Homeಕರ್ನಾಟಕಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ: ಸಚಿವ ಮಧು ಬಂಗಾರಪ್ಪ

ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ: ಸಚಿವ ಮಧು ಬಂಗಾರಪ್ಪ

- Advertisement -
- Advertisement -

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ಬಳಿಕ, ಪಠ್ಯಪುಸ್ತಕ ಪರಿಷ್ಕರಣೆ ಮಾಡಬೇಕು ಎಂದು ನಾಡಿನ ಪ್ರಜ್ಞಾವಂತರು ಮುಖ್ಯಮಂತ್ರಿಯವರು ಮನವಿ ಮಾಡಿದ್ದರು. ”ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ. ಮಕ್ಕಳಿಗೆ ಅವಶ್ಯಕತೆ ಇಲ್ಲದ್ದನ್ನು ತಜ್ಞರು ಪರಿಶೀಲಿಸಿ ತೀರ್ಮಾನಿಸುತ್ತಾರೆ. ಮುಂದಿನ ಸಂಪುಟದಲ್ಲೇ ಚರ್ಚೆ ಮಾಡಲಾಗುತ್ತದೆ” ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”’ಆರಂಭದಲ್ಲಿ ಸೇತು ಬಂಧ ಇರಲಿದೆ. ಮಕ್ಕಳು ಪಠ್ಯಕ್ಕೆ ಹೋಗಲ್ಲ. ಮತ್ತು ಪಠ್ಯದಲ್ಲಿ ಏನು ಓದಿಸಬೇಕು, ಯಾವುದು ಬೇಡ ಎಂಬುದನ್ನು ನಿರ್ಧರಿಸಲಾಗುತ್ತದೆ” ಎಂದರು ವಿವರಿಸಿದರು.

”ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬದಲಾವಣೆ ಮಾಡಿಯೇ ಮಾಡುತ್ತೇವೆ. ಈ ವರ್ಷ ಮಾಡಲ್ಲ ಮುಂದಿನ ವರ್ಷ ಅಂತೆಲ್ಲ ಕೆಲವು ಮಾಧ್ಯಮಗಳಲ್ಲಿ ಬರುತ್ತಿವೆ. ಮಕ್ಕಳು ತಪ್ಪು ಓದಬಾರದು, ತಪ್ಪು ಪಠ್ಯಗಳನ್ನು ಮುಂದಿನ ವರ್ಷದ ತನಕ ಕಾಯಬೇಕಿಲ್ಲ. ಹೀಗಾಗಿ ತಜ್ಞರೂ ಕೂಡ ಅದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ” ಎಂದರು.

”ಇದು ಬಹಳ ಸೂಕ್ಷ್ಮ ವಿಚಾರ. ಮಕ್ಕಳ ಹಿತದೃಷ್ಟಿಯಿಂದ ಕ್ರಮ ತೆಗೆದುಕೊಳ್ಳುತ್ತೇವೆ. ಮಕ್ಕಳ ಭವಿಷ್ಯಕ್ಕೆ ಒಳ್ಳೆಯ ಅಂಶ ಉಳಿಸಲಾಗುತ್ತದೆ. ಪಠ್ಯಪರಿಷ್ಕರಣೆಯಾಗಬೇಕೆಂದು ಸಾಹಿತಿಗಳು ಸಿಎಂಗೆ ಮನವಿ ಕೊಟ್ಟಿದ್ದಾರೆ. ಮುಖ್ಯಮಂತ್ರಿಯವರು ಕೂಡ ಆಸಕ್ತಿ ತೋರಿಸಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆ ಮಾಡುತ್ತೇವೆ” ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೆವು ಅದರಂತೆ ಮಾಡುತ್ತೇವೆ” ಎಂದರು.

”ತಜ್ಞರು ಪಕ್ಷಕ್ಕೆ ಸೀಮಿತವಾಗಿರಲ್ಲ. ಅವರು ಕೊಡುವ ಸಲಹೆ ಪರಿಗಣಿಸಲಾಗುತ್ತದೆ. ತಪ್ಪು ತಿಳುವಳಿಕೆ ತಕ್ಷಣ ತಡೆ ಹಿಡಿಯಬೇಕಾಗುತ್ತದೆ. ಅದನ್ನು ನಾವು ಮಾಡುತ್ತೇವೆ. ಯಾವ ಪಠ್ಯ ಬೇಡ ಎಂದು ತಜ್ಞರು ಸೂಚಿಸುತ್ತಾರೋ ಅದನ್ನು ಬೋಧಿಸದಂತೆ ತಿಳಿಸಲು ಅವಕಾಶವಿದೆ” ಎಂದರು.

”ಸಪ್ಲಿಮೆಂಟ್ ಮಾದರಿಯ ಪುಸ್ತಕ ನೀಡುತ್ತೇವೆ. ಯಾವ ಪಾಠ ಮಾಡಬೇಕು, ಯಾವುದು ಮಾಡಬಾರದು ಎಂಬುದನ್ನೂ ತಿಳಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ ವಿಚಾರ: ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಕೇಸರೀಕರಣಕ್ಕೆ ಬ್ರೇಕ್ ಹಾಕುವ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಮಕ್ಕಳ ಒಳಿತಿಗೆ ಸರಿಯಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಅದು ಇದು ಅಂತ ಏನೂ ಇಲ್ಲ. ತುಂಬಾ ಸೂಕ್ಷ್ಮ ವಿಚಾರಗಳಿವು. ಹಾಗಾಗಿ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಬೇಕಿದೆ. ದೊಡ್ಡ ಮಟ್ಟದ ಚರ್ಚೆಗಳ ಅವಶ್ಯಕತೆಯಿದೆ. ಹಾಗಾಗಿ ಮಕ್ಕಳ ಒಳಿತನ್ನ ನೋಡಿಯೇ ಮಾಡಬೇಕು. ಮಕ್ಕಳಿಗೆ ಒಳಿತಾಗುವಂತೆ ನಾವು ಮಾಡ್ತೇವೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

”ಶಿಕ್ಷಕರ ನೇಮಕದಲ್ಲಿ ಎರಡು ಸಮಸ್ಯೆ ಇದೆ. ಕಾನೂನಿನ ತೊಡಕಿದೆ ಅದನ್ನು ಎಜಿ ಅವರ ಚರ್ಚೆ ಮಾತನಾಡಲಾಗುತ್ತದೆ. ಶಿಕ್ಷಕರ ಕೊರತೆ ಇದೆ. ಅತಿಥಿ ಶಿಕ್ಷಕರೇ ಸಮಸ್ಯೆಗೆ ಪರಿಹಾರವಲ್ಲ. ಹೀಗಾಗಿ ಆದಷ್ಟು ಶೀಘ್ರವಾಗಿ ಪರಿಹರಿಸಲಾಗುತ್ತದೆ” ಎಂದು ತಿಳಿಸಿದರು.

ಪಠ್ಯಪುಸ್ತಕ ಮರು ಪರಿಷ್ಕರಣೆಗೆ ಸಾಹಿತಿ ಕುಂ. ವೀರಭದ್ರಪ್ಪ ಬೆಂಬಲ:

ಪಠ್ಯಪುಸ್ತಕ ಮರು ಪರಿಷ್ಕರಣೆಗೆ ಸಾಹಿತಿ ಕುಂ. ವೀರಭದ್ರಪ್ಪ ಬೆಂಬಲ ಸೂಚಿಸಿದ್ದಾರೆ. ಹಿಂದಿನ ಸರ್ಕಾರ ಪಠ್ಯ ಪುಸ್ತಕದಲ್ಲಿ ಭಾರಿ ಲೋಪ ಎಸಗಿದೆ ಎಂದು ಅವರು ದೂರಿದ್ದಾರೆ.

”ಹಿಂದಿನ ಸರ್ಕಾರ ಪಠ್ಯ ಪುಸ್ತಕದಲ್ಲಿ ಭಾರಿ ಲೋಪ ಎಸಗಿದೆ. ಕೆಲವು ಹುಸಿ ದೇಶ ಭಕ್ತರನ್ನು ಬಿಂಬಿಸುವ ಪ್ರಯತ್ನವನ್ನು ಬಿಜೆಪಿ ಸರ್ಕಾರ ಮಾಡಿತ್ತು. ರೋಹಿತ್ ಚಕ್ರತೀರ್ಥ ಎಂಬ ಅಪಕ್ವ ವ್ಯಕ್ತಿಯನ್ನು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷನನ್ನಾಗಿ ಮಾಡಿತ್ತು. ಅವರು ಮಾಡಿದ ತಪ್ಪನ್ನು ಸರಿಪಡಿಸಬೇಕು. ಹೊಸ ಪಠ್ಯಪುಸ್ತಕ ಜಾರಿಗೆ ತರಬೇಕು. ಬರಗೂರು ರಾಮಚಂದ್ರಪ್ಪ ಜಾರಿಗೆ ತಂದಿದ್ದ ಪುಸ್ತಕಗಳೇ ಮತ್ತೆ ಬರಬೇಕು” ಎಂದು ಅವರು ಆಗ್ರಹಿಸಿದ್ದಾರೆ.

”ಬಿಜೆಪಿಯವರು ಹೇಳುವುದು ಭಾರತೀಯತೆ ಅಲ್ಲ, ಅವರು ಹೇಳುವುದು ಹಿಂದುತ್ವ. ದೇಶದ ಎಲ್ಲರ ಹಿತಾಸಕ್ತಿ ಕಾಪಾಡುವುದು ಭಾರತೀಯತೆ. ಬಿಜೆಪಿಯವರು ಹೇಳುವ ಭಾರತೀಯತೆ ಒಪ್ಪಲು ಸಾಧ್ಯವಿಲ್ಲ. ಬಿಜೆಪಿಯವರು ಹೇಳುವುದು ಆರ್​​​ಎಸ್​​ಎಸ್ ಪ್ರಣೀತ ಭಾರತೀಯತೆ. ಅಂಬೇಡ್ಕರ್, ಗಾಂಧಿ ಆಶಯದ ಭಾರತೀಯತೆ ಅಲ್ಲ. ಹಳೇಯ ಪಠ್ಯಕ್ರಮವನ್ನು ಸರ್ಕಾರ ಜಾರಿಗೆ ತರಬೇಕು” ಎಂದು ವೀರಭದ್ರಪ್ಪ ಹೇಳಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿದ್ದ ಪಠ್ಯ ಪರಿಷ್ಕರಣೆಗೆ ಪ್ರತಿಪಕ್ಷಗಳಿಂದ ಭಾರೀ ಆಕ್ಷೇಪ ವ್ಯಕ್ತವಾಗಿತ್ತು. ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ರಾಜಕೀಯ ಆಯಾಮ ಪಡೆದುಕೊಂಡು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...