Homeಮುಖಪುಟಉತ್ತರಾಧಿಕಾರಿ ಸೂಚಿಸುವಂತೆ ಮುಖ್ಯ ನ್ಯಾಯಮೂರ್ತಿಗೆ ಕೇಳಿದ ಒಕ್ಕೂಟ ಸರ್ಕಾರ

ಉತ್ತರಾಧಿಕಾರಿ ಸೂಚಿಸುವಂತೆ ಮುಖ್ಯ ನ್ಯಾಯಮೂರ್ತಿಗೆ ಕೇಳಿದ ಒಕ್ಕೂಟ ಸರ್ಕಾರ

- Advertisement -
- Advertisement -

ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಉದಯ್ ಉಮೇಶ್ ಲಲಿತ್ ಅವರನ್ನು ಒಕ್ಕೂಟ ಸರ್ಕಾರ ಕೇಳಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಶುಕ್ರವಾರ ಮಾಧ್ಯಮಗಳು ವರದಿ ಮಾಡಿವೆ. ಸುಪ್ರಿಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನು ನೇಮಿಸುವ ಕಾರ್ಯವಿಧಾನದ ಭಾಗವಾಗಿ, ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸಲು ಕಾನೂನು ಸಚಿವರು ಸಿಜೆಐಗೆ ಪತ್ರ ಬರೆಯುವುದು ಸಂಪ್ರದಾಯವಾಗಿದೆ.

ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಪ್ರಸ್ತುತ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ. ಈ ವರೆಗಿನ ಸಂಪ್ರದಾಯದಂತೆ ಸಿಜೆಐ ಅತ್ಯಂತ ಹಿರಿಯ ನ್ಯಾಯಾಧೀಶರನ್ನು ತನ್ನ ಉತ್ತರಾಧಿಕಾರಿ ಎಂದು ಹೆಸರಿಸುತ್ತಾರೆ. ಹೀಗಾಗಿ ನ್ಯಾಯಮೂರ್ತಿ ಚಂದ್ರಚೂಡ್ ಅವರು 50 ನೇ ಸಿಜೆಐ ಆಗಿ ಹುದ್ದೆಯನ್ನು ವಹಿಸಿಕೊಳ್ಳಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಗಸ್ಟ್ 27 ರಂದು ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಯು.ಯು. ಲಲಿತ್ ಅವರು ಸುಮಾರು 74 ದಿನಗಳ ನಂತರ ನವೆಂಬರ್ 8 ರಂದು ಆಗಿ ನಿವೃತ್ತರಾಗಲಿದ್ದಾರೆ.

ಇದನ್ನೂ ಓದಿ: ಸುಪ್ರೀಂಕೋರ್ಟ್‌ನಲ್ಲಿ ತನ್ನ ಹಿರಿಯ ವಕೀಲರಾಗಿ ಸಿಜೆಐ ಮಗನ ನೇಮಕಾತಿ ಮುಂದೂಡಿದ ಯುಪಿ ಸರ್ಕಾರ

ಮುಖ್ಯ ನ್ಯಾಯಮೂರ್ತಿ ತನ್ನ ಉತ್ತರಾಧಿಕಾರಿಯನ್ನು ಹೆಸರಿಸಿದ ನಂತರ, ನ್ಯಾಯಮೂರ್ತಿಗಳ ನೇಮಕಾತಿ ಸೇರಿದಂತೆ ಸುಪ್ರೀಂ ಕೋರ್ಟ್‌ನ ಉನ್ನತ ಸಂಸ್ಥೆಯಾದ ಕೊಲಿಜಿಯಂನ ಯಾವುದೇ ಸಭೆಯನ್ನು ಕರೆಯುವಂತಿಲ್ಲ. ಹೀಗಾಗಿ ನ್ಯಾಯಮೂರ್ತಿ ಲಲಿತ್ ನೇತೃತ್ವದ ಕೊಲಿಜಿಯಂ ಸುಪ್ರೀಂಕೋರ್ಟ್‌ನಲ್ಲಿ ಖಾಲಿ ಇರುವ ನಾಲ್ಕು ನ್ಯಾಯಾಧೀಶರ ಹುದ್ದೆಗಳನ್ನು ಭರ್ತಿ ಮಾಡಲು ಯಾರನ್ನೂ ಶಿಫಾರಸು ಮಾಡುವಂತಿಲ್ಲ.

ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಒಕ್ಕೂಟ ಸರ್ಕಾರದ ಕಾನೂನು ಸಚಿವಾಲಯವು ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದು, ಅಪರೂಪವೆಂಂತೆ ಟ್ವೀಟ್ ಕೂಡ ಮಾಡಿದೆ.

ಇದನ್ನೂ ಓದಿ: ಸುಪ್ರೀಂಕೋರ್ಟ್‌ನಲ್ಲಿ ‘ದೇಶದ್ರೋಹ’ ಕಾನೂನನ್ನು ಸಮರ್ಥಿಸಿಕೊಂಡ ಮೋದಿ ನೇತೃತ್ವದ ಬಿಜೆಪಿ ಸರ್ಕಾರ

ಈ ನಡುವೆ ಸುಪ್ರೀಂಕೋರ್ಟ್‌ನ ನಾಲ್ಕು ನೇಮಕಾತಿಗಾಗಿ ಲಿಖಿತ ಪ್ರಸ್ತಾವನೆಯನ್ನು ಪ್ರಸಾರ ಮಾಡಿದ್ದರ ಬಗ್ಗೆ ಐವರು ಹಿರಿಯ ನ್ಯಾಯಾಧೀಶರಿರುವ ಕೊಲೀಜಿಯಂನಲ್ಲಿ ಭಿನ್ನಾಭಿಪ್ರಾಯವಿದೆ. ನ್ಯಾಯಮೂರ್ತಿಗಳಾದ ಚಂದ್ರಚೂಡ್, ಸಂಜಯ್ ಕಿಶನ್ ಕೌಲ್, ಕೆಎಂ ಜೋಸೆಖ್ ಮತ್ತು ಅಬ್ದುಲ್ ನಜೀರ್ ಅವರಿಗೆ ಪ್ರಸ್ತಾವನೆ ಪ್ರಸಾರ ಮಾಡಲಾಗಿತ್ತು.

ತಮ್ಮ ಲಿಖಿತ ಅಭಿಪ್ರಾಯಗಳನ್ನು ಕೇಳಿರುವ ಮುಖ್ಯ ನ್ಯಾಯಮೂರ್ತಿಯನ್ನು ಕೊಲಿಜಿಯಂನ ಇಬ್ಬರು ಸದಸ್ಯರು ಆಕ್ಷೇಪಿಸಿದ್ದಾರೆ ಎಂದು ವರದಿಯಾಗಿದೆ. ತಮ್ಮ ಅಭಿಪ್ರಾಯಗಳನ್ನು ಬರವಣಿಗೆಯಲ್ಲಿ ನೀಡಲು ಸಾಧ್ಯವಿಲ್ಲ ಮತ್ತು ಒಮ್ಮತವನ್ನು ರೂಪಿಸಲು ಚರ್ಚೆಗಳು ನಡೆಯಬೇಕು ಎಂದು ಅವರು ಹೇಳಿದ್ದಾರೆ.

ಮೂವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮತ್ತು ಸುಪ್ರೀಂ ಕೋರ್ಟ್ ಹಿರಿಯ ವಕೀಲರನ್ನು ಸೆಪ್ಟೆಂಬರ್ 30 ರಂದು ಸುಪ್ರೀಂಕೋರ್ಟ್‌ಗೆ ನ್ಯಾಯಮೂರ್ತಿಯಾಗಿ ಉನ್ನತೀಕರಿಸಲು ಕೊಲಿಜಿಯಂ ಪರಿಗಣಿಸಬೇಕಿತ್ತು.

ಇದನ್ನೂ ಓದಿ: ದ್ವೇಷ ಭಾಷಣ: ಹಿಮಾಚಲ ಸರ್ಕಾರಕ್ಕೆ ತರಾಟೆ, ಉತ್ತರಾಖಂಡ್‌ಗೆ ಖಡಕ್‌ ಎಚ್ಚರಿಕೆ ನೀಡಿದ ಸುಪ್ರೀಂಕೋರ್ಟ್‌

ಅದಾಗ್ಯೂ, ನ್ಯಾಯಮೂರ್ತಿ ಚಂದ್ರಚೂಡ್‌ ಅವರು ಸಂಜೆಯವರೆಗೂ ನ್ಯಾಯಾಲಯದಲ್ಲಿದ್ದ ಕಾರಣ ಕೊಲೀಜಿಯಂ ಸಭೆ ಸೇರಲು ಸಾಧ್ಯವಾಗಿರಲಿಲ್ಲ. ಮರುದಿನ ಅಕ್ಟೋಬರ್ 1 ರಂದು ದಸರಾ ರಜೆಗಾಗಿ ನ್ಯಾಯಾಲಯಕ್ಕೆ ಬಿಡುವು ನೀಡಲಾಗಿತ್ತು. ಅಕ್ಟೋಬರ್ 10 ರಂದು ಸುಪ್ರೀಂ ಕೋರ್ಟ್ ಪುನರಾರಂಭಗೊಳ್ಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...