Homeಮುಖಪುಟಉತ್ತರಾಧಿಕಾರಿ ಸೂಚಿಸುವಂತೆ ಮುಖ್ಯ ನ್ಯಾಯಮೂರ್ತಿಗೆ ಕೇಳಿದ ಒಕ್ಕೂಟ ಸರ್ಕಾರ

ಉತ್ತರಾಧಿಕಾರಿ ಸೂಚಿಸುವಂತೆ ಮುಖ್ಯ ನ್ಯಾಯಮೂರ್ತಿಗೆ ಕೇಳಿದ ಒಕ್ಕೂಟ ಸರ್ಕಾರ

- Advertisement -
- Advertisement -

ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಉದಯ್ ಉಮೇಶ್ ಲಲಿತ್ ಅವರನ್ನು ಒಕ್ಕೂಟ ಸರ್ಕಾರ ಕೇಳಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಶುಕ್ರವಾರ ಮಾಧ್ಯಮಗಳು ವರದಿ ಮಾಡಿವೆ. ಸುಪ್ರಿಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನು ನೇಮಿಸುವ ಕಾರ್ಯವಿಧಾನದ ಭಾಗವಾಗಿ, ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸಲು ಕಾನೂನು ಸಚಿವರು ಸಿಜೆಐಗೆ ಪತ್ರ ಬರೆಯುವುದು ಸಂಪ್ರದಾಯವಾಗಿದೆ.

ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಪ್ರಸ್ತುತ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ. ಈ ವರೆಗಿನ ಸಂಪ್ರದಾಯದಂತೆ ಸಿಜೆಐ ಅತ್ಯಂತ ಹಿರಿಯ ನ್ಯಾಯಾಧೀಶರನ್ನು ತನ್ನ ಉತ್ತರಾಧಿಕಾರಿ ಎಂದು ಹೆಸರಿಸುತ್ತಾರೆ. ಹೀಗಾಗಿ ನ್ಯಾಯಮೂರ್ತಿ ಚಂದ್ರಚೂಡ್ ಅವರು 50 ನೇ ಸಿಜೆಐ ಆಗಿ ಹುದ್ದೆಯನ್ನು ವಹಿಸಿಕೊಳ್ಳಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಗಸ್ಟ್ 27 ರಂದು ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಯು.ಯು. ಲಲಿತ್ ಅವರು ಸುಮಾರು 74 ದಿನಗಳ ನಂತರ ನವೆಂಬರ್ 8 ರಂದು ಆಗಿ ನಿವೃತ್ತರಾಗಲಿದ್ದಾರೆ.

ಇದನ್ನೂ ಓದಿ: ಸುಪ್ರೀಂಕೋರ್ಟ್‌ನಲ್ಲಿ ತನ್ನ ಹಿರಿಯ ವಕೀಲರಾಗಿ ಸಿಜೆಐ ಮಗನ ನೇಮಕಾತಿ ಮುಂದೂಡಿದ ಯುಪಿ ಸರ್ಕಾರ

ಮುಖ್ಯ ನ್ಯಾಯಮೂರ್ತಿ ತನ್ನ ಉತ್ತರಾಧಿಕಾರಿಯನ್ನು ಹೆಸರಿಸಿದ ನಂತರ, ನ್ಯಾಯಮೂರ್ತಿಗಳ ನೇಮಕಾತಿ ಸೇರಿದಂತೆ ಸುಪ್ರೀಂ ಕೋರ್ಟ್‌ನ ಉನ್ನತ ಸಂಸ್ಥೆಯಾದ ಕೊಲಿಜಿಯಂನ ಯಾವುದೇ ಸಭೆಯನ್ನು ಕರೆಯುವಂತಿಲ್ಲ. ಹೀಗಾಗಿ ನ್ಯಾಯಮೂರ್ತಿ ಲಲಿತ್ ನೇತೃತ್ವದ ಕೊಲಿಜಿಯಂ ಸುಪ್ರೀಂಕೋರ್ಟ್‌ನಲ್ಲಿ ಖಾಲಿ ಇರುವ ನಾಲ್ಕು ನ್ಯಾಯಾಧೀಶರ ಹುದ್ದೆಗಳನ್ನು ಭರ್ತಿ ಮಾಡಲು ಯಾರನ್ನೂ ಶಿಫಾರಸು ಮಾಡುವಂತಿಲ್ಲ.

ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಒಕ್ಕೂಟ ಸರ್ಕಾರದ ಕಾನೂನು ಸಚಿವಾಲಯವು ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದು, ಅಪರೂಪವೆಂಂತೆ ಟ್ವೀಟ್ ಕೂಡ ಮಾಡಿದೆ.

ಇದನ್ನೂ ಓದಿ: ಸುಪ್ರೀಂಕೋರ್ಟ್‌ನಲ್ಲಿ ‘ದೇಶದ್ರೋಹ’ ಕಾನೂನನ್ನು ಸಮರ್ಥಿಸಿಕೊಂಡ ಮೋದಿ ನೇತೃತ್ವದ ಬಿಜೆಪಿ ಸರ್ಕಾರ

ಈ ನಡುವೆ ಸುಪ್ರೀಂಕೋರ್ಟ್‌ನ ನಾಲ್ಕು ನೇಮಕಾತಿಗಾಗಿ ಲಿಖಿತ ಪ್ರಸ್ತಾವನೆಯನ್ನು ಪ್ರಸಾರ ಮಾಡಿದ್ದರ ಬಗ್ಗೆ ಐವರು ಹಿರಿಯ ನ್ಯಾಯಾಧೀಶರಿರುವ ಕೊಲೀಜಿಯಂನಲ್ಲಿ ಭಿನ್ನಾಭಿಪ್ರಾಯವಿದೆ. ನ್ಯಾಯಮೂರ್ತಿಗಳಾದ ಚಂದ್ರಚೂಡ್, ಸಂಜಯ್ ಕಿಶನ್ ಕೌಲ್, ಕೆಎಂ ಜೋಸೆಖ್ ಮತ್ತು ಅಬ್ದುಲ್ ನಜೀರ್ ಅವರಿಗೆ ಪ್ರಸ್ತಾವನೆ ಪ್ರಸಾರ ಮಾಡಲಾಗಿತ್ತು.

ತಮ್ಮ ಲಿಖಿತ ಅಭಿಪ್ರಾಯಗಳನ್ನು ಕೇಳಿರುವ ಮುಖ್ಯ ನ್ಯಾಯಮೂರ್ತಿಯನ್ನು ಕೊಲಿಜಿಯಂನ ಇಬ್ಬರು ಸದಸ್ಯರು ಆಕ್ಷೇಪಿಸಿದ್ದಾರೆ ಎಂದು ವರದಿಯಾಗಿದೆ. ತಮ್ಮ ಅಭಿಪ್ರಾಯಗಳನ್ನು ಬರವಣಿಗೆಯಲ್ಲಿ ನೀಡಲು ಸಾಧ್ಯವಿಲ್ಲ ಮತ್ತು ಒಮ್ಮತವನ್ನು ರೂಪಿಸಲು ಚರ್ಚೆಗಳು ನಡೆಯಬೇಕು ಎಂದು ಅವರು ಹೇಳಿದ್ದಾರೆ.

ಮೂವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮತ್ತು ಸುಪ್ರೀಂ ಕೋರ್ಟ್ ಹಿರಿಯ ವಕೀಲರನ್ನು ಸೆಪ್ಟೆಂಬರ್ 30 ರಂದು ಸುಪ್ರೀಂಕೋರ್ಟ್‌ಗೆ ನ್ಯಾಯಮೂರ್ತಿಯಾಗಿ ಉನ್ನತೀಕರಿಸಲು ಕೊಲಿಜಿಯಂ ಪರಿಗಣಿಸಬೇಕಿತ್ತು.

ಇದನ್ನೂ ಓದಿ: ದ್ವೇಷ ಭಾಷಣ: ಹಿಮಾಚಲ ಸರ್ಕಾರಕ್ಕೆ ತರಾಟೆ, ಉತ್ತರಾಖಂಡ್‌ಗೆ ಖಡಕ್‌ ಎಚ್ಚರಿಕೆ ನೀಡಿದ ಸುಪ್ರೀಂಕೋರ್ಟ್‌

ಅದಾಗ್ಯೂ, ನ್ಯಾಯಮೂರ್ತಿ ಚಂದ್ರಚೂಡ್‌ ಅವರು ಸಂಜೆಯವರೆಗೂ ನ್ಯಾಯಾಲಯದಲ್ಲಿದ್ದ ಕಾರಣ ಕೊಲೀಜಿಯಂ ಸಭೆ ಸೇರಲು ಸಾಧ್ಯವಾಗಿರಲಿಲ್ಲ. ಮರುದಿನ ಅಕ್ಟೋಬರ್ 1 ರಂದು ದಸರಾ ರಜೆಗಾಗಿ ನ್ಯಾಯಾಲಯಕ್ಕೆ ಬಿಡುವು ನೀಡಲಾಗಿತ್ತು. ಅಕ್ಟೋಬರ್ 10 ರಂದು ಸುಪ್ರೀಂ ಕೋರ್ಟ್ ಪುನರಾರಂಭಗೊಳ್ಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...