Homeಮುಖಪುಟತೂತುಕುಡಿ ಹತ್ಯಾಕಾಂಡ ‘ಪ್ರಜಾಪ್ರಭುತ್ವದ ಮೇಲಿನ ಗಾಯ, ಅದನ್ನು ಮರೆಯಬಾರದು’ - ಮದ್ರಾಸ್ ಹೈಕೋರ್ಟ್‌

ತೂತುಕುಡಿ ಹತ್ಯಾಕಾಂಡ ‘ಪ್ರಜಾಪ್ರಭುತ್ವದ ಮೇಲಿನ ಗಾಯ, ಅದನ್ನು ಮರೆಯಬಾರದು’ – ಮದ್ರಾಸ್ ಹೈಕೋರ್ಟ್‌

- Advertisement -
- Advertisement -

2018 ಮೇ 22 ರಂದು ತಮಿಳುನಾಡಿನ ತೂತುಕುಡಿ ಜಿಲ್ಲೆಯ ‘ವೇದಾಂತ’ ಕಂಪೆನಿಯ ಸ್ಟೆರ್ಲೈಟ್‌ ಕಾರ್ಖಾನೆಯ ವಿರುದ್ಧ ಪ್ರತಿಭಟಿಸುತ್ತಿದ್ದ ನಾಗರಿಕರ ಮೇಲೆ, ಪೋಲಿಸರು ಗುಂಡು ಹಾರಿಸಿದ್ದರಿಂದ 13 ಜನರು ಮೃತಪಟ್ಟಿದ್ದರು. ಇದನ್ನು ಸೋಮವಾರ ಉಲ್ಲೇಖಿಸಿರುವ ಮದ್ರಾಸ್‌ ಹೈಕೋರ್ಟ್‌, ಘಟನೆಯು ಪ್ರಜಾಪ್ರಭುತ್ವದ ಮೇಲಿನ ಗಾಯವಾಗಿದ್ದು, ಅದನ್ನು ಮರೆಯಬಾರದು ಎಂದು ಹೇಳಿದೆ.

ಈ ಘಟನೆಯು ದೇಶದಾದ್ಯಂತ ತೀವ್ರ ಆಕ್ರೋಶ ಹುಟ್ಟುಹಾಕಿತ್ತು, ಹೀಗಾಗಿ ನಂತರ ಕಾರ್ಖಾನೆಯನ್ನು ಮುಚ್ಚಲಾಗಿತ್ತು. ತೂತುಕುಡಿಯ ನಿವಾಸಿಗಳು ಸ್ಟೆರ್ಲೈಟ್ ಕಾರ್ಖಾನೆಯು ಪ್ರದೇಶದ ವಾಯು ಮತ್ತು ಜಲ ಸಂಪನ್ಮೂಲಗಳನ್ನು ಕಲುಷಿತಗೊಳಿಸಿದೆ ಎಂದು ನಿರಂತರವಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ವೇದಾಂತ ಸ್ಟೆರ್‌‌ಲೈಟ್ ವಿರೋಧಿ ಹಿಂಸಾಚಾರ: ರಜನಿಕಾಂತ್‌ಗೆ ಸಮನ್ಸ್

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು(ಎನ್‌ಎಚ್‌ಆರ್‌ಸಿ) ಗುಂಡಿನ ದಾಳಿಯ ತನಿಖೆಯನ್ನು ಪುನಃ ಮಾಡಬೇಕು ಎಂದು ಮದ್ರಾಸ್‌‌ ಹೈಕೋರ್ಟ್‌ಗೆ ಸಲ್ಲಿಕೆಯಾದ ಅರ್ಜಿಯನ್ನು ಆಲಿಸುವಾಗ, ಮುಖ್ಯ ನ್ಯಾಯಮೂರ್ತಿ ಸಂಜಿಬ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಟಿ.ಎಸ್.ಶಿವಜ್ಞಾನಂ ಅವರಿದ್ದ ಪೀಠವು ಈ ಅವಲೋಕನ ಮಾಡಿದೆ.

“ಈ ಘಟನೆ ನಿಜವಾಗಿಯೂ ಸಾರ್ವಜನಿಕರ ಮನಸ್ಸಿನಿಂದ ಹೊರಟು ಹೋಗಿದೆ. ಆದರೆ ಹದಿನೈದು ಅಥವಾ ಹದಿನಾರು ನಾಗರಿಕರು ಪ್ರಾಣ ಕಳೆದುಕೊಂಡರು. ಆ ರೀತಿಯ ಘಟನೆ ನಮ್ಮ ಪ್ರಜಾಪ್ರಭುತ್ವದ ಮೇಲಿನ ಗಾಯವಾಗಿದ್ದು, ನಾವು ಎಂದಿಗೂ ಮರೆಯಬಾರದು” ಎಂದು ಹೇಳಿದ್ದಾರೆ.

ಸರ್ಕಾರೇತರ ಸಂಸ್ಥೆ ಪೀಪಲ್ಸ್ ವಾಚ್‌ನ ಕಾರ್ಯನಿರ್ವಾಹಕ ನಿರ್ದೇಶಕ ಹೆನ್ರಿ ಟಿಫಾಗ್ನೆ ಅವರು ‘ಎನ್‌ಎಚ್‌ಆರ್‌ಸಿ’ ವಿಚಾರಣೆಯನ್ನು ಪುನಃ ನಡೆಸಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ‘ತೂತುಕುಡಿ ಹತ್ಯಾಕಾಂಡ’ ಸಂತ್ರಸ್ತರನ್ನು ಸರ್ಕಾರಿ ಉದ್ಯೋಗಕ್ಕೆ ನೇಮಕ ಮಾಡಿದ ತಮಿಳುನಾಡು ಸಿಎಂ

ಅವರು ತಮ್ಮ ಅರ್ಜಿಯಲ್ಲಿ, “ಎನ್‌ಎಚ್‌ಆರ್‌ಸಿ ಅಕ್ಟೋಬರ್ 2018 ರಲ್ಲಿ ಗುಂಡಿನ ದಾಳಿಯ ತನಿಖೆಯನ್ನು ಮುಚ್ಚಿದೆ. ಆದರೆ ಅದರ ತನಿಖಾ ತಂಡವು ಸಲ್ಲಿಸಿದ ವರದಿಯ ವಿಷಯಗಳನ್ನು ಇನ್ನೂ ಬಹಿರಂಗಪಡಿಸಿಲ್ಲ” ಎಂದು ಹೇಳಿದ್ದಾರೆ.

ಹೆನ್ರಿ ಟಿಫಾಗ್ನೆ ಅವರು ಸಲ್ಲಿಸಿದ್ದ ಅರ್ಜಿಯನ್ನು ಆಗಸ್ಟ್ 9 ರಂದು ವಿಚಾರಣೆ ನಡೆಸಲಾಗಿತ್ತು. ಆಗ ಎನ್‌ಎಚ್‌ಆರ್‌ಸಿಯು ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸಲು ನ್ಯಾಯಾಲಯದೊಂದಿಗೆ ಸಮಯ ಕೋರಿತ್ತು. ಅದರಂತೆ ಹೈಕೋರ್ಟ್ ಕೂಡಾ ಸೋಮವಾರದವರೆಗೆ ಸಮಯ ನೀಡಿತ್ತು.

ಸೋಮವಾರದಂದು ಎನ್‌ಎಚ್‌ಆರ್‌ಸಿ ವರದಿಯನ್ನು ಮೊಹರು ಮಾಡಿದ ಕವರ್‌ನಲ್ಲಿ ನ್ಯಾಯಾಲಯದ ಮುಂದೆ ಸಲ್ಲಿಸಿದೆ. ಆದರೆ ಸದ್ಯಕ್ಕೆ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ವರದಿಯ ಪ್ರತಿಗಳನ್ನು ಹೆಚ್ಚುವರಿ ಸಾಲಿಸಿಟರ್ ಜನರಲ್, ಅರ್ಜಿದಾರರು ಮತ್ತು ರಾಜ್ಯ ಸರ್ಕಾರಕ್ಕೆ ಕಳುಹಿಸುವಂತೆ ಹೈಕೋರ್ಟ್‌ ಆದೇಶಿಸಿದೆ ಮತ್ತು ತನಿಖೆಯನ್ನು ಅದರ ತಾರ್ಕಿಕ ಅಂತ್ಯಕ್ಕೆ ತರಲು NHRC ಗೆ ಸೂಚಿಸಿದೆ.

ಇದನ್ನೂ ಓದಿ: ಪ್ಯಾಲೆಸ್ಟೀನೀಯರ ಹೋರಾಟ; ದಬ್ಬಾಳಿಕೆಯ ವಿರೋಧ ಅದು ಜಗಳಗಂಟತನವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನ್ಯಾಯಾಂಗವೆಂದರೆ ಹೀಗಿರಬೇಕು.ನಮ್ಮ ಜನತೆಗೆ ಜಯ ಕೊಟ್ಟ ನ್ಯಾಯಾಂಗಕ್ಕೂ ಜಯವಾಗಲಿ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...