Homeಮುಖಪುಟಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ #IStandWithZubair ಹ್ಯಾಷ್‌ಟ್ಯಾಗ್‌

ಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ #IStandWithZubair ಹ್ಯಾಷ್‌ಟ್ಯಾಗ್‌

ಸೋಮವಾರ ಸಂಜೆಯಿಂದ ಹಿಡಿದು ಇಲ್ಲಿಯವರೆಗೆ #IStandWithZubair ಹ್ಯಾಷ್‌ಟ್ಯಾಗ್‌ನಲ್ಲಿ 5,83,000 ಟ್ವೀಟ್‌ಗಳಾಗಿವೆ.

- Advertisement -
- Advertisement -

2018ರ ಟ್ವೀಟ್ ಒಂದಕ್ಕೆ ಸಂಬಂಧಿಸಿ ದಿಟ್ಟ ಪತ್ರಕರ್ತ, ಆಲ್ಟ್‌ನ್ಯೂಸ್ ಸಹ ಸಂಪಾದಕ ಮೊಹಮ್ಮದ್ ಜುಬೇರ್‌ರನ್ನು ಬಂಧಿಸಿರುವ ದೆಹಲಿ ಪೊಲೀಸರ ಕ್ರಮಕ್ಕೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜುಬೇರ್‌ರನ್ನು ಬಂಧಿಸುವ ಮೂಲಕ ಸತ್ಯವನ್ನು ಬಂಧಿಸಿಡಲು ಸಾಧ್ಯವಿಲ್ಲ ಎಂದಿರುವ ಜನರು ಟ್ವಿಟರ್ ನಲ್ಲಿ #IStandWithZubair ಹ್ಯಾಷ್‌ಟ್ಯಾಗ್‌ ಟ್ರೆಂಡಿಂಗ್ ಮಾಡಿದ್ದಾರೆ.

ಸೋಮವಾರ ರಾತ್ರಿಯಿಂದಲೂ #IStandWithZubair ಹ್ಯಾಷ್‌ಟ್ಯಾಗ್‌ ಭಾರತದ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನದಲ್ಲಿದೆ. 5,83,000 ಟ್ವೀಟ್‌ಗಳಾಗಿವೆ.

ಜುಬೇರ್ ಬಂಧನವನ್ನು ಖಂಡಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಬಿಜೆಪಿಯ ದ್ವೇಷ, ಮತಾಂಧತೆ ಮತ್ತು ಸುಳ್ಳನ್ನು ಬೆತ್ತಲು ಮಾಡುವ ಪ್ರತಿಯೊಬ್ಬ ವ್ಯಕ್ತಿಯೂ ಅವರಿಗೆ ಬೆದರಿಕೆಯಾಗಿ ಪರಿಣಮಿಸಿದ್ದಾರೆ. ಸತ್ಯದ ಒಂದು ಧ್ವನಿಯನ್ನು ಬಂಧಿಸಿದರೆ ಅದು ಸಾವಿರಾರು ದನಿಗಳಾಗಿ ಮೊಳಗುತ್ತದೆ. ಯಾವಾಗಲೂ ದೌರ್ಜನ್ಯದ ಮೇಲೆ ಸತ್ಯವೇ ಜಯಗಳಿಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

“ಪತ್ರಿಕೋದ್ಯಮ ಎಂದರೆ ಪಟ್ಟಭದ್ರ ಹಿತಾಶಕ್ತಿಗಳು ಏನನ್ನು ಪ್ರಕಟಿಸಲು ಬಯಸುವುದಿಲ್ಲವೋ ಅದನ್ನು ಪ್ರಕಟಿಸುವುದು; ಉಳಿದಿದ್ದ ಸಾರ್ವಜನಿಕ ಸಂಪರ್ಕವಷ್ಟೆ” (ಜಾರ್ಜ್ ಆರ್ವೆಲ್, ಎಡಿಟ್ ಮಾಡಲಾಗಿದೆ) ಎಂದು ಹೋರಾಟಗಾರ ಯೋಗೇಂದ್ರ ಯಾದವ್ ಟ್ವೀಟ್ ಮಾಡಿದ್ದಾರೆ.

“ಯಾರು ಸುಳ್ಳು ಸಂದೇಶ ಹರಡಿದರೂ ಅದನ್ನು ಆಲ್ಟ್‌ನ್ಯೂಸ್ ಬಹಿರಂಗಗೊಳಿಸುತ್ತದೆ. ಸತ್ಯದ ಪರ ಅತ್ಯುತ್ತಮ ಕೆಲಸ ಮಾಡುತ್ತಿರುವ ಮೊಹಮ್ಮದ್ ಜುಬೇರ್ ಬಂಧನ ಖಂಡನೀಯ. ಕೂಡಲೇ ಅವರನ್ನು ಬಿಡುಗಡೆ ಮಾಡಿ” ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಒತ್ತಾಯಿಸಿದ್ದಾರೆ.

“ಒಬ್ಬರನ್ನಷ್ಟೇ ಫಾಲೋಯರ್‌ ಹೊಂದಿರುವ ಅನಾಮಧೇಯ ಟ್ವಿಟರ್ ಖಾತೆಯು ತಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ದೂರಿದ ಕಾರಣ ಜುಬೈರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆದರೆ ಹಿಂಸಾಚಾರದ ವಿಡಿಯೋ ಸಾಕ್ಷ್ಯಗಳ ಹೊರತಾಗಿಯೂ ಕೋಮಲ್ ಶರ್ಮಾ ಅವರನ್ನು ಬಂಧಿಸಲು ಸಾಧ್ಯವಾಗಲಿಲ್ಲ. ಈ ಇಡೀ ವ್ಯವಸ್ಥೆ ಎಷ್ಟು ಹಸ್ಯಾಸ್ಪದವಾಗಿದೆ” ಎಂದು ಹೋರಾಟಗಾರ ಧ್ರುವ್ ರಾಥೆ ಟ್ವೀಟ್‌ ಮಾಡಿದ್ದಾರೆ.

“ಭಾರತೀಯ ಮುಸ್ಲಿಮರು ಮತ್ತು ಇತರ 15 ದೇಶಗಳ ಮುಸ್ಲಿಮರ ಭಾವನೆಗಳನ್ನು ಘಾಸಿಗೊಳಿಸಿದ ಬಿಜೆಪಿಯ ವಕ್ತಾರರನ್ನು ದೆಹಲಿ ಪೊಲೀಸರು ಬಂಧಿಸಲಿಲ್ಲ. ಆದರೆ ಜುಬೈರ್‌ ಅವರನ್ನು ಬಂಧಿಸಲು ಯಾವುದೇ ಸಮಯ ತೆಗೆದುಕೊಳ್ಳಲಿಲ್ಲ” ಎಂದು ಕಾಂಗ್ರೆಸ್‌ ನಾಯಕರಾದ ಜಾವೇದ್‌ ವಿಷಾದಿಸಿದ್ದಾರೆ.

“ಜುಬೇರ್ ಒಬ್ಬ ಹೀರೋ. ಬಲಪಂಥೀಯರ ದ್ವೇಷದ ಭಾಷಣಗಳು ಮತ್ತು ದ್ವೇಷದ ಅಪರಾಧಗಳನ್ನು ಏಕಾಂಗಿಯಾಗಿ ಬಹಿರಂಗಪಡಿಸಿದ ವ್ಯಕ್ತಿ ಜುಬೈರ್‌” ಎಂದು ಪತ್ರಕರ್ತ ಕೌಶಿಕ್‌ ರಾಜ್‌ ಬಣ್ಣಿಸಿದ್ದಾರೆ.

“ಸುದ್ದಿ ವಾಹಿನಿಗಳಲ್ಲಿ ಪ್ರತಿದಿನ ದ್ವೇಷವನ್ನು ಹರಡುವವರನ್ನು ರಕ್ಷಿಸಲಾಗಿದೆ. ಪ್ರತಿನಿತ್ಯ ಸುಳ್ಳು ಸುದ್ದಿ ಬಯಲಿಗೆಳೆಯುವವರನ್ನು ಬಂಧಿಸಲಾಗುತ್ತದೆ. ದೆಹಲಿ ಪೋಲೀಸ್ ಇಲ್ಲಿಯವರೆಗೆ ಕೋಮಲ್ ಶರ್ಮಾ ಅವರನ್ನು ಬಂಧಿಸಲು ವಿಫಲವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೊಳಗಾದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರನ್ನು ದೆಹಲಿ ಪೊಲೀಸರು ಟಚ್‌ ಮಾಡಲೂ ಆಗಿಲ್ಲ” ಎಂದು ಸ್ವತಂತ್ರ ಪತ್ರಕರ್ತೆ ಸಾಕ್ಷಿ ಜೋಷಿ ಬೇಸರ ವ್ಯಕ್ತಪಡಿಸಿದ್ದಾರೆ.

ಯಾರು ಜುಬೇರ್?

ಪ್ರತಿ ನಿತ್ಯ ಸುಳ್ಳು ಸುದ್ದಿಗಳನ್ನು ಬೆತ್ತಲು ಮಾಡುತ್ತಿರುವ ‘Altnews’ ವೆಬ್ ಸೈಟ್‌ ಸಹ ಸಂಪಾದಕರಾದ ಜುಬೇರ್ ಮೂಲತಃ ಕರ್ನಾಟಕದವರು. ಅಲ್ಪಸಂಖ್ಯಾತರ ಮೇಲಿನ ಕಲ್ಪಿತ ಆರೋಪಗಳನ್ನು, ತಪ್ಪ ಸಂದೇಶಗಳನ್ನು ಅವರು ಸಾಕ್ಷಿ ಸಮೇತ ಬಯಲುಗೊಳಿಸಿದ್ದಾರೆ. ಅಷ್ಟು ಮಾತ್ರವಲ್ಲದೆ ಮುಖ್ಯವಾಹಿನಿ ಮಾಧ್ಯಮಗಳು ಹರಡುವ ಸುಳ್ಳುಗಳು, ದ್ವೇಷಪೂರಿತ ಕಾರ್ಯಕ್ರಮಗಳನ್ನು ಇವರು ಬೆತ್ತಲುಗೊಳಿಸಿದ್ದಾರೆ. ಇತ್ತೀಚೆಗೆ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಟೈಮ್ಸ್ ನೌ ಚಾನೆಲ್‌ನಲ್ಲಿ ಪ್ರವಾದಿಯವರಿಗೆ ಅವಮಾನ ಮಾಡಿದ ವಿಡಿಯೋವನ್ನು ಟೈಮ್ಸ್ ನೌ ಚಾನೆಲ್ ಡಿಲೀಟ್ ಮಾಡಿದ್ದರೂ ಸಹ ಅದನ್ನು ಡೌನ್‌ಲೌಡ್ ಮಾಡಿಟ್ಟು ಜಗತ್ತಿಗೆ ತಿಳಿಯುವಂತೆ ಮಾಡಿದ್ದು ಇದೇ ಜುಬೇರ್.

ಧರಮ್ ಸಂಸದ್ ಹೆಸರಿನಲ್ಲಿ ಯತಿನರಸಿಂಗಾನಂದ ಸರಸ್ವತಿ ಸೇರಿದಂತೆ ಇತರ ಧಾರ್ಮಿಕ ನಾಯಕರು ಮಾಡಿದ ದ್ವೇಷ ಭಾಷಣಗಳನ್ನು ಜುಬೇರ್ ನಿರಂತರವಾಗಿ ಪ್ರಚಾರ ಮಾಡಿ ಅವರ ಮೇಲೆ ಎಫ್‌ಐಆರ್ ದಾಖಲಾಗುವಂತೆ ಮಾಡಿದ್ದರು. ಅಲ್ಲದೇ ಎಲ್ಲೆ ತಪ್ಪು ಮಾಹಿತಿಗಳು, ದ್ವೇ‍ಷ ಭಾಷಣಗಳು ಕಂಡರೂ ಅವುಗಳನ್ನು ಸ್ಥಳೀಯ ಪೊಲೀಸರಿಗೆ ಟ್ಯಾಗ್ ಮಾಡುವ ಮೂಲಕ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದರು. ಜುಬೇರ್ ನಿಂದಾಗಿ ಹಲವಾರು ಜನರು ತಮ್ಮ ತಪ್ಪು ಮಾಹಿತಿಗಳ ಟ್ವೀಟ್‌ಗಳನ್ನು ಡಿಲೀಟ್ ಮಾಡಿದ್ದರು.

ಜುಬೇರ್‌ರವರ ಈ ಜನಪರ, ಪ್ರಜಾಪ್ರಭುತ್ವದ ಪರವಾಗಿನ ಕೆಲಸಗಳನ್ನು ಪರಿಗಣಿಸಿ ಅವರನ್ನು ನೊಬೆಲ್ ಶಾಂತಿ ಪುರಸ್ಕಾರಕ್ಕೆ ಶಾಂತಿ ಸಂಶೋಧನಾ ಸಂಸ್ಥೆ ಓಸ್ಲೊ (PRIO) ನಾಮನಿರ್ದೇಶನ ಮಾಡಿತ್ತು. “ಸತ್ಯ ಪರಿಶೀಲನೆಯ ವೆಬ್‌ಸೈಟ್‌ ಮೂಲಕ ಗಮನಾರ್ಹ ಕೊಡುಗೆ ನೀಡಿದ ಪ್ರತೀಕ್ ಸಿನ್ಹಾ ಮತ್ತು ಜುಬೈರ್ ಅವರನ್ನು ‘ಯೋಗ್ಯ ಅಭ್ಯರ್ಥಿಗಳು’ ಎಂದು ಪರಿಗಣಿಸಲಾಗಿದೆ. ಆಲ್ಟ್ ನ್ಯೂಸ್ ಬರೆದ ಸತ್ಯಶೋಧನಾ ಲೇಖನಗಳು ಹಲವು ನಕಲಿ ಸುದ್ದಿಗಳನ್ನು ಬಹಿರಂಗಪಡಿಸಿದೆ. ಭಾರತದಲ್ಲಿ ಮುಸ್ಲಿಂ ಸಮುದಾಯವನ್ನು ನಿಂದಿಸುವ ನಿಟ್ಟಿನಲ್ಲಿ ಹಬ್ಬುತ್ತಿರುವ ಹಲವು ಸುಳ್ಳುಸುದ್ದಿಗಳ ಸತ್ಯ ಪರಿಶೀಲನೆ ನಡೆಸಿದ ಹಿರಿಮೆ ಅವರಿಗಿದೆ” ಎಂದು ತಿಳಿಸಿತ್ತು.

ತನ್ನ ಈ ಜವಾಬ್ದಾರಿಯುತ ಕೆಲಸಗಳಿಗಾಗಿ ಬಲಪಂಥೀಯರಿಂದ ತನ್ನ ಜೀವಕ್ಕೆ ಬೆದರಿಕೆ ಎಂದು ಇತ್ತೀಚೆಗೆ ಜುಬೇರ್ ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಇದೀಗ ಅವರನ್ನೆ ದೆಹಲಿ ಪೊಲೀಸರು ಬಂಧಿಸಿರುವುದು ವಿಪರ್ಯಾಸವಾಗಿದೆ. ಆದರೆ ಜನರು ಜುಬೇರ್ ಪರ ನಿಂತು ಸತ್ಯದ ಜೊತೆ ನಾವಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ; ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ ಗಲಭೆಗಳಿಗೆ ಪ್ರಚೋದನೆ ಆರೋಪ: ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...