Homeಕರ್ನಾಟಕಗುತ್ತಿಗೆದಾರರಿಂದ ಕಸದ ತೊಟ್ಟಿಯಾಗಿದೆ ಕಾಲೇಜು ಮೈದಾನ; ಸಂಸದ-ಶಾಸಕರ ಬೆಂಬಲ

ಗುತ್ತಿಗೆದಾರರಿಂದ ಕಸದ ತೊಟ್ಟಿಯಾಗಿದೆ ಕಾಲೇಜು ಮೈದಾನ; ಸಂಸದ-ಶಾಸಕರ ಬೆಂಬಲ

ಸಂಸದರು ಹಾಗೂ ಶಾಸಕರು ಗುತ್ತಿಗೆದಾರರ ಬೆಂಬಲಕ್ಕೆ ನಿಂತಿದ್ದಾರೆ. ಇದು ಪ್ರಾಂಶುಪಾಲರ ಉಸಿರುಗಟ್ಟಿಸುವಂತೆ ಮಾಡಿದೆ ಎಂದು ಕಾಲೇಜು ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

- Advertisement -
- Advertisement -

ತುಮಕೂರಿನಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ಉತ್ಪತ್ತಿಯಾಗುವ ಅವಶೇಷಗಳನ್ನು ತಂದು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸುರಿಯಲಾಗುತ್ತಿದ್ದು, ಇದರಿಂದ ಮೈದಾನ ಕಸದ ತೊಟ್ಟಿಯಾಗಿ ಪರಿವರ್ತನೆಯಾಗಿದೆ. ನಿತ್ಯವೂ ಹತ್ತಾರು ಲೋಡುಗಟ್ಟಲೆ ಅವಶೇಷ ಸುರಿಯುತ್ತಿರುವುದರಿಂದ ಮಕ್ಕಳ ಆಟಕ್ಕೆ ಮತ್ತು ಮುಂಜಾನೆ ವಾಯು ವಿಹಾರಕ್ಕೆ ಬರುವವರಿಗೆ ತೊಂದರೆಯಾಗಿದೆ ಎಂದು ನಾಗರಿಕರು ದೂರಿದ್ದಾರೆ.

ಸರ್ಕಾರಿ ಜೂನಿಯರ್ ಕಾಲೇಜು ಮೈದಾನದ ಪೂರ್ವಭಾಗದಲ್ಲಿ ಮೈದಾನ ಒತ್ತುವರಿ ಮಾಡಿ ರಸ್ತೆ ನಿರ್ಮಾಣ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಕಾಮಗಾರಿ ಮಾಡಬಾರದೆಂಬ ನಿಯಮವಿದೆ. ಹಸಿರು ಪೀಠ ಮತ್ತು ಹೈಕೋರ್ಟ್ ಆದೇಶಗಳ ನಿಯಮಗಳು ಇವೆ. ಆದರೆ ಇದೆಲ್ಲವನ್ನೂ ಉಲ್ಲಂಘಿಸಿ ಮೈದಾನದಲ್ಲಿ ಕಸ ಮತ್ತು ಚರಂಡಿ, ರಸ್ತೆ ನಿರ್ಮಾಣ ಕಾಮಗಾರಿಯ ಅವಶೇಷಗಳನ್ನು ತಂದು ಸುರಿಯುತ್ತಿರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಮೈದಾನದ ಪೂರ್ವ ಭಾಗದಲ್ಲಿ ಖೋಖೋ, ಟೆನ್ನಿಸ್ ಕೋರ್ಟ್‌‌ಗಳನ್ನು ನಿರ್ಮಾಣ ಮಾಡಿದ್ದು ಅಲ್ಲಿ ನಿತ್ಯವೂ ನೂರಾರು ಮಂದಿ ಆಟವಾಡುತ್ತಿದ್ದರು. ಟೆನ್ನಿಸ್ ಮತ್ತು ಖೋಖೋ ತರಬೇತಿ ಪಡೆಯುತ್ತಿದ್ದರು. ಮೈದಾನದ ಅಂಚಿನದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ 90 ಲಕ್ಷ ರೂಪಾಯಿ ವೆಚ್ಚದಲ್ಲಿ ವಾಕಿಂಗ್ ಪಾಥ್ ನಿರ್ಮಾಣ ಮಾಡಿದೆ. ಈಗ ಮಣ್ಣು ಮತ್ತು ಅವಶೇಷಗಳನ್ನು ಸುರಿದಿರುವುದರಿಂದ ವಾಕಿಂಗ್ ಪಾತ್, ಟಿನ್ನಿಸ್, ಖೋಖೋ ಕೋರ್ಟ್ ಗಳು ಸಂಪೂರ್ಣ ಮುಚ್ಚಿ ಹೋಗಿವೆ.

ರಸ್ತೆ, ಚರಂಡಿ ಕಾಮಗಾರಿಯ ಅವಶೇಷಗಳನ್ನು ಬೇರೆ ಕಡೆ ಸಾಗಿಸಬೇಕು. ಅದು ಕಾಮಗಾರಿ ಗುತ್ತಿಗೆ ಪಡೆದವರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಗುತ್ತಿಗೆದಾರರರಿಗೆ ಸಂಸದರು ಮತ್ತು ಶಾಸಕರ ಬೆಂಬಲ ಇದೆ ಎಂಬ ಕಾರಣಕ್ಕೆ ಕಸ, ಮಣ್ಣು, ಕಲ್ಲುಗಳನ್ನು ಸರ್ಕಾರಿ ಜಾಗದಲ್ಲಿ ಸುರಿಯುತ್ತಿರುವುದು ಸರಿಯಲ್ಲ. ಇದು ಸಾರ್ವಜನಿಕ ಸ್ಥಳ. ಇಂತಹ ಕಡೆ ಕಸ ಇತ್ಯಾದಿ ಸುರಿಯಬಾರದು ಎಂಬ ನಿಯಮ ಇದೆ. ಆದರೆ ಇದ್ಯಾವುದನ್ನು ಲೆಕ್ಕಿಸದೆ ಗುತ್ತಿಗೆ ದಾರರು ಅವಶೇಷಗಳನ್ನು ಸುರಿಯುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿ ನಾಗಣ್ಣ ದೂರಿದ್ದಾರೆ.

ಕಾಲೇಜು ಆವರಣದಲ್ಲಿ ಗುತ್ತಿಗೆದಾರರು ಕಸ, ಅವಶೇಷ ಸುರಿಯುತ್ತಿದ್ದರೂ ಕಾಲೇಜು ಪ್ರಾಂಶುಪಾಲರು ಅವರಿಗೆ ಹೇಳಲಾರದಂತಹ ಅಸಹಾಯಕತೆ ಸಿಲುಕಿದ್ದಾರೆ. ಕಾಲೇಜು ಎಸ್ ಡಿ.ಎಂ.ಸಿ ಗೆ ಅಧ್ಯಕ್ಷರಾದ ಶಾಸಕ ಜ್ಯೋತಿ ಗಣೇಶ್ ಹಾಗೂ ಸಂಸದ ಬಸವರಾಜ್ ಈ ಇಬ್ಬರೂ ಗುತ್ತಿಗೆದಾರರ ಬೆಂಬಲಕ್ಕೆ ನಿಂತಿದ್ದಾರೆ. ಇದು ಪ್ರಾಂಶುಪಾಲರ ಉಸಿರುಗಟ್ಟಿಸುವಂತೆ ಮಾಡಿದೆ ಎಂದು ಹೆಸರು ಹೇಳಲು ಇಚ್ಚಿಸದ ಸಿಬ್ಬಂದಿಯೊಬ್ಬರು ನಾನುಗೌರಿ.ಕಾಮ್‌ಗೆ ತಿಳಿಸಿದ್ದಾರೆ.

ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದರು ಮತ್ತು ಶಾಸಕರೇ ಗುತ್ತಿಗೆದಾರರಿಗೆ ಬೆಂಬಲ ನೀಡಿರುವುದು ಸಾರ್ವಜನಿಕರು ಬಹಿರಂಗವಾಗಿ ಪ್ರಶ್ನಿಸಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ಶಾಸಕ ಸಂಸದರ ಮೌನ ಸಮ್ಮತಿಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ. ಅವಶೇಷ ಸುರಿಯುತ್ತಿರುವುದರಿಂದ ಆಟವಾಡಲು ಮತ್ತು ವಾಕಿಂಗ್‌ಗೂ ತೊಂದರೆಯಾಗಿದೆ ಎಂದು ನಾಗರಿಕರು ಆರೋಪಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಬೇರೆ ಚಟುವಟಿಕೆಗಳನ್ನು ಮಾಡಬಾರದೆಂಬ ನಿಯಮವಿದೆ. ಇದಕ್ಕೆ ವಿರುದ್ದವಾಗಿ ಇಲ್ಲಿ ಚಟುವಟಿಕೆಗಳು ನಡೆಯುತ್ತಿವೆ. ನಗರದ ಹೃದಯ ಭಾಗದಲ್ಲಿರುವ ಮೈದಾನ ನಿಧಾನವಾಗಿ ಕಡಿಮೆ ಆಗುತ್ತಿದೆ. ಸಾರ್ವಜನಿಕ ಆಸ್ತಿಯನ್ನು ರಕ್ಷಿಸ ಬೇಕಾದವರೇ ಹೀಗೆ ಜವಾಬ್ದಾರಿ ಮರೆತು ನಡೆದು ಕೊಂಡರೆ ನಾವೇನು ಮಾಡಬೇಕು ಎಂದು ಜನತೆ ಪ್ರಶ್ನಿಸಿದ್ದಾರೆ.


ಓದಿ: ಸಬ್ ಜೈಲಿನಲ್ಲಿ ಒಂದು ದಿನ ಕಳೆದ ಕೊರೊನಾ ಸೋಂಕಿತ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...