Homeಕರ್ನಾಟಕಗುತ್ತಿಗೆದಾರರಿಂದ ಕಸದ ತೊಟ್ಟಿಯಾಗಿದೆ ಕಾಲೇಜು ಮೈದಾನ; ಸಂಸದ-ಶಾಸಕರ ಬೆಂಬಲ

ಗುತ್ತಿಗೆದಾರರಿಂದ ಕಸದ ತೊಟ್ಟಿಯಾಗಿದೆ ಕಾಲೇಜು ಮೈದಾನ; ಸಂಸದ-ಶಾಸಕರ ಬೆಂಬಲ

ಸಂಸದರು ಹಾಗೂ ಶಾಸಕರು ಗುತ್ತಿಗೆದಾರರ ಬೆಂಬಲಕ್ಕೆ ನಿಂತಿದ್ದಾರೆ. ಇದು ಪ್ರಾಂಶುಪಾಲರ ಉಸಿರುಗಟ್ಟಿಸುವಂತೆ ಮಾಡಿದೆ ಎಂದು ಕಾಲೇಜು ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

- Advertisement -
- Advertisement -

ತುಮಕೂರಿನಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ಉತ್ಪತ್ತಿಯಾಗುವ ಅವಶೇಷಗಳನ್ನು ತಂದು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸುರಿಯಲಾಗುತ್ತಿದ್ದು, ಇದರಿಂದ ಮೈದಾನ ಕಸದ ತೊಟ್ಟಿಯಾಗಿ ಪರಿವರ್ತನೆಯಾಗಿದೆ. ನಿತ್ಯವೂ ಹತ್ತಾರು ಲೋಡುಗಟ್ಟಲೆ ಅವಶೇಷ ಸುರಿಯುತ್ತಿರುವುದರಿಂದ ಮಕ್ಕಳ ಆಟಕ್ಕೆ ಮತ್ತು ಮುಂಜಾನೆ ವಾಯು ವಿಹಾರಕ್ಕೆ ಬರುವವರಿಗೆ ತೊಂದರೆಯಾಗಿದೆ ಎಂದು ನಾಗರಿಕರು ದೂರಿದ್ದಾರೆ.

ಸರ್ಕಾರಿ ಜೂನಿಯರ್ ಕಾಲೇಜು ಮೈದಾನದ ಪೂರ್ವಭಾಗದಲ್ಲಿ ಮೈದಾನ ಒತ್ತುವರಿ ಮಾಡಿ ರಸ್ತೆ ನಿರ್ಮಾಣ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಕಾಮಗಾರಿ ಮಾಡಬಾರದೆಂಬ ನಿಯಮವಿದೆ. ಹಸಿರು ಪೀಠ ಮತ್ತು ಹೈಕೋರ್ಟ್ ಆದೇಶಗಳ ನಿಯಮಗಳು ಇವೆ. ಆದರೆ ಇದೆಲ್ಲವನ್ನೂ ಉಲ್ಲಂಘಿಸಿ ಮೈದಾನದಲ್ಲಿ ಕಸ ಮತ್ತು ಚರಂಡಿ, ರಸ್ತೆ ನಿರ್ಮಾಣ ಕಾಮಗಾರಿಯ ಅವಶೇಷಗಳನ್ನು ತಂದು ಸುರಿಯುತ್ತಿರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಮೈದಾನದ ಪೂರ್ವ ಭಾಗದಲ್ಲಿ ಖೋಖೋ, ಟೆನ್ನಿಸ್ ಕೋರ್ಟ್‌‌ಗಳನ್ನು ನಿರ್ಮಾಣ ಮಾಡಿದ್ದು ಅಲ್ಲಿ ನಿತ್ಯವೂ ನೂರಾರು ಮಂದಿ ಆಟವಾಡುತ್ತಿದ್ದರು. ಟೆನ್ನಿಸ್ ಮತ್ತು ಖೋಖೋ ತರಬೇತಿ ಪಡೆಯುತ್ತಿದ್ದರು. ಮೈದಾನದ ಅಂಚಿನದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ 90 ಲಕ್ಷ ರೂಪಾಯಿ ವೆಚ್ಚದಲ್ಲಿ ವಾಕಿಂಗ್ ಪಾಥ್ ನಿರ್ಮಾಣ ಮಾಡಿದೆ. ಈಗ ಮಣ್ಣು ಮತ್ತು ಅವಶೇಷಗಳನ್ನು ಸುರಿದಿರುವುದರಿಂದ ವಾಕಿಂಗ್ ಪಾತ್, ಟಿನ್ನಿಸ್, ಖೋಖೋ ಕೋರ್ಟ್ ಗಳು ಸಂಪೂರ್ಣ ಮುಚ್ಚಿ ಹೋಗಿವೆ.

ರಸ್ತೆ, ಚರಂಡಿ ಕಾಮಗಾರಿಯ ಅವಶೇಷಗಳನ್ನು ಬೇರೆ ಕಡೆ ಸಾಗಿಸಬೇಕು. ಅದು ಕಾಮಗಾರಿ ಗುತ್ತಿಗೆ ಪಡೆದವರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಗುತ್ತಿಗೆದಾರರರಿಗೆ ಸಂಸದರು ಮತ್ತು ಶಾಸಕರ ಬೆಂಬಲ ಇದೆ ಎಂಬ ಕಾರಣಕ್ಕೆ ಕಸ, ಮಣ್ಣು, ಕಲ್ಲುಗಳನ್ನು ಸರ್ಕಾರಿ ಜಾಗದಲ್ಲಿ ಸುರಿಯುತ್ತಿರುವುದು ಸರಿಯಲ್ಲ. ಇದು ಸಾರ್ವಜನಿಕ ಸ್ಥಳ. ಇಂತಹ ಕಡೆ ಕಸ ಇತ್ಯಾದಿ ಸುರಿಯಬಾರದು ಎಂಬ ನಿಯಮ ಇದೆ. ಆದರೆ ಇದ್ಯಾವುದನ್ನು ಲೆಕ್ಕಿಸದೆ ಗುತ್ತಿಗೆ ದಾರರು ಅವಶೇಷಗಳನ್ನು ಸುರಿಯುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿ ನಾಗಣ್ಣ ದೂರಿದ್ದಾರೆ.

ಕಾಲೇಜು ಆವರಣದಲ್ಲಿ ಗುತ್ತಿಗೆದಾರರು ಕಸ, ಅವಶೇಷ ಸುರಿಯುತ್ತಿದ್ದರೂ ಕಾಲೇಜು ಪ್ರಾಂಶುಪಾಲರು ಅವರಿಗೆ ಹೇಳಲಾರದಂತಹ ಅಸಹಾಯಕತೆ ಸಿಲುಕಿದ್ದಾರೆ. ಕಾಲೇಜು ಎಸ್ ಡಿ.ಎಂ.ಸಿ ಗೆ ಅಧ್ಯಕ್ಷರಾದ ಶಾಸಕ ಜ್ಯೋತಿ ಗಣೇಶ್ ಹಾಗೂ ಸಂಸದ ಬಸವರಾಜ್ ಈ ಇಬ್ಬರೂ ಗುತ್ತಿಗೆದಾರರ ಬೆಂಬಲಕ್ಕೆ ನಿಂತಿದ್ದಾರೆ. ಇದು ಪ್ರಾಂಶುಪಾಲರ ಉಸಿರುಗಟ್ಟಿಸುವಂತೆ ಮಾಡಿದೆ ಎಂದು ಹೆಸರು ಹೇಳಲು ಇಚ್ಚಿಸದ ಸಿಬ್ಬಂದಿಯೊಬ್ಬರು ನಾನುಗೌರಿ.ಕಾಮ್‌ಗೆ ತಿಳಿಸಿದ್ದಾರೆ.

ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದರು ಮತ್ತು ಶಾಸಕರೇ ಗುತ್ತಿಗೆದಾರರಿಗೆ ಬೆಂಬಲ ನೀಡಿರುವುದು ಸಾರ್ವಜನಿಕರು ಬಹಿರಂಗವಾಗಿ ಪ್ರಶ್ನಿಸಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ಶಾಸಕ ಸಂಸದರ ಮೌನ ಸಮ್ಮತಿಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ. ಅವಶೇಷ ಸುರಿಯುತ್ತಿರುವುದರಿಂದ ಆಟವಾಡಲು ಮತ್ತು ವಾಕಿಂಗ್‌ಗೂ ತೊಂದರೆಯಾಗಿದೆ ಎಂದು ನಾಗರಿಕರು ಆರೋಪಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಬೇರೆ ಚಟುವಟಿಕೆಗಳನ್ನು ಮಾಡಬಾರದೆಂಬ ನಿಯಮವಿದೆ. ಇದಕ್ಕೆ ವಿರುದ್ದವಾಗಿ ಇಲ್ಲಿ ಚಟುವಟಿಕೆಗಳು ನಡೆಯುತ್ತಿವೆ. ನಗರದ ಹೃದಯ ಭಾಗದಲ್ಲಿರುವ ಮೈದಾನ ನಿಧಾನವಾಗಿ ಕಡಿಮೆ ಆಗುತ್ತಿದೆ. ಸಾರ್ವಜನಿಕ ಆಸ್ತಿಯನ್ನು ರಕ್ಷಿಸ ಬೇಕಾದವರೇ ಹೀಗೆ ಜವಾಬ್ದಾರಿ ಮರೆತು ನಡೆದು ಕೊಂಡರೆ ನಾವೇನು ಮಾಡಬೇಕು ಎಂದು ಜನತೆ ಪ್ರಶ್ನಿಸಿದ್ದಾರೆ.


ಓದಿ: ಸಬ್ ಜೈಲಿನಲ್ಲಿ ಒಂದು ದಿನ ಕಳೆದ ಕೊರೊನಾ ಸೋಂಕಿತ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...