Homeಮುಖಪುಟಉತ್ತರಾಧಿಕಾರಿ ಸೂಚಿಸುವಂತೆ ಮುಖ್ಯ ನ್ಯಾಯಮೂರ್ತಿಗೆ ಕೇಳಿದ ಒಕ್ಕೂಟ ಸರ್ಕಾರ

ಉತ್ತರಾಧಿಕಾರಿ ಸೂಚಿಸುವಂತೆ ಮುಖ್ಯ ನ್ಯಾಯಮೂರ್ತಿಗೆ ಕೇಳಿದ ಒಕ್ಕೂಟ ಸರ್ಕಾರ

- Advertisement -
- Advertisement -

ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಉದಯ್ ಉಮೇಶ್ ಲಲಿತ್ ಅವರನ್ನು ಒಕ್ಕೂಟ ಸರ್ಕಾರ ಕೇಳಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಶುಕ್ರವಾರ ಮಾಧ್ಯಮಗಳು ವರದಿ ಮಾಡಿವೆ. ಸುಪ್ರಿಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನು ನೇಮಿಸುವ ಕಾರ್ಯವಿಧಾನದ ಭಾಗವಾಗಿ, ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸಲು ಕಾನೂನು ಸಚಿವರು ಸಿಜೆಐಗೆ ಪತ್ರ ಬರೆಯುವುದು ಸಂಪ್ರದಾಯವಾಗಿದೆ.

ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಪ್ರಸ್ತುತ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ. ಈ ವರೆಗಿನ ಸಂಪ್ರದಾಯದಂತೆ ಸಿಜೆಐ ಅತ್ಯಂತ ಹಿರಿಯ ನ್ಯಾಯಾಧೀಶರನ್ನು ತನ್ನ ಉತ್ತರಾಧಿಕಾರಿ ಎಂದು ಹೆಸರಿಸುತ್ತಾರೆ. ಹೀಗಾಗಿ ನ್ಯಾಯಮೂರ್ತಿ ಚಂದ್ರಚೂಡ್ ಅವರು 50 ನೇ ಸಿಜೆಐ ಆಗಿ ಹುದ್ದೆಯನ್ನು ವಹಿಸಿಕೊಳ್ಳಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಗಸ್ಟ್ 27 ರಂದು ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಯು.ಯು. ಲಲಿತ್ ಅವರು ಸುಮಾರು 74 ದಿನಗಳ ನಂತರ ನವೆಂಬರ್ 8 ರಂದು ಆಗಿ ನಿವೃತ್ತರಾಗಲಿದ್ದಾರೆ.

ಇದನ್ನೂ ಓದಿ: ಸುಪ್ರೀಂಕೋರ್ಟ್‌ನಲ್ಲಿ ತನ್ನ ಹಿರಿಯ ವಕೀಲರಾಗಿ ಸಿಜೆಐ ಮಗನ ನೇಮಕಾತಿ ಮುಂದೂಡಿದ ಯುಪಿ ಸರ್ಕಾರ

ಮುಖ್ಯ ನ್ಯಾಯಮೂರ್ತಿ ತನ್ನ ಉತ್ತರಾಧಿಕಾರಿಯನ್ನು ಹೆಸರಿಸಿದ ನಂತರ, ನ್ಯಾಯಮೂರ್ತಿಗಳ ನೇಮಕಾತಿ ಸೇರಿದಂತೆ ಸುಪ್ರೀಂ ಕೋರ್ಟ್‌ನ ಉನ್ನತ ಸಂಸ್ಥೆಯಾದ ಕೊಲಿಜಿಯಂನ ಯಾವುದೇ ಸಭೆಯನ್ನು ಕರೆಯುವಂತಿಲ್ಲ. ಹೀಗಾಗಿ ನ್ಯಾಯಮೂರ್ತಿ ಲಲಿತ್ ನೇತೃತ್ವದ ಕೊಲಿಜಿಯಂ ಸುಪ್ರೀಂಕೋರ್ಟ್‌ನಲ್ಲಿ ಖಾಲಿ ಇರುವ ನಾಲ್ಕು ನ್ಯಾಯಾಧೀಶರ ಹುದ್ದೆಗಳನ್ನು ಭರ್ತಿ ಮಾಡಲು ಯಾರನ್ನೂ ಶಿಫಾರಸು ಮಾಡುವಂತಿಲ್ಲ.

ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಒಕ್ಕೂಟ ಸರ್ಕಾರದ ಕಾನೂನು ಸಚಿವಾಲಯವು ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದು, ಅಪರೂಪವೆಂಂತೆ ಟ್ವೀಟ್ ಕೂಡ ಮಾಡಿದೆ.

ಇದನ್ನೂ ಓದಿ: ಸುಪ್ರೀಂಕೋರ್ಟ್‌ನಲ್ಲಿ ‘ದೇಶದ್ರೋಹ’ ಕಾನೂನನ್ನು ಸಮರ್ಥಿಸಿಕೊಂಡ ಮೋದಿ ನೇತೃತ್ವದ ಬಿಜೆಪಿ ಸರ್ಕಾರ

ಈ ನಡುವೆ ಸುಪ್ರೀಂಕೋರ್ಟ್‌ನ ನಾಲ್ಕು ನೇಮಕಾತಿಗಾಗಿ ಲಿಖಿತ ಪ್ರಸ್ತಾವನೆಯನ್ನು ಪ್ರಸಾರ ಮಾಡಿದ್ದರ ಬಗ್ಗೆ ಐವರು ಹಿರಿಯ ನ್ಯಾಯಾಧೀಶರಿರುವ ಕೊಲೀಜಿಯಂನಲ್ಲಿ ಭಿನ್ನಾಭಿಪ್ರಾಯವಿದೆ. ನ್ಯಾಯಮೂರ್ತಿಗಳಾದ ಚಂದ್ರಚೂಡ್, ಸಂಜಯ್ ಕಿಶನ್ ಕೌಲ್, ಕೆಎಂ ಜೋಸೆಖ್ ಮತ್ತು ಅಬ್ದುಲ್ ನಜೀರ್ ಅವರಿಗೆ ಪ್ರಸ್ತಾವನೆ ಪ್ರಸಾರ ಮಾಡಲಾಗಿತ್ತು.

ತಮ್ಮ ಲಿಖಿತ ಅಭಿಪ್ರಾಯಗಳನ್ನು ಕೇಳಿರುವ ಮುಖ್ಯ ನ್ಯಾಯಮೂರ್ತಿಯನ್ನು ಕೊಲಿಜಿಯಂನ ಇಬ್ಬರು ಸದಸ್ಯರು ಆಕ್ಷೇಪಿಸಿದ್ದಾರೆ ಎಂದು ವರದಿಯಾಗಿದೆ. ತಮ್ಮ ಅಭಿಪ್ರಾಯಗಳನ್ನು ಬರವಣಿಗೆಯಲ್ಲಿ ನೀಡಲು ಸಾಧ್ಯವಿಲ್ಲ ಮತ್ತು ಒಮ್ಮತವನ್ನು ರೂಪಿಸಲು ಚರ್ಚೆಗಳು ನಡೆಯಬೇಕು ಎಂದು ಅವರು ಹೇಳಿದ್ದಾರೆ.

ಮೂವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮತ್ತು ಸುಪ್ರೀಂ ಕೋರ್ಟ್ ಹಿರಿಯ ವಕೀಲರನ್ನು ಸೆಪ್ಟೆಂಬರ್ 30 ರಂದು ಸುಪ್ರೀಂಕೋರ್ಟ್‌ಗೆ ನ್ಯಾಯಮೂರ್ತಿಯಾಗಿ ಉನ್ನತೀಕರಿಸಲು ಕೊಲಿಜಿಯಂ ಪರಿಗಣಿಸಬೇಕಿತ್ತು.

ಇದನ್ನೂ ಓದಿ: ದ್ವೇಷ ಭಾಷಣ: ಹಿಮಾಚಲ ಸರ್ಕಾರಕ್ಕೆ ತರಾಟೆ, ಉತ್ತರಾಖಂಡ್‌ಗೆ ಖಡಕ್‌ ಎಚ್ಚರಿಕೆ ನೀಡಿದ ಸುಪ್ರೀಂಕೋರ್ಟ್‌

ಅದಾಗ್ಯೂ, ನ್ಯಾಯಮೂರ್ತಿ ಚಂದ್ರಚೂಡ್‌ ಅವರು ಸಂಜೆಯವರೆಗೂ ನ್ಯಾಯಾಲಯದಲ್ಲಿದ್ದ ಕಾರಣ ಕೊಲೀಜಿಯಂ ಸಭೆ ಸೇರಲು ಸಾಧ್ಯವಾಗಿರಲಿಲ್ಲ. ಮರುದಿನ ಅಕ್ಟೋಬರ್ 1 ರಂದು ದಸರಾ ರಜೆಗಾಗಿ ನ್ಯಾಯಾಲಯಕ್ಕೆ ಬಿಡುವು ನೀಡಲಾಗಿತ್ತು. ಅಕ್ಟೋಬರ್ 10 ರಂದು ಸುಪ್ರೀಂ ಕೋರ್ಟ್ ಪುನರಾರಂಭಗೊಳ್ಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...