Homeಅಂಕಣಗಳುಟ್ರಂಪು-ಮೋದಿ ಜೋಡಿ ಜಗತ್ತಿನ ಅವನತಿಯ ಉದ್ಘಾಟಕರಂತೆ ಕಾಣುತ್ತಿದ್ದಾರಲ್ಲಾ!

ಟ್ರಂಪು-ಮೋದಿ ಜೋಡಿ ಜಗತ್ತಿನ ಅವನತಿಯ ಉದ್ಘಾಟಕರಂತೆ ಕಾಣುತ್ತಿದ್ದಾರಲ್ಲಾ!

- Advertisement -
- Advertisement -

ಭರತಮಾತೆಯ ಹೃದಯ ಭಾಗವಾದ ದೆಹಲಿಯಲ್ಲಿ ಮತ್ತೆ ಕೇಜ್ರಿವಾಲ್ ಕೆನೆದಿರುವುದರಿಂದ ಮೋದಿ ಮತ್ತು ಶಾ ಮುಖಗಳು ಇಂಗು ತಿಂದ ಮಂಗನ ಮುಖಗಳಾಗಿವೆಯಂತಲ್ಲಾ. ಕೇಜ್ರಿವಾಲ್ ಪಠಿಸಿದ್ದು ದೆಹಲಿ ಅಭಿವೃದ್ದಿ ಮಂತ್ರ ಮೋದಿ ಶಾ ಪಠಿಸಿದ್ದು ಮತಾಂಧಮಂತ್ರ. ಅನಾದಿಕಾಲದಿಂದಲೂ ಸುಲ್ತಾನರು ಮತ್ತು ಬ್ರಿಟಿಷರ ಆಳ್ವಿಕೆಯಲ್ಲಿ ನರಳಿದ ದೆಹಲಿ ತುಂಬ ಬಸವಳಿದ ಪ್ರದೇಶ. ಇಂತಹ ಪ್ರದೇಶವನ್ನು ನೆಮ್ಮದಿಯಾಗಿಡುವ ಒಬ್ಬ ನಾಯಕ ಬೇಕಿತ್ತು. ಅವನನ್ನು ದೆಹಲಿ ಪಡೆದಿದೆ ಆದರೆ ಮೋದಿ ಶಾ ದಾಳಿಯಿಂದ ತತ್ತರಿಸಿರುವ ಭಾರತಕ್ಕೂ ಒಬ್ಬ ಕೇಜ್ರಿವಾಲ್ ಬೇಕಾಗಿದೆ. ಆದರೆ ಕೇಜ್ರಿವಾಲ್ ತರಹ ಇರುವ ವ್ಯಕ್ತಿ ಒಬ್ಬನೆ ಅದೇ ಕೇಜ್ರಿವಾಲ್! ಆತ ದೆಹಲಿಯಿಂದ ಹೊರನಡೆದು ನಾಯಕತ್ವ ವಹಿಸಿದ್ದಾದರೆ, ಮೋದಿ ಶಾ ಮುಲಾಜಿಲ್ಲದೆ ಗಟಾರ ಸೇರುವುದು ಗ್ಯಾರಂಟಿಯಂತಲ್ಲಾ ಥೂತ್ತೇರಿ….

ಭಾರತದಿಂದ ಪಾಲು ಪಡೆದ ಕ್ಷಣದಿಂದಲೂ ತಲೆ ಕೆಟ್ಟಂತೆ, ಮತಾಂಧರಾಗಿ ಗಡಿಭಾಗದ ತಂಟೆಕೋರರಾಗಿ, ಈ ಏಳುದಶಕಗಳೂ ಹುಚ್ಚಾಸ್ಪತ್ರೆ ಸೇರುವಂತಾಗಿರುವ ಪಾಕಿಸ್ತಾನ ಈಗ ಭಾರತದ ಪ್ರಜೆಗಳೂ ಜೈಲು ಸೇರುವಂತೆ ಮಾಡುತ್ತಿದೆಯಲ್ಲಾ. ವಿಷಯ ಇಷ್ಟೇ, ಇತ್ತೀಚೆಗೆ ಭಾರತದಲ್ಲಿ ಉದ್ಭವಿಸಿರುವ ದೇಶಭಕ್ತರಿಗೆ ಪಾಕಿಸ್ತಾನ ಎಂದಕೂಡಲೇ ಮೈಮೇಲೆ ಗಣಬಂದಂತಾಡುತ್ತವೆ. ಅಂತಹ ದೇಶಭಕ್ತಿ ಕೆರಳಿಸಲೆಂದೇ ಪಾಕೀಸ್ತಾನ್ ಜಿಂದಾಬಾದ್ ಎಂದು ಕೂಗಿದ ಹುಡುಗರು ಜೈಲು ಸೇರುತ್ತಿವೆ. ವಾಘಾ ಗಡಿಯಲ್ಲಿ ಈ ಕಡೆಯಿಂದ ಭಾರತಮಾತಾಕಿ ಜೈ ಎಂದರೆ, ಆ ಕಡೆಯಿಂದ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಮೊಳಗಿಸುತ್ತ ಸಂಜೆಯಾಗುತ್ತದೆ. ಅಂತಹ ದೇಶದ ಪರ ಘೋಷಣೆ ಕೂಗುವುದು ಅಪರಾಧವಾದರೆ ನಮ್ಮ ಜಡ್ಜ್‍ಗಳು ತಿಳುವಳಿಕೆ ಹೇಳಿ ಕಳುಹಿಸಬಹುದು. ಅದು ಬಿಟ್ಟು ಹೆಣ್ಣುಮಕ್ಕಳನ್ನ 14 ದಿನ ಜೈಲಿಗಾಕುವುದು ಎಷ್ಟು ಸರಿ ಎಂಬುದು ಸಾಮಾನ್ಯನ ಪ್ರಶ್ನೆಯಾಗಿದೆಯಲ್ಲಾ, ಥೂತ್ತೇರಿ…

ಫಲಭರಿತವಾಗಿ ಕಂಗೊಳಿಸಿದ್ದ ತೋಟ ಹಾಳಾಗುವ ಸಮಯಕ್ಕೆ ಮಂಗನ ಮುಸುಡಿ ಕಾಯಿ ಕಾಣಿಸಿಕೊಳ್ಳುತ್ತದಂತೆ. ಹಾಗೆಯೇ ಭಾರತದ ಉದ್ದಗಲಕ್ಕೆ ಕಾಣಿಸಿಕೊಳ್ಳುತ್ತಿರುವ ಈ ಅನಿಷ್ಟ ಕಾಯಿಗಳಾವುವೆಂದು ವಿವರಿಸಿ ಹೇಳಬೇಕಿಲ್ಲ. ಇಂತಹ ತೋಟಕ್ಕೆ ಇನ್ನೊಂದು ಮುಸುಡಿ ಲಗ್ಗೆ ಹಾಕಿ ಅಹಮದಾಬಾದಿನಲ್ಲಿ ಭಾಷಣ ಬಿಗಿಯುತ್ತಿರ ಬೇಕಾದರೆ, ಜನಗಳು ಲಾಠಿ ಚಾರ್ಜಿಗೆ ತುತ್ತಾದವರಂತೆ ಚದುರಿ ಹೋದರಂತಲ್ಲಾ. ನಿಜಕ್ಕೂ ಭೀಕರ ಭಾಷಣಕ್ಕೆ ಇದಕ್ಕಿಂತ ಪ್ರತಿಕ್ರಿಯೆ ಇನ್ನೊಂದಿರಲಾರದು. ಆದರೆ ಬಿ.ಜೆ.ಪಿ.ಗಳ ಪ್ರಕಾರ ಇದು ಕಾಂಗೈನ ಸಂಚು. ಸಭೆಯ ಮಧ್ಯದಲ್ಲೇ ಎದ್ದುಹೋಗಿ ಮೋದಿ ಟ್ರಂಪ್‍ಗೆ ಅವಮಾನ ಮಾಡಲೆಂದೇ ಕಾಂಗೈಗಳು ನುಸುಳಿಬಂದಿದ್ದವಂತೆ. ಸುದೈವಕ್ಕೆ ಇಂತಹ ಸಭಾಕಿಡಿಗೇಡಿಗಳು ಪಾಕೀಸ್ತಾನದಿಂದ ಬಂದಿದ್ದರು ಎಂದಿಲ್ಲವಲ್ಲಾ. ಥೂತ್ತೇರಿ…

ಭಾರತಕ್ಕೆ ಬಂದ ಟ್ರಂಪ್ ಸಾಬರಮತಿ ಆಶ್ರಮಕ್ಕೂ ಭೇಟಿ ನೀಡಿದರು. ಗಾಂಧಿ ಕೊಂದವರ ಪಾರ್ಟಿಯ ಪ್ರಧಾನಿಯಾದ ಮೋದಿ ಮಹಾತ್ಮರು ಟ್ರಂಪ್‍ಗೆ ಗಾಂಧಿ ಪರಿಚಯ ಮಾಡಿಕೊಡುವ ಜವಾಬ್ದಾರಿ ಬಂದಾಗ, “ನೋಡಿ ಟ್ರಂಪ್ ಇದು ಗಾಂಧಿ ಕಟ್ಟಿದ ಆಶ್ರಮ. ಅವರ ಬಗ್ಗೆ ನಿಮ್ಮ ಮಾರ್ಟಿನ್ ಲೂಥರ್ ಕಿಂಗ್ ಏನೇಳಿದಾರೆ ಅಂದ್ರೆ, `ಗಾಂಧಿ ಈ ಜಗತ್ತಿನ ಜೀವಸತ್ವ ಅವರಿಲ್ಲದೆ ಜಗತ್ತು ಉಳಿಯದು’ ಎಂದಿದ್ದಾರೆ. ಆದರೆ ನಮ್ಮ ಬಿ.ಜೆ.ಪಿ ಜನ ಅದು ಹೇಗೆ ಉಳಿಯಲ್ಲವೋ ನೋಡೋಣ ಎಂದು ಈಗಾಗಲೇ ಗಾಂಧಿ ಕೊಂದವನಿಗೆ ಗುಡಿ ಕಟ್ಟಿದ್ದಾರೆ. ಹಲವು ಜಾಗದಲ್ಲಿದ್ದ ಗಾಂಧಿ ಪ್ರತಿಮೆ ದ್ವಂಸ ಮಾಡಿದ್ದಾರೆ. ನಾನೇ ಉದ್ಘಾಟಿಸಿದ ಗಾಂಧಿ ಪ್ರತಿಮೆ ವಿರೂಪಗೊಳಿಸಿದ್ದಾರೆ. ಏನು ಮಾಡಿದರೂ ಈ ಗಾಂಧಿ ಹೆಸರನ್ನ ಅಳಿಸಿ, ಅಲ್ಲಿಗೆ ನಮ್ಮ ವೀರಸಾರ್ಕರ್‍ನನ್ನ ಸ್ಥಾಪಿಸಲಾಗುತ್ತಿಲ್ಲ” ಎನ್ನಲಾಗದೆ ಪರಿತಪಿಸಿದರಂತಲ್ಲಾ, ಥೂತ್ತೇರಿ…

ಟ್ರಂಪು ಮತ್ತು ಮೋದಿ ಸೇರಿಕೊಂಡು ಪ್ರಪಂಚದಲ್ಲೇ ಬಲಿಷ್ಟ ರಾಷ್ಟ್ರಗಳನ್ನು ನಿರ್ಮಾಣ ಮಾಡಿಕೊಂಡು, ಸುಂದರವಾಗಿ ಬದುಕುವ ಸುಳ್ಳುಗಳನ್ನು ಹೇಳುತ್ತಿರುವ ಸಮಯಕ್ಕೆ ಸರಿಯಾಗಿ, ಮಲೆನಾಡಿನ ಕಡೆಯಿಂದ ಬಂದ ಸುದ್ದಿಯೊಂದು ಅಘಾತ ನೀಡಿದೆಯಲ್ಲಾ. ಏನೆಂದರೆ ನಮ್ಮ ಜನ ದಿನನಿತ್ಯವು ಸೇವಿಸುವ ಅನ್ನದಂತಹ ಆಹಾರವಾದ ಅಡಿಕೆ ಬೆಳೆಯನ್ನ ಕಾಪಾಡಲು ಹೊಡೆದ ವಿಷಯುಕ್ತ ಔಷಧಿಯ ಪರಿಣಾಮವಾಗಿ ಜೇನುಹುಳು ಸತ್ತು ಉದುರುತ್ತಿವೆ. ಈ ಜಗತ್ತು ಹೃದಯ ವಿದ್ರಾವಕವಾಗಿ ನಿರ್ಗಮಿಸುವುದು ಜೇನುಹುಳದ ನಿರ್ಗಮನದ ನಂತರ. ಅಂದರೆ ಈಗಾಗಲೇ ಜೇನಿನ ನಿರ್ಗಮನ ಆರಂಭವಾಗಿದೆ. ಇದೇ ಔಷಧಿ ದೆಸೆಯಿಂದ ಚಿಟ್ಟೆಗಳ ವಂಶ ನಿರ್ವಂಶವಾಗುವತ್ತ ಸಾಗುತ್ತಿದೆ. ಟ್ರಂಪು ಮತ್ತು ಮೋದಿ ಜೋಡಿ ನೋಡಿದರೆ ಜಗತ್ತಿನ ಅವನತಿಯ ಉದ್ಘಾಟಕರಂತೆ ಕಾಣುತ್ತಿದ್ದಾರಲ್ಲಾ, ಥೂತ್ತೇರಿ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...