Homeಮುಖಪುಟಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ #IStandWithZubair ಹ್ಯಾಷ್‌ಟ್ಯಾಗ್‌

ಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ #IStandWithZubair ಹ್ಯಾಷ್‌ಟ್ಯಾಗ್‌

ಸೋಮವಾರ ಸಂಜೆಯಿಂದ ಹಿಡಿದು ಇಲ್ಲಿಯವರೆಗೆ #IStandWithZubair ಹ್ಯಾಷ್‌ಟ್ಯಾಗ್‌ನಲ್ಲಿ 5,83,000 ಟ್ವೀಟ್‌ಗಳಾಗಿವೆ.

- Advertisement -
- Advertisement -

2018ರ ಟ್ವೀಟ್ ಒಂದಕ್ಕೆ ಸಂಬಂಧಿಸಿ ದಿಟ್ಟ ಪತ್ರಕರ್ತ, ಆಲ್ಟ್‌ನ್ಯೂಸ್ ಸಹ ಸಂಪಾದಕ ಮೊಹಮ್ಮದ್ ಜುಬೇರ್‌ರನ್ನು ಬಂಧಿಸಿರುವ ದೆಹಲಿ ಪೊಲೀಸರ ಕ್ರಮಕ್ಕೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜುಬೇರ್‌ರನ್ನು ಬಂಧಿಸುವ ಮೂಲಕ ಸತ್ಯವನ್ನು ಬಂಧಿಸಿಡಲು ಸಾಧ್ಯವಿಲ್ಲ ಎಂದಿರುವ ಜನರು ಟ್ವಿಟರ್ ನಲ್ಲಿ #IStandWithZubair ಹ್ಯಾಷ್‌ಟ್ಯಾಗ್‌ ಟ್ರೆಂಡಿಂಗ್ ಮಾಡಿದ್ದಾರೆ.

ಸೋಮವಾರ ರಾತ್ರಿಯಿಂದಲೂ #IStandWithZubair ಹ್ಯಾಷ್‌ಟ್ಯಾಗ್‌ ಭಾರತದ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನದಲ್ಲಿದೆ. 5,83,000 ಟ್ವೀಟ್‌ಗಳಾಗಿವೆ.

ಜುಬೇರ್ ಬಂಧನವನ್ನು ಖಂಡಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಬಿಜೆಪಿಯ ದ್ವೇಷ, ಮತಾಂಧತೆ ಮತ್ತು ಸುಳ್ಳನ್ನು ಬೆತ್ತಲು ಮಾಡುವ ಪ್ರತಿಯೊಬ್ಬ ವ್ಯಕ್ತಿಯೂ ಅವರಿಗೆ ಬೆದರಿಕೆಯಾಗಿ ಪರಿಣಮಿಸಿದ್ದಾರೆ. ಸತ್ಯದ ಒಂದು ಧ್ವನಿಯನ್ನು ಬಂಧಿಸಿದರೆ ಅದು ಸಾವಿರಾರು ದನಿಗಳಾಗಿ ಮೊಳಗುತ್ತದೆ. ಯಾವಾಗಲೂ ದೌರ್ಜನ್ಯದ ಮೇಲೆ ಸತ್ಯವೇ ಜಯಗಳಿಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

“ಪತ್ರಿಕೋದ್ಯಮ ಎಂದರೆ ಪಟ್ಟಭದ್ರ ಹಿತಾಶಕ್ತಿಗಳು ಏನನ್ನು ಪ್ರಕಟಿಸಲು ಬಯಸುವುದಿಲ್ಲವೋ ಅದನ್ನು ಪ್ರಕಟಿಸುವುದು; ಉಳಿದಿದ್ದ ಸಾರ್ವಜನಿಕ ಸಂಪರ್ಕವಷ್ಟೆ” (ಜಾರ್ಜ್ ಆರ್ವೆಲ್, ಎಡಿಟ್ ಮಾಡಲಾಗಿದೆ) ಎಂದು ಹೋರಾಟಗಾರ ಯೋಗೇಂದ್ರ ಯಾದವ್ ಟ್ವೀಟ್ ಮಾಡಿದ್ದಾರೆ.

“ಯಾರು ಸುಳ್ಳು ಸಂದೇಶ ಹರಡಿದರೂ ಅದನ್ನು ಆಲ್ಟ್‌ನ್ಯೂಸ್ ಬಹಿರಂಗಗೊಳಿಸುತ್ತದೆ. ಸತ್ಯದ ಪರ ಅತ್ಯುತ್ತಮ ಕೆಲಸ ಮಾಡುತ್ತಿರುವ ಮೊಹಮ್ಮದ್ ಜುಬೇರ್ ಬಂಧನ ಖಂಡನೀಯ. ಕೂಡಲೇ ಅವರನ್ನು ಬಿಡುಗಡೆ ಮಾಡಿ” ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಒತ್ತಾಯಿಸಿದ್ದಾರೆ.

“ಒಬ್ಬರನ್ನಷ್ಟೇ ಫಾಲೋಯರ್‌ ಹೊಂದಿರುವ ಅನಾಮಧೇಯ ಟ್ವಿಟರ್ ಖಾತೆಯು ತಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ದೂರಿದ ಕಾರಣ ಜುಬೈರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆದರೆ ಹಿಂಸಾಚಾರದ ವಿಡಿಯೋ ಸಾಕ್ಷ್ಯಗಳ ಹೊರತಾಗಿಯೂ ಕೋಮಲ್ ಶರ್ಮಾ ಅವರನ್ನು ಬಂಧಿಸಲು ಸಾಧ್ಯವಾಗಲಿಲ್ಲ. ಈ ಇಡೀ ವ್ಯವಸ್ಥೆ ಎಷ್ಟು ಹಸ್ಯಾಸ್ಪದವಾಗಿದೆ” ಎಂದು ಹೋರಾಟಗಾರ ಧ್ರುವ್ ರಾಥೆ ಟ್ವೀಟ್‌ ಮಾಡಿದ್ದಾರೆ.

“ಭಾರತೀಯ ಮುಸ್ಲಿಮರು ಮತ್ತು ಇತರ 15 ದೇಶಗಳ ಮುಸ್ಲಿಮರ ಭಾವನೆಗಳನ್ನು ಘಾಸಿಗೊಳಿಸಿದ ಬಿಜೆಪಿಯ ವಕ್ತಾರರನ್ನು ದೆಹಲಿ ಪೊಲೀಸರು ಬಂಧಿಸಲಿಲ್ಲ. ಆದರೆ ಜುಬೈರ್‌ ಅವರನ್ನು ಬಂಧಿಸಲು ಯಾವುದೇ ಸಮಯ ತೆಗೆದುಕೊಳ್ಳಲಿಲ್ಲ” ಎಂದು ಕಾಂಗ್ರೆಸ್‌ ನಾಯಕರಾದ ಜಾವೇದ್‌ ವಿಷಾದಿಸಿದ್ದಾರೆ.

“ಜುಬೇರ್ ಒಬ್ಬ ಹೀರೋ. ಬಲಪಂಥೀಯರ ದ್ವೇಷದ ಭಾಷಣಗಳು ಮತ್ತು ದ್ವೇಷದ ಅಪರಾಧಗಳನ್ನು ಏಕಾಂಗಿಯಾಗಿ ಬಹಿರಂಗಪಡಿಸಿದ ವ್ಯಕ್ತಿ ಜುಬೈರ್‌” ಎಂದು ಪತ್ರಕರ್ತ ಕೌಶಿಕ್‌ ರಾಜ್‌ ಬಣ್ಣಿಸಿದ್ದಾರೆ.

“ಸುದ್ದಿ ವಾಹಿನಿಗಳಲ್ಲಿ ಪ್ರತಿದಿನ ದ್ವೇಷವನ್ನು ಹರಡುವವರನ್ನು ರಕ್ಷಿಸಲಾಗಿದೆ. ಪ್ರತಿನಿತ್ಯ ಸುಳ್ಳು ಸುದ್ದಿ ಬಯಲಿಗೆಳೆಯುವವರನ್ನು ಬಂಧಿಸಲಾಗುತ್ತದೆ. ದೆಹಲಿ ಪೋಲೀಸ್ ಇಲ್ಲಿಯವರೆಗೆ ಕೋಮಲ್ ಶರ್ಮಾ ಅವರನ್ನು ಬಂಧಿಸಲು ವಿಫಲವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೊಳಗಾದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರನ್ನು ದೆಹಲಿ ಪೊಲೀಸರು ಟಚ್‌ ಮಾಡಲೂ ಆಗಿಲ್ಲ” ಎಂದು ಸ್ವತಂತ್ರ ಪತ್ರಕರ್ತೆ ಸಾಕ್ಷಿ ಜೋಷಿ ಬೇಸರ ವ್ಯಕ್ತಪಡಿಸಿದ್ದಾರೆ.

ಯಾರು ಜುಬೇರ್?

ಪ್ರತಿ ನಿತ್ಯ ಸುಳ್ಳು ಸುದ್ದಿಗಳನ್ನು ಬೆತ್ತಲು ಮಾಡುತ್ತಿರುವ ‘Altnews’ ವೆಬ್ ಸೈಟ್‌ ಸಹ ಸಂಪಾದಕರಾದ ಜುಬೇರ್ ಮೂಲತಃ ಕರ್ನಾಟಕದವರು. ಅಲ್ಪಸಂಖ್ಯಾತರ ಮೇಲಿನ ಕಲ್ಪಿತ ಆರೋಪಗಳನ್ನು, ತಪ್ಪ ಸಂದೇಶಗಳನ್ನು ಅವರು ಸಾಕ್ಷಿ ಸಮೇತ ಬಯಲುಗೊಳಿಸಿದ್ದಾರೆ. ಅಷ್ಟು ಮಾತ್ರವಲ್ಲದೆ ಮುಖ್ಯವಾಹಿನಿ ಮಾಧ್ಯಮಗಳು ಹರಡುವ ಸುಳ್ಳುಗಳು, ದ್ವೇಷಪೂರಿತ ಕಾರ್ಯಕ್ರಮಗಳನ್ನು ಇವರು ಬೆತ್ತಲುಗೊಳಿಸಿದ್ದಾರೆ. ಇತ್ತೀಚೆಗೆ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಟೈಮ್ಸ್ ನೌ ಚಾನೆಲ್‌ನಲ್ಲಿ ಪ್ರವಾದಿಯವರಿಗೆ ಅವಮಾನ ಮಾಡಿದ ವಿಡಿಯೋವನ್ನು ಟೈಮ್ಸ್ ನೌ ಚಾನೆಲ್ ಡಿಲೀಟ್ ಮಾಡಿದ್ದರೂ ಸಹ ಅದನ್ನು ಡೌನ್‌ಲೌಡ್ ಮಾಡಿಟ್ಟು ಜಗತ್ತಿಗೆ ತಿಳಿಯುವಂತೆ ಮಾಡಿದ್ದು ಇದೇ ಜುಬೇರ್.

ಧರಮ್ ಸಂಸದ್ ಹೆಸರಿನಲ್ಲಿ ಯತಿನರಸಿಂಗಾನಂದ ಸರಸ್ವತಿ ಸೇರಿದಂತೆ ಇತರ ಧಾರ್ಮಿಕ ನಾಯಕರು ಮಾಡಿದ ದ್ವೇಷ ಭಾಷಣಗಳನ್ನು ಜುಬೇರ್ ನಿರಂತರವಾಗಿ ಪ್ರಚಾರ ಮಾಡಿ ಅವರ ಮೇಲೆ ಎಫ್‌ಐಆರ್ ದಾಖಲಾಗುವಂತೆ ಮಾಡಿದ್ದರು. ಅಲ್ಲದೇ ಎಲ್ಲೆ ತಪ್ಪು ಮಾಹಿತಿಗಳು, ದ್ವೇ‍ಷ ಭಾಷಣಗಳು ಕಂಡರೂ ಅವುಗಳನ್ನು ಸ್ಥಳೀಯ ಪೊಲೀಸರಿಗೆ ಟ್ಯಾಗ್ ಮಾಡುವ ಮೂಲಕ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದರು. ಜುಬೇರ್ ನಿಂದಾಗಿ ಹಲವಾರು ಜನರು ತಮ್ಮ ತಪ್ಪು ಮಾಹಿತಿಗಳ ಟ್ವೀಟ್‌ಗಳನ್ನು ಡಿಲೀಟ್ ಮಾಡಿದ್ದರು.

ಜುಬೇರ್‌ರವರ ಈ ಜನಪರ, ಪ್ರಜಾಪ್ರಭುತ್ವದ ಪರವಾಗಿನ ಕೆಲಸಗಳನ್ನು ಪರಿಗಣಿಸಿ ಅವರನ್ನು ನೊಬೆಲ್ ಶಾಂತಿ ಪುರಸ್ಕಾರಕ್ಕೆ ಶಾಂತಿ ಸಂಶೋಧನಾ ಸಂಸ್ಥೆ ಓಸ್ಲೊ (PRIO) ನಾಮನಿರ್ದೇಶನ ಮಾಡಿತ್ತು. “ಸತ್ಯ ಪರಿಶೀಲನೆಯ ವೆಬ್‌ಸೈಟ್‌ ಮೂಲಕ ಗಮನಾರ್ಹ ಕೊಡುಗೆ ನೀಡಿದ ಪ್ರತೀಕ್ ಸಿನ್ಹಾ ಮತ್ತು ಜುಬೈರ್ ಅವರನ್ನು ‘ಯೋಗ್ಯ ಅಭ್ಯರ್ಥಿಗಳು’ ಎಂದು ಪರಿಗಣಿಸಲಾಗಿದೆ. ಆಲ್ಟ್ ನ್ಯೂಸ್ ಬರೆದ ಸತ್ಯಶೋಧನಾ ಲೇಖನಗಳು ಹಲವು ನಕಲಿ ಸುದ್ದಿಗಳನ್ನು ಬಹಿರಂಗಪಡಿಸಿದೆ. ಭಾರತದಲ್ಲಿ ಮುಸ್ಲಿಂ ಸಮುದಾಯವನ್ನು ನಿಂದಿಸುವ ನಿಟ್ಟಿನಲ್ಲಿ ಹಬ್ಬುತ್ತಿರುವ ಹಲವು ಸುಳ್ಳುಸುದ್ದಿಗಳ ಸತ್ಯ ಪರಿಶೀಲನೆ ನಡೆಸಿದ ಹಿರಿಮೆ ಅವರಿಗಿದೆ” ಎಂದು ತಿಳಿಸಿತ್ತು.

ತನ್ನ ಈ ಜವಾಬ್ದಾರಿಯುತ ಕೆಲಸಗಳಿಗಾಗಿ ಬಲಪಂಥೀಯರಿಂದ ತನ್ನ ಜೀವಕ್ಕೆ ಬೆದರಿಕೆ ಎಂದು ಇತ್ತೀಚೆಗೆ ಜುಬೇರ್ ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಇದೀಗ ಅವರನ್ನೆ ದೆಹಲಿ ಪೊಲೀಸರು ಬಂಧಿಸಿರುವುದು ವಿಪರ್ಯಾಸವಾಗಿದೆ. ಆದರೆ ಜನರು ಜುಬೇರ್ ಪರ ನಿಂತು ಸತ್ಯದ ಜೊತೆ ನಾವಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ; ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ ಗಲಭೆಗಳಿಗೆ ಪ್ರಚೋದನೆ ಆರೋಪ: ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...