Homeಅಂಕಣಗಳುಟ್ರಂಪು-ಮೋದಿ ಜೋಡಿ ಜಗತ್ತಿನ ಅವನತಿಯ ಉದ್ಘಾಟಕರಂತೆ ಕಾಣುತ್ತಿದ್ದಾರಲ್ಲಾ!

ಟ್ರಂಪು-ಮೋದಿ ಜೋಡಿ ಜಗತ್ತಿನ ಅವನತಿಯ ಉದ್ಘಾಟಕರಂತೆ ಕಾಣುತ್ತಿದ್ದಾರಲ್ಲಾ!

- Advertisement -
- Advertisement -

ಭರತಮಾತೆಯ ಹೃದಯ ಭಾಗವಾದ ದೆಹಲಿಯಲ್ಲಿ ಮತ್ತೆ ಕೇಜ್ರಿವಾಲ್ ಕೆನೆದಿರುವುದರಿಂದ ಮೋದಿ ಮತ್ತು ಶಾ ಮುಖಗಳು ಇಂಗು ತಿಂದ ಮಂಗನ ಮುಖಗಳಾಗಿವೆಯಂತಲ್ಲಾ. ಕೇಜ್ರಿವಾಲ್ ಪಠಿಸಿದ್ದು ದೆಹಲಿ ಅಭಿವೃದ್ದಿ ಮಂತ್ರ ಮೋದಿ ಶಾ ಪಠಿಸಿದ್ದು ಮತಾಂಧಮಂತ್ರ. ಅನಾದಿಕಾಲದಿಂದಲೂ ಸುಲ್ತಾನರು ಮತ್ತು ಬ್ರಿಟಿಷರ ಆಳ್ವಿಕೆಯಲ್ಲಿ ನರಳಿದ ದೆಹಲಿ ತುಂಬ ಬಸವಳಿದ ಪ್ರದೇಶ. ಇಂತಹ ಪ್ರದೇಶವನ್ನು ನೆಮ್ಮದಿಯಾಗಿಡುವ ಒಬ್ಬ ನಾಯಕ ಬೇಕಿತ್ತು. ಅವನನ್ನು ದೆಹಲಿ ಪಡೆದಿದೆ ಆದರೆ ಮೋದಿ ಶಾ ದಾಳಿಯಿಂದ ತತ್ತರಿಸಿರುವ ಭಾರತಕ್ಕೂ ಒಬ್ಬ ಕೇಜ್ರಿವಾಲ್ ಬೇಕಾಗಿದೆ. ಆದರೆ ಕೇಜ್ರಿವಾಲ್ ತರಹ ಇರುವ ವ್ಯಕ್ತಿ ಒಬ್ಬನೆ ಅದೇ ಕೇಜ್ರಿವಾಲ್! ಆತ ದೆಹಲಿಯಿಂದ ಹೊರನಡೆದು ನಾಯಕತ್ವ ವಹಿಸಿದ್ದಾದರೆ, ಮೋದಿ ಶಾ ಮುಲಾಜಿಲ್ಲದೆ ಗಟಾರ ಸೇರುವುದು ಗ್ಯಾರಂಟಿಯಂತಲ್ಲಾ ಥೂತ್ತೇರಿ….

ಭಾರತದಿಂದ ಪಾಲು ಪಡೆದ ಕ್ಷಣದಿಂದಲೂ ತಲೆ ಕೆಟ್ಟಂತೆ, ಮತಾಂಧರಾಗಿ ಗಡಿಭಾಗದ ತಂಟೆಕೋರರಾಗಿ, ಈ ಏಳುದಶಕಗಳೂ ಹುಚ್ಚಾಸ್ಪತ್ರೆ ಸೇರುವಂತಾಗಿರುವ ಪಾಕಿಸ್ತಾನ ಈಗ ಭಾರತದ ಪ್ರಜೆಗಳೂ ಜೈಲು ಸೇರುವಂತೆ ಮಾಡುತ್ತಿದೆಯಲ್ಲಾ. ವಿಷಯ ಇಷ್ಟೇ, ಇತ್ತೀಚೆಗೆ ಭಾರತದಲ್ಲಿ ಉದ್ಭವಿಸಿರುವ ದೇಶಭಕ್ತರಿಗೆ ಪಾಕಿಸ್ತಾನ ಎಂದಕೂಡಲೇ ಮೈಮೇಲೆ ಗಣಬಂದಂತಾಡುತ್ತವೆ. ಅಂತಹ ದೇಶಭಕ್ತಿ ಕೆರಳಿಸಲೆಂದೇ ಪಾಕೀಸ್ತಾನ್ ಜಿಂದಾಬಾದ್ ಎಂದು ಕೂಗಿದ ಹುಡುಗರು ಜೈಲು ಸೇರುತ್ತಿವೆ. ವಾಘಾ ಗಡಿಯಲ್ಲಿ ಈ ಕಡೆಯಿಂದ ಭಾರತಮಾತಾಕಿ ಜೈ ಎಂದರೆ, ಆ ಕಡೆಯಿಂದ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಮೊಳಗಿಸುತ್ತ ಸಂಜೆಯಾಗುತ್ತದೆ. ಅಂತಹ ದೇಶದ ಪರ ಘೋಷಣೆ ಕೂಗುವುದು ಅಪರಾಧವಾದರೆ ನಮ್ಮ ಜಡ್ಜ್‍ಗಳು ತಿಳುವಳಿಕೆ ಹೇಳಿ ಕಳುಹಿಸಬಹುದು. ಅದು ಬಿಟ್ಟು ಹೆಣ್ಣುಮಕ್ಕಳನ್ನ 14 ದಿನ ಜೈಲಿಗಾಕುವುದು ಎಷ್ಟು ಸರಿ ಎಂಬುದು ಸಾಮಾನ್ಯನ ಪ್ರಶ್ನೆಯಾಗಿದೆಯಲ್ಲಾ, ಥೂತ್ತೇರಿ…

ಫಲಭರಿತವಾಗಿ ಕಂಗೊಳಿಸಿದ್ದ ತೋಟ ಹಾಳಾಗುವ ಸಮಯಕ್ಕೆ ಮಂಗನ ಮುಸುಡಿ ಕಾಯಿ ಕಾಣಿಸಿಕೊಳ್ಳುತ್ತದಂತೆ. ಹಾಗೆಯೇ ಭಾರತದ ಉದ್ದಗಲಕ್ಕೆ ಕಾಣಿಸಿಕೊಳ್ಳುತ್ತಿರುವ ಈ ಅನಿಷ್ಟ ಕಾಯಿಗಳಾವುವೆಂದು ವಿವರಿಸಿ ಹೇಳಬೇಕಿಲ್ಲ. ಇಂತಹ ತೋಟಕ್ಕೆ ಇನ್ನೊಂದು ಮುಸುಡಿ ಲಗ್ಗೆ ಹಾಕಿ ಅಹಮದಾಬಾದಿನಲ್ಲಿ ಭಾಷಣ ಬಿಗಿಯುತ್ತಿರ ಬೇಕಾದರೆ, ಜನಗಳು ಲಾಠಿ ಚಾರ್ಜಿಗೆ ತುತ್ತಾದವರಂತೆ ಚದುರಿ ಹೋದರಂತಲ್ಲಾ. ನಿಜಕ್ಕೂ ಭೀಕರ ಭಾಷಣಕ್ಕೆ ಇದಕ್ಕಿಂತ ಪ್ರತಿಕ್ರಿಯೆ ಇನ್ನೊಂದಿರಲಾರದು. ಆದರೆ ಬಿ.ಜೆ.ಪಿ.ಗಳ ಪ್ರಕಾರ ಇದು ಕಾಂಗೈನ ಸಂಚು. ಸಭೆಯ ಮಧ್ಯದಲ್ಲೇ ಎದ್ದುಹೋಗಿ ಮೋದಿ ಟ್ರಂಪ್‍ಗೆ ಅವಮಾನ ಮಾಡಲೆಂದೇ ಕಾಂಗೈಗಳು ನುಸುಳಿಬಂದಿದ್ದವಂತೆ. ಸುದೈವಕ್ಕೆ ಇಂತಹ ಸಭಾಕಿಡಿಗೇಡಿಗಳು ಪಾಕೀಸ್ತಾನದಿಂದ ಬಂದಿದ್ದರು ಎಂದಿಲ್ಲವಲ್ಲಾ. ಥೂತ್ತೇರಿ…

ಭಾರತಕ್ಕೆ ಬಂದ ಟ್ರಂಪ್ ಸಾಬರಮತಿ ಆಶ್ರಮಕ್ಕೂ ಭೇಟಿ ನೀಡಿದರು. ಗಾಂಧಿ ಕೊಂದವರ ಪಾರ್ಟಿಯ ಪ್ರಧಾನಿಯಾದ ಮೋದಿ ಮಹಾತ್ಮರು ಟ್ರಂಪ್‍ಗೆ ಗಾಂಧಿ ಪರಿಚಯ ಮಾಡಿಕೊಡುವ ಜವಾಬ್ದಾರಿ ಬಂದಾಗ, “ನೋಡಿ ಟ್ರಂಪ್ ಇದು ಗಾಂಧಿ ಕಟ್ಟಿದ ಆಶ್ರಮ. ಅವರ ಬಗ್ಗೆ ನಿಮ್ಮ ಮಾರ್ಟಿನ್ ಲೂಥರ್ ಕಿಂಗ್ ಏನೇಳಿದಾರೆ ಅಂದ್ರೆ, `ಗಾಂಧಿ ಈ ಜಗತ್ತಿನ ಜೀವಸತ್ವ ಅವರಿಲ್ಲದೆ ಜಗತ್ತು ಉಳಿಯದು’ ಎಂದಿದ್ದಾರೆ. ಆದರೆ ನಮ್ಮ ಬಿ.ಜೆ.ಪಿ ಜನ ಅದು ಹೇಗೆ ಉಳಿಯಲ್ಲವೋ ನೋಡೋಣ ಎಂದು ಈಗಾಗಲೇ ಗಾಂಧಿ ಕೊಂದವನಿಗೆ ಗುಡಿ ಕಟ್ಟಿದ್ದಾರೆ. ಹಲವು ಜಾಗದಲ್ಲಿದ್ದ ಗಾಂಧಿ ಪ್ರತಿಮೆ ದ್ವಂಸ ಮಾಡಿದ್ದಾರೆ. ನಾನೇ ಉದ್ಘಾಟಿಸಿದ ಗಾಂಧಿ ಪ್ರತಿಮೆ ವಿರೂಪಗೊಳಿಸಿದ್ದಾರೆ. ಏನು ಮಾಡಿದರೂ ಈ ಗಾಂಧಿ ಹೆಸರನ್ನ ಅಳಿಸಿ, ಅಲ್ಲಿಗೆ ನಮ್ಮ ವೀರಸಾರ್ಕರ್‍ನನ್ನ ಸ್ಥಾಪಿಸಲಾಗುತ್ತಿಲ್ಲ” ಎನ್ನಲಾಗದೆ ಪರಿತಪಿಸಿದರಂತಲ್ಲಾ, ಥೂತ್ತೇರಿ…

ಟ್ರಂಪು ಮತ್ತು ಮೋದಿ ಸೇರಿಕೊಂಡು ಪ್ರಪಂಚದಲ್ಲೇ ಬಲಿಷ್ಟ ರಾಷ್ಟ್ರಗಳನ್ನು ನಿರ್ಮಾಣ ಮಾಡಿಕೊಂಡು, ಸುಂದರವಾಗಿ ಬದುಕುವ ಸುಳ್ಳುಗಳನ್ನು ಹೇಳುತ್ತಿರುವ ಸಮಯಕ್ಕೆ ಸರಿಯಾಗಿ, ಮಲೆನಾಡಿನ ಕಡೆಯಿಂದ ಬಂದ ಸುದ್ದಿಯೊಂದು ಅಘಾತ ನೀಡಿದೆಯಲ್ಲಾ. ಏನೆಂದರೆ ನಮ್ಮ ಜನ ದಿನನಿತ್ಯವು ಸೇವಿಸುವ ಅನ್ನದಂತಹ ಆಹಾರವಾದ ಅಡಿಕೆ ಬೆಳೆಯನ್ನ ಕಾಪಾಡಲು ಹೊಡೆದ ವಿಷಯುಕ್ತ ಔಷಧಿಯ ಪರಿಣಾಮವಾಗಿ ಜೇನುಹುಳು ಸತ್ತು ಉದುರುತ್ತಿವೆ. ಈ ಜಗತ್ತು ಹೃದಯ ವಿದ್ರಾವಕವಾಗಿ ನಿರ್ಗಮಿಸುವುದು ಜೇನುಹುಳದ ನಿರ್ಗಮನದ ನಂತರ. ಅಂದರೆ ಈಗಾಗಲೇ ಜೇನಿನ ನಿರ್ಗಮನ ಆರಂಭವಾಗಿದೆ. ಇದೇ ಔಷಧಿ ದೆಸೆಯಿಂದ ಚಿಟ್ಟೆಗಳ ವಂಶ ನಿರ್ವಂಶವಾಗುವತ್ತ ಸಾಗುತ್ತಿದೆ. ಟ್ರಂಪು ಮತ್ತು ಮೋದಿ ಜೋಡಿ ನೋಡಿದರೆ ಜಗತ್ತಿನ ಅವನತಿಯ ಉದ್ಘಾಟಕರಂತೆ ಕಾಣುತ್ತಿದ್ದಾರಲ್ಲಾ, ಥೂತ್ತೇರಿ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...