Homeಕರ್ನಾಟಕಗುತ್ತಿಗೆದಾರರಿಂದ ಕಸದ ತೊಟ್ಟಿಯಾಗಿದೆ ಕಾಲೇಜು ಮೈದಾನ; ಸಂಸದ-ಶಾಸಕರ ಬೆಂಬಲ

ಗುತ್ತಿಗೆದಾರರಿಂದ ಕಸದ ತೊಟ್ಟಿಯಾಗಿದೆ ಕಾಲೇಜು ಮೈದಾನ; ಸಂಸದ-ಶಾಸಕರ ಬೆಂಬಲ

ಸಂಸದರು ಹಾಗೂ ಶಾಸಕರು ಗುತ್ತಿಗೆದಾರರ ಬೆಂಬಲಕ್ಕೆ ನಿಂತಿದ್ದಾರೆ. ಇದು ಪ್ರಾಂಶುಪಾಲರ ಉಸಿರುಗಟ್ಟಿಸುವಂತೆ ಮಾಡಿದೆ ಎಂದು ಕಾಲೇಜು ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

- Advertisement -
- Advertisement -

ತುಮಕೂರಿನಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ಉತ್ಪತ್ತಿಯಾಗುವ ಅವಶೇಷಗಳನ್ನು ತಂದು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸುರಿಯಲಾಗುತ್ತಿದ್ದು, ಇದರಿಂದ ಮೈದಾನ ಕಸದ ತೊಟ್ಟಿಯಾಗಿ ಪರಿವರ್ತನೆಯಾಗಿದೆ. ನಿತ್ಯವೂ ಹತ್ತಾರು ಲೋಡುಗಟ್ಟಲೆ ಅವಶೇಷ ಸುರಿಯುತ್ತಿರುವುದರಿಂದ ಮಕ್ಕಳ ಆಟಕ್ಕೆ ಮತ್ತು ಮುಂಜಾನೆ ವಾಯು ವಿಹಾರಕ್ಕೆ ಬರುವವರಿಗೆ ತೊಂದರೆಯಾಗಿದೆ ಎಂದು ನಾಗರಿಕರು ದೂರಿದ್ದಾರೆ.

ಸರ್ಕಾರಿ ಜೂನಿಯರ್ ಕಾಲೇಜು ಮೈದಾನದ ಪೂರ್ವಭಾಗದಲ್ಲಿ ಮೈದಾನ ಒತ್ತುವರಿ ಮಾಡಿ ರಸ್ತೆ ನಿರ್ಮಾಣ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಕಾಮಗಾರಿ ಮಾಡಬಾರದೆಂಬ ನಿಯಮವಿದೆ. ಹಸಿರು ಪೀಠ ಮತ್ತು ಹೈಕೋರ್ಟ್ ಆದೇಶಗಳ ನಿಯಮಗಳು ಇವೆ. ಆದರೆ ಇದೆಲ್ಲವನ್ನೂ ಉಲ್ಲಂಘಿಸಿ ಮೈದಾನದಲ್ಲಿ ಕಸ ಮತ್ತು ಚರಂಡಿ, ರಸ್ತೆ ನಿರ್ಮಾಣ ಕಾಮಗಾರಿಯ ಅವಶೇಷಗಳನ್ನು ತಂದು ಸುರಿಯುತ್ತಿರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಮೈದಾನದ ಪೂರ್ವ ಭಾಗದಲ್ಲಿ ಖೋಖೋ, ಟೆನ್ನಿಸ್ ಕೋರ್ಟ್‌‌ಗಳನ್ನು ನಿರ್ಮಾಣ ಮಾಡಿದ್ದು ಅಲ್ಲಿ ನಿತ್ಯವೂ ನೂರಾರು ಮಂದಿ ಆಟವಾಡುತ್ತಿದ್ದರು. ಟೆನ್ನಿಸ್ ಮತ್ತು ಖೋಖೋ ತರಬೇತಿ ಪಡೆಯುತ್ತಿದ್ದರು. ಮೈದಾನದ ಅಂಚಿನದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ 90 ಲಕ್ಷ ರೂಪಾಯಿ ವೆಚ್ಚದಲ್ಲಿ ವಾಕಿಂಗ್ ಪಾಥ್ ನಿರ್ಮಾಣ ಮಾಡಿದೆ. ಈಗ ಮಣ್ಣು ಮತ್ತು ಅವಶೇಷಗಳನ್ನು ಸುರಿದಿರುವುದರಿಂದ ವಾಕಿಂಗ್ ಪಾತ್, ಟಿನ್ನಿಸ್, ಖೋಖೋ ಕೋರ್ಟ್ ಗಳು ಸಂಪೂರ್ಣ ಮುಚ್ಚಿ ಹೋಗಿವೆ.

ರಸ್ತೆ, ಚರಂಡಿ ಕಾಮಗಾರಿಯ ಅವಶೇಷಗಳನ್ನು ಬೇರೆ ಕಡೆ ಸಾಗಿಸಬೇಕು. ಅದು ಕಾಮಗಾರಿ ಗುತ್ತಿಗೆ ಪಡೆದವರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಗುತ್ತಿಗೆದಾರರರಿಗೆ ಸಂಸದರು ಮತ್ತು ಶಾಸಕರ ಬೆಂಬಲ ಇದೆ ಎಂಬ ಕಾರಣಕ್ಕೆ ಕಸ, ಮಣ್ಣು, ಕಲ್ಲುಗಳನ್ನು ಸರ್ಕಾರಿ ಜಾಗದಲ್ಲಿ ಸುರಿಯುತ್ತಿರುವುದು ಸರಿಯಲ್ಲ. ಇದು ಸಾರ್ವಜನಿಕ ಸ್ಥಳ. ಇಂತಹ ಕಡೆ ಕಸ ಇತ್ಯಾದಿ ಸುರಿಯಬಾರದು ಎಂಬ ನಿಯಮ ಇದೆ. ಆದರೆ ಇದ್ಯಾವುದನ್ನು ಲೆಕ್ಕಿಸದೆ ಗುತ್ತಿಗೆ ದಾರರು ಅವಶೇಷಗಳನ್ನು ಸುರಿಯುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿ ನಾಗಣ್ಣ ದೂರಿದ್ದಾರೆ.

ಕಾಲೇಜು ಆವರಣದಲ್ಲಿ ಗುತ್ತಿಗೆದಾರರು ಕಸ, ಅವಶೇಷ ಸುರಿಯುತ್ತಿದ್ದರೂ ಕಾಲೇಜು ಪ್ರಾಂಶುಪಾಲರು ಅವರಿಗೆ ಹೇಳಲಾರದಂತಹ ಅಸಹಾಯಕತೆ ಸಿಲುಕಿದ್ದಾರೆ. ಕಾಲೇಜು ಎಸ್ ಡಿ.ಎಂ.ಸಿ ಗೆ ಅಧ್ಯಕ್ಷರಾದ ಶಾಸಕ ಜ್ಯೋತಿ ಗಣೇಶ್ ಹಾಗೂ ಸಂಸದ ಬಸವರಾಜ್ ಈ ಇಬ್ಬರೂ ಗುತ್ತಿಗೆದಾರರ ಬೆಂಬಲಕ್ಕೆ ನಿಂತಿದ್ದಾರೆ. ಇದು ಪ್ರಾಂಶುಪಾಲರ ಉಸಿರುಗಟ್ಟಿಸುವಂತೆ ಮಾಡಿದೆ ಎಂದು ಹೆಸರು ಹೇಳಲು ಇಚ್ಚಿಸದ ಸಿಬ್ಬಂದಿಯೊಬ್ಬರು ನಾನುಗೌರಿ.ಕಾಮ್‌ಗೆ ತಿಳಿಸಿದ್ದಾರೆ.

ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದರು ಮತ್ತು ಶಾಸಕರೇ ಗುತ್ತಿಗೆದಾರರಿಗೆ ಬೆಂಬಲ ನೀಡಿರುವುದು ಸಾರ್ವಜನಿಕರು ಬಹಿರಂಗವಾಗಿ ಪ್ರಶ್ನಿಸಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ಶಾಸಕ ಸಂಸದರ ಮೌನ ಸಮ್ಮತಿಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ. ಅವಶೇಷ ಸುರಿಯುತ್ತಿರುವುದರಿಂದ ಆಟವಾಡಲು ಮತ್ತು ವಾಕಿಂಗ್‌ಗೂ ತೊಂದರೆಯಾಗಿದೆ ಎಂದು ನಾಗರಿಕರು ಆರೋಪಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಬೇರೆ ಚಟುವಟಿಕೆಗಳನ್ನು ಮಾಡಬಾರದೆಂಬ ನಿಯಮವಿದೆ. ಇದಕ್ಕೆ ವಿರುದ್ದವಾಗಿ ಇಲ್ಲಿ ಚಟುವಟಿಕೆಗಳು ನಡೆಯುತ್ತಿವೆ. ನಗರದ ಹೃದಯ ಭಾಗದಲ್ಲಿರುವ ಮೈದಾನ ನಿಧಾನವಾಗಿ ಕಡಿಮೆ ಆಗುತ್ತಿದೆ. ಸಾರ್ವಜನಿಕ ಆಸ್ತಿಯನ್ನು ರಕ್ಷಿಸ ಬೇಕಾದವರೇ ಹೀಗೆ ಜವಾಬ್ದಾರಿ ಮರೆತು ನಡೆದು ಕೊಂಡರೆ ನಾವೇನು ಮಾಡಬೇಕು ಎಂದು ಜನತೆ ಪ್ರಶ್ನಿಸಿದ್ದಾರೆ.


ಓದಿ: ಸಬ್ ಜೈಲಿನಲ್ಲಿ ಒಂದು ದಿನ ಕಳೆದ ಕೊರೊನಾ ಸೋಂಕಿತ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...