Homeಕರ್ನಾಟಕಸಿಎಂ ಸ್ಥಾನದ ಹಗ್ಗಜಗ್ಗಾಟಕ್ಕೆ ಬಿತ್ತು ಬ್ರೇಕ್: ಸಿದ್ದು-ಸಿಎಂ, ಡಿಕೆಶಿ-ಡಿಸಿಎಂ; ಇಂದು ಶಾಸಕಾಂಗ ಸಭೆ

ಸಿಎಂ ಸ್ಥಾನದ ಹಗ್ಗಜಗ್ಗಾಟಕ್ಕೆ ಬಿತ್ತು ಬ್ರೇಕ್: ಸಿದ್ದು-ಸಿಎಂ, ಡಿಕೆಶಿ-ಡಿಸಿಎಂ; ಇಂದು ಶಾಸಕಾಂಗ ಸಭೆ

- Advertisement -
- Advertisement -

ರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸ್ಥಾನದ ಆಯ್ಕೆಯ ಬಳಿಕ ಕಾಂಗ್ರೆಸ್ ಶಾಸಕಾಂಗ ಸಭೆಗೆ ಶಾಸಕರನ್ನು ಆಹ್ವಾನಿಸಲಾಗಿದೆ. ಇಂದು(ಮೇ 18) ಸಂಜೆ 7ಗಂಟೆಗೆ ಬೆಂಗಳೂರು ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಗಾಂಧಿ ಭವನದಲ್ಲಿ ನೂತನವಾಗಿ ಆಯ್ಕೆಯಾಗಿರುವ ವಿಧಾನಸಭೆ ಸದಸ್ಯರುಗಳು, ವಿಧಾನಪರಿಷತ್ ಸದಸ್ಯರುಗಳು ಹಾಗೂ ಸಂಸದರನ್ನು ಒಳಗೊಂಡ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಗೆ ಎಲ್ಲಾ ಸದಸ್ಯರುಗಳು ತಪ್ಪದೇ ಭಾಗವಹಿಸಬೇಕಾಗಿ ಕೋರಲಾಗಿದೆ.

ಮೇ 13ರಂದು ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ ಸಿಎಂ ಪಟ್ಟಕ್ಕಾಗಿ ನಡೆದ ಮುಸುಕಿನ ಗುದ್ದಾಟ ಕೊನೆಗೂ ಕೊನೆಗೊಂಡಿದೆ. ದೆಹಲಿಯಲ್ಲಿ ಸರಣಿ ಸಭೆಗಳು, ಚರ್ಚೆಗಳು ನಡೆದ ಬಳಿಕ ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಇತ್ತ ಸಿಎಂ ಆಕಾಂಕ್ಷಿಯಾಗಿದ್ದ ಡಿಕೆ ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ.

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಅವರು ಬುಧವಾರ ತಡರಾತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಜತೆಗೆ ಮಾತುಕತೆ ನಡೆಸಿದ್ದು, ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಅಂತಿಮ ನಿರ್ಧಾರ ಕೈಗೊಂಡರು. ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ, ನಿರ್ಧಾರಕ್ಕೆ ಒಪ್ಪಿಗೆ ಪಡೆಯಲಾಯಿತು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಅಚ್ಚರಿ ಫಲಿತಾಂಶ; ಅತಿ ಕಡಿಮೆ ಅಂತರದಲ್ಲಿ ಸೋತವರ, ಗೆದ್ದವರ ಪಟ್ಟಿ ಇಲ್ಲಿದೆ..

ತಲಾ ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಗೆ ಇಬ್ಬರೂ ನಾಯಕರು ಒಪ್ಪಿಕೊಂಡಿದ್ದಾರೆ. ಸಿದ್ದರಾಮಯ್ಯ ಮೊದಲ ಅವಧಿಯಲ್ಲಿ ಅಧಿಕಾರ ನಡೆಸಲಿದ್ದಾರೆ. ನಂತರದ ಅವಧಿಗೆ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ. ಅಧಿಕಾರ ಹಂಚಿಕೆ ಮತ್ತು ಇತರ ವಿಷಯಗಳಲ್ಲಿ ಒಮ್ಮತಕ್ಕೆ ಬರುವ ಸಲುವಾಗಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾ‌ ಅವರು ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ಎರಡೂವರೆ ವರ್ಷಗಳ ಬಳಿಕ ಅಧಿಕಾರ ಬಿಟ್ಟುಕೊಡುವ ವಾಗ್ದಾನವನ್ನು ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಡಬೇಕು ಎಂಬುದು ಡಿ.ಕೆ ಶಿವಕುಮಾರ್ ಅವರ ಷರತ್ತು ಎಂದು ಮೂಲಗಳು ಹೇಳಿವೆ.

ಗುರುವಾರ ಸಂಜೆ ನಡೆಯುವ ಶಾಸಕಾಂಗ ಸಭೆ ಬಳಿಕ, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಆಯ್ಕೆಯಾಗಿರುವ ವಿಚಾರವನ್ನು ಅಧಿಕೃತವಾಗಿ ಘೋಷಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಮೇ 20ರಂದು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸಿದ್ದರಾಮಯ್ಯ ಮುಖ್ಯಮಮತ್ರಿಯಾಗಿ ಮತ್ತು ಡಿಕೆ ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರಿಂದ ಸಿದ್ದರಾಮಯ್ಯ ಹುಟ್ಟೂರಿನಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...