Homeಅಂಕಣಗಳುಟ್ರಂಪು-ಮೋದಿ ಜೋಡಿ ಜಗತ್ತಿನ ಅವನತಿಯ ಉದ್ಘಾಟಕರಂತೆ ಕಾಣುತ್ತಿದ್ದಾರಲ್ಲಾ!

ಟ್ರಂಪು-ಮೋದಿ ಜೋಡಿ ಜಗತ್ತಿನ ಅವನತಿಯ ಉದ್ಘಾಟಕರಂತೆ ಕಾಣುತ್ತಿದ್ದಾರಲ್ಲಾ!

- Advertisement -
- Advertisement -

ಭರತಮಾತೆಯ ಹೃದಯ ಭಾಗವಾದ ದೆಹಲಿಯಲ್ಲಿ ಮತ್ತೆ ಕೇಜ್ರಿವಾಲ್ ಕೆನೆದಿರುವುದರಿಂದ ಮೋದಿ ಮತ್ತು ಶಾ ಮುಖಗಳು ಇಂಗು ತಿಂದ ಮಂಗನ ಮುಖಗಳಾಗಿವೆಯಂತಲ್ಲಾ. ಕೇಜ್ರಿವಾಲ್ ಪಠಿಸಿದ್ದು ದೆಹಲಿ ಅಭಿವೃದ್ದಿ ಮಂತ್ರ ಮೋದಿ ಶಾ ಪಠಿಸಿದ್ದು ಮತಾಂಧಮಂತ್ರ. ಅನಾದಿಕಾಲದಿಂದಲೂ ಸುಲ್ತಾನರು ಮತ್ತು ಬ್ರಿಟಿಷರ ಆಳ್ವಿಕೆಯಲ್ಲಿ ನರಳಿದ ದೆಹಲಿ ತುಂಬ ಬಸವಳಿದ ಪ್ರದೇಶ. ಇಂತಹ ಪ್ರದೇಶವನ್ನು ನೆಮ್ಮದಿಯಾಗಿಡುವ ಒಬ್ಬ ನಾಯಕ ಬೇಕಿತ್ತು. ಅವನನ್ನು ದೆಹಲಿ ಪಡೆದಿದೆ ಆದರೆ ಮೋದಿ ಶಾ ದಾಳಿಯಿಂದ ತತ್ತರಿಸಿರುವ ಭಾರತಕ್ಕೂ ಒಬ್ಬ ಕೇಜ್ರಿವಾಲ್ ಬೇಕಾಗಿದೆ. ಆದರೆ ಕೇಜ್ರಿವಾಲ್ ತರಹ ಇರುವ ವ್ಯಕ್ತಿ ಒಬ್ಬನೆ ಅದೇ ಕೇಜ್ರಿವಾಲ್! ಆತ ದೆಹಲಿಯಿಂದ ಹೊರನಡೆದು ನಾಯಕತ್ವ ವಹಿಸಿದ್ದಾದರೆ, ಮೋದಿ ಶಾ ಮುಲಾಜಿಲ್ಲದೆ ಗಟಾರ ಸೇರುವುದು ಗ್ಯಾರಂಟಿಯಂತಲ್ಲಾ ಥೂತ್ತೇರಿ….

ಭಾರತದಿಂದ ಪಾಲು ಪಡೆದ ಕ್ಷಣದಿಂದಲೂ ತಲೆ ಕೆಟ್ಟಂತೆ, ಮತಾಂಧರಾಗಿ ಗಡಿಭಾಗದ ತಂಟೆಕೋರರಾಗಿ, ಈ ಏಳುದಶಕಗಳೂ ಹುಚ್ಚಾಸ್ಪತ್ರೆ ಸೇರುವಂತಾಗಿರುವ ಪಾಕಿಸ್ತಾನ ಈಗ ಭಾರತದ ಪ್ರಜೆಗಳೂ ಜೈಲು ಸೇರುವಂತೆ ಮಾಡುತ್ತಿದೆಯಲ್ಲಾ. ವಿಷಯ ಇಷ್ಟೇ, ಇತ್ತೀಚೆಗೆ ಭಾರತದಲ್ಲಿ ಉದ್ಭವಿಸಿರುವ ದೇಶಭಕ್ತರಿಗೆ ಪಾಕಿಸ್ತಾನ ಎಂದಕೂಡಲೇ ಮೈಮೇಲೆ ಗಣಬಂದಂತಾಡುತ್ತವೆ. ಅಂತಹ ದೇಶಭಕ್ತಿ ಕೆರಳಿಸಲೆಂದೇ ಪಾಕೀಸ್ತಾನ್ ಜಿಂದಾಬಾದ್ ಎಂದು ಕೂಗಿದ ಹುಡುಗರು ಜೈಲು ಸೇರುತ್ತಿವೆ. ವಾಘಾ ಗಡಿಯಲ್ಲಿ ಈ ಕಡೆಯಿಂದ ಭಾರತಮಾತಾಕಿ ಜೈ ಎಂದರೆ, ಆ ಕಡೆಯಿಂದ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಮೊಳಗಿಸುತ್ತ ಸಂಜೆಯಾಗುತ್ತದೆ. ಅಂತಹ ದೇಶದ ಪರ ಘೋಷಣೆ ಕೂಗುವುದು ಅಪರಾಧವಾದರೆ ನಮ್ಮ ಜಡ್ಜ್‍ಗಳು ತಿಳುವಳಿಕೆ ಹೇಳಿ ಕಳುಹಿಸಬಹುದು. ಅದು ಬಿಟ್ಟು ಹೆಣ್ಣುಮಕ್ಕಳನ್ನ 14 ದಿನ ಜೈಲಿಗಾಕುವುದು ಎಷ್ಟು ಸರಿ ಎಂಬುದು ಸಾಮಾನ್ಯನ ಪ್ರಶ್ನೆಯಾಗಿದೆಯಲ್ಲಾ, ಥೂತ್ತೇರಿ…

ಫಲಭರಿತವಾಗಿ ಕಂಗೊಳಿಸಿದ್ದ ತೋಟ ಹಾಳಾಗುವ ಸಮಯಕ್ಕೆ ಮಂಗನ ಮುಸುಡಿ ಕಾಯಿ ಕಾಣಿಸಿಕೊಳ್ಳುತ್ತದಂತೆ. ಹಾಗೆಯೇ ಭಾರತದ ಉದ್ದಗಲಕ್ಕೆ ಕಾಣಿಸಿಕೊಳ್ಳುತ್ತಿರುವ ಈ ಅನಿಷ್ಟ ಕಾಯಿಗಳಾವುವೆಂದು ವಿವರಿಸಿ ಹೇಳಬೇಕಿಲ್ಲ. ಇಂತಹ ತೋಟಕ್ಕೆ ಇನ್ನೊಂದು ಮುಸುಡಿ ಲಗ್ಗೆ ಹಾಕಿ ಅಹಮದಾಬಾದಿನಲ್ಲಿ ಭಾಷಣ ಬಿಗಿಯುತ್ತಿರ ಬೇಕಾದರೆ, ಜನಗಳು ಲಾಠಿ ಚಾರ್ಜಿಗೆ ತುತ್ತಾದವರಂತೆ ಚದುರಿ ಹೋದರಂತಲ್ಲಾ. ನಿಜಕ್ಕೂ ಭೀಕರ ಭಾಷಣಕ್ಕೆ ಇದಕ್ಕಿಂತ ಪ್ರತಿಕ್ರಿಯೆ ಇನ್ನೊಂದಿರಲಾರದು. ಆದರೆ ಬಿ.ಜೆ.ಪಿ.ಗಳ ಪ್ರಕಾರ ಇದು ಕಾಂಗೈನ ಸಂಚು. ಸಭೆಯ ಮಧ್ಯದಲ್ಲೇ ಎದ್ದುಹೋಗಿ ಮೋದಿ ಟ್ರಂಪ್‍ಗೆ ಅವಮಾನ ಮಾಡಲೆಂದೇ ಕಾಂಗೈಗಳು ನುಸುಳಿಬಂದಿದ್ದವಂತೆ. ಸುದೈವಕ್ಕೆ ಇಂತಹ ಸಭಾಕಿಡಿಗೇಡಿಗಳು ಪಾಕೀಸ್ತಾನದಿಂದ ಬಂದಿದ್ದರು ಎಂದಿಲ್ಲವಲ್ಲಾ. ಥೂತ್ತೇರಿ…

ಭಾರತಕ್ಕೆ ಬಂದ ಟ್ರಂಪ್ ಸಾಬರಮತಿ ಆಶ್ರಮಕ್ಕೂ ಭೇಟಿ ನೀಡಿದರು. ಗಾಂಧಿ ಕೊಂದವರ ಪಾರ್ಟಿಯ ಪ್ರಧಾನಿಯಾದ ಮೋದಿ ಮಹಾತ್ಮರು ಟ್ರಂಪ್‍ಗೆ ಗಾಂಧಿ ಪರಿಚಯ ಮಾಡಿಕೊಡುವ ಜವಾಬ್ದಾರಿ ಬಂದಾಗ, “ನೋಡಿ ಟ್ರಂಪ್ ಇದು ಗಾಂಧಿ ಕಟ್ಟಿದ ಆಶ್ರಮ. ಅವರ ಬಗ್ಗೆ ನಿಮ್ಮ ಮಾರ್ಟಿನ್ ಲೂಥರ್ ಕಿಂಗ್ ಏನೇಳಿದಾರೆ ಅಂದ್ರೆ, `ಗಾಂಧಿ ಈ ಜಗತ್ತಿನ ಜೀವಸತ್ವ ಅವರಿಲ್ಲದೆ ಜಗತ್ತು ಉಳಿಯದು’ ಎಂದಿದ್ದಾರೆ. ಆದರೆ ನಮ್ಮ ಬಿ.ಜೆ.ಪಿ ಜನ ಅದು ಹೇಗೆ ಉಳಿಯಲ್ಲವೋ ನೋಡೋಣ ಎಂದು ಈಗಾಗಲೇ ಗಾಂಧಿ ಕೊಂದವನಿಗೆ ಗುಡಿ ಕಟ್ಟಿದ್ದಾರೆ. ಹಲವು ಜಾಗದಲ್ಲಿದ್ದ ಗಾಂಧಿ ಪ್ರತಿಮೆ ದ್ವಂಸ ಮಾಡಿದ್ದಾರೆ. ನಾನೇ ಉದ್ಘಾಟಿಸಿದ ಗಾಂಧಿ ಪ್ರತಿಮೆ ವಿರೂಪಗೊಳಿಸಿದ್ದಾರೆ. ಏನು ಮಾಡಿದರೂ ಈ ಗಾಂಧಿ ಹೆಸರನ್ನ ಅಳಿಸಿ, ಅಲ್ಲಿಗೆ ನಮ್ಮ ವೀರಸಾರ್ಕರ್‍ನನ್ನ ಸ್ಥಾಪಿಸಲಾಗುತ್ತಿಲ್ಲ” ಎನ್ನಲಾಗದೆ ಪರಿತಪಿಸಿದರಂತಲ್ಲಾ, ಥೂತ್ತೇರಿ…

ಟ್ರಂಪು ಮತ್ತು ಮೋದಿ ಸೇರಿಕೊಂಡು ಪ್ರಪಂಚದಲ್ಲೇ ಬಲಿಷ್ಟ ರಾಷ್ಟ್ರಗಳನ್ನು ನಿರ್ಮಾಣ ಮಾಡಿಕೊಂಡು, ಸುಂದರವಾಗಿ ಬದುಕುವ ಸುಳ್ಳುಗಳನ್ನು ಹೇಳುತ್ತಿರುವ ಸಮಯಕ್ಕೆ ಸರಿಯಾಗಿ, ಮಲೆನಾಡಿನ ಕಡೆಯಿಂದ ಬಂದ ಸುದ್ದಿಯೊಂದು ಅಘಾತ ನೀಡಿದೆಯಲ್ಲಾ. ಏನೆಂದರೆ ನಮ್ಮ ಜನ ದಿನನಿತ್ಯವು ಸೇವಿಸುವ ಅನ್ನದಂತಹ ಆಹಾರವಾದ ಅಡಿಕೆ ಬೆಳೆಯನ್ನ ಕಾಪಾಡಲು ಹೊಡೆದ ವಿಷಯುಕ್ತ ಔಷಧಿಯ ಪರಿಣಾಮವಾಗಿ ಜೇನುಹುಳು ಸತ್ತು ಉದುರುತ್ತಿವೆ. ಈ ಜಗತ್ತು ಹೃದಯ ವಿದ್ರಾವಕವಾಗಿ ನಿರ್ಗಮಿಸುವುದು ಜೇನುಹುಳದ ನಿರ್ಗಮನದ ನಂತರ. ಅಂದರೆ ಈಗಾಗಲೇ ಜೇನಿನ ನಿರ್ಗಮನ ಆರಂಭವಾಗಿದೆ. ಇದೇ ಔಷಧಿ ದೆಸೆಯಿಂದ ಚಿಟ್ಟೆಗಳ ವಂಶ ನಿರ್ವಂಶವಾಗುವತ್ತ ಸಾಗುತ್ತಿದೆ. ಟ್ರಂಪು ಮತ್ತು ಮೋದಿ ಜೋಡಿ ನೋಡಿದರೆ ಜಗತ್ತಿನ ಅವನತಿಯ ಉದ್ಘಾಟಕರಂತೆ ಕಾಣುತ್ತಿದ್ದಾರಲ್ಲಾ, ಥೂತ್ತೇರಿ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...