Homeಕರ್ನಾಟಕರಂಗ ಸಂಘಟಕ, ನ್ಯಾಷನಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹೆಚ್.ವಿ. ವೇಣುಗೋಪಾಲ್ ನಿಧನ

ರಂಗ ಸಂಘಟಕ, ನ್ಯಾಷನಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹೆಚ್.ವಿ. ವೇಣುಗೋಪಾಲ್ ನಿಧನ

- Advertisement -
- Advertisement -

ರಂಗ ಸಂಘಟಕ, ಚಿಂತಕ, ನಿವೃತ್ತ ಪ್ರಾಂಶುಪಾಲ ಎಚ್.ವಿ.ವೇಣುಗೋಪಾಲ್‌ ಅವರು ಶುಕ್ರವಾರ ಸಂಜೆ ಹೃದಯಾಘಾತದಿಂದ ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ‘ಸಮುದಾಯ’ ಸಾಂಸ್ಕೃತಿಕ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಅವರು ‘ಸಮುದಾಯ’ ವಾರ್ತಾಪತ್ರದ ಜವಾಬ್ದಾರಿ ವಹಿಸಿಕೊಂಡು ನಡೆಸಿದ್ದರು.

ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಬಹಳ ಕಾಲ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಮತ್ತು ಪ್ರಾಂಶುಪಾಲರಾಗಿ ಅವರು ಸೇವೆ ಸಲ್ಲಿಸಿದ್ದರು. ಗೌರಿಬಿದನೂರಿನ ನ್ಯಾಷನಲ್ ಕಾಲೇಜಿನಲ್ಲಿ ಸಂಸ್ಕೃತ ಪ್ರಾಧ್ಯಾಪಕರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಜನಪರ ಹೋರಾಟಗಳಲ್ಲಿಯೂ ಗುರುತಿಸಿಕೊಂಡಿದ್ದರು. ಮೃತರು ಪತ್ನಿ, ಮಗ ಸಹಿತ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗೌರಿಬಿದನೂರಿನಲ್ಲಿ ‘ಸಮುದಾಯ’ ಘಟಕದ ಆರಂಭಕ್ಕೆ ಅವರು ಕಾರಣಕರ್ತರಾಗಿ, ಸಕ್ರಿಯವಾಗಿ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಸಂಸ್ಕೃತ ಪ್ರಾಧ್ಯಾಪಕರಾಗಿದ್ದ ಅವರು ನಾಟಕಗಳನ್ನು ರಚಿಸಿದ್ದರು. ಪ್ರಾಂಶುಪಾಲರಾಗಿ ನಿವೃತ್ತರಾದ ನಂತರ ತಮ್ಮ ಮನೆಯ ಬೇಸ್ಮೆಂಟಿನಲ್ಲಿ ‘ಉನ್ನತಿ’ ಸಾಂಸ್ಕೃತಿಕ ಕೇಂದ್ರವನ್ನು ಸ್ಥಾಪಿಸಿ, ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರು.

ಇದನ್ನೂ ಓದಿ: ವಿಭಿನ್ನ ಪ್ರಯೋಗಗಳ ನಾಟಕ ತಂಡ ರಂಗಪಯಣಕ್ಕೆ 12ನೇ ವರ್ಷದ ಸಂಭ್ರಮ

‘ಉನ್ನತಿ’ಯಲ್ಲಿ ಪ್ರತಿ ಶನಿವಾರ ಚಲನಚಿತ್ರವನ್ನು ಪ್ರದರ್ಶನವನ್ನು ಏರ್ಪಡಿಸುತ್ತಿದ್ದರು. ಚಿತ್ರ ಪ್ರದರ್ಶನ ಮತ್ತು ಇತರ ಕಾರ್ಯಕ್ರಮಗಳಿಗೆಂದೇ ಅವರು ಸ್ವಂತ ಹಣವನ್ನು ಬಳಸಿ ಸುಸಜ್ಜಿತವಾದ ಸಣ್ಣ ಸಭಾಂಗಣವನ್ನು ಕಟ್ಟಿಸಿದ್ದರು. ಒಳ್ಳೆಯ ಸಿನಿಮಾ ಸಂಸ್ಕೃತಿಯನ್ನು ಬೆಳೆಸಬೇಕೆಂದು ಶ್ರಮಿಸಿದ್ದ ಅವರು, ಈ ನಿಟ್ಟಿನಲ್ಲಿ, ಹಲವಾರು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

ಸುಮಾರು ನಾಲ್ಕು ದಶಕಗಳಿಗೂ ಹೆಚ್ಚು ಸಮಯ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ಅವರು, ಅನೇಕ ನಾಟಕಗಳನ್ನು ನಿರ್ದೇಶಿಸಿದ್ದರು. ಪ್ರಸ್ತುತ ಅವರು ಬೆಂಗಳೂರಿನ ಸುಚಿತ್ರಾ ಫಿಲ್ಮ್ ಸೊಸೈಟಿಯ ಕಾರ್ಯಕಾರಿ ಸಮಿತಿಯಲ್ಲಿ ಸಹವರ್ತಿಯಾಗಿದ್ದರು. ಅನೇಕ ಸಮಾಜಮುಖಿ, ವೈಚಾರಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದರು.

ಎಡ ಪ್ರಗತಿಪರ ಚಿಂತನೆಯನ್ನು ಹೊಂದಿದ್ದ ಅವರ ಹಠಾತ್ ನಿಧನಕ್ಕೆ ‘ಸಮುದಾಯ ಕರ್ನಾಟಕ’ ಕಂಬನಿ‌ ಮಿಡಿದಿದೆ. “ಸಮುದಾಯದ ಅತ್ಯಂತ ಪ್ರಾಮಾಣಿಕ ಸದಸ್ಯ, ಸಕ್ರಿಯ ಕಾರ್ಯಕರ್ತರಾಗಿದ್ದ ವೇಣುಗೋಪಾಲ್ ಅವರನ್ನು ನಾವು ಕಳೆದುಕೊಂಡಿದ್ದೇವೆ. ಇವರ ನಿಧನ ಸಾಂಸ್ಕೃತಿಕ ರಂಗಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ಸಮುದಾಯ ಬೆಂಗಳೂರು ಸಂತಾಪ ಸೂಚಿಸಿದೆ. ಅಲ್ಲದೆ, ಅನೇಕ ಗಣ್ಯರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ಮೃತರ ಅಂತ್ಯಕ್ರಿಯೆಯು ಶನಿವಾರ ಬೆಳಗ್ಗೆ ಬನಶಂಕರಿ ಚಿತಾಗಾರದಲ್ಲಿ 10 ರಿಂದ 10.30 ರ ಒಳಗೆ ನೆರವೇರಲಿದೆ. ಮೃತದೇಹವು ಬೆಳಗ್ಗೆ 9.30ರ ತನಕ ಅವರ ಸ್ವಗೃಹದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಲಿದೆ ಎಂದು ತಿಳಿದುಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...