Homeಅಂತರಾಷ್ಟ್ರೀಯವಿಶ್ವಸಂಸ್ಥೆ ಆತ್ಮವಿಶ್ವಾಸದ ಬಿಕ್ಕಟ್ಟನ್ನು ಎದುರಿಸುತ್ತಿದೆ: ಪ್ರಧಾನಿ ಮೋದಿ

ವಿಶ್ವಸಂಸ್ಥೆ ಆತ್ಮವಿಶ್ವಾಸದ ಬಿಕ್ಕಟ್ಟನ್ನು ಎದುರಿಸುತ್ತಿದೆ: ಪ್ರಧಾನಿ ಮೋದಿ

- Advertisement -
- Advertisement -

’ವಿಶ್ವಸಂಸ್ಥೆ ಆತ್ಮವಿಶ್ವಾಸದ ಬಿಕ್ಕಟ್ಟನ್ನು ಎದುರಿಸುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಭಾರತವು 2021 ರ ಜನವರಿಯಿಂದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕಾಯಂ ಅಲ್ಲದ ಚುನಾಯಿತ ಸದಸ್ವತ್ವ ಹುದ್ದೆಯನ್ನು ಹೊಂದಲಿದೆ, ಈ ಹಿನ್ನೆಲೆಯಲ್ಲಿ ಪ್ರಧಾನಿಯ ಈ ಹೇಳಿಕೆ ಮಹತ್ವದ್ದಾಗಿದೆ.

ಅವರು ವಿಶ್ವಸಂಸ್ಥೆಯ 75 ನೇ ವರ್ಷಾಚರಣೆ ಅಂಗವಾಗಿ ನಡೆದ ಜನರಲ್ ಅಸೆಂಬ್ಲಿಯ ಉನ್ನತ ಮಟ್ಟದ ಸಭೆಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡುತ್ತಿದ್ದರು.

ಇದನ್ನೂ ಓದಿ: ಮೂರೇ ದಿನಕ್ಕೆ ಅಧಿವೇಶನ ಮೊಟಕುಗೊಳಿಸಲು ಮುಂದಾದ ಸಿಎಂ ಬಿಎಸ್‌ವೈ: ಸಿದ್ದರಾಮಯ್ಯ ವಿರೋಧ

ಪ್ರಸ್ತುತ ವಾಸ್ತವತೆಯನ್ನು ಪ್ರತಿನಿಧಿಸುವ, ಎಲ್ಲ ಹಕ್ಕುದಾರರಿಗೆ ಧ್ವನಿ ನೀಡುವ, ಪ್ರಚಲಿತ ಸವಾಲುಗಳನ್ನು ಎದುರಿಸುವ ಮತ್ತು ಮನುಕುಲದ ಕಲ್ಯಾಣವನ್ನು ಬಯಸುವ ಸುಧಾರಿತ ಬಹುತ್ವವಾದ ಇಂದು ವಿಶ್ವಕ್ಕೆ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಅಪ್ರಸ್ತುತ ಸಂರಚನೆಯಿಂದ ನಾವು ಇಂದಿನ ಸವಾಲುಗಳ ವಿರುದ್ಧ ಹೋರಾಡಲು ಸಾಧ್ಯವಾಗದು. ಸಮಗ್ರ ಸುಧಾರಣೆ ಇಲ್ಲದ ಕಾರಣದಿಂದಾಗಿ ವಿಶ್ವಸಂಸ್ಥೆಯು ಆತ್ಮವಿಶ್ವಾಸದ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ವಿಶ್ವ ಸಂಸ್ಥೆಯ 75 ನೇ ವರ್ಷಾಚಣೆಯ ಜನರಲ್ ಅಸೆಂಬ್ಲಿಯು ಭಯೋತ್ಪಾದನೆ ವಿರುದ್ಧದ ಹೋರಾಟ, ಸುಧಾರಿತ ಬಹುತ್ವವಾದ, ಎಲ್ಲರ ಪಾಲ್ಗೊಳ್ಳುವಿಕೆಯ ಅಭಿವೃದ್ಧಿ ಮತ್ತು ಕೊರೊನಾದಂತ ಸಾಂಕ್ರಾಮಿಕದ ವಿರುದ್ಧ ಹೋರಾಡಲು ಕರೆ ನೀಡಿದ್ದು, ದೂರದೃಷ್ಟಿಯ ರಾಜಕೀಯ ಒಪ್ಪಂದವನ್ನು ಆಂಗೀಕರಿಸಿದೆ.

ಇದನ್ನೂ ಓದಿ: ಜಿಡಿಪಿ ಕುಸಿತ: ನರೇಂದ್ರ ಮೋದಿ ಸರ್ಕಾರದ ಅನೀತಿಗಳೇ ಕಾರಣ ಎಂದ ಕಾಂಗ್ರೆಸ್ ನಾಯಕರು

ರೈತ ವಿರೋಧಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಅರೆಬೆತ್ತಲೆ ಧರಣಿ ಕೂತ ರೈತರು

ಬೆಂಗಳೂರು: ರೈತವಿರೋಧಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ, ರಾಜ್ಯದ ರೈತ, ದಲಿತ ಮತ್ತು ಕಾರ್ಮಿಕ ಸಂಘಟನೆಗಳಿಂದ ಬೃಹತ್ ಹೋರಾಟ

Posted by Naanu Gauri on Monday, September 21, 2020

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...