Homeಕರ್ನಾಟಕರಂಗ ಸಂಘಟಕ, ನ್ಯಾಷನಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹೆಚ್.ವಿ. ವೇಣುಗೋಪಾಲ್ ನಿಧನ

ರಂಗ ಸಂಘಟಕ, ನ್ಯಾಷನಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹೆಚ್.ವಿ. ವೇಣುಗೋಪಾಲ್ ನಿಧನ

- Advertisement -
- Advertisement -

ರಂಗ ಸಂಘಟಕ, ಚಿಂತಕ, ನಿವೃತ್ತ ಪ್ರಾಂಶುಪಾಲ ಎಚ್.ವಿ.ವೇಣುಗೋಪಾಲ್‌ ಅವರು ಶುಕ್ರವಾರ ಸಂಜೆ ಹೃದಯಾಘಾತದಿಂದ ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ‘ಸಮುದಾಯ’ ಸಾಂಸ್ಕೃತಿಕ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಅವರು ‘ಸಮುದಾಯ’ ವಾರ್ತಾಪತ್ರದ ಜವಾಬ್ದಾರಿ ವಹಿಸಿಕೊಂಡು ನಡೆಸಿದ್ದರು.

ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಬಹಳ ಕಾಲ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಮತ್ತು ಪ್ರಾಂಶುಪಾಲರಾಗಿ ಅವರು ಸೇವೆ ಸಲ್ಲಿಸಿದ್ದರು. ಗೌರಿಬಿದನೂರಿನ ನ್ಯಾಷನಲ್ ಕಾಲೇಜಿನಲ್ಲಿ ಸಂಸ್ಕೃತ ಪ್ರಾಧ್ಯಾಪಕರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಜನಪರ ಹೋರಾಟಗಳಲ್ಲಿಯೂ ಗುರುತಿಸಿಕೊಂಡಿದ್ದರು. ಮೃತರು ಪತ್ನಿ, ಮಗ ಸಹಿತ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗೌರಿಬಿದನೂರಿನಲ್ಲಿ ‘ಸಮುದಾಯ’ ಘಟಕದ ಆರಂಭಕ್ಕೆ ಅವರು ಕಾರಣಕರ್ತರಾಗಿ, ಸಕ್ರಿಯವಾಗಿ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಸಂಸ್ಕೃತ ಪ್ರಾಧ್ಯಾಪಕರಾಗಿದ್ದ ಅವರು ನಾಟಕಗಳನ್ನು ರಚಿಸಿದ್ದರು. ಪ್ರಾಂಶುಪಾಲರಾಗಿ ನಿವೃತ್ತರಾದ ನಂತರ ತಮ್ಮ ಮನೆಯ ಬೇಸ್ಮೆಂಟಿನಲ್ಲಿ ‘ಉನ್ನತಿ’ ಸಾಂಸ್ಕೃತಿಕ ಕೇಂದ್ರವನ್ನು ಸ್ಥಾಪಿಸಿ, ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರು.

ಇದನ್ನೂ ಓದಿ: ವಿಭಿನ್ನ ಪ್ರಯೋಗಗಳ ನಾಟಕ ತಂಡ ರಂಗಪಯಣಕ್ಕೆ 12ನೇ ವರ್ಷದ ಸಂಭ್ರಮ

‘ಉನ್ನತಿ’ಯಲ್ಲಿ ಪ್ರತಿ ಶನಿವಾರ ಚಲನಚಿತ್ರವನ್ನು ಪ್ರದರ್ಶನವನ್ನು ಏರ್ಪಡಿಸುತ್ತಿದ್ದರು. ಚಿತ್ರ ಪ್ರದರ್ಶನ ಮತ್ತು ಇತರ ಕಾರ್ಯಕ್ರಮಗಳಿಗೆಂದೇ ಅವರು ಸ್ವಂತ ಹಣವನ್ನು ಬಳಸಿ ಸುಸಜ್ಜಿತವಾದ ಸಣ್ಣ ಸಭಾಂಗಣವನ್ನು ಕಟ್ಟಿಸಿದ್ದರು. ಒಳ್ಳೆಯ ಸಿನಿಮಾ ಸಂಸ್ಕೃತಿಯನ್ನು ಬೆಳೆಸಬೇಕೆಂದು ಶ್ರಮಿಸಿದ್ದ ಅವರು, ಈ ನಿಟ್ಟಿನಲ್ಲಿ, ಹಲವಾರು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

ಸುಮಾರು ನಾಲ್ಕು ದಶಕಗಳಿಗೂ ಹೆಚ್ಚು ಸಮಯ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ಅವರು, ಅನೇಕ ನಾಟಕಗಳನ್ನು ನಿರ್ದೇಶಿಸಿದ್ದರು. ಪ್ರಸ್ತುತ ಅವರು ಬೆಂಗಳೂರಿನ ಸುಚಿತ್ರಾ ಫಿಲ್ಮ್ ಸೊಸೈಟಿಯ ಕಾರ್ಯಕಾರಿ ಸಮಿತಿಯಲ್ಲಿ ಸಹವರ್ತಿಯಾಗಿದ್ದರು. ಅನೇಕ ಸಮಾಜಮುಖಿ, ವೈಚಾರಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದರು.

ಎಡ ಪ್ರಗತಿಪರ ಚಿಂತನೆಯನ್ನು ಹೊಂದಿದ್ದ ಅವರ ಹಠಾತ್ ನಿಧನಕ್ಕೆ ‘ಸಮುದಾಯ ಕರ್ನಾಟಕ’ ಕಂಬನಿ‌ ಮಿಡಿದಿದೆ. “ಸಮುದಾಯದ ಅತ್ಯಂತ ಪ್ರಾಮಾಣಿಕ ಸದಸ್ಯ, ಸಕ್ರಿಯ ಕಾರ್ಯಕರ್ತರಾಗಿದ್ದ ವೇಣುಗೋಪಾಲ್ ಅವರನ್ನು ನಾವು ಕಳೆದುಕೊಂಡಿದ್ದೇವೆ. ಇವರ ನಿಧನ ಸಾಂಸ್ಕೃತಿಕ ರಂಗಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ಸಮುದಾಯ ಬೆಂಗಳೂರು ಸಂತಾಪ ಸೂಚಿಸಿದೆ. ಅಲ್ಲದೆ, ಅನೇಕ ಗಣ್ಯರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ಮೃತರ ಅಂತ್ಯಕ್ರಿಯೆಯು ಶನಿವಾರ ಬೆಳಗ್ಗೆ ಬನಶಂಕರಿ ಚಿತಾಗಾರದಲ್ಲಿ 10 ರಿಂದ 10.30 ರ ಒಳಗೆ ನೆರವೇರಲಿದೆ. ಮೃತದೇಹವು ಬೆಳಗ್ಗೆ 9.30ರ ತನಕ ಅವರ ಸ್ವಗೃಹದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಲಿದೆ ಎಂದು ತಿಳಿದುಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...