Homeಕರ್ನಾಟಕಗುತ್ತಿಗೆದಾರರಿಂದ ಕಸದ ತೊಟ್ಟಿಯಾಗಿದೆ ಕಾಲೇಜು ಮೈದಾನ; ಸಂಸದ-ಶಾಸಕರ ಬೆಂಬಲ

ಗುತ್ತಿಗೆದಾರರಿಂದ ಕಸದ ತೊಟ್ಟಿಯಾಗಿದೆ ಕಾಲೇಜು ಮೈದಾನ; ಸಂಸದ-ಶಾಸಕರ ಬೆಂಬಲ

ಸಂಸದರು ಹಾಗೂ ಶಾಸಕರು ಗುತ್ತಿಗೆದಾರರ ಬೆಂಬಲಕ್ಕೆ ನಿಂತಿದ್ದಾರೆ. ಇದು ಪ್ರಾಂಶುಪಾಲರ ಉಸಿರುಗಟ್ಟಿಸುವಂತೆ ಮಾಡಿದೆ ಎಂದು ಕಾಲೇಜು ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

- Advertisement -
- Advertisement -

ತುಮಕೂರಿನಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ಉತ್ಪತ್ತಿಯಾಗುವ ಅವಶೇಷಗಳನ್ನು ತಂದು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸುರಿಯಲಾಗುತ್ತಿದ್ದು, ಇದರಿಂದ ಮೈದಾನ ಕಸದ ತೊಟ್ಟಿಯಾಗಿ ಪರಿವರ್ತನೆಯಾಗಿದೆ. ನಿತ್ಯವೂ ಹತ್ತಾರು ಲೋಡುಗಟ್ಟಲೆ ಅವಶೇಷ ಸುರಿಯುತ್ತಿರುವುದರಿಂದ ಮಕ್ಕಳ ಆಟಕ್ಕೆ ಮತ್ತು ಮುಂಜಾನೆ ವಾಯು ವಿಹಾರಕ್ಕೆ ಬರುವವರಿಗೆ ತೊಂದರೆಯಾಗಿದೆ ಎಂದು ನಾಗರಿಕರು ದೂರಿದ್ದಾರೆ.

ಸರ್ಕಾರಿ ಜೂನಿಯರ್ ಕಾಲೇಜು ಮೈದಾನದ ಪೂರ್ವಭಾಗದಲ್ಲಿ ಮೈದಾನ ಒತ್ತುವರಿ ಮಾಡಿ ರಸ್ತೆ ನಿರ್ಮಾಣ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಕಾಮಗಾರಿ ಮಾಡಬಾರದೆಂಬ ನಿಯಮವಿದೆ. ಹಸಿರು ಪೀಠ ಮತ್ತು ಹೈಕೋರ್ಟ್ ಆದೇಶಗಳ ನಿಯಮಗಳು ಇವೆ. ಆದರೆ ಇದೆಲ್ಲವನ್ನೂ ಉಲ್ಲಂಘಿಸಿ ಮೈದಾನದಲ್ಲಿ ಕಸ ಮತ್ತು ಚರಂಡಿ, ರಸ್ತೆ ನಿರ್ಮಾಣ ಕಾಮಗಾರಿಯ ಅವಶೇಷಗಳನ್ನು ತಂದು ಸುರಿಯುತ್ತಿರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಮೈದಾನದ ಪೂರ್ವ ಭಾಗದಲ್ಲಿ ಖೋಖೋ, ಟೆನ್ನಿಸ್ ಕೋರ್ಟ್‌‌ಗಳನ್ನು ನಿರ್ಮಾಣ ಮಾಡಿದ್ದು ಅಲ್ಲಿ ನಿತ್ಯವೂ ನೂರಾರು ಮಂದಿ ಆಟವಾಡುತ್ತಿದ್ದರು. ಟೆನ್ನಿಸ್ ಮತ್ತು ಖೋಖೋ ತರಬೇತಿ ಪಡೆಯುತ್ತಿದ್ದರು. ಮೈದಾನದ ಅಂಚಿನದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ 90 ಲಕ್ಷ ರೂಪಾಯಿ ವೆಚ್ಚದಲ್ಲಿ ವಾಕಿಂಗ್ ಪಾಥ್ ನಿರ್ಮಾಣ ಮಾಡಿದೆ. ಈಗ ಮಣ್ಣು ಮತ್ತು ಅವಶೇಷಗಳನ್ನು ಸುರಿದಿರುವುದರಿಂದ ವಾಕಿಂಗ್ ಪಾತ್, ಟಿನ್ನಿಸ್, ಖೋಖೋ ಕೋರ್ಟ್ ಗಳು ಸಂಪೂರ್ಣ ಮುಚ್ಚಿ ಹೋಗಿವೆ.

ರಸ್ತೆ, ಚರಂಡಿ ಕಾಮಗಾರಿಯ ಅವಶೇಷಗಳನ್ನು ಬೇರೆ ಕಡೆ ಸಾಗಿಸಬೇಕು. ಅದು ಕಾಮಗಾರಿ ಗುತ್ತಿಗೆ ಪಡೆದವರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಗುತ್ತಿಗೆದಾರರರಿಗೆ ಸಂಸದರು ಮತ್ತು ಶಾಸಕರ ಬೆಂಬಲ ಇದೆ ಎಂಬ ಕಾರಣಕ್ಕೆ ಕಸ, ಮಣ್ಣು, ಕಲ್ಲುಗಳನ್ನು ಸರ್ಕಾರಿ ಜಾಗದಲ್ಲಿ ಸುರಿಯುತ್ತಿರುವುದು ಸರಿಯಲ್ಲ. ಇದು ಸಾರ್ವಜನಿಕ ಸ್ಥಳ. ಇಂತಹ ಕಡೆ ಕಸ ಇತ್ಯಾದಿ ಸುರಿಯಬಾರದು ಎಂಬ ನಿಯಮ ಇದೆ. ಆದರೆ ಇದ್ಯಾವುದನ್ನು ಲೆಕ್ಕಿಸದೆ ಗುತ್ತಿಗೆ ದಾರರು ಅವಶೇಷಗಳನ್ನು ಸುರಿಯುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿ ನಾಗಣ್ಣ ದೂರಿದ್ದಾರೆ.

ಕಾಲೇಜು ಆವರಣದಲ್ಲಿ ಗುತ್ತಿಗೆದಾರರು ಕಸ, ಅವಶೇಷ ಸುರಿಯುತ್ತಿದ್ದರೂ ಕಾಲೇಜು ಪ್ರಾಂಶುಪಾಲರು ಅವರಿಗೆ ಹೇಳಲಾರದಂತಹ ಅಸಹಾಯಕತೆ ಸಿಲುಕಿದ್ದಾರೆ. ಕಾಲೇಜು ಎಸ್ ಡಿ.ಎಂ.ಸಿ ಗೆ ಅಧ್ಯಕ್ಷರಾದ ಶಾಸಕ ಜ್ಯೋತಿ ಗಣೇಶ್ ಹಾಗೂ ಸಂಸದ ಬಸವರಾಜ್ ಈ ಇಬ್ಬರೂ ಗುತ್ತಿಗೆದಾರರ ಬೆಂಬಲಕ್ಕೆ ನಿಂತಿದ್ದಾರೆ. ಇದು ಪ್ರಾಂಶುಪಾಲರ ಉಸಿರುಗಟ್ಟಿಸುವಂತೆ ಮಾಡಿದೆ ಎಂದು ಹೆಸರು ಹೇಳಲು ಇಚ್ಚಿಸದ ಸಿಬ್ಬಂದಿಯೊಬ್ಬರು ನಾನುಗೌರಿ.ಕಾಮ್‌ಗೆ ತಿಳಿಸಿದ್ದಾರೆ.

ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದರು ಮತ್ತು ಶಾಸಕರೇ ಗುತ್ತಿಗೆದಾರರಿಗೆ ಬೆಂಬಲ ನೀಡಿರುವುದು ಸಾರ್ವಜನಿಕರು ಬಹಿರಂಗವಾಗಿ ಪ್ರಶ್ನಿಸಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ಶಾಸಕ ಸಂಸದರ ಮೌನ ಸಮ್ಮತಿಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ. ಅವಶೇಷ ಸುರಿಯುತ್ತಿರುವುದರಿಂದ ಆಟವಾಡಲು ಮತ್ತು ವಾಕಿಂಗ್‌ಗೂ ತೊಂದರೆಯಾಗಿದೆ ಎಂದು ನಾಗರಿಕರು ಆರೋಪಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಬೇರೆ ಚಟುವಟಿಕೆಗಳನ್ನು ಮಾಡಬಾರದೆಂಬ ನಿಯಮವಿದೆ. ಇದಕ್ಕೆ ವಿರುದ್ದವಾಗಿ ಇಲ್ಲಿ ಚಟುವಟಿಕೆಗಳು ನಡೆಯುತ್ತಿವೆ. ನಗರದ ಹೃದಯ ಭಾಗದಲ್ಲಿರುವ ಮೈದಾನ ನಿಧಾನವಾಗಿ ಕಡಿಮೆ ಆಗುತ್ತಿದೆ. ಸಾರ್ವಜನಿಕ ಆಸ್ತಿಯನ್ನು ರಕ್ಷಿಸ ಬೇಕಾದವರೇ ಹೀಗೆ ಜವಾಬ್ದಾರಿ ಮರೆತು ನಡೆದು ಕೊಂಡರೆ ನಾವೇನು ಮಾಡಬೇಕು ಎಂದು ಜನತೆ ಪ್ರಶ್ನಿಸಿದ್ದಾರೆ.


ಓದಿ: ಸಬ್ ಜೈಲಿನಲ್ಲಿ ಒಂದು ದಿನ ಕಳೆದ ಕೊರೊನಾ ಸೋಂಕಿತ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...