Homeಮುಖಪುಟಉತ್ತರಾಧಿಕಾರಿ ಸೂಚಿಸುವಂತೆ ಮುಖ್ಯ ನ್ಯಾಯಮೂರ್ತಿಗೆ ಕೇಳಿದ ಒಕ್ಕೂಟ ಸರ್ಕಾರ

ಉತ್ತರಾಧಿಕಾರಿ ಸೂಚಿಸುವಂತೆ ಮುಖ್ಯ ನ್ಯಾಯಮೂರ್ತಿಗೆ ಕೇಳಿದ ಒಕ್ಕೂಟ ಸರ್ಕಾರ

- Advertisement -
- Advertisement -

ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಉದಯ್ ಉಮೇಶ್ ಲಲಿತ್ ಅವರನ್ನು ಒಕ್ಕೂಟ ಸರ್ಕಾರ ಕೇಳಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಶುಕ್ರವಾರ ಮಾಧ್ಯಮಗಳು ವರದಿ ಮಾಡಿವೆ. ಸುಪ್ರಿಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನು ನೇಮಿಸುವ ಕಾರ್ಯವಿಧಾನದ ಭಾಗವಾಗಿ, ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸಲು ಕಾನೂನು ಸಚಿವರು ಸಿಜೆಐಗೆ ಪತ್ರ ಬರೆಯುವುದು ಸಂಪ್ರದಾಯವಾಗಿದೆ.

ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಪ್ರಸ್ತುತ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ. ಈ ವರೆಗಿನ ಸಂಪ್ರದಾಯದಂತೆ ಸಿಜೆಐ ಅತ್ಯಂತ ಹಿರಿಯ ನ್ಯಾಯಾಧೀಶರನ್ನು ತನ್ನ ಉತ್ತರಾಧಿಕಾರಿ ಎಂದು ಹೆಸರಿಸುತ್ತಾರೆ. ಹೀಗಾಗಿ ನ್ಯಾಯಮೂರ್ತಿ ಚಂದ್ರಚೂಡ್ ಅವರು 50 ನೇ ಸಿಜೆಐ ಆಗಿ ಹುದ್ದೆಯನ್ನು ವಹಿಸಿಕೊಳ್ಳಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಗಸ್ಟ್ 27 ರಂದು ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಯು.ಯು. ಲಲಿತ್ ಅವರು ಸುಮಾರು 74 ದಿನಗಳ ನಂತರ ನವೆಂಬರ್ 8 ರಂದು ಆಗಿ ನಿವೃತ್ತರಾಗಲಿದ್ದಾರೆ.

ಇದನ್ನೂ ಓದಿ: ಸುಪ್ರೀಂಕೋರ್ಟ್‌ನಲ್ಲಿ ತನ್ನ ಹಿರಿಯ ವಕೀಲರಾಗಿ ಸಿಜೆಐ ಮಗನ ನೇಮಕಾತಿ ಮುಂದೂಡಿದ ಯುಪಿ ಸರ್ಕಾರ

ಮುಖ್ಯ ನ್ಯಾಯಮೂರ್ತಿ ತನ್ನ ಉತ್ತರಾಧಿಕಾರಿಯನ್ನು ಹೆಸರಿಸಿದ ನಂತರ, ನ್ಯಾಯಮೂರ್ತಿಗಳ ನೇಮಕಾತಿ ಸೇರಿದಂತೆ ಸುಪ್ರೀಂ ಕೋರ್ಟ್‌ನ ಉನ್ನತ ಸಂಸ್ಥೆಯಾದ ಕೊಲಿಜಿಯಂನ ಯಾವುದೇ ಸಭೆಯನ್ನು ಕರೆಯುವಂತಿಲ್ಲ. ಹೀಗಾಗಿ ನ್ಯಾಯಮೂರ್ತಿ ಲಲಿತ್ ನೇತೃತ್ವದ ಕೊಲಿಜಿಯಂ ಸುಪ್ರೀಂಕೋರ್ಟ್‌ನಲ್ಲಿ ಖಾಲಿ ಇರುವ ನಾಲ್ಕು ನ್ಯಾಯಾಧೀಶರ ಹುದ್ದೆಗಳನ್ನು ಭರ್ತಿ ಮಾಡಲು ಯಾರನ್ನೂ ಶಿಫಾರಸು ಮಾಡುವಂತಿಲ್ಲ.

ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಒಕ್ಕೂಟ ಸರ್ಕಾರದ ಕಾನೂನು ಸಚಿವಾಲಯವು ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದು, ಅಪರೂಪವೆಂಂತೆ ಟ್ವೀಟ್ ಕೂಡ ಮಾಡಿದೆ.

ಇದನ್ನೂ ಓದಿ: ಸುಪ್ರೀಂಕೋರ್ಟ್‌ನಲ್ಲಿ ‘ದೇಶದ್ರೋಹ’ ಕಾನೂನನ್ನು ಸಮರ್ಥಿಸಿಕೊಂಡ ಮೋದಿ ನೇತೃತ್ವದ ಬಿಜೆಪಿ ಸರ್ಕಾರ

ಈ ನಡುವೆ ಸುಪ್ರೀಂಕೋರ್ಟ್‌ನ ನಾಲ್ಕು ನೇಮಕಾತಿಗಾಗಿ ಲಿಖಿತ ಪ್ರಸ್ತಾವನೆಯನ್ನು ಪ್ರಸಾರ ಮಾಡಿದ್ದರ ಬಗ್ಗೆ ಐವರು ಹಿರಿಯ ನ್ಯಾಯಾಧೀಶರಿರುವ ಕೊಲೀಜಿಯಂನಲ್ಲಿ ಭಿನ್ನಾಭಿಪ್ರಾಯವಿದೆ. ನ್ಯಾಯಮೂರ್ತಿಗಳಾದ ಚಂದ್ರಚೂಡ್, ಸಂಜಯ್ ಕಿಶನ್ ಕೌಲ್, ಕೆಎಂ ಜೋಸೆಖ್ ಮತ್ತು ಅಬ್ದುಲ್ ನಜೀರ್ ಅವರಿಗೆ ಪ್ರಸ್ತಾವನೆ ಪ್ರಸಾರ ಮಾಡಲಾಗಿತ್ತು.

ತಮ್ಮ ಲಿಖಿತ ಅಭಿಪ್ರಾಯಗಳನ್ನು ಕೇಳಿರುವ ಮುಖ್ಯ ನ್ಯಾಯಮೂರ್ತಿಯನ್ನು ಕೊಲಿಜಿಯಂನ ಇಬ್ಬರು ಸದಸ್ಯರು ಆಕ್ಷೇಪಿಸಿದ್ದಾರೆ ಎಂದು ವರದಿಯಾಗಿದೆ. ತಮ್ಮ ಅಭಿಪ್ರಾಯಗಳನ್ನು ಬರವಣಿಗೆಯಲ್ಲಿ ನೀಡಲು ಸಾಧ್ಯವಿಲ್ಲ ಮತ್ತು ಒಮ್ಮತವನ್ನು ರೂಪಿಸಲು ಚರ್ಚೆಗಳು ನಡೆಯಬೇಕು ಎಂದು ಅವರು ಹೇಳಿದ್ದಾರೆ.

ಮೂವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮತ್ತು ಸುಪ್ರೀಂ ಕೋರ್ಟ್ ಹಿರಿಯ ವಕೀಲರನ್ನು ಸೆಪ್ಟೆಂಬರ್ 30 ರಂದು ಸುಪ್ರೀಂಕೋರ್ಟ್‌ಗೆ ನ್ಯಾಯಮೂರ್ತಿಯಾಗಿ ಉನ್ನತೀಕರಿಸಲು ಕೊಲಿಜಿಯಂ ಪರಿಗಣಿಸಬೇಕಿತ್ತು.

ಇದನ್ನೂ ಓದಿ: ದ್ವೇಷ ಭಾಷಣ: ಹಿಮಾಚಲ ಸರ್ಕಾರಕ್ಕೆ ತರಾಟೆ, ಉತ್ತರಾಖಂಡ್‌ಗೆ ಖಡಕ್‌ ಎಚ್ಚರಿಕೆ ನೀಡಿದ ಸುಪ್ರೀಂಕೋರ್ಟ್‌

ಅದಾಗ್ಯೂ, ನ್ಯಾಯಮೂರ್ತಿ ಚಂದ್ರಚೂಡ್‌ ಅವರು ಸಂಜೆಯವರೆಗೂ ನ್ಯಾಯಾಲಯದಲ್ಲಿದ್ದ ಕಾರಣ ಕೊಲೀಜಿಯಂ ಸಭೆ ಸೇರಲು ಸಾಧ್ಯವಾಗಿರಲಿಲ್ಲ. ಮರುದಿನ ಅಕ್ಟೋಬರ್ 1 ರಂದು ದಸರಾ ರಜೆಗಾಗಿ ನ್ಯಾಯಾಲಯಕ್ಕೆ ಬಿಡುವು ನೀಡಲಾಗಿತ್ತು. ಅಕ್ಟೋಬರ್ 10 ರಂದು ಸುಪ್ರೀಂ ಕೋರ್ಟ್ ಪುನರಾರಂಭಗೊಳ್ಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...