Homeಕರ್ನಾಟಕ'ಸತ್ಯ ಆದಷ್ಟು ಬೇಗ ಹೊರಬರಲಿದೆ..'; ಲೈಂಗಿಕ ಹಗರಣದ ಆರೋಪಿ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ

‘ಸತ್ಯ ಆದಷ್ಟು ಬೇಗ ಹೊರಬರಲಿದೆ..’; ಲೈಂಗಿಕ ಹಗರಣದ ಆರೋಪಿ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ

- Advertisement -
- Advertisement -

ದೇಶದಾದ್ಯಂತ ಭಾರೀ ಸುದ್ದಿಯಾಗಿರುವ, ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಲೈಂಗಿಕ ಹಗರಣದ ಪ್ರಮುಖ ಆರೋಪಿ, ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ನೋಟಿಸ್ ನೀಡಿದ ನಂತರ ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನನ್ನ ವಕೀಲರ ಮೂಲಕ ಎಸ್‌ಐಟಿ ಮುಖ್ಯಸ್ಥರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ” ಎಂದು ಹೇಳಿರುವ ಅವರು, ವಿಚಾರಣೆಗೆ ಹಾಜರಾಗಲು ಸಮಯಾವಕಾಶ ಕೋರಿ ವಕೀಲರ ಮೂಲಕ ಮನವಿ ಸಲ್ಲಿಸಿದ್ದಾರೆ.

ಪ್ರಜ್ವಲ್ ಪರವಾಗಿ ವಕೀಲರು ಬರೆದ ಪತ್ರದಲ್ಲಿ ಏನಿದೆ?

“ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ನನ್ನ ಕಕ್ಷಿದಾರರಾದ ಪ್ರಜ್ವಲ್‌ ರವರ ಮನೆಯ ಮೇಲೆ ತಮ್ಮ ಕಛೇರಿಯಿಂದ ಕಳುಹಿಸಿರುವ ನೋಟಿಸನ್ನು ಅಂಟಿಸಿರುವ ಬಗ್ಗೆ ನನಗೆ ನನ್ನ ಕಕ್ಷಿದಾರರಾದ ಪ್ರಜ್ವಲ್‌ ರವರ ಕುಟುಂಬದವರಿಂದ ಬಂದ ಮಾಹಿತಿ ಪ್ರಕಾರ ಕಲ೦ 41 (ಎ) ಸಿ.ಆರ್‌.ಪಿ.ಸಿ ದಿನಾಂಕ:30-04-2024ರ ತಮ್ಮ ನೋಟಿಸ್‌ ನಲ್ಲಿ ತಾವು ದಿನಾಂಕ:01-05-2024 ರಂದು ತಮ್ಮ ಮುಂದೆ ಹಾಜರಾಗಲು ತಿಳಿಸಿರುತ್ತೀರಿ. ಆದರೆ, ನನ್ನ ಕಕ್ಷಿದಾರರಾದ ಪ್ರಜ್ವಲ್‌ ರೇವಣ್ಣ ರವರು ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದು, ಅವರಿಗೆ ನೋಟಿಸ್‌ನ ಬಗ್ಗೆ ವಿಷಯ ತಿಳಿಸಿದ್ದು, ನನ್ನ ಕಕ್ಷಿದಾರರು ಬೆ೦ಗಳೂರಿಗೆ ಬಂದು ತಮ್ಮ ಮುಂದೆ ನೋಟಿಸ್‌ನ ಸೂಚನೆಯಂತೆ ಹಾಜರಾಗಲು 7 ದಿನಗಳ ಕಾಲಾವಕಾಶ ಅಗತ್ಯವಿರುವುದಾಗಿ ತಿಳಿಸಿದ್ದು, ನನ್ನ ಕಕ್ಷಿದಾರರಿಗೆ ಸುಮಾರು 7 ದಿನಗಳ ಕಾಲಾವಕಾಶ ಕೊಟ್ಟು ಮತ್ತೊಂದು ದಿನಾಂಕದಂದು ತಮ್ಮ ಮುಂದೆ ವಿಚಾರಣೆಗಾಗಿ ಹಾಜರಾಗಲು ಅವಕಾಶ ನೀಡಬೇಕೆಂದು ಈ ಮೂಲಕ ತಮ್ಮಲ್ಲಿ ನನ್ನ ಕಕ್ಷಿದಾರರ ಪರವಾಗಿ ಕೋರುತ್ತೇನೆ” ಎಂದು ವಕೀಲರಾದ ಅರುಣ್ ಜಿ ಎಂಬಿವವರು ಪತ್ರ ಬರೆದಿದ್ದಾರೆ.

ಎಸ್‌ಐಟಿ ಮುಂದೆ ಹಾಜರಾದ 10 ಜನ ಸಂತ್ರಸ್ತೆಯರು:

ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ವಿಡಿಯೊಗಳು ಎಲ್ಲೆಡೆ ವೈರಲ್ ಆದ ನಂತರ ರಾಜ್ಯ ಸರ್ಕಾರ ತನಿಖೆಗೆ ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಿದ್ದು, ತನಿಖಾ ತಂಡ ರಚಿಸುವ ಆದೇಶ ಹೊರಬಿದ್ದ ದಿನದಿಂದ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ ಎಂದು ಸುದ್ದಿಯಾಗಿದೆ.

ಈ ನಡುವೆ ಎಸ್‌ಐಟಿ ಅಧಿಕಾರಿಗಳ ಮುಂದೆ ಈವರೆಗೆ 10ಕ್ಕೂ ಹೆಚ್ಚು ಸಂತ್ರಸ್ತೆಯರು ಹೇಳಿಕೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು, ಏ.30ರಂದು ಪ್ರಕರಣದ ಪ್ರಮುಖ ಆರೋಪಿಗಳಾದ ಎಚ್‌ಡಿ ರೇವಣ್ಣ ಮತ್ತು ಪ್ರಜ್ವಲ್ ಅವರಿಗೆ ಅಧಿಕಾರಿಗಳು ನೋಟಿಸ್ ಕೊಟ್ಟು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.

ಹಿರಿಯ ಪೊಲೀಸ್ ಆಧಿಕಾರಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚಿಸಲಾಗಿದ್ದು, ಮೈಸೂರು ಎಸ್‌ಪಿ ಸೀಮಾ ಲಾಟ್ಕರ್, ಹೆಚ್ಚುವರಿ ಎಸ್‌ಪಿ ಸುಮನ್ ಪನ್ನೇಕರ್ ಅವರನ್ನ ನಿಯೋಜಿಸಲಾಗಿದೆ. ಇದೀಗ ರಾಜ್ಯ ಸರ್ಕಾರ 18 ಮಂದಿ ಅಧಿಕಾರಿ ಹಾಗೂ ಸಿಬ್ಬಂದಿಯನ್ನ ನಿಯೋಜಿಸಿದೆ‌. ಇದರಿಂದ ಎಸ್ಐಟಿ ತನಿಖೆ ಇನ್ನಷ್ಟು ಬಲಗೊಂಡಿದೆ.

ಬೆಂಗಳೂರು ನಗರದ ಮಾರತ್ ಹಳ್ಳಿ ಉಪ ವಿಭಾಗದ ಎಸಿಪಿ ಪ್ರಿಯದರ್ಶಿನಿ ಈಶ್ವರ್ ಸಾನಿಕೊಪ್ಪ, ಬೆಂಗಳೂರು ನಗರ ಸಿಸಿಬಿ ಎಸಿಪಿ ಸತ್ಯನಾರಾಯಣ ಸಿಂಗ್ ಎಸ್.ಬಿ., ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ಧನ್ಯಾ ಎನ್. ನಾಯ್ಕ್, ಮಂಗಳೂರು ಉರ್ವಾ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಭಾರತಿ ಜಿ., ಕೆ.ಆರ್. ಪೇಟೆ ಟೌನ್ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಸುಮರಾಣಿ ಬಿ.ಎಸ್., ಆಲನಹಳ್ಳಿ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಸ್ವರ್ಣಾ ಜಿ.ಎಸ್., ವೈಟ್ ಫೀಲ್ಡ್ ನ ಸೆನ್ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ಹೇಮಂತ್ ಕುಮಾರ್ ಎಂ., ಬೆಂಗಳೂರು ನಗರ ಸಿಸಿಬಿ ಪೊಲೀಸ್ ಇನ್ ಸ್ಪೆಕ್ಟರ್ ರಾಜಾ ಜಿ.ಸಿ., ಉಡುಪಿ ಮಲ್ಪೆ ಸಿಎಸ್‌ಪಿ ಪಿಎಸ್‌ಐ ವೈಲೆಟ್ ಫ್ಲೆಮೀನಾ ಸೇರಿದಂತೆ 18 ಮಂದಿಯನ್ನು ಓಓಡಿ ಆಧಾರದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಎಸ್‌ಐಟಿಗೆ ಸರ್ಕಾರ ನಿಯೋಜಿಸಿದೆ.

ಇದನ್ನೂ ಓದಿ; ಪ್ರಜ್ವಲ್ ರೇವಣ್ಣ ದೇಶ ತೊರೆಯುವುದನ್ನು ಪ್ರಧಾನಿ ಮೋದಿ ತಡೆದಿಲ್ಲ: ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...