Homeಮುಖಪುಟತೂತುಕುಡಿ ಹತ್ಯಾಕಾಂಡ ‘ಪ್ರಜಾಪ್ರಭುತ್ವದ ಮೇಲಿನ ಗಾಯ, ಅದನ್ನು ಮರೆಯಬಾರದು’ - ಮದ್ರಾಸ್ ಹೈಕೋರ್ಟ್‌

ತೂತುಕುಡಿ ಹತ್ಯಾಕಾಂಡ ‘ಪ್ರಜಾಪ್ರಭುತ್ವದ ಮೇಲಿನ ಗಾಯ, ಅದನ್ನು ಮರೆಯಬಾರದು’ – ಮದ್ರಾಸ್ ಹೈಕೋರ್ಟ್‌

- Advertisement -
- Advertisement -

2018 ಮೇ 22 ರಂದು ತಮಿಳುನಾಡಿನ ತೂತುಕುಡಿ ಜಿಲ್ಲೆಯ ‘ವೇದಾಂತ’ ಕಂಪೆನಿಯ ಸ್ಟೆರ್ಲೈಟ್‌ ಕಾರ್ಖಾನೆಯ ವಿರುದ್ಧ ಪ್ರತಿಭಟಿಸುತ್ತಿದ್ದ ನಾಗರಿಕರ ಮೇಲೆ, ಪೋಲಿಸರು ಗುಂಡು ಹಾರಿಸಿದ್ದರಿಂದ 13 ಜನರು ಮೃತಪಟ್ಟಿದ್ದರು. ಇದನ್ನು ಸೋಮವಾರ ಉಲ್ಲೇಖಿಸಿರುವ ಮದ್ರಾಸ್‌ ಹೈಕೋರ್ಟ್‌, ಘಟನೆಯು ಪ್ರಜಾಪ್ರಭುತ್ವದ ಮೇಲಿನ ಗಾಯವಾಗಿದ್ದು, ಅದನ್ನು ಮರೆಯಬಾರದು ಎಂದು ಹೇಳಿದೆ.

ಈ ಘಟನೆಯು ದೇಶದಾದ್ಯಂತ ತೀವ್ರ ಆಕ್ರೋಶ ಹುಟ್ಟುಹಾಕಿತ್ತು, ಹೀಗಾಗಿ ನಂತರ ಕಾರ್ಖಾನೆಯನ್ನು ಮುಚ್ಚಲಾಗಿತ್ತು. ತೂತುಕುಡಿಯ ನಿವಾಸಿಗಳು ಸ್ಟೆರ್ಲೈಟ್ ಕಾರ್ಖಾನೆಯು ಪ್ರದೇಶದ ವಾಯು ಮತ್ತು ಜಲ ಸಂಪನ್ಮೂಲಗಳನ್ನು ಕಲುಷಿತಗೊಳಿಸಿದೆ ಎಂದು ನಿರಂತರವಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ವೇದಾಂತ ಸ್ಟೆರ್‌‌ಲೈಟ್ ವಿರೋಧಿ ಹಿಂಸಾಚಾರ: ರಜನಿಕಾಂತ್‌ಗೆ ಸಮನ್ಸ್

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು(ಎನ್‌ಎಚ್‌ಆರ್‌ಸಿ) ಗುಂಡಿನ ದಾಳಿಯ ತನಿಖೆಯನ್ನು ಪುನಃ ಮಾಡಬೇಕು ಎಂದು ಮದ್ರಾಸ್‌‌ ಹೈಕೋರ್ಟ್‌ಗೆ ಸಲ್ಲಿಕೆಯಾದ ಅರ್ಜಿಯನ್ನು ಆಲಿಸುವಾಗ, ಮುಖ್ಯ ನ್ಯಾಯಮೂರ್ತಿ ಸಂಜಿಬ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಟಿ.ಎಸ್.ಶಿವಜ್ಞಾನಂ ಅವರಿದ್ದ ಪೀಠವು ಈ ಅವಲೋಕನ ಮಾಡಿದೆ.

“ಈ ಘಟನೆ ನಿಜವಾಗಿಯೂ ಸಾರ್ವಜನಿಕರ ಮನಸ್ಸಿನಿಂದ ಹೊರಟು ಹೋಗಿದೆ. ಆದರೆ ಹದಿನೈದು ಅಥವಾ ಹದಿನಾರು ನಾಗರಿಕರು ಪ್ರಾಣ ಕಳೆದುಕೊಂಡರು. ಆ ರೀತಿಯ ಘಟನೆ ನಮ್ಮ ಪ್ರಜಾಪ್ರಭುತ್ವದ ಮೇಲಿನ ಗಾಯವಾಗಿದ್ದು, ನಾವು ಎಂದಿಗೂ ಮರೆಯಬಾರದು” ಎಂದು ಹೇಳಿದ್ದಾರೆ.

ಸರ್ಕಾರೇತರ ಸಂಸ್ಥೆ ಪೀಪಲ್ಸ್ ವಾಚ್‌ನ ಕಾರ್ಯನಿರ್ವಾಹಕ ನಿರ್ದೇಶಕ ಹೆನ್ರಿ ಟಿಫಾಗ್ನೆ ಅವರು ‘ಎನ್‌ಎಚ್‌ಆರ್‌ಸಿ’ ವಿಚಾರಣೆಯನ್ನು ಪುನಃ ನಡೆಸಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ‘ತೂತುಕುಡಿ ಹತ್ಯಾಕಾಂಡ’ ಸಂತ್ರಸ್ತರನ್ನು ಸರ್ಕಾರಿ ಉದ್ಯೋಗಕ್ಕೆ ನೇಮಕ ಮಾಡಿದ ತಮಿಳುನಾಡು ಸಿಎಂ

ಅವರು ತಮ್ಮ ಅರ್ಜಿಯಲ್ಲಿ, “ಎನ್‌ಎಚ್‌ಆರ್‌ಸಿ ಅಕ್ಟೋಬರ್ 2018 ರಲ್ಲಿ ಗುಂಡಿನ ದಾಳಿಯ ತನಿಖೆಯನ್ನು ಮುಚ್ಚಿದೆ. ಆದರೆ ಅದರ ತನಿಖಾ ತಂಡವು ಸಲ್ಲಿಸಿದ ವರದಿಯ ವಿಷಯಗಳನ್ನು ಇನ್ನೂ ಬಹಿರಂಗಪಡಿಸಿಲ್ಲ” ಎಂದು ಹೇಳಿದ್ದಾರೆ.

ಹೆನ್ರಿ ಟಿಫಾಗ್ನೆ ಅವರು ಸಲ್ಲಿಸಿದ್ದ ಅರ್ಜಿಯನ್ನು ಆಗಸ್ಟ್ 9 ರಂದು ವಿಚಾರಣೆ ನಡೆಸಲಾಗಿತ್ತು. ಆಗ ಎನ್‌ಎಚ್‌ಆರ್‌ಸಿಯು ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸಲು ನ್ಯಾಯಾಲಯದೊಂದಿಗೆ ಸಮಯ ಕೋರಿತ್ತು. ಅದರಂತೆ ಹೈಕೋರ್ಟ್ ಕೂಡಾ ಸೋಮವಾರದವರೆಗೆ ಸಮಯ ನೀಡಿತ್ತು.

ಸೋಮವಾರದಂದು ಎನ್‌ಎಚ್‌ಆರ್‌ಸಿ ವರದಿಯನ್ನು ಮೊಹರು ಮಾಡಿದ ಕವರ್‌ನಲ್ಲಿ ನ್ಯಾಯಾಲಯದ ಮುಂದೆ ಸಲ್ಲಿಸಿದೆ. ಆದರೆ ಸದ್ಯಕ್ಕೆ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ವರದಿಯ ಪ್ರತಿಗಳನ್ನು ಹೆಚ್ಚುವರಿ ಸಾಲಿಸಿಟರ್ ಜನರಲ್, ಅರ್ಜಿದಾರರು ಮತ್ತು ರಾಜ್ಯ ಸರ್ಕಾರಕ್ಕೆ ಕಳುಹಿಸುವಂತೆ ಹೈಕೋರ್ಟ್‌ ಆದೇಶಿಸಿದೆ ಮತ್ತು ತನಿಖೆಯನ್ನು ಅದರ ತಾರ್ಕಿಕ ಅಂತ್ಯಕ್ಕೆ ತರಲು NHRC ಗೆ ಸೂಚಿಸಿದೆ.

ಇದನ್ನೂ ಓದಿ: ಪ್ಯಾಲೆಸ್ಟೀನೀಯರ ಹೋರಾಟ; ದಬ್ಬಾಳಿಕೆಯ ವಿರೋಧ ಅದು ಜಗಳಗಂಟತನವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನ್ಯಾಯಾಂಗವೆಂದರೆ ಹೀಗಿರಬೇಕು.ನಮ್ಮ ಜನತೆಗೆ ಜಯ ಕೊಟ್ಟ ನ್ಯಾಯಾಂಗಕ್ಕೂ ಜಯವಾಗಲಿ.

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...