Homeಅಂಕಣಗಳುಟ್ರಂಪು-ಮೋದಿ ಜೋಡಿ ಜಗತ್ತಿನ ಅವನತಿಯ ಉದ್ಘಾಟಕರಂತೆ ಕಾಣುತ್ತಿದ್ದಾರಲ್ಲಾ!

ಟ್ರಂಪು-ಮೋದಿ ಜೋಡಿ ಜಗತ್ತಿನ ಅವನತಿಯ ಉದ್ಘಾಟಕರಂತೆ ಕಾಣುತ್ತಿದ್ದಾರಲ್ಲಾ!

- Advertisement -
- Advertisement -

ಭರತಮಾತೆಯ ಹೃದಯ ಭಾಗವಾದ ದೆಹಲಿಯಲ್ಲಿ ಮತ್ತೆ ಕೇಜ್ರಿವಾಲ್ ಕೆನೆದಿರುವುದರಿಂದ ಮೋದಿ ಮತ್ತು ಶಾ ಮುಖಗಳು ಇಂಗು ತಿಂದ ಮಂಗನ ಮುಖಗಳಾಗಿವೆಯಂತಲ್ಲಾ. ಕೇಜ್ರಿವಾಲ್ ಪಠಿಸಿದ್ದು ದೆಹಲಿ ಅಭಿವೃದ್ದಿ ಮಂತ್ರ ಮೋದಿ ಶಾ ಪಠಿಸಿದ್ದು ಮತಾಂಧಮಂತ್ರ. ಅನಾದಿಕಾಲದಿಂದಲೂ ಸುಲ್ತಾನರು ಮತ್ತು ಬ್ರಿಟಿಷರ ಆಳ್ವಿಕೆಯಲ್ಲಿ ನರಳಿದ ದೆಹಲಿ ತುಂಬ ಬಸವಳಿದ ಪ್ರದೇಶ. ಇಂತಹ ಪ್ರದೇಶವನ್ನು ನೆಮ್ಮದಿಯಾಗಿಡುವ ಒಬ್ಬ ನಾಯಕ ಬೇಕಿತ್ತು. ಅವನನ್ನು ದೆಹಲಿ ಪಡೆದಿದೆ ಆದರೆ ಮೋದಿ ಶಾ ದಾಳಿಯಿಂದ ತತ್ತರಿಸಿರುವ ಭಾರತಕ್ಕೂ ಒಬ್ಬ ಕೇಜ್ರಿವಾಲ್ ಬೇಕಾಗಿದೆ. ಆದರೆ ಕೇಜ್ರಿವಾಲ್ ತರಹ ಇರುವ ವ್ಯಕ್ತಿ ಒಬ್ಬನೆ ಅದೇ ಕೇಜ್ರಿವಾಲ್! ಆತ ದೆಹಲಿಯಿಂದ ಹೊರನಡೆದು ನಾಯಕತ್ವ ವಹಿಸಿದ್ದಾದರೆ, ಮೋದಿ ಶಾ ಮುಲಾಜಿಲ್ಲದೆ ಗಟಾರ ಸೇರುವುದು ಗ್ಯಾರಂಟಿಯಂತಲ್ಲಾ ಥೂತ್ತೇರಿ….

ಭಾರತದಿಂದ ಪಾಲು ಪಡೆದ ಕ್ಷಣದಿಂದಲೂ ತಲೆ ಕೆಟ್ಟಂತೆ, ಮತಾಂಧರಾಗಿ ಗಡಿಭಾಗದ ತಂಟೆಕೋರರಾಗಿ, ಈ ಏಳುದಶಕಗಳೂ ಹುಚ್ಚಾಸ್ಪತ್ರೆ ಸೇರುವಂತಾಗಿರುವ ಪಾಕಿಸ್ತಾನ ಈಗ ಭಾರತದ ಪ್ರಜೆಗಳೂ ಜೈಲು ಸೇರುವಂತೆ ಮಾಡುತ್ತಿದೆಯಲ್ಲಾ. ವಿಷಯ ಇಷ್ಟೇ, ಇತ್ತೀಚೆಗೆ ಭಾರತದಲ್ಲಿ ಉದ್ಭವಿಸಿರುವ ದೇಶಭಕ್ತರಿಗೆ ಪಾಕಿಸ್ತಾನ ಎಂದಕೂಡಲೇ ಮೈಮೇಲೆ ಗಣಬಂದಂತಾಡುತ್ತವೆ. ಅಂತಹ ದೇಶಭಕ್ತಿ ಕೆರಳಿಸಲೆಂದೇ ಪಾಕೀಸ್ತಾನ್ ಜಿಂದಾಬಾದ್ ಎಂದು ಕೂಗಿದ ಹುಡುಗರು ಜೈಲು ಸೇರುತ್ತಿವೆ. ವಾಘಾ ಗಡಿಯಲ್ಲಿ ಈ ಕಡೆಯಿಂದ ಭಾರತಮಾತಾಕಿ ಜೈ ಎಂದರೆ, ಆ ಕಡೆಯಿಂದ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಮೊಳಗಿಸುತ್ತ ಸಂಜೆಯಾಗುತ್ತದೆ. ಅಂತಹ ದೇಶದ ಪರ ಘೋಷಣೆ ಕೂಗುವುದು ಅಪರಾಧವಾದರೆ ನಮ್ಮ ಜಡ್ಜ್‍ಗಳು ತಿಳುವಳಿಕೆ ಹೇಳಿ ಕಳುಹಿಸಬಹುದು. ಅದು ಬಿಟ್ಟು ಹೆಣ್ಣುಮಕ್ಕಳನ್ನ 14 ದಿನ ಜೈಲಿಗಾಕುವುದು ಎಷ್ಟು ಸರಿ ಎಂಬುದು ಸಾಮಾನ್ಯನ ಪ್ರಶ್ನೆಯಾಗಿದೆಯಲ್ಲಾ, ಥೂತ್ತೇರಿ…

ಫಲಭರಿತವಾಗಿ ಕಂಗೊಳಿಸಿದ್ದ ತೋಟ ಹಾಳಾಗುವ ಸಮಯಕ್ಕೆ ಮಂಗನ ಮುಸುಡಿ ಕಾಯಿ ಕಾಣಿಸಿಕೊಳ್ಳುತ್ತದಂತೆ. ಹಾಗೆಯೇ ಭಾರತದ ಉದ್ದಗಲಕ್ಕೆ ಕಾಣಿಸಿಕೊಳ್ಳುತ್ತಿರುವ ಈ ಅನಿಷ್ಟ ಕಾಯಿಗಳಾವುವೆಂದು ವಿವರಿಸಿ ಹೇಳಬೇಕಿಲ್ಲ. ಇಂತಹ ತೋಟಕ್ಕೆ ಇನ್ನೊಂದು ಮುಸುಡಿ ಲಗ್ಗೆ ಹಾಕಿ ಅಹಮದಾಬಾದಿನಲ್ಲಿ ಭಾಷಣ ಬಿಗಿಯುತ್ತಿರ ಬೇಕಾದರೆ, ಜನಗಳು ಲಾಠಿ ಚಾರ್ಜಿಗೆ ತುತ್ತಾದವರಂತೆ ಚದುರಿ ಹೋದರಂತಲ್ಲಾ. ನಿಜಕ್ಕೂ ಭೀಕರ ಭಾಷಣಕ್ಕೆ ಇದಕ್ಕಿಂತ ಪ್ರತಿಕ್ರಿಯೆ ಇನ್ನೊಂದಿರಲಾರದು. ಆದರೆ ಬಿ.ಜೆ.ಪಿ.ಗಳ ಪ್ರಕಾರ ಇದು ಕಾಂಗೈನ ಸಂಚು. ಸಭೆಯ ಮಧ್ಯದಲ್ಲೇ ಎದ್ದುಹೋಗಿ ಮೋದಿ ಟ್ರಂಪ್‍ಗೆ ಅವಮಾನ ಮಾಡಲೆಂದೇ ಕಾಂಗೈಗಳು ನುಸುಳಿಬಂದಿದ್ದವಂತೆ. ಸುದೈವಕ್ಕೆ ಇಂತಹ ಸಭಾಕಿಡಿಗೇಡಿಗಳು ಪಾಕೀಸ್ತಾನದಿಂದ ಬಂದಿದ್ದರು ಎಂದಿಲ್ಲವಲ್ಲಾ. ಥೂತ್ತೇರಿ…

ಭಾರತಕ್ಕೆ ಬಂದ ಟ್ರಂಪ್ ಸಾಬರಮತಿ ಆಶ್ರಮಕ್ಕೂ ಭೇಟಿ ನೀಡಿದರು. ಗಾಂಧಿ ಕೊಂದವರ ಪಾರ್ಟಿಯ ಪ್ರಧಾನಿಯಾದ ಮೋದಿ ಮಹಾತ್ಮರು ಟ್ರಂಪ್‍ಗೆ ಗಾಂಧಿ ಪರಿಚಯ ಮಾಡಿಕೊಡುವ ಜವಾಬ್ದಾರಿ ಬಂದಾಗ, “ನೋಡಿ ಟ್ರಂಪ್ ಇದು ಗಾಂಧಿ ಕಟ್ಟಿದ ಆಶ್ರಮ. ಅವರ ಬಗ್ಗೆ ನಿಮ್ಮ ಮಾರ್ಟಿನ್ ಲೂಥರ್ ಕಿಂಗ್ ಏನೇಳಿದಾರೆ ಅಂದ್ರೆ, `ಗಾಂಧಿ ಈ ಜಗತ್ತಿನ ಜೀವಸತ್ವ ಅವರಿಲ್ಲದೆ ಜಗತ್ತು ಉಳಿಯದು’ ಎಂದಿದ್ದಾರೆ. ಆದರೆ ನಮ್ಮ ಬಿ.ಜೆ.ಪಿ ಜನ ಅದು ಹೇಗೆ ಉಳಿಯಲ್ಲವೋ ನೋಡೋಣ ಎಂದು ಈಗಾಗಲೇ ಗಾಂಧಿ ಕೊಂದವನಿಗೆ ಗುಡಿ ಕಟ್ಟಿದ್ದಾರೆ. ಹಲವು ಜಾಗದಲ್ಲಿದ್ದ ಗಾಂಧಿ ಪ್ರತಿಮೆ ದ್ವಂಸ ಮಾಡಿದ್ದಾರೆ. ನಾನೇ ಉದ್ಘಾಟಿಸಿದ ಗಾಂಧಿ ಪ್ರತಿಮೆ ವಿರೂಪಗೊಳಿಸಿದ್ದಾರೆ. ಏನು ಮಾಡಿದರೂ ಈ ಗಾಂಧಿ ಹೆಸರನ್ನ ಅಳಿಸಿ, ಅಲ್ಲಿಗೆ ನಮ್ಮ ವೀರಸಾರ್ಕರ್‍ನನ್ನ ಸ್ಥಾಪಿಸಲಾಗುತ್ತಿಲ್ಲ” ಎನ್ನಲಾಗದೆ ಪರಿತಪಿಸಿದರಂತಲ್ಲಾ, ಥೂತ್ತೇರಿ…

ಟ್ರಂಪು ಮತ್ತು ಮೋದಿ ಸೇರಿಕೊಂಡು ಪ್ರಪಂಚದಲ್ಲೇ ಬಲಿಷ್ಟ ರಾಷ್ಟ್ರಗಳನ್ನು ನಿರ್ಮಾಣ ಮಾಡಿಕೊಂಡು, ಸುಂದರವಾಗಿ ಬದುಕುವ ಸುಳ್ಳುಗಳನ್ನು ಹೇಳುತ್ತಿರುವ ಸಮಯಕ್ಕೆ ಸರಿಯಾಗಿ, ಮಲೆನಾಡಿನ ಕಡೆಯಿಂದ ಬಂದ ಸುದ್ದಿಯೊಂದು ಅಘಾತ ನೀಡಿದೆಯಲ್ಲಾ. ಏನೆಂದರೆ ನಮ್ಮ ಜನ ದಿನನಿತ್ಯವು ಸೇವಿಸುವ ಅನ್ನದಂತಹ ಆಹಾರವಾದ ಅಡಿಕೆ ಬೆಳೆಯನ್ನ ಕಾಪಾಡಲು ಹೊಡೆದ ವಿಷಯುಕ್ತ ಔಷಧಿಯ ಪರಿಣಾಮವಾಗಿ ಜೇನುಹುಳು ಸತ್ತು ಉದುರುತ್ತಿವೆ. ಈ ಜಗತ್ತು ಹೃದಯ ವಿದ್ರಾವಕವಾಗಿ ನಿರ್ಗಮಿಸುವುದು ಜೇನುಹುಳದ ನಿರ್ಗಮನದ ನಂತರ. ಅಂದರೆ ಈಗಾಗಲೇ ಜೇನಿನ ನಿರ್ಗಮನ ಆರಂಭವಾಗಿದೆ. ಇದೇ ಔಷಧಿ ದೆಸೆಯಿಂದ ಚಿಟ್ಟೆಗಳ ವಂಶ ನಿರ್ವಂಶವಾಗುವತ್ತ ಸಾಗುತ್ತಿದೆ. ಟ್ರಂಪು ಮತ್ತು ಮೋದಿ ಜೋಡಿ ನೋಡಿದರೆ ಜಗತ್ತಿನ ಅವನತಿಯ ಉದ್ಘಾಟಕರಂತೆ ಕಾಣುತ್ತಿದ್ದಾರಲ್ಲಾ, ಥೂತ್ತೇರಿ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...