Homeಅಂಕಣಗಳುಟ್ರಂಪು-ಮೋದಿ ಜೋಡಿ ಜಗತ್ತಿನ ಅವನತಿಯ ಉದ್ಘಾಟಕರಂತೆ ಕಾಣುತ್ತಿದ್ದಾರಲ್ಲಾ!

ಟ್ರಂಪು-ಮೋದಿ ಜೋಡಿ ಜಗತ್ತಿನ ಅವನತಿಯ ಉದ್ಘಾಟಕರಂತೆ ಕಾಣುತ್ತಿದ್ದಾರಲ್ಲಾ!

- Advertisement -
- Advertisement -

ಭರತಮಾತೆಯ ಹೃದಯ ಭಾಗವಾದ ದೆಹಲಿಯಲ್ಲಿ ಮತ್ತೆ ಕೇಜ್ರಿವಾಲ್ ಕೆನೆದಿರುವುದರಿಂದ ಮೋದಿ ಮತ್ತು ಶಾ ಮುಖಗಳು ಇಂಗು ತಿಂದ ಮಂಗನ ಮುಖಗಳಾಗಿವೆಯಂತಲ್ಲಾ. ಕೇಜ್ರಿವಾಲ್ ಪಠಿಸಿದ್ದು ದೆಹಲಿ ಅಭಿವೃದ್ದಿ ಮಂತ್ರ ಮೋದಿ ಶಾ ಪಠಿಸಿದ್ದು ಮತಾಂಧಮಂತ್ರ. ಅನಾದಿಕಾಲದಿಂದಲೂ ಸುಲ್ತಾನರು ಮತ್ತು ಬ್ರಿಟಿಷರ ಆಳ್ವಿಕೆಯಲ್ಲಿ ನರಳಿದ ದೆಹಲಿ ತುಂಬ ಬಸವಳಿದ ಪ್ರದೇಶ. ಇಂತಹ ಪ್ರದೇಶವನ್ನು ನೆಮ್ಮದಿಯಾಗಿಡುವ ಒಬ್ಬ ನಾಯಕ ಬೇಕಿತ್ತು. ಅವನನ್ನು ದೆಹಲಿ ಪಡೆದಿದೆ ಆದರೆ ಮೋದಿ ಶಾ ದಾಳಿಯಿಂದ ತತ್ತರಿಸಿರುವ ಭಾರತಕ್ಕೂ ಒಬ್ಬ ಕೇಜ್ರಿವಾಲ್ ಬೇಕಾಗಿದೆ. ಆದರೆ ಕೇಜ್ರಿವಾಲ್ ತರಹ ಇರುವ ವ್ಯಕ್ತಿ ಒಬ್ಬನೆ ಅದೇ ಕೇಜ್ರಿವಾಲ್! ಆತ ದೆಹಲಿಯಿಂದ ಹೊರನಡೆದು ನಾಯಕತ್ವ ವಹಿಸಿದ್ದಾದರೆ, ಮೋದಿ ಶಾ ಮುಲಾಜಿಲ್ಲದೆ ಗಟಾರ ಸೇರುವುದು ಗ್ಯಾರಂಟಿಯಂತಲ್ಲಾ ಥೂತ್ತೇರಿ….

ಭಾರತದಿಂದ ಪಾಲು ಪಡೆದ ಕ್ಷಣದಿಂದಲೂ ತಲೆ ಕೆಟ್ಟಂತೆ, ಮತಾಂಧರಾಗಿ ಗಡಿಭಾಗದ ತಂಟೆಕೋರರಾಗಿ, ಈ ಏಳುದಶಕಗಳೂ ಹುಚ್ಚಾಸ್ಪತ್ರೆ ಸೇರುವಂತಾಗಿರುವ ಪಾಕಿಸ್ತಾನ ಈಗ ಭಾರತದ ಪ್ರಜೆಗಳೂ ಜೈಲು ಸೇರುವಂತೆ ಮಾಡುತ್ತಿದೆಯಲ್ಲಾ. ವಿಷಯ ಇಷ್ಟೇ, ಇತ್ತೀಚೆಗೆ ಭಾರತದಲ್ಲಿ ಉದ್ಭವಿಸಿರುವ ದೇಶಭಕ್ತರಿಗೆ ಪಾಕಿಸ್ತಾನ ಎಂದಕೂಡಲೇ ಮೈಮೇಲೆ ಗಣಬಂದಂತಾಡುತ್ತವೆ. ಅಂತಹ ದೇಶಭಕ್ತಿ ಕೆರಳಿಸಲೆಂದೇ ಪಾಕೀಸ್ತಾನ್ ಜಿಂದಾಬಾದ್ ಎಂದು ಕೂಗಿದ ಹುಡುಗರು ಜೈಲು ಸೇರುತ್ತಿವೆ. ವಾಘಾ ಗಡಿಯಲ್ಲಿ ಈ ಕಡೆಯಿಂದ ಭಾರತಮಾತಾಕಿ ಜೈ ಎಂದರೆ, ಆ ಕಡೆಯಿಂದ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಮೊಳಗಿಸುತ್ತ ಸಂಜೆಯಾಗುತ್ತದೆ. ಅಂತಹ ದೇಶದ ಪರ ಘೋಷಣೆ ಕೂಗುವುದು ಅಪರಾಧವಾದರೆ ನಮ್ಮ ಜಡ್ಜ್‍ಗಳು ತಿಳುವಳಿಕೆ ಹೇಳಿ ಕಳುಹಿಸಬಹುದು. ಅದು ಬಿಟ್ಟು ಹೆಣ್ಣುಮಕ್ಕಳನ್ನ 14 ದಿನ ಜೈಲಿಗಾಕುವುದು ಎಷ್ಟು ಸರಿ ಎಂಬುದು ಸಾಮಾನ್ಯನ ಪ್ರಶ್ನೆಯಾಗಿದೆಯಲ್ಲಾ, ಥೂತ್ತೇರಿ…

ಫಲಭರಿತವಾಗಿ ಕಂಗೊಳಿಸಿದ್ದ ತೋಟ ಹಾಳಾಗುವ ಸಮಯಕ್ಕೆ ಮಂಗನ ಮುಸುಡಿ ಕಾಯಿ ಕಾಣಿಸಿಕೊಳ್ಳುತ್ತದಂತೆ. ಹಾಗೆಯೇ ಭಾರತದ ಉದ್ದಗಲಕ್ಕೆ ಕಾಣಿಸಿಕೊಳ್ಳುತ್ತಿರುವ ಈ ಅನಿಷ್ಟ ಕಾಯಿಗಳಾವುವೆಂದು ವಿವರಿಸಿ ಹೇಳಬೇಕಿಲ್ಲ. ಇಂತಹ ತೋಟಕ್ಕೆ ಇನ್ನೊಂದು ಮುಸುಡಿ ಲಗ್ಗೆ ಹಾಕಿ ಅಹಮದಾಬಾದಿನಲ್ಲಿ ಭಾಷಣ ಬಿಗಿಯುತ್ತಿರ ಬೇಕಾದರೆ, ಜನಗಳು ಲಾಠಿ ಚಾರ್ಜಿಗೆ ತುತ್ತಾದವರಂತೆ ಚದುರಿ ಹೋದರಂತಲ್ಲಾ. ನಿಜಕ್ಕೂ ಭೀಕರ ಭಾಷಣಕ್ಕೆ ಇದಕ್ಕಿಂತ ಪ್ರತಿಕ್ರಿಯೆ ಇನ್ನೊಂದಿರಲಾರದು. ಆದರೆ ಬಿ.ಜೆ.ಪಿ.ಗಳ ಪ್ರಕಾರ ಇದು ಕಾಂಗೈನ ಸಂಚು. ಸಭೆಯ ಮಧ್ಯದಲ್ಲೇ ಎದ್ದುಹೋಗಿ ಮೋದಿ ಟ್ರಂಪ್‍ಗೆ ಅವಮಾನ ಮಾಡಲೆಂದೇ ಕಾಂಗೈಗಳು ನುಸುಳಿಬಂದಿದ್ದವಂತೆ. ಸುದೈವಕ್ಕೆ ಇಂತಹ ಸಭಾಕಿಡಿಗೇಡಿಗಳು ಪಾಕೀಸ್ತಾನದಿಂದ ಬಂದಿದ್ದರು ಎಂದಿಲ್ಲವಲ್ಲಾ. ಥೂತ್ತೇರಿ…

ಭಾರತಕ್ಕೆ ಬಂದ ಟ್ರಂಪ್ ಸಾಬರಮತಿ ಆಶ್ರಮಕ್ಕೂ ಭೇಟಿ ನೀಡಿದರು. ಗಾಂಧಿ ಕೊಂದವರ ಪಾರ್ಟಿಯ ಪ್ರಧಾನಿಯಾದ ಮೋದಿ ಮಹಾತ್ಮರು ಟ್ರಂಪ್‍ಗೆ ಗಾಂಧಿ ಪರಿಚಯ ಮಾಡಿಕೊಡುವ ಜವಾಬ್ದಾರಿ ಬಂದಾಗ, “ನೋಡಿ ಟ್ರಂಪ್ ಇದು ಗಾಂಧಿ ಕಟ್ಟಿದ ಆಶ್ರಮ. ಅವರ ಬಗ್ಗೆ ನಿಮ್ಮ ಮಾರ್ಟಿನ್ ಲೂಥರ್ ಕಿಂಗ್ ಏನೇಳಿದಾರೆ ಅಂದ್ರೆ, `ಗಾಂಧಿ ಈ ಜಗತ್ತಿನ ಜೀವಸತ್ವ ಅವರಿಲ್ಲದೆ ಜಗತ್ತು ಉಳಿಯದು’ ಎಂದಿದ್ದಾರೆ. ಆದರೆ ನಮ್ಮ ಬಿ.ಜೆ.ಪಿ ಜನ ಅದು ಹೇಗೆ ಉಳಿಯಲ್ಲವೋ ನೋಡೋಣ ಎಂದು ಈಗಾಗಲೇ ಗಾಂಧಿ ಕೊಂದವನಿಗೆ ಗುಡಿ ಕಟ್ಟಿದ್ದಾರೆ. ಹಲವು ಜಾಗದಲ್ಲಿದ್ದ ಗಾಂಧಿ ಪ್ರತಿಮೆ ದ್ವಂಸ ಮಾಡಿದ್ದಾರೆ. ನಾನೇ ಉದ್ಘಾಟಿಸಿದ ಗಾಂಧಿ ಪ್ರತಿಮೆ ವಿರೂಪಗೊಳಿಸಿದ್ದಾರೆ. ಏನು ಮಾಡಿದರೂ ಈ ಗಾಂಧಿ ಹೆಸರನ್ನ ಅಳಿಸಿ, ಅಲ್ಲಿಗೆ ನಮ್ಮ ವೀರಸಾರ್ಕರ್‍ನನ್ನ ಸ್ಥಾಪಿಸಲಾಗುತ್ತಿಲ್ಲ” ಎನ್ನಲಾಗದೆ ಪರಿತಪಿಸಿದರಂತಲ್ಲಾ, ಥೂತ್ತೇರಿ…

ಟ್ರಂಪು ಮತ್ತು ಮೋದಿ ಸೇರಿಕೊಂಡು ಪ್ರಪಂಚದಲ್ಲೇ ಬಲಿಷ್ಟ ರಾಷ್ಟ್ರಗಳನ್ನು ನಿರ್ಮಾಣ ಮಾಡಿಕೊಂಡು, ಸುಂದರವಾಗಿ ಬದುಕುವ ಸುಳ್ಳುಗಳನ್ನು ಹೇಳುತ್ತಿರುವ ಸಮಯಕ್ಕೆ ಸರಿಯಾಗಿ, ಮಲೆನಾಡಿನ ಕಡೆಯಿಂದ ಬಂದ ಸುದ್ದಿಯೊಂದು ಅಘಾತ ನೀಡಿದೆಯಲ್ಲಾ. ಏನೆಂದರೆ ನಮ್ಮ ಜನ ದಿನನಿತ್ಯವು ಸೇವಿಸುವ ಅನ್ನದಂತಹ ಆಹಾರವಾದ ಅಡಿಕೆ ಬೆಳೆಯನ್ನ ಕಾಪಾಡಲು ಹೊಡೆದ ವಿಷಯುಕ್ತ ಔಷಧಿಯ ಪರಿಣಾಮವಾಗಿ ಜೇನುಹುಳು ಸತ್ತು ಉದುರುತ್ತಿವೆ. ಈ ಜಗತ್ತು ಹೃದಯ ವಿದ್ರಾವಕವಾಗಿ ನಿರ್ಗಮಿಸುವುದು ಜೇನುಹುಳದ ನಿರ್ಗಮನದ ನಂತರ. ಅಂದರೆ ಈಗಾಗಲೇ ಜೇನಿನ ನಿರ್ಗಮನ ಆರಂಭವಾಗಿದೆ. ಇದೇ ಔಷಧಿ ದೆಸೆಯಿಂದ ಚಿಟ್ಟೆಗಳ ವಂಶ ನಿರ್ವಂಶವಾಗುವತ್ತ ಸಾಗುತ್ತಿದೆ. ಟ್ರಂಪು ಮತ್ತು ಮೋದಿ ಜೋಡಿ ನೋಡಿದರೆ ಜಗತ್ತಿನ ಅವನತಿಯ ಉದ್ಘಾಟಕರಂತೆ ಕಾಣುತ್ತಿದ್ದಾರಲ್ಲಾ, ಥೂತ್ತೇರಿ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...