Homeಮುಖಪುಟಬೇಜವಾಬ್ದಾರಿ ನಡವಳಿಕೆಗಾಗಿ ಕ್ಷಮೆ ಕೋರಿದ ದಿ ಟೈಮ್ಸ್‌ ಆಫ್‌ ಇಂಡಿಯಾ : ಉಳಿದ ಮಾಧ್ಯಮಗಳಿಗೂ ಇದು...

ಬೇಜವಾಬ್ದಾರಿ ನಡವಳಿಕೆಗಾಗಿ ಕ್ಷಮೆ ಕೋರಿದ ದಿ ಟೈಮ್ಸ್‌ ಆಫ್‌ ಇಂಡಿಯಾ : ಉಳಿದ ಮಾಧ್ಯಮಗಳಿಗೂ ಇದು ಪಾಠ

- Advertisement -
- Advertisement -

“ಈ ಸುದ್ದಿಯಲ್ಲಿ ನಾವು ಅಜಾಗರೂಕತೆಯಿಂದಾಗಿ ತಪ್ಪಾದ ಫೋಟೋವನ್ನು ಅಪ್‌ಲೋಡ್ ಮಾಡಿದ್ದೇವೆ. ಈ ದೋಷಕ್ಕಾಗಿ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ.” ಹೀಗೆಂದು ದಿ ಟೈಮ್ಸ್‌ ಆಫ್‌ ಇಂಡಿಯಾ ಇಂದಿನ ಒಂದು ವರದಿಯ ಮೊದಲ ಪ್ಯಾರದಲ್ಲಿ ಬರೆದುಕೊಂಡಿದೆ. ಹಾಗಾದರೆ ಅದು ಮಾಡಿದ ತಪ್ಪಾದರೂ ಏನು? ಅದರಿಂದಾದ ಅನಾಹುತವೇನು ನೋಡೋಣ ಬನ್ನಿ. ಏಕೆಂದರೆ ಇದರಿಂದ ಉಳಿದ ಮಾಧ್ಯಮಗಳು ಕಲಿಯುವುದು ಬಹಳಷ್ಟಿದೆ.

ಕ್ಷಮೆ ಕೇಳಿದ ಟೈಮ್ಸ್‌ ಆಫ್‌ ಇಂಡಿಯಾ

“ಭಾರತದಲ್ಲಿ ಪತ್ರಿಕೋದ್ಯಮ ಈ ಮಟ್ಟಕ್ಕೆ ಇಳಿದಿದೆ. TOI ಮತ್ತು ಭಾರತೀಯ ಪತ್ರಿಕೋದ್ಯಮದ ಮೇಲೆ ನಾನು ಇಟ್ಟಿದ್ದ ಸಣ್ಣ ಪ್ರಮಾಣದ ನಂಬಿಕೆ ಈಗಷ್ಟೇ ಕಡಿಮೆಯಾಗಿದೆ. ನಾವು ಸಂಪೂರ್ಣವಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ ಮತ್ತು ಈ ಘಟನೆಗೂ ನಮಗೂ ಯಾವುದೇ ರೀತಿಯ ಸಂಬಂಧವಿಲ್ಲ. ಇದು ನಿಜವಾಗಿಯೂ ನಮ್ಮ ಕುಟುಂಬ ಮತ್ತು ಸ್ನೇಹಿತರನ್ನು ಬೆಚ್ಚಿಬೀಳಿಸಿದೆ ಮತ್ತು ಈ ಬೆಳಿಗ್ಗೆ ನಮಗೆ ಡಿಸ್ಟರ್ಬ್‌ ಆಗಿದೆ.”

“TOI, ದಯವಿಟ್ಟು ಈ ತಪ್ಪನ್ನು ತಿದ್ದುಪಡಿ ಮಾಡಿ ಮತ್ತು ಔಪಚಾರಿಕ ಕ್ಷಮೆಯಾಚನೆಯೊಂದಿಗೆ ಸರಿಪಡಿಸಿ. ಮತ್ತೊಮ್ಮೆ ಹೇಳುತ್ತಿದ್ದೇವೆ, ನಾವು ಚೆನ್ನಾಗಿದ್ದೇವೆ ಮತ್ತು ನಮ್ಮ ಬಗ್ಗೆ ಕಾಳಜಿ ವಹಿಸುವ ಎಲ್ಲ ಪ್ರೀತಿಪಾತ್ರರಿಗೆ ಧನ್ಯವಾದಗಳು. ನಾವು ಹಿಂದೆಂದಿಗಿಂತಲೂ ಸಂತೋಷದಿಂದ ಮತ್ತು ಒಟ್ಟಿಗೆ ಇದ್ದೇವೆ.” ಹೀಗೆಂದು ಇಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡ ದಂಪತಿಗಳು ಸಿದ್ದ ಆಹಾರ ಉದ್ಯಮಿಗಳಾದ (ಬಗೆ ಬಗೆ ಅಡುಗೆ ಮಾಡುವ ಮತ್ತು ರೆಸಿಪಿ ಹೇಳಿಕೊಡುವ) ಅಮಿತ್ ಅಗರ್ವಾಲ್ ಮತ್ತು ಶಿಲ್ಪಿ ಅಗರ್ವಾಲ್.

TOI has used our photo for an unrelated news without any verification. This is what the journalism has come down to.

This is what the journalism has come down to in India. Whatever small amount of trust I had on TOI and on Indian journalism has just gone down the drain. We (Amit Agarwal & Shilpi Agarwal) are doing totally fine and this incident is nowhere related to us. This has really shocked our family and friends and caused a chaos this morning for us.TOI, please fix this asap with a correction and formal apology. Once again, we are fine and thanks to all the loved ones who are concerned about us. We are happy and together like never before 🙂 #incorrectnews #timesofindia #fakenews #TOINewslink: https://timesofindia.indiatimes.com/city/kolkata/man-kills-estranged-wife-in-bluru-mom-in-law-in-kol-shoots-self/articleshow/76519987.cms

Posted by Foods And Flavors on Monday, June 22, 2020

ಅವರು ಹೀಗೆ ಹೇಳಲು ಕಾರಣವೆಂದರೆ ಜೂನ್ 22 ರಂದು ಬೆಂಗಳೂರಿನಲ್ಲಿ ನಡೆದ ಸರಣಿ ಕೊಲೆ ಮತ್ತು ಆತ್ಮಹತ್ಯೆ ಪ್ರಕರಣವೊಂದನ್ನು ವರದಿ ಮಾಡಿರುವ ಟೈಮ್ಸ್‌ ಆಫ್‌ ಇಂಡಿಯಾವು ತನ್ನ ಸುದ್ದಿಯ ಮುಖಪುಟದಲ್ಲಿ ಈ ಇಬ್ಬರೂ ದಂಪತಿಗಳ ಫೋಟೊವನ್ನು ಪ್ರಕಟಿಸಿಬಿಟ್ಟಿದೆ. ಅದನ್ನು ಗಮನಿಸಿದ ಅವರ ಸ್ನೇಹಿತರು ಮತ್ತು ಸಂಬಂಧಿಕರು ಆತಂಕಗೊಂಡು ಅಮಿತ್ ಅಗರ್ವಾಲ್ ಮತ್ತು ಶಿಲ್ಪಿ ಅಗರ್ವಾಲ್‌ಗೆ ಫೋನ್ ಮಾಡಿ ಆತಂಕ ಹಂಚಿಕೊಂಡಿದ್ದಾರೆ.

ನಿಜವಾಗಿ ನಡೆದುದ್ದೇನು? ತಪ್ಪಾಗಿದ್ದು ಎಲ್ಲಿ?

ಕೋಲ್ಕತ್ತಾ ಮೂಲದ ಚಾರ್ಟರ್ಡ್ ಅಕೌಂಟೆಂಟ್ ಆದ ವ್ಯಕ್ತಿಯೊಬ್ಬ ಬೆಂಗಳೂರಿನ ಹುಡುಗಿಯನ್ನು ಮದುವೆಯಾಗಿದ್ದಾರೆ. ತದನಂತರ ಅವರ ಸಂಸಾರದಲ್ಲಿ ಬಿರುಕುಬಂದು ವಿಚ್ಚೇದನ ಪಡೆದಿದ್ದಾರೆ. ಆದರೆ ಆಸ್ತಿ ವಿಷಯಕ್ಕೆ ತೀವ್ರ ಜಗಳವಾದ್ದರಿಂದ ತನ್ನ ವಿಚ್ಛೇದಿತ ಹೆಂಡತಿ ಮನೆಗೆ ನುಗ್ಗಿ ಆಕೆಯನ್ನು ಕೊಲೆ ಮಾಡಿದ್ದಾನೆ. ಅಲ್ಲಿಂದ ಕೊಲ್ಕತ್ತಾಗೆ ಮರಳಿ ಆಕೆಯ ತಾಯಿಯನ್ನು ಸಹ ಕೊಂದಿದ್ದಾನೆ. ನಂತರ ತಾನೂ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಹೆಸರೂ ಅಮಿತ್ ಅಗರ್ವಾಲ್ ಮತ್ತು ಆತನ ವಿಚ್ಛೇದಿತ ಪತ್ನಿಯ ಹೆಸರು ಶಿಲ್ಪಿ ಅಗರ್ವಾಲ್ ಆಗಿದೆ. ಇಬ್ಬರೂ ಸಹ ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದಾರೆ. ಟೈಮ್ಸ್ ಆಫ್‌ ಇಂಡಿಯಾ ಸುದ್ದಿ ಮಾಡುವ ಭರದಲ್ಲಿ ಇವರ ಬದಲಿಗೆ ಸಿದ್ದ ಆಹಾರ ಉದ್ಯಮಿಗಳಾದ ಅಮಿತ್ ಅಗರ್ವಾಲ್ ಮತ್ತು ಶಿಲ್ಪಿ ಅಗರ್ವಾಲ್‌ರವರ ಚಿತ್ರ ಪ್ರಕಟಿಸಿಬಿಟ್ಟಿದೆ.

ಇದರಿಂದ ನೊಂದುಕೊಂಡ ಆ ಉದ್ಯಮಿಗಳು ಫೇಸ್‌ಬುಕ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್‌ ಮಾಡಿ “ಖ್ಯಾತ ಪತ್ರಿಕೆ ಈ ರೀತಿ ಮಾಡಬಾರದು. ಸುದ್ದಿ ಪ್ರಕಟಿಸುವ ಮುನ್ನ ಪರೀಶಿಲಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಸುದ್ದಿಯನ್ನು ಬ್ರೇಕಿಂಗ್‌ ಮಾಡುವ ವಿಪರೀತ ಹುಚ್ಚಿನೊಂದಿಗೆ ಅನೈತಿಕ ಮತ್ತು ವೃತ್ತಿಪರವಲ್ಲದ ಕೆಲಸದ ಸಂಸ್ಕೃತಿಯು ಭಾರತೀಯ ಪತ್ರಿಕೋದ್ಯಮವನ್ನು ನಾಶಪಡಿಸುತ್ತಿದೆ. ಇದೇ ತಪ್ಪಿಗೆ ಪಾಶ್ಚಿಮಾತ್ಯ ದೇಶಗಳಲ್ಲಿ ನ್ಯಾಯಾಲಯಗಳು ಮಿಲಿಯನ್ ಡಾಲರ್‌ ಡಂಡ ವಿಧಿಸುತ್ತಿದ್ದವು” ಎಂದು ಅರುಣ್ ಭೋಥ್ರಾ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ತದನಂತರ ತನ್ನ ತಪ್ಪಿನ ಅರಿವಾದ ಕೂಡಲೇ ಟೈಮ್ಸ್‌ ಆಫ್‌ ಇಂಡಿಯಾ ಆ ದಂಪತಿಗಳ ಫೋಟೊವನ್ನು ತೆಗೆದುಹಾಕಿ ಕ್ರೈಂ ನ ಸಾಂಕೇತಿಕ ಫೋಟೊವನ್ನು ಅಪ್‌ಲೋಡ್‌ ಮಾಡಿದೆ. ಜೊತೆಗೆ ತಾನು ಮಾಡಿದ ಪ್ರಮಾದಕ್ಕಾಗಿ ಕ್ಷಮೆ ಕೇಳಿದೆ.

ಈ ಕುರಿತು ಟೈಮ್ಸ್‌ ಆಫ್‌ ಇಂಡಿಯಾದ ಛೀಫ್‌ ಎಡಿಟರ್‌ ರಾಜೇಶ್‌ ಕುರ್ಲಾ ಪ್ರತಿಕ್ರಿಯಿಸಿ “ಈ ತಪ್ಪು ಮತ್ತೆ ಮರಕಳಿಸುವುದಿಲ್ಲ. ಈ ಭಯಾನಕ ತಪ್ಪಿನಿಂದಾಗಿ ದಂಪತಿಗಳಿಗೆ ಏನಾಗಿದೆಯೆಂದು ಗೊತ್ತಿದೆ. ನಾನು ಅವರಿಗೆ ವೈಯಕ್ತಿಕವಾಗಿ ಕ್ಷಮೆಯಾಚಿಸಲು ಬಯಸುತ್ತೇನೆ. ಜಗತ್ತು ಅವಲಂಬಿಸಿರುವ ಅಧಿಕೃತ ಮೂಲವನ್ನು ನಾವು ಅವಲಂಬಿಸಿದ್ದೇವೆ. ಪಾಠ ಕಲಿತಿದ್ದೇವೆ” ಎಂದು ಟ್ವೀಟ್‌ ಮಾಡಿದ್ದಾರೆ.

ಇದು ಉಳಿದೆಲ್ಲಾ ಮಾಧ್ಯಮಗಳಿಗೂ ಪಾಠವಾಗಬೇಕಿದೆ. ಸಾವಧಾನದಿಂದ ಪುನರ್‌ ಪರಿಶೀಲನೆ ಮಾಡುವುದನ್ನು ರೂಢಿಸಿಕೊಳ್ಳಬೇಕಿದೆ. ಪ್ರಮಾಣಿಕೃತ ಮೂಲಗಳು ಇಲ್ಲದಿದ್ದರೆ ಆ ಸುದ್ದಿ ಅಥವಾ ಫೋಟೊವನ್ನು ಪ್ರಕಟಿಸದಿದ್ದರೂ ನಷ್ಟವೇನಿಲ್ಲ. ಆದರೆ ಗಾಳಿ ಸುದ್ದಿಗಳನ್ನು ನಂಬಿಕೊಂಡು ಸುದ್ದಿ ಪ್ರಕಟಿಸಿ ಇನ್ನೊಬ್ಬರ ವೈಯಕ್ತಿಕ ಗೌಪ್ಯತೆಯ ಮೇಲೆ ದಾಳಿ ಮಾಡುವುದು ಸರ್ವಥಾ ಸರಿಯಲ್ಲ ಎಂಬುದನ್ನು ಕಲಿಯಬೇಕಿದೆ. ನಮ್ಮ ಮಾಧ್ಯಮ ಮಿತ್ರರು ಮಾಧ್ಯಮಗಳು ಹೇಗೆ ಕಾರ್ಯನಿರ್ವಹಿಸಬೇಕು ಎಂಬುದರ ಬಗ್ಗೆ ಬಂದಿರುವ ಅತ್ಯುತ್ತಮ ಹಾಲಿವುಡ್‌ ಚಿತ್ರ ’ಸ್ಪಾಟ್‌ಲೈಟ್‌’ ಒಮ್ಮೆ ನೋಡಿದರೆ ಈ ರೀತಿಯ ತಪ್ಪುಗಳಾಗುವುದಿಲ್ಲ.


ಇದನ್ನೂ ಓದಿ; ಸ್ಪಾಟ್‍ಲೈಟ್ ಎನ್ನುವ ಸಿನೆಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....