Homeಕರೋನಾ ತಲ್ಲಣಕೊರೊನಾ ಸೋಂಕಿತರ ಪ್ರಮಾಣವನ್ನು 5% ಕ್ಕೆ ಇಳಿಸುವುದೇ ಅಂತಿಮ ಗುರಿ: ಆರೋಗ್ಯ ಸಚಿವಾಲಯ

ಕೊರೊನಾ ಸೋಂಕಿತರ ಪ್ರಮಾಣವನ್ನು 5% ಕ್ಕೆ ಇಳಿಸುವುದೇ ಅಂತಿಮ ಗುರಿ: ಆರೋಗ್ಯ ಸಚಿವಾಲಯ

30 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಅಂಕಿಗಳನ್ನು ಹೊಂದಿವೆ.

- Advertisement -
- Advertisement -

ಕೊರೊನಾ ಸೋಂಕಿತರ ಪ್ರಮಾಣವನ್ನು ಶೇಕಡಾ 5 ಕ್ಕೆ ಇಳಿಸುವುದು ಮತ್ತು ಸೋಂಕು ಪರೀಕ್ಷಾ ಮಟ್ಟವನ್ನು ಕಾಯ್ದುಕೊಳ್ಳುವುದು ಸರ್ಕಾರದ “ಅಂತಿಮ ಗುರಿ” ಎಂದು ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

30 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಅಂಕಿಗಳನ್ನು ಹೊಂದಿವೆ ಎಂದು ಅದು ಹೇಳಿದೆ.

ಪರೀಕ್ಷಿಸಿದವರಲ್ಲಿ ಶೇಕಡಾವಾರು ಸೋಂಕಿಗೆ ಒಳಗಾದವರ ರಾಷ್ಟ್ರೀಯ ಸಕಾರಾತ್ಮಕ ದರವು ಮಂಗಳವಾರ ಬೆಳಿಗ್ಗೆ ಶೇಕಡಾ 11.14 ರಷ್ಟಿತ್ತು. ಇದು ವಾರದ ಹಿಂದೆ ಶೇ 10 ಇತ್ತ. ಎರಡು ವಾರಗಳ ಹಿಂದೆ ಶೇ 9.7 ಮತ್ತು ನಾಲ್ಕು ವಾರಗಳ ಹಿಂದಿನ ಪ್ರಮಾಣ ಶೇಕಡಾ 8 ಇತ್ತು. ಏಪ್ರಿಲ್ 23 ರಿಂದ ಒಟ್ಟಾರೆ ಸರಾಸರಿ ಶೇಕಡ 8 ಇದೆ ಎಂದು ಸಚಿವಾಲಯ ತಿಳಿಸಿದೆ.

ಮಂಗಳವಾರ ಬೆಳಿಗ್ಗೆಯ ವೇಳೆಗೆ ಕಳೆದ 24 ಗಂಟೆಗಳಲ್ಲಿ 3.34 ಲಕ್ಷ ಕೊರೊನಾವೈರಸ್ ಪರೀಕ್ಷೆಗಳನ್ನು ನಡೆಸಲಾಯಿತು. ಇದು ವಾರದ ಹಿಂದೆ 2.87, ಎರಡು ವಾರಗಳ ಹಿಂದೆ 2.41 ಮತ್ತು ನಾಲ್ಕು ವಾರಗಳ ಹಿಂದೆ 1.87 ಇತ್ತು ಎಂದು ಹೇಳಿದೆ.

ಪರೀಕ್ಷೆಯ ಮಟ್ಟ ಹೆಚ್ಚಿದ್ದರಿಂದ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ, ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಸಚಿವಾಲಯ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 37,148 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಮಂಗಳವಾರ ಬೆಳಿಗ್ಗೆ ಸರ್ಕಾರ ಹೇಳಿದೆ; ಅದಕ್ಕೂ ಮೊದಲು 24 ಗಂಟೆಗಳಲ್ಲಿ 40,000 ಕ್ಕೂ ಹೆಚ್ಚು ಪ್ರಕರಣ ಪತ್ತೆಯಾಗಿದೆ.

ಭಾರತದಲ್ಲಿ ಇದುವರೆಗೆ 11.55 ಲಕ್ಷ ಕೊರೊನಾ ಪ್ರಕರಣಗಳಿದ್ದು, 28,084 ಸಾವುಗಳು ಸಂಭವಿಸಿವೆ. ಭಾರತವು ಏಳು ಲಕ್ಷ ಗಡಿ ದಾಟಿದ ಜುಲೈ 6 ರಿಂದ ಒಟ್ಟು ಪ್ರಕರಣಗಳ ಸಂಖ್ಯೆ 4.5 ಲಕ್ಷಕ್ಕೂ ಹೆಚ್ಚಾಗಿದೆ.

“ದೇಶವು ಕೊರೊನಾ ಬಿಕ್ಕಟ್ಟನ್ನು ತುಲನಾತ್ಮಕವಾಗಿ, ಚೆನ್ನಾಗಿ ನಿಭಾಯಿಸಿದೆ. ಕೇಂದ್ರವು ರಾಜ್ಯಗಳನ್ನು ಬೆಂಬಲಿಸುತ್ತಿದೆ. ಕೇಂದ್ರ ತಂಡಗಳು ರಾಜ್ಯಗಳಿಗೆ ಸಲಹೆ ನೀಡುತ್ತಿವೆ ಮತ್ತು ಅವರ ಪ್ರಯತ್ನಗಳನ್ನು ಬೆಂಬಲಿಸಲು ಅವರನ್ನು ಭೇಟಿ ಮಾಡುತ್ತಿವೆ” ಎಂದು ಸರ್ಕಾರ ಇಂದು ಹೇಳಿದೆ.

“ಸೀಮಿತ ಸಂಪನ್ಮೂಲಗಳ ಹೊರತಾಗಿಯೂ ನಾವು ಸಾವಿನ ಪ್ರಮಾಣವನ್ನು ಶೇಕಡಾ 2.43 ಕ್ಕೆ ತಂದಿದ್ದೇವೆ” ಎಂದು ಸರ್ಕಾರ ಹೇಳಿದೆ. ಈ ಹಿರಿಮೆಯು ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ತಲುಪುತ್ತದೆ ಎಂದು ಸಚಿವಾಲಯ ತಿಳಿಸಿದೆ.

ಮರಣ ಪ್ರಮಾಣ – ಅಥವಾ ಒಟ್ಟು ಪ್ರಕರಣಗಳಲ್ಲಿ ಶೇಕಡಾವಾರು ಸಾವಿನ ಸಂಖ್ಯೆ ಭಾರತದಲ್ಲಿ ವಿಶ್ವಕ್ಕಿಂತ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ ಎಂದು ಸಚಿವಾಲಯ ಹೇಳಿದೆ.

ಕಳೆದ ನಾಲ್ಕು ವಾರಗಳಲ್ಲಿ ಪ್ರಕರಣಗಳ ಸಾವಿನ ಪ್ರಮಾಣ ಕಡಿಮೆಯಾಗಿದೆ; ಎರಡು ವಾರಗಳ ಹಿಂದೆ ಅದು ಶೇಕಡಾ 2.8 ಕ್ಕೆ ಇಳಿಯುವ ಮೊದಲು ಅದು ಶೇಕಡಾ 3.2 ರಷ್ಟಿತ್ತು. ಕಳೆದ ವಾರ ಅದು ಶೇಕಡಾ 2.6 ರಷ್ಟಿತ್ತು ಎಂದು ತಿಳಿಸಿದೆ.


ಇದನ್ನೂ ಓದಿ: ಹಳ್ಳಿಗೆ ಬಿಟ್ಟುಕೊಳ್ಳದ ಗ್ರಾಮಸ್ಥರು: ಮರದ ಕೆಳಗೆ ವಾಸಿಸುತ್ತಿರುವ ಕೊರೊನಾ ಸೋಂಕಿತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...