Homeಮುಖಪುಟಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ #IStandWithZubair ಹ್ಯಾಷ್‌ಟ್ಯಾಗ್‌

ಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ #IStandWithZubair ಹ್ಯಾಷ್‌ಟ್ಯಾಗ್‌

ಸೋಮವಾರ ಸಂಜೆಯಿಂದ ಹಿಡಿದು ಇಲ್ಲಿಯವರೆಗೆ #IStandWithZubair ಹ್ಯಾಷ್‌ಟ್ಯಾಗ್‌ನಲ್ಲಿ 5,83,000 ಟ್ವೀಟ್‌ಗಳಾಗಿವೆ.

- Advertisement -
- Advertisement -

2018ರ ಟ್ವೀಟ್ ಒಂದಕ್ಕೆ ಸಂಬಂಧಿಸಿ ದಿಟ್ಟ ಪತ್ರಕರ್ತ, ಆಲ್ಟ್‌ನ್ಯೂಸ್ ಸಹ ಸಂಪಾದಕ ಮೊಹಮ್ಮದ್ ಜುಬೇರ್‌ರನ್ನು ಬಂಧಿಸಿರುವ ದೆಹಲಿ ಪೊಲೀಸರ ಕ್ರಮಕ್ಕೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜುಬೇರ್‌ರನ್ನು ಬಂಧಿಸುವ ಮೂಲಕ ಸತ್ಯವನ್ನು ಬಂಧಿಸಿಡಲು ಸಾಧ್ಯವಿಲ್ಲ ಎಂದಿರುವ ಜನರು ಟ್ವಿಟರ್ ನಲ್ಲಿ #IStandWithZubair ಹ್ಯಾಷ್‌ಟ್ಯಾಗ್‌ ಟ್ರೆಂಡಿಂಗ್ ಮಾಡಿದ್ದಾರೆ.

ಸೋಮವಾರ ರಾತ್ರಿಯಿಂದಲೂ #IStandWithZubair ಹ್ಯಾಷ್‌ಟ್ಯಾಗ್‌ ಭಾರತದ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನದಲ್ಲಿದೆ. 5,83,000 ಟ್ವೀಟ್‌ಗಳಾಗಿವೆ.

ಜುಬೇರ್ ಬಂಧನವನ್ನು ಖಂಡಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಬಿಜೆಪಿಯ ದ್ವೇಷ, ಮತಾಂಧತೆ ಮತ್ತು ಸುಳ್ಳನ್ನು ಬೆತ್ತಲು ಮಾಡುವ ಪ್ರತಿಯೊಬ್ಬ ವ್ಯಕ್ತಿಯೂ ಅವರಿಗೆ ಬೆದರಿಕೆಯಾಗಿ ಪರಿಣಮಿಸಿದ್ದಾರೆ. ಸತ್ಯದ ಒಂದು ಧ್ವನಿಯನ್ನು ಬಂಧಿಸಿದರೆ ಅದು ಸಾವಿರಾರು ದನಿಗಳಾಗಿ ಮೊಳಗುತ್ತದೆ. ಯಾವಾಗಲೂ ದೌರ್ಜನ್ಯದ ಮೇಲೆ ಸತ್ಯವೇ ಜಯಗಳಿಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

“ಪತ್ರಿಕೋದ್ಯಮ ಎಂದರೆ ಪಟ್ಟಭದ್ರ ಹಿತಾಶಕ್ತಿಗಳು ಏನನ್ನು ಪ್ರಕಟಿಸಲು ಬಯಸುವುದಿಲ್ಲವೋ ಅದನ್ನು ಪ್ರಕಟಿಸುವುದು; ಉಳಿದಿದ್ದ ಸಾರ್ವಜನಿಕ ಸಂಪರ್ಕವಷ್ಟೆ” (ಜಾರ್ಜ್ ಆರ್ವೆಲ್, ಎಡಿಟ್ ಮಾಡಲಾಗಿದೆ) ಎಂದು ಹೋರಾಟಗಾರ ಯೋಗೇಂದ್ರ ಯಾದವ್ ಟ್ವೀಟ್ ಮಾಡಿದ್ದಾರೆ.

“ಯಾರು ಸುಳ್ಳು ಸಂದೇಶ ಹರಡಿದರೂ ಅದನ್ನು ಆಲ್ಟ್‌ನ್ಯೂಸ್ ಬಹಿರಂಗಗೊಳಿಸುತ್ತದೆ. ಸತ್ಯದ ಪರ ಅತ್ಯುತ್ತಮ ಕೆಲಸ ಮಾಡುತ್ತಿರುವ ಮೊಹಮ್ಮದ್ ಜುಬೇರ್ ಬಂಧನ ಖಂಡನೀಯ. ಕೂಡಲೇ ಅವರನ್ನು ಬಿಡುಗಡೆ ಮಾಡಿ” ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಒತ್ತಾಯಿಸಿದ್ದಾರೆ.

“ಒಬ್ಬರನ್ನಷ್ಟೇ ಫಾಲೋಯರ್‌ ಹೊಂದಿರುವ ಅನಾಮಧೇಯ ಟ್ವಿಟರ್ ಖಾತೆಯು ತಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ದೂರಿದ ಕಾರಣ ಜುಬೈರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆದರೆ ಹಿಂಸಾಚಾರದ ವಿಡಿಯೋ ಸಾಕ್ಷ್ಯಗಳ ಹೊರತಾಗಿಯೂ ಕೋಮಲ್ ಶರ್ಮಾ ಅವರನ್ನು ಬಂಧಿಸಲು ಸಾಧ್ಯವಾಗಲಿಲ್ಲ. ಈ ಇಡೀ ವ್ಯವಸ್ಥೆ ಎಷ್ಟು ಹಸ್ಯಾಸ್ಪದವಾಗಿದೆ” ಎಂದು ಹೋರಾಟಗಾರ ಧ್ರುವ್ ರಾಥೆ ಟ್ವೀಟ್‌ ಮಾಡಿದ್ದಾರೆ.

“ಭಾರತೀಯ ಮುಸ್ಲಿಮರು ಮತ್ತು ಇತರ 15 ದೇಶಗಳ ಮುಸ್ಲಿಮರ ಭಾವನೆಗಳನ್ನು ಘಾಸಿಗೊಳಿಸಿದ ಬಿಜೆಪಿಯ ವಕ್ತಾರರನ್ನು ದೆಹಲಿ ಪೊಲೀಸರು ಬಂಧಿಸಲಿಲ್ಲ. ಆದರೆ ಜುಬೈರ್‌ ಅವರನ್ನು ಬಂಧಿಸಲು ಯಾವುದೇ ಸಮಯ ತೆಗೆದುಕೊಳ್ಳಲಿಲ್ಲ” ಎಂದು ಕಾಂಗ್ರೆಸ್‌ ನಾಯಕರಾದ ಜಾವೇದ್‌ ವಿಷಾದಿಸಿದ್ದಾರೆ.

“ಜುಬೇರ್ ಒಬ್ಬ ಹೀರೋ. ಬಲಪಂಥೀಯರ ದ್ವೇಷದ ಭಾಷಣಗಳು ಮತ್ತು ದ್ವೇಷದ ಅಪರಾಧಗಳನ್ನು ಏಕಾಂಗಿಯಾಗಿ ಬಹಿರಂಗಪಡಿಸಿದ ವ್ಯಕ್ತಿ ಜುಬೈರ್‌” ಎಂದು ಪತ್ರಕರ್ತ ಕೌಶಿಕ್‌ ರಾಜ್‌ ಬಣ್ಣಿಸಿದ್ದಾರೆ.

“ಸುದ್ದಿ ವಾಹಿನಿಗಳಲ್ಲಿ ಪ್ರತಿದಿನ ದ್ವೇಷವನ್ನು ಹರಡುವವರನ್ನು ರಕ್ಷಿಸಲಾಗಿದೆ. ಪ್ರತಿನಿತ್ಯ ಸುಳ್ಳು ಸುದ್ದಿ ಬಯಲಿಗೆಳೆಯುವವರನ್ನು ಬಂಧಿಸಲಾಗುತ್ತದೆ. ದೆಹಲಿ ಪೋಲೀಸ್ ಇಲ್ಲಿಯವರೆಗೆ ಕೋಮಲ್ ಶರ್ಮಾ ಅವರನ್ನು ಬಂಧಿಸಲು ವಿಫಲವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೊಳಗಾದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರನ್ನು ದೆಹಲಿ ಪೊಲೀಸರು ಟಚ್‌ ಮಾಡಲೂ ಆಗಿಲ್ಲ” ಎಂದು ಸ್ವತಂತ್ರ ಪತ್ರಕರ್ತೆ ಸಾಕ್ಷಿ ಜೋಷಿ ಬೇಸರ ವ್ಯಕ್ತಪಡಿಸಿದ್ದಾರೆ.

ಯಾರು ಜುಬೇರ್?

ಪ್ರತಿ ನಿತ್ಯ ಸುಳ್ಳು ಸುದ್ದಿಗಳನ್ನು ಬೆತ್ತಲು ಮಾಡುತ್ತಿರುವ ‘Altnews’ ವೆಬ್ ಸೈಟ್‌ ಸಹ ಸಂಪಾದಕರಾದ ಜುಬೇರ್ ಮೂಲತಃ ಕರ್ನಾಟಕದವರು. ಅಲ್ಪಸಂಖ್ಯಾತರ ಮೇಲಿನ ಕಲ್ಪಿತ ಆರೋಪಗಳನ್ನು, ತಪ್ಪ ಸಂದೇಶಗಳನ್ನು ಅವರು ಸಾಕ್ಷಿ ಸಮೇತ ಬಯಲುಗೊಳಿಸಿದ್ದಾರೆ. ಅಷ್ಟು ಮಾತ್ರವಲ್ಲದೆ ಮುಖ್ಯವಾಹಿನಿ ಮಾಧ್ಯಮಗಳು ಹರಡುವ ಸುಳ್ಳುಗಳು, ದ್ವೇಷಪೂರಿತ ಕಾರ್ಯಕ್ರಮಗಳನ್ನು ಇವರು ಬೆತ್ತಲುಗೊಳಿಸಿದ್ದಾರೆ. ಇತ್ತೀಚೆಗೆ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಟೈಮ್ಸ್ ನೌ ಚಾನೆಲ್‌ನಲ್ಲಿ ಪ್ರವಾದಿಯವರಿಗೆ ಅವಮಾನ ಮಾಡಿದ ವಿಡಿಯೋವನ್ನು ಟೈಮ್ಸ್ ನೌ ಚಾನೆಲ್ ಡಿಲೀಟ್ ಮಾಡಿದ್ದರೂ ಸಹ ಅದನ್ನು ಡೌನ್‌ಲೌಡ್ ಮಾಡಿಟ್ಟು ಜಗತ್ತಿಗೆ ತಿಳಿಯುವಂತೆ ಮಾಡಿದ್ದು ಇದೇ ಜುಬೇರ್.

ಧರಮ್ ಸಂಸದ್ ಹೆಸರಿನಲ್ಲಿ ಯತಿನರಸಿಂಗಾನಂದ ಸರಸ್ವತಿ ಸೇರಿದಂತೆ ಇತರ ಧಾರ್ಮಿಕ ನಾಯಕರು ಮಾಡಿದ ದ್ವೇಷ ಭಾಷಣಗಳನ್ನು ಜುಬೇರ್ ನಿರಂತರವಾಗಿ ಪ್ರಚಾರ ಮಾಡಿ ಅವರ ಮೇಲೆ ಎಫ್‌ಐಆರ್ ದಾಖಲಾಗುವಂತೆ ಮಾಡಿದ್ದರು. ಅಲ್ಲದೇ ಎಲ್ಲೆ ತಪ್ಪು ಮಾಹಿತಿಗಳು, ದ್ವೇ‍ಷ ಭಾಷಣಗಳು ಕಂಡರೂ ಅವುಗಳನ್ನು ಸ್ಥಳೀಯ ಪೊಲೀಸರಿಗೆ ಟ್ಯಾಗ್ ಮಾಡುವ ಮೂಲಕ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದರು. ಜುಬೇರ್ ನಿಂದಾಗಿ ಹಲವಾರು ಜನರು ತಮ್ಮ ತಪ್ಪು ಮಾಹಿತಿಗಳ ಟ್ವೀಟ್‌ಗಳನ್ನು ಡಿಲೀಟ್ ಮಾಡಿದ್ದರು.

ಜುಬೇರ್‌ರವರ ಈ ಜನಪರ, ಪ್ರಜಾಪ್ರಭುತ್ವದ ಪರವಾಗಿನ ಕೆಲಸಗಳನ್ನು ಪರಿಗಣಿಸಿ ಅವರನ್ನು ನೊಬೆಲ್ ಶಾಂತಿ ಪುರಸ್ಕಾರಕ್ಕೆ ಶಾಂತಿ ಸಂಶೋಧನಾ ಸಂಸ್ಥೆ ಓಸ್ಲೊ (PRIO) ನಾಮನಿರ್ದೇಶನ ಮಾಡಿತ್ತು. “ಸತ್ಯ ಪರಿಶೀಲನೆಯ ವೆಬ್‌ಸೈಟ್‌ ಮೂಲಕ ಗಮನಾರ್ಹ ಕೊಡುಗೆ ನೀಡಿದ ಪ್ರತೀಕ್ ಸಿನ್ಹಾ ಮತ್ತು ಜುಬೈರ್ ಅವರನ್ನು ‘ಯೋಗ್ಯ ಅಭ್ಯರ್ಥಿಗಳು’ ಎಂದು ಪರಿಗಣಿಸಲಾಗಿದೆ. ಆಲ್ಟ್ ನ್ಯೂಸ್ ಬರೆದ ಸತ್ಯಶೋಧನಾ ಲೇಖನಗಳು ಹಲವು ನಕಲಿ ಸುದ್ದಿಗಳನ್ನು ಬಹಿರಂಗಪಡಿಸಿದೆ. ಭಾರತದಲ್ಲಿ ಮುಸ್ಲಿಂ ಸಮುದಾಯವನ್ನು ನಿಂದಿಸುವ ನಿಟ್ಟಿನಲ್ಲಿ ಹಬ್ಬುತ್ತಿರುವ ಹಲವು ಸುಳ್ಳುಸುದ್ದಿಗಳ ಸತ್ಯ ಪರಿಶೀಲನೆ ನಡೆಸಿದ ಹಿರಿಮೆ ಅವರಿಗಿದೆ” ಎಂದು ತಿಳಿಸಿತ್ತು.

ತನ್ನ ಈ ಜವಾಬ್ದಾರಿಯುತ ಕೆಲಸಗಳಿಗಾಗಿ ಬಲಪಂಥೀಯರಿಂದ ತನ್ನ ಜೀವಕ್ಕೆ ಬೆದರಿಕೆ ಎಂದು ಇತ್ತೀಚೆಗೆ ಜುಬೇರ್ ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಇದೀಗ ಅವರನ್ನೆ ದೆಹಲಿ ಪೊಲೀಸರು ಬಂಧಿಸಿರುವುದು ವಿಪರ್ಯಾಸವಾಗಿದೆ. ಆದರೆ ಜನರು ಜುಬೇರ್ ಪರ ನಿಂತು ಸತ್ಯದ ಜೊತೆ ನಾವಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ; ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ ಗಲಭೆಗಳಿಗೆ ಪ್ರಚೋದನೆ ಆರೋಪ: ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....