Homeಚಳವಳಿರೈತರನ್ನು ಸಭೆಗೆ ಕರೆದ ಕೇಂದ್ರದ ಕೃಷಿ ಸಚಿವರೇ ನಾಪತ್ತೆ: ಮಸೂದೆ ಹರಿದು ರೈತರ ಆಕ್ರೋಶ!

ರೈತರನ್ನು ಸಭೆಗೆ ಕರೆದ ಕೇಂದ್ರದ ಕೃಷಿ ಸಚಿವರೇ ನಾಪತ್ತೆ: ಮಸೂದೆ ಹರಿದು ರೈತರ ಆಕ್ರೋಶ!

ವಿವಾದಾತ್ಮಕ ಕೃಷಿ ಕಾನೂನುಗಳ ಕುರಿತು ಚರ್ಚೆಸಲು ರೈತ ಮುಖಂಡರು ಭಾಗವಹಿಸಬೇಕೆಂದು ಕೇಂದ್ರ ಸರ್ಕಾರ, ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ರೈತ ಸಂಘಟನೆಗಳಿಗೆ ಎರಡನೇ ಬಾರಿಗೆ ಪತ್ರ ಬರೆದು ಆಹ್ವಾನಿಸಿತ್ತು.

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳ ವಿರುದ್ಧ ಹೊರಾಟ ಮಾಡುತ್ತಿರುವ ರೈತ ಸಂಘಟನೆಗಳನ್ನು ಕೇಂದ್ರ ಸರ್ಕಾರವು ಎರಡನೇ ಬಾರಿ ಚರ್ಚೆಗೆ ಆಹ್ವಾನಿಸಿತ್ತು. ಆದರೆ ಇಂದು ನಡೆದ ಈ ಸಭೆಯಲ್ಲಿ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಹಾಜರಿರಲಿಲ್ಲ. ಹಾಗಾಗಿ ರೈತರು ಮಸೂದೆ ಪ್ರತಿಗಳನ್ನು ಹರಿದುಹಾಕಿ ಹೊರನಡೆದರು.

ಕೇಂದ್ರ ಕೃಷಿ ಸಚಿವರ ಅನುಪಸ್ಥಿತಿಯ ಬಗ್ಗೆ ಅಸಮಾಧಾನಗೊಂಡ ರೈತರು, ಸಚಿವಾಲಯದೊಳಗೆ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿ, ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ತಮ್ಮ ಆಂದೋಲನ ಮುಂದುವರಿಯುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಸಂಬಂಧ ಇತ್ತೀಚೆಗೆ ಅಂಗೀಕರಿಸಿರುವ ವಿವಾದಾತ್ಮಕ ಕೃಷಿ ಕಾನೂನುಗಳ ಕುರಿತು ಚರ್ಚೆಸಲು ರೈತ ಮುಖಂಡರು ಭಾಗವಹಿಸಬೇಕೆಂದು ಕೇಂದ್ರ ಸರ್ಕಾರ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ರೈತ ಸಂಘಟನೆಗಳಿಗೆ ಎರಡನೇ ಬಾರಿಗೆ ಪತ್ರ ಬರೆದು ಆಹ್ವಾನಿಸಿತ್ತು.

ಇದನ್ನೂ ಓದಿ: ಹಳೆ ಕಾಂಗ್ರೆಸ್ ಸಂಸ್ಕೃತಿ + ದುಡ್ಡು ಎಂಬ ಡಿಕೆಶಿ ಮಾದರಿ ವರ್ಕ್‌ಔಟ್ ಆಗುತ್ತಾ?

ಅಗತ್ಯ ವಸ್ತುಗಳ ಕಾಯ್ದೆ ತಿದ್ದುಪಡಿ ಸೇರಿದಂತೆ, ಕೃಷಿ ಸಂಬಂಧಿ ಕಾಯ್ದೆಗಳ ತಿದ್ದುಪಡಿಗಳನ್ನು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಿತ್ತು. ಇದಕ್ಕೆ ಪಂಜಾಬ್ ಮತ್ತು ಹರಿಯಾಣದಲ್ಲಿ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ರೈತರ ಪ್ರತಿಭಟನೆಗೆ ಮಣಿದಂತೆ ಕಂಡುಬಂದಿರುವ ಕೇಂದ್ರ ಸರ್ಕಾರ, 30 ರೈತ ಸಂಘಟನೆಗಳಲ್ಲಿ 29 ಸಂಘಟನೆಗಳ ಮುಖಂಡರಿಗೆ ಕೇಂದ್ರ ಸರ್ಕಾರದ ಕೃಷಿ ಸಹಕಾರ ಮತ್ತು ರೈತ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಸಂಜಯ್ ಅಗರ್ ವಾಲ್ ಪತ್ರ ಬರೆದು ಸಭೆಯಲ್ಲಿ ಭಾಗವಹಿಸಿ ಮಾತುಕತೆ ನಡೆಸಬೇಕು ಎಂದು ಚರ್ಚೆಗೆ ಮನವಿಯನ್ನು ಮಾಡಿತ್ತು.

ಇದನ್ನೂ ಓದಿ: ಕೇಂದ್ರ ಸರ್ಕಾರ ನಮ್ಮಿಂದ ಕಿತ್ತುಕೊಂಡದ್ದನ್ನು ಮರಳಿ ಪಡೆಯಬೇಕಾಗಿದೆ: ಮೆಹಬೂಬಾ ಮುಫ್ತಿ

ಮೊದಲು ಕೃಷಿ ಇಲಾಖೆ ಅಧಿಕಾರಿಗಳು ರೈತ ನಾಯಕರಿಗೆ ಪತ್ರ ಬರೆದಿದ್ದರು. ಅಧಿಕಾರಿಗಳ ಜೊತೆ ಮಾತುಕತೆ ನಡೆಸುವುದಿಲ್ಲ ಎಂದು ರೈತ ನಾಯಕರು ಈ ಆಹ್ವಾನವನ್ನು ತಿರಸ್ಕರಿಸಿದ್ದರು. ಕೃಷಿ ಸಚಿವರು ಮತ್ತು ಪ್ರಧಾನಿಯಿಂದ ಸೂಕ್ತ ಆಹ್ವಾನ ಬಂದರೆ ಮಾತ್ರ ಮಾತುಕತೆಗೆ ಸಿದ್ಧ ಎಂದು ರೈತ ನಾಯಕರು ಈ ಮೊದಲೇ ಹೇಳಿದ್ದರು. ಇದೀಗ ಕೃಷಿ ಸಚಿವಾಲಯದಿಂದ ಆಯೋಜಿಸಿದ್ದ ಎರಡನೇ ಸಭೆಯೂ ವಿಫಲಗೊಂಡಿದೆ.

ಸೆಪ್ಟೆಂಬರ್ ಮಧ್ಯಭಾಗದಿಂದಲೂ ಪಂಜಾಬ್ ಮತ್ತು ಹರಿಯಾಣದಲ್ಲಿ ರೈತ ಸಂಘಟನೆಗಳು ತೀವ್ರ ಸ್ವರೂಪದ ಪ್ರತಿಭಟನೆಯನ್ನು ನಡೆಸುತ್ತಿವೆ. ದೇಶಾದ್ಯಂತ ಕೇಂದ್ರ ಸರ್ಕಾರ ಅಂಗೀಕರಿಸಿರುವ ಕೃಷಿ ಸಂಬಂಧಿ ಕಾಯ್ದೆಗಳಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ರೈತ ಸಂಘಟನೆಗಳಿಂದ ಇನ್ನೂ ಪ್ರತಿಭಟನೆ ವ್ಯಕ್ತವಾಗುತ್ತಲೇ ಇದೆ.


ಇದನ್ನೂ ಓದಿ: ಆಯ್ಕೆಯಾಗಿ ವರ್ಷವಾದರೂ ನೇಮಕಾತಿ ಆದೇಶವಿಲ್ಲ: PUC ಉಪನ್ಯಾಸಕ ಅಭ್ಯರ್ಥಿಗಳ ಆಕ್ರೋಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...