Homeಮುಖಪುಟಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ #IStandWithZubair ಹ್ಯಾಷ್‌ಟ್ಯಾಗ್‌

ಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ #IStandWithZubair ಹ್ಯಾಷ್‌ಟ್ಯಾಗ್‌

ಸೋಮವಾರ ಸಂಜೆಯಿಂದ ಹಿಡಿದು ಇಲ್ಲಿಯವರೆಗೆ #IStandWithZubair ಹ್ಯಾಷ್‌ಟ್ಯಾಗ್‌ನಲ್ಲಿ 5,83,000 ಟ್ವೀಟ್‌ಗಳಾಗಿವೆ.

- Advertisement -
- Advertisement -

2018ರ ಟ್ವೀಟ್ ಒಂದಕ್ಕೆ ಸಂಬಂಧಿಸಿ ದಿಟ್ಟ ಪತ್ರಕರ್ತ, ಆಲ್ಟ್‌ನ್ಯೂಸ್ ಸಹ ಸಂಪಾದಕ ಮೊಹಮ್ಮದ್ ಜುಬೇರ್‌ರನ್ನು ಬಂಧಿಸಿರುವ ದೆಹಲಿ ಪೊಲೀಸರ ಕ್ರಮಕ್ಕೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜುಬೇರ್‌ರನ್ನು ಬಂಧಿಸುವ ಮೂಲಕ ಸತ್ಯವನ್ನು ಬಂಧಿಸಿಡಲು ಸಾಧ್ಯವಿಲ್ಲ ಎಂದಿರುವ ಜನರು ಟ್ವಿಟರ್ ನಲ್ಲಿ #IStandWithZubair ಹ್ಯಾಷ್‌ಟ್ಯಾಗ್‌ ಟ್ರೆಂಡಿಂಗ್ ಮಾಡಿದ್ದಾರೆ.

ಸೋಮವಾರ ರಾತ್ರಿಯಿಂದಲೂ #IStandWithZubair ಹ್ಯಾಷ್‌ಟ್ಯಾಗ್‌ ಭಾರತದ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನದಲ್ಲಿದೆ. 5,83,000 ಟ್ವೀಟ್‌ಗಳಾಗಿವೆ.

ಜುಬೇರ್ ಬಂಧನವನ್ನು ಖಂಡಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಬಿಜೆಪಿಯ ದ್ವೇಷ, ಮತಾಂಧತೆ ಮತ್ತು ಸುಳ್ಳನ್ನು ಬೆತ್ತಲು ಮಾಡುವ ಪ್ರತಿಯೊಬ್ಬ ವ್ಯಕ್ತಿಯೂ ಅವರಿಗೆ ಬೆದರಿಕೆಯಾಗಿ ಪರಿಣಮಿಸಿದ್ದಾರೆ. ಸತ್ಯದ ಒಂದು ಧ್ವನಿಯನ್ನು ಬಂಧಿಸಿದರೆ ಅದು ಸಾವಿರಾರು ದನಿಗಳಾಗಿ ಮೊಳಗುತ್ತದೆ. ಯಾವಾಗಲೂ ದೌರ್ಜನ್ಯದ ಮೇಲೆ ಸತ್ಯವೇ ಜಯಗಳಿಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

“ಪತ್ರಿಕೋದ್ಯಮ ಎಂದರೆ ಪಟ್ಟಭದ್ರ ಹಿತಾಶಕ್ತಿಗಳು ಏನನ್ನು ಪ್ರಕಟಿಸಲು ಬಯಸುವುದಿಲ್ಲವೋ ಅದನ್ನು ಪ್ರಕಟಿಸುವುದು; ಉಳಿದಿದ್ದ ಸಾರ್ವಜನಿಕ ಸಂಪರ್ಕವಷ್ಟೆ” (ಜಾರ್ಜ್ ಆರ್ವೆಲ್, ಎಡಿಟ್ ಮಾಡಲಾಗಿದೆ) ಎಂದು ಹೋರಾಟಗಾರ ಯೋಗೇಂದ್ರ ಯಾದವ್ ಟ್ವೀಟ್ ಮಾಡಿದ್ದಾರೆ.

“ಯಾರು ಸುಳ್ಳು ಸಂದೇಶ ಹರಡಿದರೂ ಅದನ್ನು ಆಲ್ಟ್‌ನ್ಯೂಸ್ ಬಹಿರಂಗಗೊಳಿಸುತ್ತದೆ. ಸತ್ಯದ ಪರ ಅತ್ಯುತ್ತಮ ಕೆಲಸ ಮಾಡುತ್ತಿರುವ ಮೊಹಮ್ಮದ್ ಜುಬೇರ್ ಬಂಧನ ಖಂಡನೀಯ. ಕೂಡಲೇ ಅವರನ್ನು ಬಿಡುಗಡೆ ಮಾಡಿ” ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಒತ್ತಾಯಿಸಿದ್ದಾರೆ.

“ಒಬ್ಬರನ್ನಷ್ಟೇ ಫಾಲೋಯರ್‌ ಹೊಂದಿರುವ ಅನಾಮಧೇಯ ಟ್ವಿಟರ್ ಖಾತೆಯು ತಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ದೂರಿದ ಕಾರಣ ಜುಬೈರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆದರೆ ಹಿಂಸಾಚಾರದ ವಿಡಿಯೋ ಸಾಕ್ಷ್ಯಗಳ ಹೊರತಾಗಿಯೂ ಕೋಮಲ್ ಶರ್ಮಾ ಅವರನ್ನು ಬಂಧಿಸಲು ಸಾಧ್ಯವಾಗಲಿಲ್ಲ. ಈ ಇಡೀ ವ್ಯವಸ್ಥೆ ಎಷ್ಟು ಹಸ್ಯಾಸ್ಪದವಾಗಿದೆ” ಎಂದು ಹೋರಾಟಗಾರ ಧ್ರುವ್ ರಾಥೆ ಟ್ವೀಟ್‌ ಮಾಡಿದ್ದಾರೆ.

“ಭಾರತೀಯ ಮುಸ್ಲಿಮರು ಮತ್ತು ಇತರ 15 ದೇಶಗಳ ಮುಸ್ಲಿಮರ ಭಾವನೆಗಳನ್ನು ಘಾಸಿಗೊಳಿಸಿದ ಬಿಜೆಪಿಯ ವಕ್ತಾರರನ್ನು ದೆಹಲಿ ಪೊಲೀಸರು ಬಂಧಿಸಲಿಲ್ಲ. ಆದರೆ ಜುಬೈರ್‌ ಅವರನ್ನು ಬಂಧಿಸಲು ಯಾವುದೇ ಸಮಯ ತೆಗೆದುಕೊಳ್ಳಲಿಲ್ಲ” ಎಂದು ಕಾಂಗ್ರೆಸ್‌ ನಾಯಕರಾದ ಜಾವೇದ್‌ ವಿಷಾದಿಸಿದ್ದಾರೆ.

“ಜುಬೇರ್ ಒಬ್ಬ ಹೀರೋ. ಬಲಪಂಥೀಯರ ದ್ವೇಷದ ಭಾಷಣಗಳು ಮತ್ತು ದ್ವೇಷದ ಅಪರಾಧಗಳನ್ನು ಏಕಾಂಗಿಯಾಗಿ ಬಹಿರಂಗಪಡಿಸಿದ ವ್ಯಕ್ತಿ ಜುಬೈರ್‌” ಎಂದು ಪತ್ರಕರ್ತ ಕೌಶಿಕ್‌ ರಾಜ್‌ ಬಣ್ಣಿಸಿದ್ದಾರೆ.

“ಸುದ್ದಿ ವಾಹಿನಿಗಳಲ್ಲಿ ಪ್ರತಿದಿನ ದ್ವೇಷವನ್ನು ಹರಡುವವರನ್ನು ರಕ್ಷಿಸಲಾಗಿದೆ. ಪ್ರತಿನಿತ್ಯ ಸುಳ್ಳು ಸುದ್ದಿ ಬಯಲಿಗೆಳೆಯುವವರನ್ನು ಬಂಧಿಸಲಾಗುತ್ತದೆ. ದೆಹಲಿ ಪೋಲೀಸ್ ಇಲ್ಲಿಯವರೆಗೆ ಕೋಮಲ್ ಶರ್ಮಾ ಅವರನ್ನು ಬಂಧಿಸಲು ವಿಫಲವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೊಳಗಾದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರನ್ನು ದೆಹಲಿ ಪೊಲೀಸರು ಟಚ್‌ ಮಾಡಲೂ ಆಗಿಲ್ಲ” ಎಂದು ಸ್ವತಂತ್ರ ಪತ್ರಕರ್ತೆ ಸಾಕ್ಷಿ ಜೋಷಿ ಬೇಸರ ವ್ಯಕ್ತಪಡಿಸಿದ್ದಾರೆ.

ಯಾರು ಜುಬೇರ್?

ಪ್ರತಿ ನಿತ್ಯ ಸುಳ್ಳು ಸುದ್ದಿಗಳನ್ನು ಬೆತ್ತಲು ಮಾಡುತ್ತಿರುವ ‘Altnews’ ವೆಬ್ ಸೈಟ್‌ ಸಹ ಸಂಪಾದಕರಾದ ಜುಬೇರ್ ಮೂಲತಃ ಕರ್ನಾಟಕದವರು. ಅಲ್ಪಸಂಖ್ಯಾತರ ಮೇಲಿನ ಕಲ್ಪಿತ ಆರೋಪಗಳನ್ನು, ತಪ್ಪ ಸಂದೇಶಗಳನ್ನು ಅವರು ಸಾಕ್ಷಿ ಸಮೇತ ಬಯಲುಗೊಳಿಸಿದ್ದಾರೆ. ಅಷ್ಟು ಮಾತ್ರವಲ್ಲದೆ ಮುಖ್ಯವಾಹಿನಿ ಮಾಧ್ಯಮಗಳು ಹರಡುವ ಸುಳ್ಳುಗಳು, ದ್ವೇಷಪೂರಿತ ಕಾರ್ಯಕ್ರಮಗಳನ್ನು ಇವರು ಬೆತ್ತಲುಗೊಳಿಸಿದ್ದಾರೆ. ಇತ್ತೀಚೆಗೆ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಟೈಮ್ಸ್ ನೌ ಚಾನೆಲ್‌ನಲ್ಲಿ ಪ್ರವಾದಿಯವರಿಗೆ ಅವಮಾನ ಮಾಡಿದ ವಿಡಿಯೋವನ್ನು ಟೈಮ್ಸ್ ನೌ ಚಾನೆಲ್ ಡಿಲೀಟ್ ಮಾಡಿದ್ದರೂ ಸಹ ಅದನ್ನು ಡೌನ್‌ಲೌಡ್ ಮಾಡಿಟ್ಟು ಜಗತ್ತಿಗೆ ತಿಳಿಯುವಂತೆ ಮಾಡಿದ್ದು ಇದೇ ಜುಬೇರ್.

ಧರಮ್ ಸಂಸದ್ ಹೆಸರಿನಲ್ಲಿ ಯತಿನರಸಿಂಗಾನಂದ ಸರಸ್ವತಿ ಸೇರಿದಂತೆ ಇತರ ಧಾರ್ಮಿಕ ನಾಯಕರು ಮಾಡಿದ ದ್ವೇಷ ಭಾಷಣಗಳನ್ನು ಜುಬೇರ್ ನಿರಂತರವಾಗಿ ಪ್ರಚಾರ ಮಾಡಿ ಅವರ ಮೇಲೆ ಎಫ್‌ಐಆರ್ ದಾಖಲಾಗುವಂತೆ ಮಾಡಿದ್ದರು. ಅಲ್ಲದೇ ಎಲ್ಲೆ ತಪ್ಪು ಮಾಹಿತಿಗಳು, ದ್ವೇ‍ಷ ಭಾಷಣಗಳು ಕಂಡರೂ ಅವುಗಳನ್ನು ಸ್ಥಳೀಯ ಪೊಲೀಸರಿಗೆ ಟ್ಯಾಗ್ ಮಾಡುವ ಮೂಲಕ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದರು. ಜುಬೇರ್ ನಿಂದಾಗಿ ಹಲವಾರು ಜನರು ತಮ್ಮ ತಪ್ಪು ಮಾಹಿತಿಗಳ ಟ್ವೀಟ್‌ಗಳನ್ನು ಡಿಲೀಟ್ ಮಾಡಿದ್ದರು.

ಜುಬೇರ್‌ರವರ ಈ ಜನಪರ, ಪ್ರಜಾಪ್ರಭುತ್ವದ ಪರವಾಗಿನ ಕೆಲಸಗಳನ್ನು ಪರಿಗಣಿಸಿ ಅವರನ್ನು ನೊಬೆಲ್ ಶಾಂತಿ ಪುರಸ್ಕಾರಕ್ಕೆ ಶಾಂತಿ ಸಂಶೋಧನಾ ಸಂಸ್ಥೆ ಓಸ್ಲೊ (PRIO) ನಾಮನಿರ್ದೇಶನ ಮಾಡಿತ್ತು. “ಸತ್ಯ ಪರಿಶೀಲನೆಯ ವೆಬ್‌ಸೈಟ್‌ ಮೂಲಕ ಗಮನಾರ್ಹ ಕೊಡುಗೆ ನೀಡಿದ ಪ್ರತೀಕ್ ಸಿನ್ಹಾ ಮತ್ತು ಜುಬೈರ್ ಅವರನ್ನು ‘ಯೋಗ್ಯ ಅಭ್ಯರ್ಥಿಗಳು’ ಎಂದು ಪರಿಗಣಿಸಲಾಗಿದೆ. ಆಲ್ಟ್ ನ್ಯೂಸ್ ಬರೆದ ಸತ್ಯಶೋಧನಾ ಲೇಖನಗಳು ಹಲವು ನಕಲಿ ಸುದ್ದಿಗಳನ್ನು ಬಹಿರಂಗಪಡಿಸಿದೆ. ಭಾರತದಲ್ಲಿ ಮುಸ್ಲಿಂ ಸಮುದಾಯವನ್ನು ನಿಂದಿಸುವ ನಿಟ್ಟಿನಲ್ಲಿ ಹಬ್ಬುತ್ತಿರುವ ಹಲವು ಸುಳ್ಳುಸುದ್ದಿಗಳ ಸತ್ಯ ಪರಿಶೀಲನೆ ನಡೆಸಿದ ಹಿರಿಮೆ ಅವರಿಗಿದೆ” ಎಂದು ತಿಳಿಸಿತ್ತು.

ತನ್ನ ಈ ಜವಾಬ್ದಾರಿಯುತ ಕೆಲಸಗಳಿಗಾಗಿ ಬಲಪಂಥೀಯರಿಂದ ತನ್ನ ಜೀವಕ್ಕೆ ಬೆದರಿಕೆ ಎಂದು ಇತ್ತೀಚೆಗೆ ಜುಬೇರ್ ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಇದೀಗ ಅವರನ್ನೆ ದೆಹಲಿ ಪೊಲೀಸರು ಬಂಧಿಸಿರುವುದು ವಿಪರ್ಯಾಸವಾಗಿದೆ. ಆದರೆ ಜನರು ಜುಬೇರ್ ಪರ ನಿಂತು ಸತ್ಯದ ಜೊತೆ ನಾವಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ; ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ ಗಲಭೆಗಳಿಗೆ ಪ್ರಚೋದನೆ ಆರೋಪ: ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...