Homeಮುಖಪುಟಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ #IStandWithZubair ಹ್ಯಾಷ್‌ಟ್ಯಾಗ್‌

ಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ #IStandWithZubair ಹ್ಯಾಷ್‌ಟ್ಯಾಗ್‌

ಸೋಮವಾರ ಸಂಜೆಯಿಂದ ಹಿಡಿದು ಇಲ್ಲಿಯವರೆಗೆ #IStandWithZubair ಹ್ಯಾಷ್‌ಟ್ಯಾಗ್‌ನಲ್ಲಿ 5,83,000 ಟ್ವೀಟ್‌ಗಳಾಗಿವೆ.

- Advertisement -
- Advertisement -

2018ರ ಟ್ವೀಟ್ ಒಂದಕ್ಕೆ ಸಂಬಂಧಿಸಿ ದಿಟ್ಟ ಪತ್ರಕರ್ತ, ಆಲ್ಟ್‌ನ್ಯೂಸ್ ಸಹ ಸಂಪಾದಕ ಮೊಹಮ್ಮದ್ ಜುಬೇರ್‌ರನ್ನು ಬಂಧಿಸಿರುವ ದೆಹಲಿ ಪೊಲೀಸರ ಕ್ರಮಕ್ಕೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜುಬೇರ್‌ರನ್ನು ಬಂಧಿಸುವ ಮೂಲಕ ಸತ್ಯವನ್ನು ಬಂಧಿಸಿಡಲು ಸಾಧ್ಯವಿಲ್ಲ ಎಂದಿರುವ ಜನರು ಟ್ವಿಟರ್ ನಲ್ಲಿ #IStandWithZubair ಹ್ಯಾಷ್‌ಟ್ಯಾಗ್‌ ಟ್ರೆಂಡಿಂಗ್ ಮಾಡಿದ್ದಾರೆ.

ಸೋಮವಾರ ರಾತ್ರಿಯಿಂದಲೂ #IStandWithZubair ಹ್ಯಾಷ್‌ಟ್ಯಾಗ್‌ ಭಾರತದ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನದಲ್ಲಿದೆ. 5,83,000 ಟ್ವೀಟ್‌ಗಳಾಗಿವೆ.

ಜುಬೇರ್ ಬಂಧನವನ್ನು ಖಂಡಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಬಿಜೆಪಿಯ ದ್ವೇಷ, ಮತಾಂಧತೆ ಮತ್ತು ಸುಳ್ಳನ್ನು ಬೆತ್ತಲು ಮಾಡುವ ಪ್ರತಿಯೊಬ್ಬ ವ್ಯಕ್ತಿಯೂ ಅವರಿಗೆ ಬೆದರಿಕೆಯಾಗಿ ಪರಿಣಮಿಸಿದ್ದಾರೆ. ಸತ್ಯದ ಒಂದು ಧ್ವನಿಯನ್ನು ಬಂಧಿಸಿದರೆ ಅದು ಸಾವಿರಾರು ದನಿಗಳಾಗಿ ಮೊಳಗುತ್ತದೆ. ಯಾವಾಗಲೂ ದೌರ್ಜನ್ಯದ ಮೇಲೆ ಸತ್ಯವೇ ಜಯಗಳಿಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

“ಪತ್ರಿಕೋದ್ಯಮ ಎಂದರೆ ಪಟ್ಟಭದ್ರ ಹಿತಾಶಕ್ತಿಗಳು ಏನನ್ನು ಪ್ರಕಟಿಸಲು ಬಯಸುವುದಿಲ್ಲವೋ ಅದನ್ನು ಪ್ರಕಟಿಸುವುದು; ಉಳಿದಿದ್ದ ಸಾರ್ವಜನಿಕ ಸಂಪರ್ಕವಷ್ಟೆ” (ಜಾರ್ಜ್ ಆರ್ವೆಲ್, ಎಡಿಟ್ ಮಾಡಲಾಗಿದೆ) ಎಂದು ಹೋರಾಟಗಾರ ಯೋಗೇಂದ್ರ ಯಾದವ್ ಟ್ವೀಟ್ ಮಾಡಿದ್ದಾರೆ.

“ಯಾರು ಸುಳ್ಳು ಸಂದೇಶ ಹರಡಿದರೂ ಅದನ್ನು ಆಲ್ಟ್‌ನ್ಯೂಸ್ ಬಹಿರಂಗಗೊಳಿಸುತ್ತದೆ. ಸತ್ಯದ ಪರ ಅತ್ಯುತ್ತಮ ಕೆಲಸ ಮಾಡುತ್ತಿರುವ ಮೊಹಮ್ಮದ್ ಜುಬೇರ್ ಬಂಧನ ಖಂಡನೀಯ. ಕೂಡಲೇ ಅವರನ್ನು ಬಿಡುಗಡೆ ಮಾಡಿ” ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಒತ್ತಾಯಿಸಿದ್ದಾರೆ.

“ಒಬ್ಬರನ್ನಷ್ಟೇ ಫಾಲೋಯರ್‌ ಹೊಂದಿರುವ ಅನಾಮಧೇಯ ಟ್ವಿಟರ್ ಖಾತೆಯು ತಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ದೂರಿದ ಕಾರಣ ಜುಬೈರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆದರೆ ಹಿಂಸಾಚಾರದ ವಿಡಿಯೋ ಸಾಕ್ಷ್ಯಗಳ ಹೊರತಾಗಿಯೂ ಕೋಮಲ್ ಶರ್ಮಾ ಅವರನ್ನು ಬಂಧಿಸಲು ಸಾಧ್ಯವಾಗಲಿಲ್ಲ. ಈ ಇಡೀ ವ್ಯವಸ್ಥೆ ಎಷ್ಟು ಹಸ್ಯಾಸ್ಪದವಾಗಿದೆ” ಎಂದು ಹೋರಾಟಗಾರ ಧ್ರುವ್ ರಾಥೆ ಟ್ವೀಟ್‌ ಮಾಡಿದ್ದಾರೆ.

“ಭಾರತೀಯ ಮುಸ್ಲಿಮರು ಮತ್ತು ಇತರ 15 ದೇಶಗಳ ಮುಸ್ಲಿಮರ ಭಾವನೆಗಳನ್ನು ಘಾಸಿಗೊಳಿಸಿದ ಬಿಜೆಪಿಯ ವಕ್ತಾರರನ್ನು ದೆಹಲಿ ಪೊಲೀಸರು ಬಂಧಿಸಲಿಲ್ಲ. ಆದರೆ ಜುಬೈರ್‌ ಅವರನ್ನು ಬಂಧಿಸಲು ಯಾವುದೇ ಸಮಯ ತೆಗೆದುಕೊಳ್ಳಲಿಲ್ಲ” ಎಂದು ಕಾಂಗ್ರೆಸ್‌ ನಾಯಕರಾದ ಜಾವೇದ್‌ ವಿಷಾದಿಸಿದ್ದಾರೆ.

“ಜುಬೇರ್ ಒಬ್ಬ ಹೀರೋ. ಬಲಪಂಥೀಯರ ದ್ವೇಷದ ಭಾಷಣಗಳು ಮತ್ತು ದ್ವೇಷದ ಅಪರಾಧಗಳನ್ನು ಏಕಾಂಗಿಯಾಗಿ ಬಹಿರಂಗಪಡಿಸಿದ ವ್ಯಕ್ತಿ ಜುಬೈರ್‌” ಎಂದು ಪತ್ರಕರ್ತ ಕೌಶಿಕ್‌ ರಾಜ್‌ ಬಣ್ಣಿಸಿದ್ದಾರೆ.

“ಸುದ್ದಿ ವಾಹಿನಿಗಳಲ್ಲಿ ಪ್ರತಿದಿನ ದ್ವೇಷವನ್ನು ಹರಡುವವರನ್ನು ರಕ್ಷಿಸಲಾಗಿದೆ. ಪ್ರತಿನಿತ್ಯ ಸುಳ್ಳು ಸುದ್ದಿ ಬಯಲಿಗೆಳೆಯುವವರನ್ನು ಬಂಧಿಸಲಾಗುತ್ತದೆ. ದೆಹಲಿ ಪೋಲೀಸ್ ಇಲ್ಲಿಯವರೆಗೆ ಕೋಮಲ್ ಶರ್ಮಾ ಅವರನ್ನು ಬಂಧಿಸಲು ವಿಫಲವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೊಳಗಾದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರನ್ನು ದೆಹಲಿ ಪೊಲೀಸರು ಟಚ್‌ ಮಾಡಲೂ ಆಗಿಲ್ಲ” ಎಂದು ಸ್ವತಂತ್ರ ಪತ್ರಕರ್ತೆ ಸಾಕ್ಷಿ ಜೋಷಿ ಬೇಸರ ವ್ಯಕ್ತಪಡಿಸಿದ್ದಾರೆ.

ಯಾರು ಜುಬೇರ್?

ಪ್ರತಿ ನಿತ್ಯ ಸುಳ್ಳು ಸುದ್ದಿಗಳನ್ನು ಬೆತ್ತಲು ಮಾಡುತ್ತಿರುವ ‘Altnews’ ವೆಬ್ ಸೈಟ್‌ ಸಹ ಸಂಪಾದಕರಾದ ಜುಬೇರ್ ಮೂಲತಃ ಕರ್ನಾಟಕದವರು. ಅಲ್ಪಸಂಖ್ಯಾತರ ಮೇಲಿನ ಕಲ್ಪಿತ ಆರೋಪಗಳನ್ನು, ತಪ್ಪ ಸಂದೇಶಗಳನ್ನು ಅವರು ಸಾಕ್ಷಿ ಸಮೇತ ಬಯಲುಗೊಳಿಸಿದ್ದಾರೆ. ಅಷ್ಟು ಮಾತ್ರವಲ್ಲದೆ ಮುಖ್ಯವಾಹಿನಿ ಮಾಧ್ಯಮಗಳು ಹರಡುವ ಸುಳ್ಳುಗಳು, ದ್ವೇಷಪೂರಿತ ಕಾರ್ಯಕ್ರಮಗಳನ್ನು ಇವರು ಬೆತ್ತಲುಗೊಳಿಸಿದ್ದಾರೆ. ಇತ್ತೀಚೆಗೆ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಟೈಮ್ಸ್ ನೌ ಚಾನೆಲ್‌ನಲ್ಲಿ ಪ್ರವಾದಿಯವರಿಗೆ ಅವಮಾನ ಮಾಡಿದ ವಿಡಿಯೋವನ್ನು ಟೈಮ್ಸ್ ನೌ ಚಾನೆಲ್ ಡಿಲೀಟ್ ಮಾಡಿದ್ದರೂ ಸಹ ಅದನ್ನು ಡೌನ್‌ಲೌಡ್ ಮಾಡಿಟ್ಟು ಜಗತ್ತಿಗೆ ತಿಳಿಯುವಂತೆ ಮಾಡಿದ್ದು ಇದೇ ಜುಬೇರ್.

ಧರಮ್ ಸಂಸದ್ ಹೆಸರಿನಲ್ಲಿ ಯತಿನರಸಿಂಗಾನಂದ ಸರಸ್ವತಿ ಸೇರಿದಂತೆ ಇತರ ಧಾರ್ಮಿಕ ನಾಯಕರು ಮಾಡಿದ ದ್ವೇಷ ಭಾಷಣಗಳನ್ನು ಜುಬೇರ್ ನಿರಂತರವಾಗಿ ಪ್ರಚಾರ ಮಾಡಿ ಅವರ ಮೇಲೆ ಎಫ್‌ಐಆರ್ ದಾಖಲಾಗುವಂತೆ ಮಾಡಿದ್ದರು. ಅಲ್ಲದೇ ಎಲ್ಲೆ ತಪ್ಪು ಮಾಹಿತಿಗಳು, ದ್ವೇ‍ಷ ಭಾಷಣಗಳು ಕಂಡರೂ ಅವುಗಳನ್ನು ಸ್ಥಳೀಯ ಪೊಲೀಸರಿಗೆ ಟ್ಯಾಗ್ ಮಾಡುವ ಮೂಲಕ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದರು. ಜುಬೇರ್ ನಿಂದಾಗಿ ಹಲವಾರು ಜನರು ತಮ್ಮ ತಪ್ಪು ಮಾಹಿತಿಗಳ ಟ್ವೀಟ್‌ಗಳನ್ನು ಡಿಲೀಟ್ ಮಾಡಿದ್ದರು.

ಜುಬೇರ್‌ರವರ ಈ ಜನಪರ, ಪ್ರಜಾಪ್ರಭುತ್ವದ ಪರವಾಗಿನ ಕೆಲಸಗಳನ್ನು ಪರಿಗಣಿಸಿ ಅವರನ್ನು ನೊಬೆಲ್ ಶಾಂತಿ ಪುರಸ್ಕಾರಕ್ಕೆ ಶಾಂತಿ ಸಂಶೋಧನಾ ಸಂಸ್ಥೆ ಓಸ್ಲೊ (PRIO) ನಾಮನಿರ್ದೇಶನ ಮಾಡಿತ್ತು. “ಸತ್ಯ ಪರಿಶೀಲನೆಯ ವೆಬ್‌ಸೈಟ್‌ ಮೂಲಕ ಗಮನಾರ್ಹ ಕೊಡುಗೆ ನೀಡಿದ ಪ್ರತೀಕ್ ಸಿನ್ಹಾ ಮತ್ತು ಜುಬೈರ್ ಅವರನ್ನು ‘ಯೋಗ್ಯ ಅಭ್ಯರ್ಥಿಗಳು’ ಎಂದು ಪರಿಗಣಿಸಲಾಗಿದೆ. ಆಲ್ಟ್ ನ್ಯೂಸ್ ಬರೆದ ಸತ್ಯಶೋಧನಾ ಲೇಖನಗಳು ಹಲವು ನಕಲಿ ಸುದ್ದಿಗಳನ್ನು ಬಹಿರಂಗಪಡಿಸಿದೆ. ಭಾರತದಲ್ಲಿ ಮುಸ್ಲಿಂ ಸಮುದಾಯವನ್ನು ನಿಂದಿಸುವ ನಿಟ್ಟಿನಲ್ಲಿ ಹಬ್ಬುತ್ತಿರುವ ಹಲವು ಸುಳ್ಳುಸುದ್ದಿಗಳ ಸತ್ಯ ಪರಿಶೀಲನೆ ನಡೆಸಿದ ಹಿರಿಮೆ ಅವರಿಗಿದೆ” ಎಂದು ತಿಳಿಸಿತ್ತು.

ತನ್ನ ಈ ಜವಾಬ್ದಾರಿಯುತ ಕೆಲಸಗಳಿಗಾಗಿ ಬಲಪಂಥೀಯರಿಂದ ತನ್ನ ಜೀವಕ್ಕೆ ಬೆದರಿಕೆ ಎಂದು ಇತ್ತೀಚೆಗೆ ಜುಬೇರ್ ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಇದೀಗ ಅವರನ್ನೆ ದೆಹಲಿ ಪೊಲೀಸರು ಬಂಧಿಸಿರುವುದು ವಿಪರ್ಯಾಸವಾಗಿದೆ. ಆದರೆ ಜನರು ಜುಬೇರ್ ಪರ ನಿಂತು ಸತ್ಯದ ಜೊತೆ ನಾವಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ; ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ ಗಲಭೆಗಳಿಗೆ ಪ್ರಚೋದನೆ ಆರೋಪ: ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...