Homeಕರೋನಾ ತಲ್ಲಣಕೊರೊನಾ ಸೋಂಕಿತರ ಪ್ರಮಾಣವನ್ನು 5% ಕ್ಕೆ ಇಳಿಸುವುದೇ ಅಂತಿಮ ಗುರಿ: ಆರೋಗ್ಯ ಸಚಿವಾಲಯ

ಕೊರೊನಾ ಸೋಂಕಿತರ ಪ್ರಮಾಣವನ್ನು 5% ಕ್ಕೆ ಇಳಿಸುವುದೇ ಅಂತಿಮ ಗುರಿ: ಆರೋಗ್ಯ ಸಚಿವಾಲಯ

30 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಅಂಕಿಗಳನ್ನು ಹೊಂದಿವೆ.

- Advertisement -
- Advertisement -

ಕೊರೊನಾ ಸೋಂಕಿತರ ಪ್ರಮಾಣವನ್ನು ಶೇಕಡಾ 5 ಕ್ಕೆ ಇಳಿಸುವುದು ಮತ್ತು ಸೋಂಕು ಪರೀಕ್ಷಾ ಮಟ್ಟವನ್ನು ಕಾಯ್ದುಕೊಳ್ಳುವುದು ಸರ್ಕಾರದ “ಅಂತಿಮ ಗುರಿ” ಎಂದು ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

30 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಅಂಕಿಗಳನ್ನು ಹೊಂದಿವೆ ಎಂದು ಅದು ಹೇಳಿದೆ.

ಪರೀಕ್ಷಿಸಿದವರಲ್ಲಿ ಶೇಕಡಾವಾರು ಸೋಂಕಿಗೆ ಒಳಗಾದವರ ರಾಷ್ಟ್ರೀಯ ಸಕಾರಾತ್ಮಕ ದರವು ಮಂಗಳವಾರ ಬೆಳಿಗ್ಗೆ ಶೇಕಡಾ 11.14 ರಷ್ಟಿತ್ತು. ಇದು ವಾರದ ಹಿಂದೆ ಶೇ 10 ಇತ್ತ. ಎರಡು ವಾರಗಳ ಹಿಂದೆ ಶೇ 9.7 ಮತ್ತು ನಾಲ್ಕು ವಾರಗಳ ಹಿಂದಿನ ಪ್ರಮಾಣ ಶೇಕಡಾ 8 ಇತ್ತು. ಏಪ್ರಿಲ್ 23 ರಿಂದ ಒಟ್ಟಾರೆ ಸರಾಸರಿ ಶೇಕಡ 8 ಇದೆ ಎಂದು ಸಚಿವಾಲಯ ತಿಳಿಸಿದೆ.

ಮಂಗಳವಾರ ಬೆಳಿಗ್ಗೆಯ ವೇಳೆಗೆ ಕಳೆದ 24 ಗಂಟೆಗಳಲ್ಲಿ 3.34 ಲಕ್ಷ ಕೊರೊನಾವೈರಸ್ ಪರೀಕ್ಷೆಗಳನ್ನು ನಡೆಸಲಾಯಿತು. ಇದು ವಾರದ ಹಿಂದೆ 2.87, ಎರಡು ವಾರಗಳ ಹಿಂದೆ 2.41 ಮತ್ತು ನಾಲ್ಕು ವಾರಗಳ ಹಿಂದೆ 1.87 ಇತ್ತು ಎಂದು ಹೇಳಿದೆ.

ಪರೀಕ್ಷೆಯ ಮಟ್ಟ ಹೆಚ್ಚಿದ್ದರಿಂದ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ, ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಸಚಿವಾಲಯ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 37,148 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಮಂಗಳವಾರ ಬೆಳಿಗ್ಗೆ ಸರ್ಕಾರ ಹೇಳಿದೆ; ಅದಕ್ಕೂ ಮೊದಲು 24 ಗಂಟೆಗಳಲ್ಲಿ 40,000 ಕ್ಕೂ ಹೆಚ್ಚು ಪ್ರಕರಣ ಪತ್ತೆಯಾಗಿದೆ.

ಭಾರತದಲ್ಲಿ ಇದುವರೆಗೆ 11.55 ಲಕ್ಷ ಕೊರೊನಾ ಪ್ರಕರಣಗಳಿದ್ದು, 28,084 ಸಾವುಗಳು ಸಂಭವಿಸಿವೆ. ಭಾರತವು ಏಳು ಲಕ್ಷ ಗಡಿ ದಾಟಿದ ಜುಲೈ 6 ರಿಂದ ಒಟ್ಟು ಪ್ರಕರಣಗಳ ಸಂಖ್ಯೆ 4.5 ಲಕ್ಷಕ್ಕೂ ಹೆಚ್ಚಾಗಿದೆ.

“ದೇಶವು ಕೊರೊನಾ ಬಿಕ್ಕಟ್ಟನ್ನು ತುಲನಾತ್ಮಕವಾಗಿ, ಚೆನ್ನಾಗಿ ನಿಭಾಯಿಸಿದೆ. ಕೇಂದ್ರವು ರಾಜ್ಯಗಳನ್ನು ಬೆಂಬಲಿಸುತ್ತಿದೆ. ಕೇಂದ್ರ ತಂಡಗಳು ರಾಜ್ಯಗಳಿಗೆ ಸಲಹೆ ನೀಡುತ್ತಿವೆ ಮತ್ತು ಅವರ ಪ್ರಯತ್ನಗಳನ್ನು ಬೆಂಬಲಿಸಲು ಅವರನ್ನು ಭೇಟಿ ಮಾಡುತ್ತಿವೆ” ಎಂದು ಸರ್ಕಾರ ಇಂದು ಹೇಳಿದೆ.

“ಸೀಮಿತ ಸಂಪನ್ಮೂಲಗಳ ಹೊರತಾಗಿಯೂ ನಾವು ಸಾವಿನ ಪ್ರಮಾಣವನ್ನು ಶೇಕಡಾ 2.43 ಕ್ಕೆ ತಂದಿದ್ದೇವೆ” ಎಂದು ಸರ್ಕಾರ ಹೇಳಿದೆ. ಈ ಹಿರಿಮೆಯು ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ತಲುಪುತ್ತದೆ ಎಂದು ಸಚಿವಾಲಯ ತಿಳಿಸಿದೆ.

ಮರಣ ಪ್ರಮಾಣ – ಅಥವಾ ಒಟ್ಟು ಪ್ರಕರಣಗಳಲ್ಲಿ ಶೇಕಡಾವಾರು ಸಾವಿನ ಸಂಖ್ಯೆ ಭಾರತದಲ್ಲಿ ವಿಶ್ವಕ್ಕಿಂತ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ ಎಂದು ಸಚಿವಾಲಯ ಹೇಳಿದೆ.

ಕಳೆದ ನಾಲ್ಕು ವಾರಗಳಲ್ಲಿ ಪ್ರಕರಣಗಳ ಸಾವಿನ ಪ್ರಮಾಣ ಕಡಿಮೆಯಾಗಿದೆ; ಎರಡು ವಾರಗಳ ಹಿಂದೆ ಅದು ಶೇಕಡಾ 2.8 ಕ್ಕೆ ಇಳಿಯುವ ಮೊದಲು ಅದು ಶೇಕಡಾ 3.2 ರಷ್ಟಿತ್ತು. ಕಳೆದ ವಾರ ಅದು ಶೇಕಡಾ 2.6 ರಷ್ಟಿತ್ತು ಎಂದು ತಿಳಿಸಿದೆ.


ಇದನ್ನೂ ಓದಿ: ಹಳ್ಳಿಗೆ ಬಿಟ್ಟುಕೊಳ್ಳದ ಗ್ರಾಮಸ್ಥರು: ಮರದ ಕೆಳಗೆ ವಾಸಿಸುತ್ತಿರುವ ಕೊರೊನಾ ಸೋಂಕಿತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...