Homeಕರೋನಾ ತಲ್ಲಣಕೊರೊನಾ ಸೋಂಕಿತರ ಪ್ರಮಾಣವನ್ನು 5% ಕ್ಕೆ ಇಳಿಸುವುದೇ ಅಂತಿಮ ಗುರಿ: ಆರೋಗ್ಯ ಸಚಿವಾಲಯ

ಕೊರೊನಾ ಸೋಂಕಿತರ ಪ್ರಮಾಣವನ್ನು 5% ಕ್ಕೆ ಇಳಿಸುವುದೇ ಅಂತಿಮ ಗುರಿ: ಆರೋಗ್ಯ ಸಚಿವಾಲಯ

30 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಅಂಕಿಗಳನ್ನು ಹೊಂದಿವೆ.

- Advertisement -
- Advertisement -

ಕೊರೊನಾ ಸೋಂಕಿತರ ಪ್ರಮಾಣವನ್ನು ಶೇಕಡಾ 5 ಕ್ಕೆ ಇಳಿಸುವುದು ಮತ್ತು ಸೋಂಕು ಪರೀಕ್ಷಾ ಮಟ್ಟವನ್ನು ಕಾಯ್ದುಕೊಳ್ಳುವುದು ಸರ್ಕಾರದ “ಅಂತಿಮ ಗುರಿ” ಎಂದು ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

30 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಅಂಕಿಗಳನ್ನು ಹೊಂದಿವೆ ಎಂದು ಅದು ಹೇಳಿದೆ.

ಪರೀಕ್ಷಿಸಿದವರಲ್ಲಿ ಶೇಕಡಾವಾರು ಸೋಂಕಿಗೆ ಒಳಗಾದವರ ರಾಷ್ಟ್ರೀಯ ಸಕಾರಾತ್ಮಕ ದರವು ಮಂಗಳವಾರ ಬೆಳಿಗ್ಗೆ ಶೇಕಡಾ 11.14 ರಷ್ಟಿತ್ತು. ಇದು ವಾರದ ಹಿಂದೆ ಶೇ 10 ಇತ್ತ. ಎರಡು ವಾರಗಳ ಹಿಂದೆ ಶೇ 9.7 ಮತ್ತು ನಾಲ್ಕು ವಾರಗಳ ಹಿಂದಿನ ಪ್ರಮಾಣ ಶೇಕಡಾ 8 ಇತ್ತು. ಏಪ್ರಿಲ್ 23 ರಿಂದ ಒಟ್ಟಾರೆ ಸರಾಸರಿ ಶೇಕಡ 8 ಇದೆ ಎಂದು ಸಚಿವಾಲಯ ತಿಳಿಸಿದೆ.

ಮಂಗಳವಾರ ಬೆಳಿಗ್ಗೆಯ ವೇಳೆಗೆ ಕಳೆದ 24 ಗಂಟೆಗಳಲ್ಲಿ 3.34 ಲಕ್ಷ ಕೊರೊನಾವೈರಸ್ ಪರೀಕ್ಷೆಗಳನ್ನು ನಡೆಸಲಾಯಿತು. ಇದು ವಾರದ ಹಿಂದೆ 2.87, ಎರಡು ವಾರಗಳ ಹಿಂದೆ 2.41 ಮತ್ತು ನಾಲ್ಕು ವಾರಗಳ ಹಿಂದೆ 1.87 ಇತ್ತು ಎಂದು ಹೇಳಿದೆ.

ಪರೀಕ್ಷೆಯ ಮಟ್ಟ ಹೆಚ್ಚಿದ್ದರಿಂದ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ, ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಸಚಿವಾಲಯ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 37,148 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಮಂಗಳವಾರ ಬೆಳಿಗ್ಗೆ ಸರ್ಕಾರ ಹೇಳಿದೆ; ಅದಕ್ಕೂ ಮೊದಲು 24 ಗಂಟೆಗಳಲ್ಲಿ 40,000 ಕ್ಕೂ ಹೆಚ್ಚು ಪ್ರಕರಣ ಪತ್ತೆಯಾಗಿದೆ.

ಭಾರತದಲ್ಲಿ ಇದುವರೆಗೆ 11.55 ಲಕ್ಷ ಕೊರೊನಾ ಪ್ರಕರಣಗಳಿದ್ದು, 28,084 ಸಾವುಗಳು ಸಂಭವಿಸಿವೆ. ಭಾರತವು ಏಳು ಲಕ್ಷ ಗಡಿ ದಾಟಿದ ಜುಲೈ 6 ರಿಂದ ಒಟ್ಟು ಪ್ರಕರಣಗಳ ಸಂಖ್ಯೆ 4.5 ಲಕ್ಷಕ್ಕೂ ಹೆಚ್ಚಾಗಿದೆ.

“ದೇಶವು ಕೊರೊನಾ ಬಿಕ್ಕಟ್ಟನ್ನು ತುಲನಾತ್ಮಕವಾಗಿ, ಚೆನ್ನಾಗಿ ನಿಭಾಯಿಸಿದೆ. ಕೇಂದ್ರವು ರಾಜ್ಯಗಳನ್ನು ಬೆಂಬಲಿಸುತ್ತಿದೆ. ಕೇಂದ್ರ ತಂಡಗಳು ರಾಜ್ಯಗಳಿಗೆ ಸಲಹೆ ನೀಡುತ್ತಿವೆ ಮತ್ತು ಅವರ ಪ್ರಯತ್ನಗಳನ್ನು ಬೆಂಬಲಿಸಲು ಅವರನ್ನು ಭೇಟಿ ಮಾಡುತ್ತಿವೆ” ಎಂದು ಸರ್ಕಾರ ಇಂದು ಹೇಳಿದೆ.

“ಸೀಮಿತ ಸಂಪನ್ಮೂಲಗಳ ಹೊರತಾಗಿಯೂ ನಾವು ಸಾವಿನ ಪ್ರಮಾಣವನ್ನು ಶೇಕಡಾ 2.43 ಕ್ಕೆ ತಂದಿದ್ದೇವೆ” ಎಂದು ಸರ್ಕಾರ ಹೇಳಿದೆ. ಈ ಹಿರಿಮೆಯು ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ತಲುಪುತ್ತದೆ ಎಂದು ಸಚಿವಾಲಯ ತಿಳಿಸಿದೆ.

ಮರಣ ಪ್ರಮಾಣ – ಅಥವಾ ಒಟ್ಟು ಪ್ರಕರಣಗಳಲ್ಲಿ ಶೇಕಡಾವಾರು ಸಾವಿನ ಸಂಖ್ಯೆ ಭಾರತದಲ್ಲಿ ವಿಶ್ವಕ್ಕಿಂತ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ ಎಂದು ಸಚಿವಾಲಯ ಹೇಳಿದೆ.

ಕಳೆದ ನಾಲ್ಕು ವಾರಗಳಲ್ಲಿ ಪ್ರಕರಣಗಳ ಸಾವಿನ ಪ್ರಮಾಣ ಕಡಿಮೆಯಾಗಿದೆ; ಎರಡು ವಾರಗಳ ಹಿಂದೆ ಅದು ಶೇಕಡಾ 2.8 ಕ್ಕೆ ಇಳಿಯುವ ಮೊದಲು ಅದು ಶೇಕಡಾ 3.2 ರಷ್ಟಿತ್ತು. ಕಳೆದ ವಾರ ಅದು ಶೇಕಡಾ 2.6 ರಷ್ಟಿತ್ತು ಎಂದು ತಿಳಿಸಿದೆ.


ಇದನ್ನೂ ಓದಿ: ಹಳ್ಳಿಗೆ ಬಿಟ್ಟುಕೊಳ್ಳದ ಗ್ರಾಮಸ್ಥರು: ಮರದ ಕೆಳಗೆ ವಾಸಿಸುತ್ತಿರುವ ಕೊರೊನಾ ಸೋಂಕಿತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...