Homeಮುಖಪುಟಮಣಿಪುರ: ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ನಿಷೇಧಿತ ಸಶಸ್ತ್ರ ಗುಂಪು

ಮಣಿಪುರ: ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ನಿಷೇಧಿತ ಸಶಸ್ತ್ರ ಗುಂಪು

- Advertisement -
- Advertisement -

ಕೇಂದ್ರ ಗೃಹ ಸಚಿವಾಲಯವು ಇತ್ತೀಚೆಗೆ ನಿಷೇಧಿಸಿದ್ದ ಯುನೈಟೆಡ್ ನ್ಯಾಶನಲ್ ಲಿಬರೇಶನ್ ಫ್ರಂಟ್ (UNLF) ಹಿಂಸಾಚಾರವನ್ನು ತ್ಯಜಿಸಲು ಒಪ್ಪಿಕೊಂಡು ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದೆ. ಇದೊಂದು ಐತಿಹಾಸಿಕ ಮೈಲಿಗಲ್ಲು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಮಣಿಪುರದ ಅತ್ಯಂತ ಹಳೆಯ ಕಣಿವೆ ಮೂಲದ ಸಶಸ್ತ್ರ ಗುಂಪು UNLF ಹಿಂಸಾಚಾರವನ್ನು ತ್ಯಜಿಸಲು ಮತ್ತು ಮುಖ್ಯವಾಹಿನಿಗೆ ಸೇರಲು ಒಪ್ಪಿಕೊಂಡಿದೆ. ನಾನು ಅವರನ್ನು ಪ್ರಜಾಸತ್ತಾತ್ಮಕ ವೇದಿಕೆಗೆ ಸ್ವಾಗತಿಸುತ್ತೇನೆ ಮತ್ತು ಶಾಂತಿ ಮತ್ತು ಪ್ರಗತಿಯ ಹಾದಿಯಲ್ಲಿ ಅವರು ಉದ್ದೇಶಿಸಿರುವ ಪ್ರಯಾಣಕ್ಕೆ ಅವರಿಗೆ ಶುಭ ಹಾರೈಸುತ್ತೇನೆ ಎಂದು ಅಮಿತ್ ಶಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮತ್ತೊಂದು ಪೋಸ್ಟ್‌ ಮಾಡಿದ ಅಮಿತ್ ಶಾ, ಯುಎನ್‌ಎಲ್‌ಎಫ್‌ನೊಂದಿಗೆ ಭಾರತ ಸರ್ಕಾರ ಮತ್ತು ಮಣಿಪುರ ಸರ್ಕಾರವು ಸಹಿ ಮಾಡಿದ ಶಾಂತಿ ಒಪ್ಪಂದವು ಆರು ದಶಕಗಳ ಕಾಲದ ಸಶಸ್ತ್ರ ಚಳುವಳಿಯ ಅಂತ್ಯವನ್ನು ಸೂಚಿಸುತ್ತದೆ. ಇದು ಈಶಾನ್ಯ ಭಾರತದ ಯುವಕರಿಗೆ ಅಭಿವೃದ್ಧಿ ಮತ್ತು ಉತ್ತಮ ಭವಿಷ್ಯವನ್ನು ಒದಗಿಸುವ ಮೋದಿ ಜಿ ಅವರ ದೂರದೃಷ್ಟಿ ಎಂದು ಹೇಳಿದ್ದಾರೆ.

ಕೇಂದ್ರ ಗೃಹ ಸಚಿವಾಲಯವು ಈ ಬಗ್ಗೆ ಪೋಸ್ಟ್‌ ಮಾಡಿದ್ದು, ಕಣಿವೆ ಮೂಲದ ಮಣಿಪುರದ ಸಶಸ್ತ್ರ ಗುಂಪು ಹಿಂಸಾಚಾರವನ್ನು ತ್ಯಜಿಸುವ ಮೂಲಕ ಮುಖ್ಯವಾಹಿನಿಗೆ ಮರಳಲು ಒಪ್ಪಿಕೊಂಡಿರುವುದು ಮತ್ತು ಭಾರತದ ಸಂವಿಧಾನ ಮತ್ತು ದೇಶದ ಕಾನೂನುಗಳನ್ನು ಗೌರವಿಸಲು ಒಪ್ಪಿಕೊಳ್ಳುವುದು ಇದೇ ಮೊದಲು. ಒಪ್ಪಂದವು ಸಾಮಾನ್ಯವಾಗಿ ಈಶಾನ್ಯದಲ್ಲಿ ಮತ್ತು ನಿರ್ದಿಷ್ಟವಾಗಿ ಮಣಿಪುರದಲ್ಲಿ ಶಾಂತಿಯ ಹೊಸ ಯುಗವನ್ನು ಪ್ರಾರಂಭಿಸಲು ಸಿದ್ಧವಾಗಿದೆ ಎಂದು ಸಚಿವಾಲಯ ಹೇಳಿದೆ.

ಯುನೈಟೆಡ್ ನ್ಯಾಶನಲ್ ಲಿಬರೇಶನ್ ಫ್ರಂಟ್ ಮತ್ತು ಅದರ ಸಶಸ್ತ್ರ ವಿಭಾಗವಾದ ಮಣಿಪುರ ಪೀಪಲ್ಸ್ ಆರ್ಮಿ  ಈ ತಿಂಗಳ ಆರಂಭದಲ್ಲಿ ಕೇಂದ್ರ ಗೃಹ ಸಚಿವಾಲಯವು ನಿಷೇಧಿಸಿದ ಮಣಿಪುರದ ಹಲವಾರು ಮೈತೈ ತೀವ್ರಗಾಮಿ ಸಂಘಟನೆಗಳಲ್ಲಿ ಸೇರಿದೆ. ಈಶಾನ್ಯ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದ ಹಿನ್ನೆಲೆಯಲ್ಲಿ ಈ ಸಂಘಟನೆಯನ್ನು ಕಾನೂನುಬಾಹಿರ ಎಂದು ಘೋಷಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರಕಾರವು ಹೇಳಿತ್ತು.

ಭಾನುವಾರ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಇಂಫಾಲ್ ಕಣಿವೆ ಮೂಲದ ಸಶಸ್ತ್ರ ಗುಂಪಿನೊಂದಿಗೆ ತಮ್ಮ ಸರ್ಕಾರ ಮಾತುಕತೆ ನಡೆಸುತ್ತಿದೆ. ಶೀಘ್ರದಲ್ಲೇ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಗುವುದು ಎಂದು ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ ಹಿಂಸಾಚಾರವನ್ನು ತ್ಯಜಿಸಲು ಯುಎನ್‌ಎಲ್‌ಎಫ್ ಒಪ್ಪಿಕೊಂಡಿದೆ.

ಮಣಿಪುರದ ಜನಸಂಖ್ಯೆಯ ಸುಮಾರು 53 ಪ್ರತಿ ಶತದಷ್ಟು ಮೈತೈಗಳು ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ. ಆದರೆ ನಾಗಾಗಳು ಮತ್ತು ಕುಕಿಗಳನ್ನು ಒಳಗೊಂಡಿರುವ ಬುಡಕಟ್ಟು ಜನಾಂಗದವರು ಶೇ.40ರಷ್ಟಿದ್ದಾರೆ ಮತ್ತು ಮುಖ್ಯವಾಗಿ ಬೆಟ್ಟದ ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

ಇದನ್ನು ಓದಿ: ಸಿಎಎ ಜಾರಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಅಮಿತ್‌ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...