Homeಕರೋನಾ ತಲ್ಲಣಕೊರೊನಾ ಸೋಂಕಿತರ ಪ್ರಮಾಣವನ್ನು 5% ಕ್ಕೆ ಇಳಿಸುವುದೇ ಅಂತಿಮ ಗುರಿ: ಆರೋಗ್ಯ ಸಚಿವಾಲಯ

ಕೊರೊನಾ ಸೋಂಕಿತರ ಪ್ರಮಾಣವನ್ನು 5% ಕ್ಕೆ ಇಳಿಸುವುದೇ ಅಂತಿಮ ಗುರಿ: ಆರೋಗ್ಯ ಸಚಿವಾಲಯ

30 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಅಂಕಿಗಳನ್ನು ಹೊಂದಿವೆ.

- Advertisement -
- Advertisement -

ಕೊರೊನಾ ಸೋಂಕಿತರ ಪ್ರಮಾಣವನ್ನು ಶೇಕಡಾ 5 ಕ್ಕೆ ಇಳಿಸುವುದು ಮತ್ತು ಸೋಂಕು ಪರೀಕ್ಷಾ ಮಟ್ಟವನ್ನು ಕಾಯ್ದುಕೊಳ್ಳುವುದು ಸರ್ಕಾರದ “ಅಂತಿಮ ಗುರಿ” ಎಂದು ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

30 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಅಂಕಿಗಳನ್ನು ಹೊಂದಿವೆ ಎಂದು ಅದು ಹೇಳಿದೆ.

ಪರೀಕ್ಷಿಸಿದವರಲ್ಲಿ ಶೇಕಡಾವಾರು ಸೋಂಕಿಗೆ ಒಳಗಾದವರ ರಾಷ್ಟ್ರೀಯ ಸಕಾರಾತ್ಮಕ ದರವು ಮಂಗಳವಾರ ಬೆಳಿಗ್ಗೆ ಶೇಕಡಾ 11.14 ರಷ್ಟಿತ್ತು. ಇದು ವಾರದ ಹಿಂದೆ ಶೇ 10 ಇತ್ತ. ಎರಡು ವಾರಗಳ ಹಿಂದೆ ಶೇ 9.7 ಮತ್ತು ನಾಲ್ಕು ವಾರಗಳ ಹಿಂದಿನ ಪ್ರಮಾಣ ಶೇಕಡಾ 8 ಇತ್ತು. ಏಪ್ರಿಲ್ 23 ರಿಂದ ಒಟ್ಟಾರೆ ಸರಾಸರಿ ಶೇಕಡ 8 ಇದೆ ಎಂದು ಸಚಿವಾಲಯ ತಿಳಿಸಿದೆ.

ಮಂಗಳವಾರ ಬೆಳಿಗ್ಗೆಯ ವೇಳೆಗೆ ಕಳೆದ 24 ಗಂಟೆಗಳಲ್ಲಿ 3.34 ಲಕ್ಷ ಕೊರೊನಾವೈರಸ್ ಪರೀಕ್ಷೆಗಳನ್ನು ನಡೆಸಲಾಯಿತು. ಇದು ವಾರದ ಹಿಂದೆ 2.87, ಎರಡು ವಾರಗಳ ಹಿಂದೆ 2.41 ಮತ್ತು ನಾಲ್ಕು ವಾರಗಳ ಹಿಂದೆ 1.87 ಇತ್ತು ಎಂದು ಹೇಳಿದೆ.

ಪರೀಕ್ಷೆಯ ಮಟ್ಟ ಹೆಚ್ಚಿದ್ದರಿಂದ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ, ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಸಚಿವಾಲಯ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 37,148 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಮಂಗಳವಾರ ಬೆಳಿಗ್ಗೆ ಸರ್ಕಾರ ಹೇಳಿದೆ; ಅದಕ್ಕೂ ಮೊದಲು 24 ಗಂಟೆಗಳಲ್ಲಿ 40,000 ಕ್ಕೂ ಹೆಚ್ಚು ಪ್ರಕರಣ ಪತ್ತೆಯಾಗಿದೆ.

ಭಾರತದಲ್ಲಿ ಇದುವರೆಗೆ 11.55 ಲಕ್ಷ ಕೊರೊನಾ ಪ್ರಕರಣಗಳಿದ್ದು, 28,084 ಸಾವುಗಳು ಸಂಭವಿಸಿವೆ. ಭಾರತವು ಏಳು ಲಕ್ಷ ಗಡಿ ದಾಟಿದ ಜುಲೈ 6 ರಿಂದ ಒಟ್ಟು ಪ್ರಕರಣಗಳ ಸಂಖ್ಯೆ 4.5 ಲಕ್ಷಕ್ಕೂ ಹೆಚ್ಚಾಗಿದೆ.

“ದೇಶವು ಕೊರೊನಾ ಬಿಕ್ಕಟ್ಟನ್ನು ತುಲನಾತ್ಮಕವಾಗಿ, ಚೆನ್ನಾಗಿ ನಿಭಾಯಿಸಿದೆ. ಕೇಂದ್ರವು ರಾಜ್ಯಗಳನ್ನು ಬೆಂಬಲಿಸುತ್ತಿದೆ. ಕೇಂದ್ರ ತಂಡಗಳು ರಾಜ್ಯಗಳಿಗೆ ಸಲಹೆ ನೀಡುತ್ತಿವೆ ಮತ್ತು ಅವರ ಪ್ರಯತ್ನಗಳನ್ನು ಬೆಂಬಲಿಸಲು ಅವರನ್ನು ಭೇಟಿ ಮಾಡುತ್ತಿವೆ” ಎಂದು ಸರ್ಕಾರ ಇಂದು ಹೇಳಿದೆ.

“ಸೀಮಿತ ಸಂಪನ್ಮೂಲಗಳ ಹೊರತಾಗಿಯೂ ನಾವು ಸಾವಿನ ಪ್ರಮಾಣವನ್ನು ಶೇಕಡಾ 2.43 ಕ್ಕೆ ತಂದಿದ್ದೇವೆ” ಎಂದು ಸರ್ಕಾರ ಹೇಳಿದೆ. ಈ ಹಿರಿಮೆಯು ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ತಲುಪುತ್ತದೆ ಎಂದು ಸಚಿವಾಲಯ ತಿಳಿಸಿದೆ.

ಮರಣ ಪ್ರಮಾಣ – ಅಥವಾ ಒಟ್ಟು ಪ್ರಕರಣಗಳಲ್ಲಿ ಶೇಕಡಾವಾರು ಸಾವಿನ ಸಂಖ್ಯೆ ಭಾರತದಲ್ಲಿ ವಿಶ್ವಕ್ಕಿಂತ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ ಎಂದು ಸಚಿವಾಲಯ ಹೇಳಿದೆ.

ಕಳೆದ ನಾಲ್ಕು ವಾರಗಳಲ್ಲಿ ಪ್ರಕರಣಗಳ ಸಾವಿನ ಪ್ರಮಾಣ ಕಡಿಮೆಯಾಗಿದೆ; ಎರಡು ವಾರಗಳ ಹಿಂದೆ ಅದು ಶೇಕಡಾ 2.8 ಕ್ಕೆ ಇಳಿಯುವ ಮೊದಲು ಅದು ಶೇಕಡಾ 3.2 ರಷ್ಟಿತ್ತು. ಕಳೆದ ವಾರ ಅದು ಶೇಕಡಾ 2.6 ರಷ್ಟಿತ್ತು ಎಂದು ತಿಳಿಸಿದೆ.


ಇದನ್ನೂ ಓದಿ: ಹಳ್ಳಿಗೆ ಬಿಟ್ಟುಕೊಳ್ಳದ ಗ್ರಾಮಸ್ಥರು: ಮರದ ಕೆಳಗೆ ವಾಸಿಸುತ್ತಿರುವ ಕೊರೊನಾ ಸೋಂಕಿತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...