Homeಮುಖಪುಟತೂತುಕುಡಿ ಹತ್ಯಾಕಾಂಡ ‘ಪ್ರಜಾಪ್ರಭುತ್ವದ ಮೇಲಿನ ಗಾಯ, ಅದನ್ನು ಮರೆಯಬಾರದು’ - ಮದ್ರಾಸ್ ಹೈಕೋರ್ಟ್‌

ತೂತುಕುಡಿ ಹತ್ಯಾಕಾಂಡ ‘ಪ್ರಜಾಪ್ರಭುತ್ವದ ಮೇಲಿನ ಗಾಯ, ಅದನ್ನು ಮರೆಯಬಾರದು’ – ಮದ್ರಾಸ್ ಹೈಕೋರ್ಟ್‌

- Advertisement -
- Advertisement -

2018 ಮೇ 22 ರಂದು ತಮಿಳುನಾಡಿನ ತೂತುಕುಡಿ ಜಿಲ್ಲೆಯ ‘ವೇದಾಂತ’ ಕಂಪೆನಿಯ ಸ್ಟೆರ್ಲೈಟ್‌ ಕಾರ್ಖಾನೆಯ ವಿರುದ್ಧ ಪ್ರತಿಭಟಿಸುತ್ತಿದ್ದ ನಾಗರಿಕರ ಮೇಲೆ, ಪೋಲಿಸರು ಗುಂಡು ಹಾರಿಸಿದ್ದರಿಂದ 13 ಜನರು ಮೃತಪಟ್ಟಿದ್ದರು. ಇದನ್ನು ಸೋಮವಾರ ಉಲ್ಲೇಖಿಸಿರುವ ಮದ್ರಾಸ್‌ ಹೈಕೋರ್ಟ್‌, ಘಟನೆಯು ಪ್ರಜಾಪ್ರಭುತ್ವದ ಮೇಲಿನ ಗಾಯವಾಗಿದ್ದು, ಅದನ್ನು ಮರೆಯಬಾರದು ಎಂದು ಹೇಳಿದೆ.

ಈ ಘಟನೆಯು ದೇಶದಾದ್ಯಂತ ತೀವ್ರ ಆಕ್ರೋಶ ಹುಟ್ಟುಹಾಕಿತ್ತು, ಹೀಗಾಗಿ ನಂತರ ಕಾರ್ಖಾನೆಯನ್ನು ಮುಚ್ಚಲಾಗಿತ್ತು. ತೂತುಕುಡಿಯ ನಿವಾಸಿಗಳು ಸ್ಟೆರ್ಲೈಟ್ ಕಾರ್ಖಾನೆಯು ಪ್ರದೇಶದ ವಾಯು ಮತ್ತು ಜಲ ಸಂಪನ್ಮೂಲಗಳನ್ನು ಕಲುಷಿತಗೊಳಿಸಿದೆ ಎಂದು ನಿರಂತರವಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ವೇದಾಂತ ಸ್ಟೆರ್‌‌ಲೈಟ್ ವಿರೋಧಿ ಹಿಂಸಾಚಾರ: ರಜನಿಕಾಂತ್‌ಗೆ ಸಮನ್ಸ್

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು(ಎನ್‌ಎಚ್‌ಆರ್‌ಸಿ) ಗುಂಡಿನ ದಾಳಿಯ ತನಿಖೆಯನ್ನು ಪುನಃ ಮಾಡಬೇಕು ಎಂದು ಮದ್ರಾಸ್‌‌ ಹೈಕೋರ್ಟ್‌ಗೆ ಸಲ್ಲಿಕೆಯಾದ ಅರ್ಜಿಯನ್ನು ಆಲಿಸುವಾಗ, ಮುಖ್ಯ ನ್ಯಾಯಮೂರ್ತಿ ಸಂಜಿಬ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಟಿ.ಎಸ್.ಶಿವಜ್ಞಾನಂ ಅವರಿದ್ದ ಪೀಠವು ಈ ಅವಲೋಕನ ಮಾಡಿದೆ.

“ಈ ಘಟನೆ ನಿಜವಾಗಿಯೂ ಸಾರ್ವಜನಿಕರ ಮನಸ್ಸಿನಿಂದ ಹೊರಟು ಹೋಗಿದೆ. ಆದರೆ ಹದಿನೈದು ಅಥವಾ ಹದಿನಾರು ನಾಗರಿಕರು ಪ್ರಾಣ ಕಳೆದುಕೊಂಡರು. ಆ ರೀತಿಯ ಘಟನೆ ನಮ್ಮ ಪ್ರಜಾಪ್ರಭುತ್ವದ ಮೇಲಿನ ಗಾಯವಾಗಿದ್ದು, ನಾವು ಎಂದಿಗೂ ಮರೆಯಬಾರದು” ಎಂದು ಹೇಳಿದ್ದಾರೆ.

ಸರ್ಕಾರೇತರ ಸಂಸ್ಥೆ ಪೀಪಲ್ಸ್ ವಾಚ್‌ನ ಕಾರ್ಯನಿರ್ವಾಹಕ ನಿರ್ದೇಶಕ ಹೆನ್ರಿ ಟಿಫಾಗ್ನೆ ಅವರು ‘ಎನ್‌ಎಚ್‌ಆರ್‌ಸಿ’ ವಿಚಾರಣೆಯನ್ನು ಪುನಃ ನಡೆಸಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ‘ತೂತುಕುಡಿ ಹತ್ಯಾಕಾಂಡ’ ಸಂತ್ರಸ್ತರನ್ನು ಸರ್ಕಾರಿ ಉದ್ಯೋಗಕ್ಕೆ ನೇಮಕ ಮಾಡಿದ ತಮಿಳುನಾಡು ಸಿಎಂ

ಅವರು ತಮ್ಮ ಅರ್ಜಿಯಲ್ಲಿ, “ಎನ್‌ಎಚ್‌ಆರ್‌ಸಿ ಅಕ್ಟೋಬರ್ 2018 ರಲ್ಲಿ ಗುಂಡಿನ ದಾಳಿಯ ತನಿಖೆಯನ್ನು ಮುಚ್ಚಿದೆ. ಆದರೆ ಅದರ ತನಿಖಾ ತಂಡವು ಸಲ್ಲಿಸಿದ ವರದಿಯ ವಿಷಯಗಳನ್ನು ಇನ್ನೂ ಬಹಿರಂಗಪಡಿಸಿಲ್ಲ” ಎಂದು ಹೇಳಿದ್ದಾರೆ.

ಹೆನ್ರಿ ಟಿಫಾಗ್ನೆ ಅವರು ಸಲ್ಲಿಸಿದ್ದ ಅರ್ಜಿಯನ್ನು ಆಗಸ್ಟ್ 9 ರಂದು ವಿಚಾರಣೆ ನಡೆಸಲಾಗಿತ್ತು. ಆಗ ಎನ್‌ಎಚ್‌ಆರ್‌ಸಿಯು ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸಲು ನ್ಯಾಯಾಲಯದೊಂದಿಗೆ ಸಮಯ ಕೋರಿತ್ತು. ಅದರಂತೆ ಹೈಕೋರ್ಟ್ ಕೂಡಾ ಸೋಮವಾರದವರೆಗೆ ಸಮಯ ನೀಡಿತ್ತು.

ಸೋಮವಾರದಂದು ಎನ್‌ಎಚ್‌ಆರ್‌ಸಿ ವರದಿಯನ್ನು ಮೊಹರು ಮಾಡಿದ ಕವರ್‌ನಲ್ಲಿ ನ್ಯಾಯಾಲಯದ ಮುಂದೆ ಸಲ್ಲಿಸಿದೆ. ಆದರೆ ಸದ್ಯಕ್ಕೆ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ವರದಿಯ ಪ್ರತಿಗಳನ್ನು ಹೆಚ್ಚುವರಿ ಸಾಲಿಸಿಟರ್ ಜನರಲ್, ಅರ್ಜಿದಾರರು ಮತ್ತು ರಾಜ್ಯ ಸರ್ಕಾರಕ್ಕೆ ಕಳುಹಿಸುವಂತೆ ಹೈಕೋರ್ಟ್‌ ಆದೇಶಿಸಿದೆ ಮತ್ತು ತನಿಖೆಯನ್ನು ಅದರ ತಾರ್ಕಿಕ ಅಂತ್ಯಕ್ಕೆ ತರಲು NHRC ಗೆ ಸೂಚಿಸಿದೆ.

ಇದನ್ನೂ ಓದಿ: ಪ್ಯಾಲೆಸ್ಟೀನೀಯರ ಹೋರಾಟ; ದಬ್ಬಾಳಿಕೆಯ ವಿರೋಧ ಅದು ಜಗಳಗಂಟತನವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನ್ಯಾಯಾಂಗವೆಂದರೆ ಹೀಗಿರಬೇಕು.ನಮ್ಮ ಜನತೆಗೆ ಜಯ ಕೊಟ್ಟ ನ್ಯಾಯಾಂಗಕ್ಕೂ ಜಯವಾಗಲಿ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...