Homeಅಂಕಣಗಳುಟ್ರಂಪು-ಮೋದಿ ಜೋಡಿ ಜಗತ್ತಿನ ಅವನತಿಯ ಉದ್ಘಾಟಕರಂತೆ ಕಾಣುತ್ತಿದ್ದಾರಲ್ಲಾ!

ಟ್ರಂಪು-ಮೋದಿ ಜೋಡಿ ಜಗತ್ತಿನ ಅವನತಿಯ ಉದ್ಘಾಟಕರಂತೆ ಕಾಣುತ್ತಿದ್ದಾರಲ್ಲಾ!

- Advertisement -
- Advertisement -

ಭರತಮಾತೆಯ ಹೃದಯ ಭಾಗವಾದ ದೆಹಲಿಯಲ್ಲಿ ಮತ್ತೆ ಕೇಜ್ರಿವಾಲ್ ಕೆನೆದಿರುವುದರಿಂದ ಮೋದಿ ಮತ್ತು ಶಾ ಮುಖಗಳು ಇಂಗು ತಿಂದ ಮಂಗನ ಮುಖಗಳಾಗಿವೆಯಂತಲ್ಲಾ. ಕೇಜ್ರಿವಾಲ್ ಪಠಿಸಿದ್ದು ದೆಹಲಿ ಅಭಿವೃದ್ದಿ ಮಂತ್ರ ಮೋದಿ ಶಾ ಪಠಿಸಿದ್ದು ಮತಾಂಧಮಂತ್ರ. ಅನಾದಿಕಾಲದಿಂದಲೂ ಸುಲ್ತಾನರು ಮತ್ತು ಬ್ರಿಟಿಷರ ಆಳ್ವಿಕೆಯಲ್ಲಿ ನರಳಿದ ದೆಹಲಿ ತುಂಬ ಬಸವಳಿದ ಪ್ರದೇಶ. ಇಂತಹ ಪ್ರದೇಶವನ್ನು ನೆಮ್ಮದಿಯಾಗಿಡುವ ಒಬ್ಬ ನಾಯಕ ಬೇಕಿತ್ತು. ಅವನನ್ನು ದೆಹಲಿ ಪಡೆದಿದೆ ಆದರೆ ಮೋದಿ ಶಾ ದಾಳಿಯಿಂದ ತತ್ತರಿಸಿರುವ ಭಾರತಕ್ಕೂ ಒಬ್ಬ ಕೇಜ್ರಿವಾಲ್ ಬೇಕಾಗಿದೆ. ಆದರೆ ಕೇಜ್ರಿವಾಲ್ ತರಹ ಇರುವ ವ್ಯಕ್ತಿ ಒಬ್ಬನೆ ಅದೇ ಕೇಜ್ರಿವಾಲ್! ಆತ ದೆಹಲಿಯಿಂದ ಹೊರನಡೆದು ನಾಯಕತ್ವ ವಹಿಸಿದ್ದಾದರೆ, ಮೋದಿ ಶಾ ಮುಲಾಜಿಲ್ಲದೆ ಗಟಾರ ಸೇರುವುದು ಗ್ಯಾರಂಟಿಯಂತಲ್ಲಾ ಥೂತ್ತೇರಿ….

ಭಾರತದಿಂದ ಪಾಲು ಪಡೆದ ಕ್ಷಣದಿಂದಲೂ ತಲೆ ಕೆಟ್ಟಂತೆ, ಮತಾಂಧರಾಗಿ ಗಡಿಭಾಗದ ತಂಟೆಕೋರರಾಗಿ, ಈ ಏಳುದಶಕಗಳೂ ಹುಚ್ಚಾಸ್ಪತ್ರೆ ಸೇರುವಂತಾಗಿರುವ ಪಾಕಿಸ್ತಾನ ಈಗ ಭಾರತದ ಪ್ರಜೆಗಳೂ ಜೈಲು ಸೇರುವಂತೆ ಮಾಡುತ್ತಿದೆಯಲ್ಲಾ. ವಿಷಯ ಇಷ್ಟೇ, ಇತ್ತೀಚೆಗೆ ಭಾರತದಲ್ಲಿ ಉದ್ಭವಿಸಿರುವ ದೇಶಭಕ್ತರಿಗೆ ಪಾಕಿಸ್ತಾನ ಎಂದಕೂಡಲೇ ಮೈಮೇಲೆ ಗಣಬಂದಂತಾಡುತ್ತವೆ. ಅಂತಹ ದೇಶಭಕ್ತಿ ಕೆರಳಿಸಲೆಂದೇ ಪಾಕೀಸ್ತಾನ್ ಜಿಂದಾಬಾದ್ ಎಂದು ಕೂಗಿದ ಹುಡುಗರು ಜೈಲು ಸೇರುತ್ತಿವೆ. ವಾಘಾ ಗಡಿಯಲ್ಲಿ ಈ ಕಡೆಯಿಂದ ಭಾರತಮಾತಾಕಿ ಜೈ ಎಂದರೆ, ಆ ಕಡೆಯಿಂದ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಮೊಳಗಿಸುತ್ತ ಸಂಜೆಯಾಗುತ್ತದೆ. ಅಂತಹ ದೇಶದ ಪರ ಘೋಷಣೆ ಕೂಗುವುದು ಅಪರಾಧವಾದರೆ ನಮ್ಮ ಜಡ್ಜ್‍ಗಳು ತಿಳುವಳಿಕೆ ಹೇಳಿ ಕಳುಹಿಸಬಹುದು. ಅದು ಬಿಟ್ಟು ಹೆಣ್ಣುಮಕ್ಕಳನ್ನ 14 ದಿನ ಜೈಲಿಗಾಕುವುದು ಎಷ್ಟು ಸರಿ ಎಂಬುದು ಸಾಮಾನ್ಯನ ಪ್ರಶ್ನೆಯಾಗಿದೆಯಲ್ಲಾ, ಥೂತ್ತೇರಿ…

ಫಲಭರಿತವಾಗಿ ಕಂಗೊಳಿಸಿದ್ದ ತೋಟ ಹಾಳಾಗುವ ಸಮಯಕ್ಕೆ ಮಂಗನ ಮುಸುಡಿ ಕಾಯಿ ಕಾಣಿಸಿಕೊಳ್ಳುತ್ತದಂತೆ. ಹಾಗೆಯೇ ಭಾರತದ ಉದ್ದಗಲಕ್ಕೆ ಕಾಣಿಸಿಕೊಳ್ಳುತ್ತಿರುವ ಈ ಅನಿಷ್ಟ ಕಾಯಿಗಳಾವುವೆಂದು ವಿವರಿಸಿ ಹೇಳಬೇಕಿಲ್ಲ. ಇಂತಹ ತೋಟಕ್ಕೆ ಇನ್ನೊಂದು ಮುಸುಡಿ ಲಗ್ಗೆ ಹಾಕಿ ಅಹಮದಾಬಾದಿನಲ್ಲಿ ಭಾಷಣ ಬಿಗಿಯುತ್ತಿರ ಬೇಕಾದರೆ, ಜನಗಳು ಲಾಠಿ ಚಾರ್ಜಿಗೆ ತುತ್ತಾದವರಂತೆ ಚದುರಿ ಹೋದರಂತಲ್ಲಾ. ನಿಜಕ್ಕೂ ಭೀಕರ ಭಾಷಣಕ್ಕೆ ಇದಕ್ಕಿಂತ ಪ್ರತಿಕ್ರಿಯೆ ಇನ್ನೊಂದಿರಲಾರದು. ಆದರೆ ಬಿ.ಜೆ.ಪಿ.ಗಳ ಪ್ರಕಾರ ಇದು ಕಾಂಗೈನ ಸಂಚು. ಸಭೆಯ ಮಧ್ಯದಲ್ಲೇ ಎದ್ದುಹೋಗಿ ಮೋದಿ ಟ್ರಂಪ್‍ಗೆ ಅವಮಾನ ಮಾಡಲೆಂದೇ ಕಾಂಗೈಗಳು ನುಸುಳಿಬಂದಿದ್ದವಂತೆ. ಸುದೈವಕ್ಕೆ ಇಂತಹ ಸಭಾಕಿಡಿಗೇಡಿಗಳು ಪಾಕೀಸ್ತಾನದಿಂದ ಬಂದಿದ್ದರು ಎಂದಿಲ್ಲವಲ್ಲಾ. ಥೂತ್ತೇರಿ…

ಭಾರತಕ್ಕೆ ಬಂದ ಟ್ರಂಪ್ ಸಾಬರಮತಿ ಆಶ್ರಮಕ್ಕೂ ಭೇಟಿ ನೀಡಿದರು. ಗಾಂಧಿ ಕೊಂದವರ ಪಾರ್ಟಿಯ ಪ್ರಧಾನಿಯಾದ ಮೋದಿ ಮಹಾತ್ಮರು ಟ್ರಂಪ್‍ಗೆ ಗಾಂಧಿ ಪರಿಚಯ ಮಾಡಿಕೊಡುವ ಜವಾಬ್ದಾರಿ ಬಂದಾಗ, “ನೋಡಿ ಟ್ರಂಪ್ ಇದು ಗಾಂಧಿ ಕಟ್ಟಿದ ಆಶ್ರಮ. ಅವರ ಬಗ್ಗೆ ನಿಮ್ಮ ಮಾರ್ಟಿನ್ ಲೂಥರ್ ಕಿಂಗ್ ಏನೇಳಿದಾರೆ ಅಂದ್ರೆ, `ಗಾಂಧಿ ಈ ಜಗತ್ತಿನ ಜೀವಸತ್ವ ಅವರಿಲ್ಲದೆ ಜಗತ್ತು ಉಳಿಯದು’ ಎಂದಿದ್ದಾರೆ. ಆದರೆ ನಮ್ಮ ಬಿ.ಜೆ.ಪಿ ಜನ ಅದು ಹೇಗೆ ಉಳಿಯಲ್ಲವೋ ನೋಡೋಣ ಎಂದು ಈಗಾಗಲೇ ಗಾಂಧಿ ಕೊಂದವನಿಗೆ ಗುಡಿ ಕಟ್ಟಿದ್ದಾರೆ. ಹಲವು ಜಾಗದಲ್ಲಿದ್ದ ಗಾಂಧಿ ಪ್ರತಿಮೆ ದ್ವಂಸ ಮಾಡಿದ್ದಾರೆ. ನಾನೇ ಉದ್ಘಾಟಿಸಿದ ಗಾಂಧಿ ಪ್ರತಿಮೆ ವಿರೂಪಗೊಳಿಸಿದ್ದಾರೆ. ಏನು ಮಾಡಿದರೂ ಈ ಗಾಂಧಿ ಹೆಸರನ್ನ ಅಳಿಸಿ, ಅಲ್ಲಿಗೆ ನಮ್ಮ ವೀರಸಾರ್ಕರ್‍ನನ್ನ ಸ್ಥಾಪಿಸಲಾಗುತ್ತಿಲ್ಲ” ಎನ್ನಲಾಗದೆ ಪರಿತಪಿಸಿದರಂತಲ್ಲಾ, ಥೂತ್ತೇರಿ…

ಟ್ರಂಪು ಮತ್ತು ಮೋದಿ ಸೇರಿಕೊಂಡು ಪ್ರಪಂಚದಲ್ಲೇ ಬಲಿಷ್ಟ ರಾಷ್ಟ್ರಗಳನ್ನು ನಿರ್ಮಾಣ ಮಾಡಿಕೊಂಡು, ಸುಂದರವಾಗಿ ಬದುಕುವ ಸುಳ್ಳುಗಳನ್ನು ಹೇಳುತ್ತಿರುವ ಸಮಯಕ್ಕೆ ಸರಿಯಾಗಿ, ಮಲೆನಾಡಿನ ಕಡೆಯಿಂದ ಬಂದ ಸುದ್ದಿಯೊಂದು ಅಘಾತ ನೀಡಿದೆಯಲ್ಲಾ. ಏನೆಂದರೆ ನಮ್ಮ ಜನ ದಿನನಿತ್ಯವು ಸೇವಿಸುವ ಅನ್ನದಂತಹ ಆಹಾರವಾದ ಅಡಿಕೆ ಬೆಳೆಯನ್ನ ಕಾಪಾಡಲು ಹೊಡೆದ ವಿಷಯುಕ್ತ ಔಷಧಿಯ ಪರಿಣಾಮವಾಗಿ ಜೇನುಹುಳು ಸತ್ತು ಉದುರುತ್ತಿವೆ. ಈ ಜಗತ್ತು ಹೃದಯ ವಿದ್ರಾವಕವಾಗಿ ನಿರ್ಗಮಿಸುವುದು ಜೇನುಹುಳದ ನಿರ್ಗಮನದ ನಂತರ. ಅಂದರೆ ಈಗಾಗಲೇ ಜೇನಿನ ನಿರ್ಗಮನ ಆರಂಭವಾಗಿದೆ. ಇದೇ ಔಷಧಿ ದೆಸೆಯಿಂದ ಚಿಟ್ಟೆಗಳ ವಂಶ ನಿರ್ವಂಶವಾಗುವತ್ತ ಸಾಗುತ್ತಿದೆ. ಟ್ರಂಪು ಮತ್ತು ಮೋದಿ ಜೋಡಿ ನೋಡಿದರೆ ಜಗತ್ತಿನ ಅವನತಿಯ ಉದ್ಘಾಟಕರಂತೆ ಕಾಣುತ್ತಿದ್ದಾರಲ್ಲಾ, ಥೂತ್ತೇರಿ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...