Homeಕರ್ನಾಟಕರಂಗ ಸಂಘಟಕ, ನ್ಯಾಷನಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹೆಚ್.ವಿ. ವೇಣುಗೋಪಾಲ್ ನಿಧನ

ರಂಗ ಸಂಘಟಕ, ನ್ಯಾಷನಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹೆಚ್.ವಿ. ವೇಣುಗೋಪಾಲ್ ನಿಧನ

- Advertisement -
- Advertisement -

ರಂಗ ಸಂಘಟಕ, ಚಿಂತಕ, ನಿವೃತ್ತ ಪ್ರಾಂಶುಪಾಲ ಎಚ್.ವಿ.ವೇಣುಗೋಪಾಲ್‌ ಅವರು ಶುಕ್ರವಾರ ಸಂಜೆ ಹೃದಯಾಘಾತದಿಂದ ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ‘ಸಮುದಾಯ’ ಸಾಂಸ್ಕೃತಿಕ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಅವರು ‘ಸಮುದಾಯ’ ವಾರ್ತಾಪತ್ರದ ಜವಾಬ್ದಾರಿ ವಹಿಸಿಕೊಂಡು ನಡೆಸಿದ್ದರು.

ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಬಹಳ ಕಾಲ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಮತ್ತು ಪ್ರಾಂಶುಪಾಲರಾಗಿ ಅವರು ಸೇವೆ ಸಲ್ಲಿಸಿದ್ದರು. ಗೌರಿಬಿದನೂರಿನ ನ್ಯಾಷನಲ್ ಕಾಲೇಜಿನಲ್ಲಿ ಸಂಸ್ಕೃತ ಪ್ರಾಧ್ಯಾಪಕರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಜನಪರ ಹೋರಾಟಗಳಲ್ಲಿಯೂ ಗುರುತಿಸಿಕೊಂಡಿದ್ದರು. ಮೃತರು ಪತ್ನಿ, ಮಗ ಸಹಿತ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗೌರಿಬಿದನೂರಿನಲ್ಲಿ ‘ಸಮುದಾಯ’ ಘಟಕದ ಆರಂಭಕ್ಕೆ ಅವರು ಕಾರಣಕರ್ತರಾಗಿ, ಸಕ್ರಿಯವಾಗಿ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಸಂಸ್ಕೃತ ಪ್ರಾಧ್ಯಾಪಕರಾಗಿದ್ದ ಅವರು ನಾಟಕಗಳನ್ನು ರಚಿಸಿದ್ದರು. ಪ್ರಾಂಶುಪಾಲರಾಗಿ ನಿವೃತ್ತರಾದ ನಂತರ ತಮ್ಮ ಮನೆಯ ಬೇಸ್ಮೆಂಟಿನಲ್ಲಿ ‘ಉನ್ನತಿ’ ಸಾಂಸ್ಕೃತಿಕ ಕೇಂದ್ರವನ್ನು ಸ್ಥಾಪಿಸಿ, ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರು.

ಇದನ್ನೂ ಓದಿ: ವಿಭಿನ್ನ ಪ್ರಯೋಗಗಳ ನಾಟಕ ತಂಡ ರಂಗಪಯಣಕ್ಕೆ 12ನೇ ವರ್ಷದ ಸಂಭ್ರಮ

‘ಉನ್ನತಿ’ಯಲ್ಲಿ ಪ್ರತಿ ಶನಿವಾರ ಚಲನಚಿತ್ರವನ್ನು ಪ್ರದರ್ಶನವನ್ನು ಏರ್ಪಡಿಸುತ್ತಿದ್ದರು. ಚಿತ್ರ ಪ್ರದರ್ಶನ ಮತ್ತು ಇತರ ಕಾರ್ಯಕ್ರಮಗಳಿಗೆಂದೇ ಅವರು ಸ್ವಂತ ಹಣವನ್ನು ಬಳಸಿ ಸುಸಜ್ಜಿತವಾದ ಸಣ್ಣ ಸಭಾಂಗಣವನ್ನು ಕಟ್ಟಿಸಿದ್ದರು. ಒಳ್ಳೆಯ ಸಿನಿಮಾ ಸಂಸ್ಕೃತಿಯನ್ನು ಬೆಳೆಸಬೇಕೆಂದು ಶ್ರಮಿಸಿದ್ದ ಅವರು, ಈ ನಿಟ್ಟಿನಲ್ಲಿ, ಹಲವಾರು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

ಸುಮಾರು ನಾಲ್ಕು ದಶಕಗಳಿಗೂ ಹೆಚ್ಚು ಸಮಯ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ಅವರು, ಅನೇಕ ನಾಟಕಗಳನ್ನು ನಿರ್ದೇಶಿಸಿದ್ದರು. ಪ್ರಸ್ತುತ ಅವರು ಬೆಂಗಳೂರಿನ ಸುಚಿತ್ರಾ ಫಿಲ್ಮ್ ಸೊಸೈಟಿಯ ಕಾರ್ಯಕಾರಿ ಸಮಿತಿಯಲ್ಲಿ ಸಹವರ್ತಿಯಾಗಿದ್ದರು. ಅನೇಕ ಸಮಾಜಮುಖಿ, ವೈಚಾರಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದರು.

ಎಡ ಪ್ರಗತಿಪರ ಚಿಂತನೆಯನ್ನು ಹೊಂದಿದ್ದ ಅವರ ಹಠಾತ್ ನಿಧನಕ್ಕೆ ‘ಸಮುದಾಯ ಕರ್ನಾಟಕ’ ಕಂಬನಿ‌ ಮಿಡಿದಿದೆ. “ಸಮುದಾಯದ ಅತ್ಯಂತ ಪ್ರಾಮಾಣಿಕ ಸದಸ್ಯ, ಸಕ್ರಿಯ ಕಾರ್ಯಕರ್ತರಾಗಿದ್ದ ವೇಣುಗೋಪಾಲ್ ಅವರನ್ನು ನಾವು ಕಳೆದುಕೊಂಡಿದ್ದೇವೆ. ಇವರ ನಿಧನ ಸಾಂಸ್ಕೃತಿಕ ರಂಗಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ಸಮುದಾಯ ಬೆಂಗಳೂರು ಸಂತಾಪ ಸೂಚಿಸಿದೆ. ಅಲ್ಲದೆ, ಅನೇಕ ಗಣ್ಯರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ಮೃತರ ಅಂತ್ಯಕ್ರಿಯೆಯು ಶನಿವಾರ ಬೆಳಗ್ಗೆ ಬನಶಂಕರಿ ಚಿತಾಗಾರದಲ್ಲಿ 10 ರಿಂದ 10.30 ರ ಒಳಗೆ ನೆರವೇರಲಿದೆ. ಮೃತದೇಹವು ಬೆಳಗ್ಗೆ 9.30ರ ತನಕ ಅವರ ಸ್ವಗೃಹದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಲಿದೆ ಎಂದು ತಿಳಿದುಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....