Homeಮುಖಪುಟಉತ್ತರಾಧಿಕಾರಿ ಸೂಚಿಸುವಂತೆ ಮುಖ್ಯ ನ್ಯಾಯಮೂರ್ತಿಗೆ ಕೇಳಿದ ಒಕ್ಕೂಟ ಸರ್ಕಾರ

ಉತ್ತರಾಧಿಕಾರಿ ಸೂಚಿಸುವಂತೆ ಮುಖ್ಯ ನ್ಯಾಯಮೂರ್ತಿಗೆ ಕೇಳಿದ ಒಕ್ಕೂಟ ಸರ್ಕಾರ

- Advertisement -
- Advertisement -

ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಉದಯ್ ಉಮೇಶ್ ಲಲಿತ್ ಅವರನ್ನು ಒಕ್ಕೂಟ ಸರ್ಕಾರ ಕೇಳಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಶುಕ್ರವಾರ ಮಾಧ್ಯಮಗಳು ವರದಿ ಮಾಡಿವೆ. ಸುಪ್ರಿಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನು ನೇಮಿಸುವ ಕಾರ್ಯವಿಧಾನದ ಭಾಗವಾಗಿ, ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸಲು ಕಾನೂನು ಸಚಿವರು ಸಿಜೆಐಗೆ ಪತ್ರ ಬರೆಯುವುದು ಸಂಪ್ರದಾಯವಾಗಿದೆ.

ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಪ್ರಸ್ತುತ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ. ಈ ವರೆಗಿನ ಸಂಪ್ರದಾಯದಂತೆ ಸಿಜೆಐ ಅತ್ಯಂತ ಹಿರಿಯ ನ್ಯಾಯಾಧೀಶರನ್ನು ತನ್ನ ಉತ್ತರಾಧಿಕಾರಿ ಎಂದು ಹೆಸರಿಸುತ್ತಾರೆ. ಹೀಗಾಗಿ ನ್ಯಾಯಮೂರ್ತಿ ಚಂದ್ರಚೂಡ್ ಅವರು 50 ನೇ ಸಿಜೆಐ ಆಗಿ ಹುದ್ದೆಯನ್ನು ವಹಿಸಿಕೊಳ್ಳಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಗಸ್ಟ್ 27 ರಂದು ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಯು.ಯು. ಲಲಿತ್ ಅವರು ಸುಮಾರು 74 ದಿನಗಳ ನಂತರ ನವೆಂಬರ್ 8 ರಂದು ಆಗಿ ನಿವೃತ್ತರಾಗಲಿದ್ದಾರೆ.

ಇದನ್ನೂ ಓದಿ: ಸುಪ್ರೀಂಕೋರ್ಟ್‌ನಲ್ಲಿ ತನ್ನ ಹಿರಿಯ ವಕೀಲರಾಗಿ ಸಿಜೆಐ ಮಗನ ನೇಮಕಾತಿ ಮುಂದೂಡಿದ ಯುಪಿ ಸರ್ಕಾರ

ಮುಖ್ಯ ನ್ಯಾಯಮೂರ್ತಿ ತನ್ನ ಉತ್ತರಾಧಿಕಾರಿಯನ್ನು ಹೆಸರಿಸಿದ ನಂತರ, ನ್ಯಾಯಮೂರ್ತಿಗಳ ನೇಮಕಾತಿ ಸೇರಿದಂತೆ ಸುಪ್ರೀಂ ಕೋರ್ಟ್‌ನ ಉನ್ನತ ಸಂಸ್ಥೆಯಾದ ಕೊಲಿಜಿಯಂನ ಯಾವುದೇ ಸಭೆಯನ್ನು ಕರೆಯುವಂತಿಲ್ಲ. ಹೀಗಾಗಿ ನ್ಯಾಯಮೂರ್ತಿ ಲಲಿತ್ ನೇತೃತ್ವದ ಕೊಲಿಜಿಯಂ ಸುಪ್ರೀಂಕೋರ್ಟ್‌ನಲ್ಲಿ ಖಾಲಿ ಇರುವ ನಾಲ್ಕು ನ್ಯಾಯಾಧೀಶರ ಹುದ್ದೆಗಳನ್ನು ಭರ್ತಿ ಮಾಡಲು ಯಾರನ್ನೂ ಶಿಫಾರಸು ಮಾಡುವಂತಿಲ್ಲ.

ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಒಕ್ಕೂಟ ಸರ್ಕಾರದ ಕಾನೂನು ಸಚಿವಾಲಯವು ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದು, ಅಪರೂಪವೆಂಂತೆ ಟ್ವೀಟ್ ಕೂಡ ಮಾಡಿದೆ.

ಇದನ್ನೂ ಓದಿ: ಸುಪ್ರೀಂಕೋರ್ಟ್‌ನಲ್ಲಿ ‘ದೇಶದ್ರೋಹ’ ಕಾನೂನನ್ನು ಸಮರ್ಥಿಸಿಕೊಂಡ ಮೋದಿ ನೇತೃತ್ವದ ಬಿಜೆಪಿ ಸರ್ಕಾರ

ಈ ನಡುವೆ ಸುಪ್ರೀಂಕೋರ್ಟ್‌ನ ನಾಲ್ಕು ನೇಮಕಾತಿಗಾಗಿ ಲಿಖಿತ ಪ್ರಸ್ತಾವನೆಯನ್ನು ಪ್ರಸಾರ ಮಾಡಿದ್ದರ ಬಗ್ಗೆ ಐವರು ಹಿರಿಯ ನ್ಯಾಯಾಧೀಶರಿರುವ ಕೊಲೀಜಿಯಂನಲ್ಲಿ ಭಿನ್ನಾಭಿಪ್ರಾಯವಿದೆ. ನ್ಯಾಯಮೂರ್ತಿಗಳಾದ ಚಂದ್ರಚೂಡ್, ಸಂಜಯ್ ಕಿಶನ್ ಕೌಲ್, ಕೆಎಂ ಜೋಸೆಖ್ ಮತ್ತು ಅಬ್ದುಲ್ ನಜೀರ್ ಅವರಿಗೆ ಪ್ರಸ್ತಾವನೆ ಪ್ರಸಾರ ಮಾಡಲಾಗಿತ್ತು.

ತಮ್ಮ ಲಿಖಿತ ಅಭಿಪ್ರಾಯಗಳನ್ನು ಕೇಳಿರುವ ಮುಖ್ಯ ನ್ಯಾಯಮೂರ್ತಿಯನ್ನು ಕೊಲಿಜಿಯಂನ ಇಬ್ಬರು ಸದಸ್ಯರು ಆಕ್ಷೇಪಿಸಿದ್ದಾರೆ ಎಂದು ವರದಿಯಾಗಿದೆ. ತಮ್ಮ ಅಭಿಪ್ರಾಯಗಳನ್ನು ಬರವಣಿಗೆಯಲ್ಲಿ ನೀಡಲು ಸಾಧ್ಯವಿಲ್ಲ ಮತ್ತು ಒಮ್ಮತವನ್ನು ರೂಪಿಸಲು ಚರ್ಚೆಗಳು ನಡೆಯಬೇಕು ಎಂದು ಅವರು ಹೇಳಿದ್ದಾರೆ.

ಮೂವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮತ್ತು ಸುಪ್ರೀಂ ಕೋರ್ಟ್ ಹಿರಿಯ ವಕೀಲರನ್ನು ಸೆಪ್ಟೆಂಬರ್ 30 ರಂದು ಸುಪ್ರೀಂಕೋರ್ಟ್‌ಗೆ ನ್ಯಾಯಮೂರ್ತಿಯಾಗಿ ಉನ್ನತೀಕರಿಸಲು ಕೊಲಿಜಿಯಂ ಪರಿಗಣಿಸಬೇಕಿತ್ತು.

ಇದನ್ನೂ ಓದಿ: ದ್ವೇಷ ಭಾಷಣ: ಹಿಮಾಚಲ ಸರ್ಕಾರಕ್ಕೆ ತರಾಟೆ, ಉತ್ತರಾಖಂಡ್‌ಗೆ ಖಡಕ್‌ ಎಚ್ಚರಿಕೆ ನೀಡಿದ ಸುಪ್ರೀಂಕೋರ್ಟ್‌

ಅದಾಗ್ಯೂ, ನ್ಯಾಯಮೂರ್ತಿ ಚಂದ್ರಚೂಡ್‌ ಅವರು ಸಂಜೆಯವರೆಗೂ ನ್ಯಾಯಾಲಯದಲ್ಲಿದ್ದ ಕಾರಣ ಕೊಲೀಜಿಯಂ ಸಭೆ ಸೇರಲು ಸಾಧ್ಯವಾಗಿರಲಿಲ್ಲ. ಮರುದಿನ ಅಕ್ಟೋಬರ್ 1 ರಂದು ದಸರಾ ರಜೆಗಾಗಿ ನ್ಯಾಯಾಲಯಕ್ಕೆ ಬಿಡುವು ನೀಡಲಾಗಿತ್ತು. ಅಕ್ಟೋಬರ್ 10 ರಂದು ಸುಪ್ರೀಂ ಕೋರ್ಟ್ ಪುನರಾರಂಭಗೊಳ್ಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...