥಿ ಶಿಕ್ಷಕರೇ ಸಮಸ್ಯೆಗೆ ಪರಿಹಾರವಲ್ಲ. ಹೀಗಾಗಿ ಆದಷ್ಟು ಶೀಘ್ರವಾಗಿ ಪರಿಹರಿಸಲಾಗುತ್ತದೆ” ಎಂದು ತಿಳಿಸಿದರು.

ಪಠ್ಯಪುಸ್ತಕ ಮರು ಪರಿಷ್ಕರಣೆಗೆ ಸಾಹಿತಿ ಕುಂ. ವೀರಭದ್ರಪ್ಪ ಬೆಂಬಲ:

ಪಠ್ಯಪುಸ್ತಕ ಮರು ಪರಿಷ್ಕರಣೆಗೆ ಸಾಹಿತಿ ಕುಂ. ವೀರಭದ್ರಪ್ಪ ಬೆಂಬಲ ಸೂಚಿಸಿದ್ದಾರೆ. ಹಿಂದಿನ ಸರ್ಕಾರ ಪಠ್ಯ ಪುಸ್ತಕದಲ್ಲಿ ಭಾರಿ ಲೋಪ ಎಸಗಿದೆ ಎಂದು ಅವರು ದೂರಿದ್ದಾರೆ.

”ಹಿಂದಿನ ಸರ್ಕಾರ ಪಠ್ಯ ಪುಸ್ತಕದಲ್ಲಿ ಭಾರಿ ಲೋಪ ಎಸಗಿದೆ. ಕೆಲವು ಹುಸಿ ದೇಶ ಭಕ್ತರನ್ನು ಬಿಂಬಿಸುವ ಪ್ರಯತ್ನವನ್ನು ಬಿಜೆಪಿ ಸರ್ಕಾರ ಮಾಡಿತ್ತು. ರೋಹಿತ್ ಚಕ್ರತೀರ್ಥ ಎಂಬ ಅಪಕ್ವ ವ್ಯಕ್ತಿಯನ್ನು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷನನ್ನಾಗಿ ಮಾಡಿತ್ತು. ಅವರು ಮಾಡಿದ ತಪ್ಪನ್ನು ಸರಿಪಡಿಸಬೇಕು. ಹೊಸ ಪಠ್ಯಪುಸ್ತಕ ಜಾರಿಗೆ ತರಬೇಕು. ಬರಗೂರು ರಾಮಚಂದ್ರಪ್ಪ ಜಾರಿಗೆ ತಂದಿದ್ದ ಪುಸ್ತಕಗಳೇ ಮತ್ತೆ ಬರಬೇಕು” ಎಂದು ಅವರು ಆಗ್ರಹಿಸಿದ್ದಾರೆ.

”ಬಿಜೆಪಿಯವರು ಹೇಳುವುದು ಭಾರತೀಯತೆ ಅಲ್ಲ, ಅವರು ಹೇಳುವುದು ಹಿಂದುತ್ವ. ದೇಶದ ಎಲ್ಲರ ಹಿತಾಸಕ್ತಿ ಕಾಪಾಡುವುದು ಭಾರತೀಯತೆ. ಬಿಜೆಪಿಯವರು ಹೇಳುವ ಭಾರತೀಯತೆ ಒಪ್ಪಲು ಸಾಧ್ಯವಿಲ್ಲ. ಬಿಜೆಪಿಯವರು ಹೇಳುವುದು ಆರ್​​​ಎಸ್​​ಎಸ್ ಪ್ರಣೀತ ಭಾರತೀಯತೆ. ಅಂಬೇಡ್ಕರ್, ಗಾಂಧಿ ಆಶಯದ ಭಾರತೀಯತೆ ಅಲ್ಲ. ಹಳೇಯ ಪಠ್ಯಕ್ರಮವನ್ನು ಸರ್ಕಾರ ಜಾರಿಗೆ ತರಬೇಕು” ಎಂದು ವೀರಭದ್ರಪ್ಪ ಹೇಳಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿದ್ದ ಪಠ್ಯ ಪರಿಷ್ಕರಣೆಗೆ ಪ್ರತಿಪಕ್ಷಗಳಿಂದ ಭಾರೀ ಆಕ್ಷೇಪ ವ್ಯಕ್ತವಾಗಿತ್ತು. ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ರಾಜಕೀಯ ಆಯಾಮ ಪಡೆದುಕೊಂಡು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...