Homeಕರ್ನಾಟಕಗುತ್ತಿಗೆದಾರರಿಂದ ಕಸದ ತೊಟ್ಟಿಯಾಗಿದೆ ಕಾಲೇಜು ಮೈದಾನ; ಸಂಸದ-ಶಾಸಕರ ಬೆಂಬಲ

ಗುತ್ತಿಗೆದಾರರಿಂದ ಕಸದ ತೊಟ್ಟಿಯಾಗಿದೆ ಕಾಲೇಜು ಮೈದಾನ; ಸಂಸದ-ಶಾಸಕರ ಬೆಂಬಲ

ಸಂಸದರು ಹಾಗೂ ಶಾಸಕರು ಗುತ್ತಿಗೆದಾರರ ಬೆಂಬಲಕ್ಕೆ ನಿಂತಿದ್ದಾರೆ. ಇದು ಪ್ರಾಂಶುಪಾಲರ ಉಸಿರುಗಟ್ಟಿಸುವಂತೆ ಮಾಡಿದೆ ಎಂದು ಕಾಲೇಜು ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

- Advertisement -
- Advertisement -

ತುಮಕೂರಿನಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ಉತ್ಪತ್ತಿಯಾಗುವ ಅವಶೇಷಗಳನ್ನು ತಂದು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸುರಿಯಲಾಗುತ್ತಿದ್ದು, ಇದರಿಂದ ಮೈದಾನ ಕಸದ ತೊಟ್ಟಿಯಾಗಿ ಪರಿವರ್ತನೆಯಾಗಿದೆ. ನಿತ್ಯವೂ ಹತ್ತಾರು ಲೋಡುಗಟ್ಟಲೆ ಅವಶೇಷ ಸುರಿಯುತ್ತಿರುವುದರಿಂದ ಮಕ್ಕಳ ಆಟಕ್ಕೆ ಮತ್ತು ಮುಂಜಾನೆ ವಾಯು ವಿಹಾರಕ್ಕೆ ಬರುವವರಿಗೆ ತೊಂದರೆಯಾಗಿದೆ ಎಂದು ನಾಗರಿಕರು ದೂರಿದ್ದಾರೆ.

ಸರ್ಕಾರಿ ಜೂನಿಯರ್ ಕಾಲೇಜು ಮೈದಾನದ ಪೂರ್ವಭಾಗದಲ್ಲಿ ಮೈದಾನ ಒತ್ತುವರಿ ಮಾಡಿ ರಸ್ತೆ ನಿರ್ಮಾಣ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಕಾಮಗಾರಿ ಮಾಡಬಾರದೆಂಬ ನಿಯಮವಿದೆ. ಹಸಿರು ಪೀಠ ಮತ್ತು ಹೈಕೋರ್ಟ್ ಆದೇಶಗಳ ನಿಯಮಗಳು ಇವೆ. ಆದರೆ ಇದೆಲ್ಲವನ್ನೂ ಉಲ್ಲಂಘಿಸಿ ಮೈದಾನದಲ್ಲಿ ಕಸ ಮತ್ತು ಚರಂಡಿ, ರಸ್ತೆ ನಿರ್ಮಾಣ ಕಾಮಗಾರಿಯ ಅವಶೇಷಗಳನ್ನು ತಂದು ಸುರಿಯುತ್ತಿರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಮೈದಾನದ ಪೂರ್ವ ಭಾಗದಲ್ಲಿ ಖೋಖೋ, ಟೆನ್ನಿಸ್ ಕೋರ್ಟ್‌‌ಗಳನ್ನು ನಿರ್ಮಾಣ ಮಾಡಿದ್ದು ಅಲ್ಲಿ ನಿತ್ಯವೂ ನೂರಾರು ಮಂದಿ ಆಟವಾಡುತ್ತಿದ್ದರು. ಟೆನ್ನಿಸ್ ಮತ್ತು ಖೋಖೋ ತರಬೇತಿ ಪಡೆಯುತ್ತಿದ್ದರು. ಮೈದಾನದ ಅಂಚಿನದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ 90 ಲಕ್ಷ ರೂಪಾಯಿ ವೆಚ್ಚದಲ್ಲಿ ವಾಕಿಂಗ್ ಪಾಥ್ ನಿರ್ಮಾಣ ಮಾಡಿದೆ. ಈಗ ಮಣ್ಣು ಮತ್ತು ಅವಶೇಷಗಳನ್ನು ಸುರಿದಿರುವುದರಿಂದ ವಾಕಿಂಗ್ ಪಾತ್, ಟಿನ್ನಿಸ್, ಖೋಖೋ ಕೋರ್ಟ್ ಗಳು ಸಂಪೂರ್ಣ ಮುಚ್ಚಿ ಹೋಗಿವೆ.

ರಸ್ತೆ, ಚರಂಡಿ ಕಾಮಗಾರಿಯ ಅವಶೇಷಗಳನ್ನು ಬೇರೆ ಕಡೆ ಸಾಗಿಸಬೇಕು. ಅದು ಕಾಮಗಾರಿ ಗುತ್ತಿಗೆ ಪಡೆದವರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಗುತ್ತಿಗೆದಾರರರಿಗೆ ಸಂಸದರು ಮತ್ತು ಶಾಸಕರ ಬೆಂಬಲ ಇದೆ ಎಂಬ ಕಾರಣಕ್ಕೆ ಕಸ, ಮಣ್ಣು, ಕಲ್ಲುಗಳನ್ನು ಸರ್ಕಾರಿ ಜಾಗದಲ್ಲಿ ಸುರಿಯುತ್ತಿರುವುದು ಸರಿಯಲ್ಲ. ಇದು ಸಾರ್ವಜನಿಕ ಸ್ಥಳ. ಇಂತಹ ಕಡೆ ಕಸ ಇತ್ಯಾದಿ ಸುರಿಯಬಾರದು ಎಂಬ ನಿಯಮ ಇದೆ. ಆದರೆ ಇದ್ಯಾವುದನ್ನು ಲೆಕ್ಕಿಸದೆ ಗುತ್ತಿಗೆ ದಾರರು ಅವಶೇಷಗಳನ್ನು ಸುರಿಯುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿ ನಾಗಣ್ಣ ದೂರಿದ್ದಾರೆ.

ಕಾಲೇಜು ಆವರಣದಲ್ಲಿ ಗುತ್ತಿಗೆದಾರರು ಕಸ, ಅವಶೇಷ ಸುರಿಯುತ್ತಿದ್ದರೂ ಕಾಲೇಜು ಪ್ರಾಂಶುಪಾಲರು ಅವರಿಗೆ ಹೇಳಲಾರದಂತಹ ಅಸಹಾಯಕತೆ ಸಿಲುಕಿದ್ದಾರೆ. ಕಾಲೇಜು ಎಸ್ ಡಿ.ಎಂ.ಸಿ ಗೆ ಅಧ್ಯಕ್ಷರಾದ ಶಾಸಕ ಜ್ಯೋತಿ ಗಣೇಶ್ ಹಾಗೂ ಸಂಸದ ಬಸವರಾಜ್ ಈ ಇಬ್ಬರೂ ಗುತ್ತಿಗೆದಾರರ ಬೆಂಬಲಕ್ಕೆ ನಿಂತಿದ್ದಾರೆ. ಇದು ಪ್ರಾಂಶುಪಾಲರ ಉಸಿರುಗಟ್ಟಿಸುವಂತೆ ಮಾಡಿದೆ ಎಂದು ಹೆಸರು ಹೇಳಲು ಇಚ್ಚಿಸದ ಸಿಬ್ಬಂದಿಯೊಬ್ಬರು ನಾನುಗೌರಿ.ಕಾಮ್‌ಗೆ ತಿಳಿಸಿದ್ದಾರೆ.

ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದರು ಮತ್ತು ಶಾಸಕರೇ ಗುತ್ತಿಗೆದಾರರಿಗೆ ಬೆಂಬಲ ನೀಡಿರುವುದು ಸಾರ್ವಜನಿಕರು ಬಹಿರಂಗವಾಗಿ ಪ್ರಶ್ನಿಸಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ಶಾಸಕ ಸಂಸದರ ಮೌನ ಸಮ್ಮತಿಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ. ಅವಶೇಷ ಸುರಿಯುತ್ತಿರುವುದರಿಂದ ಆಟವಾಡಲು ಮತ್ತು ವಾಕಿಂಗ್‌ಗೂ ತೊಂದರೆಯಾಗಿದೆ ಎಂದು ನಾಗರಿಕರು ಆರೋಪಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಬೇರೆ ಚಟುವಟಿಕೆಗಳನ್ನು ಮಾಡಬಾರದೆಂಬ ನಿಯಮವಿದೆ. ಇದಕ್ಕೆ ವಿರುದ್ದವಾಗಿ ಇಲ್ಲಿ ಚಟುವಟಿಕೆಗಳು ನಡೆಯುತ್ತಿವೆ. ನಗರದ ಹೃದಯ ಭಾಗದಲ್ಲಿರುವ ಮೈದಾನ ನಿಧಾನವಾಗಿ ಕಡಿಮೆ ಆಗುತ್ತಿದೆ. ಸಾರ್ವಜನಿಕ ಆಸ್ತಿಯನ್ನು ರಕ್ಷಿಸ ಬೇಕಾದವರೇ ಹೀಗೆ ಜವಾಬ್ದಾರಿ ಮರೆತು ನಡೆದು ಕೊಂಡರೆ ನಾವೇನು ಮಾಡಬೇಕು ಎಂದು ಜನತೆ ಪ್ರಶ್ನಿಸಿದ್ದಾರೆ.


ಓದಿ: ಸಬ್ ಜೈಲಿನಲ್ಲಿ ಒಂದು ದಿನ ಕಳೆದ ಕೊರೊನಾ ಸೋಂಕಿತ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...