Homeಮುಖಪುಟಅಪರಾಧಿ ಎಂದು ತೀರ್ಪು ಬರುತ್ತಿದ್ದಂತೆ ಕೋರ್ಟ್‌ನಿಂದ ಯುಪಿ ಸಚಿವ ಪರಾರಿ: 35 ವರ್ಷಗಳ ಹಿಂದೆ ರೈಲ್ವೆ...

ಅಪರಾಧಿ ಎಂದು ತೀರ್ಪು ಬರುತ್ತಿದ್ದಂತೆ ಕೋರ್ಟ್‌ನಿಂದ ಯುಪಿ ಸಚಿವ ಪರಾರಿ: 35 ವರ್ಷಗಳ ಹಿಂದೆ ರೈಲ್ವೆ ಸಲಕರಣೆ ಕಳ್ಳತನ ಮಾಡಿದ್ದ ಸಚಿವ?

- Advertisement -
- Advertisement -

ಬಿಜೆಪಿಯ ಆದಿತ್ಯನಾಥ್‌ ಅವರ ಉತ್ತರ ಪ್ರದೇಶ ಸರ್ಕಾರದ ಸಚಿವ ರಾಕೇಶ್ ಸಚನ್‌‌ 1991 ರ ಪ್ರಕರಣದಲ್ಲಿ ಅಪರಾಧಿ ಎಂದು ತೀರ್ಪು ನೀಡಿದ ನಂತರ ಶಿಕ್ಷೆಯ ಪ್ರಮಾಣವನ್ನು ನಿರ್ಧರಿಸುವ ಮೊದಲು ಕಾನ್ಪುರದ ನ್ಯಾಯಾಲಯದಿಂದ ಪಲಾಯನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇತ್ತೀಚೆಗೆ ನಡೆದ ರಾಜ್ಯ ಚುನಾವಣೆಗೆ ಮುನ್ನವೇ ಕಾಂಗ್ರೆಸ್‌ನಿಂದ ಬಿಜೆಪಿ ಸೇರಿದ ಸಚನ್, ಅಕ್ರಮ ಶಸ್ತ್ರಾಸ್ತ್ರ ಇಟ್ಟುಕೊಂಡಿದ್ದ ಪ್ರಕರಣದಲ್ಲಿ ಶನಿವಾರ ದೋಷಿ ಎಂದು ಸಾಬೀತಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ವಿಪಕ್ಷ ನಾಯಕರು ಸಚನ್ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳುವ ಮತ್ತು ಶಿಕ್ಷೆಯ ಬಗ್ಗೆ ವಾದಗಳು ಪ್ರಾರಂಭವಾಗುವ ಮೊದಲು ನ್ಯಾಯಾಲಯದಿಂದ ಓಡಿಹೋದರು ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಪ್ರದೇಶ ಸರ್ಕಾರದಲ್ಲಿ ಮಧ್ಯಮ, ಸಣ್ಣ ಮತ್ತು ಅತಿ ಸಣ್ಣ ಉದ್ಯಮಗಳು ಮತ್ತು ಖಾದಿ ಇಲಾಖೆಗಳ ಸಚಿವರಾಗಿರುವ ರಾಕೇಶ್ ಸಚನ್ ವಿರುದ್ಧ ನ್ಯಾಯಾಲಯದ ಅಧಿಕಾರಿಗಳಿಂದ ದೂರು ಸ್ವೀಕರಿಸಲಾಗಿದೆ ಎಂದು ಕಾನ್ಪುರ ಪೊಲೀಸರು ಶನಿವಾರ ತಡರಾತ್ರಿ ದೃಢಪಡಿಸಿದ್ದು, ಆದರೆ ದೂರಿನ ಮೇರೆಗೆ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆಯೆ ಎಂದು ಹೇಳಲಿಲ್ಲ.

ಇದನ್ನೂ ಓದಿ: ಯುಪಿ: ಮತಾಂತರ ಆರೋಪ ಮಾಡಿದ ವಿಎಚ್‌ಪಿ; ಆರು ಮಂದಿ ದಲಿತ-ಕ್ರಿಶ್ಚಿಯನ್‌ ಮಹಿಳೆಯರ ಮೇಲೆ ಎಫ್‌ಐಆರ್‌

“ಪರಿಶೀಲಿಸಬೇಕಾದ ವಿಷಯ ಬಹಳಷ್ಟು ಇದೆ. ನಾವು ಎಲ್ಲರೊಂದಿಗೆ ಸಂಪರ್ಕದಲ್ಲಿರಲು ಪ್ರಯತ್ನಿಸುತ್ತಿದ್ದು, ನಮ್ಮ ವಿಚಾರಣೆಯನ್ನು ಮುಂದಕ್ಕೆ ಕೊಂಡೊಯ್ಯುತ್ತಿದ್ದೇವೆ. ವಿಚಾರಣೆ ಪೂರ್ಣಗೊಂಡ ನಂತರ ನಾವು ಕಾನೂನಿನ ಪ್ರಕಾರ ಮುಂದುವರಿಯುತ್ತೇವೆ” ಎಂದು ಕಾನ್ಪುರದ ಹಿರಿಯ ಪೊಲೀಸ್ ಅಧಿಕಾರಿ ಎಪಿ ತಿವಾರಿ ಹೇಳಿದ್ದಾರೆ.

ಈ ವಿವಾದದ ನಡುವೆ ಸಚನ್ ಸರ್ಕಾರಿ ಸಭೆಯಲ್ಲಿ ಭಾಗವಹಿಸಿದ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.  ತಮ್ಮ ವಿರುದ್ಧದ ಆರೋಪಗಳು ಸುಳ್ಳು ಮತ್ತು ರಾಜಕೀಯ ಪ್ರೇರಿತ ಎಂದು ಹೇಳಿದ್ದಾರೆ.

“ನಾನು ನನ್ನ ಜೀವನದಲ್ಲಿ ಎಂದಿಗೂ ಓಡಿಹೋಗಿಲ್ಲ, ಇವೆಲ್ಲವೂ ನನ್ನ ವಿರುದ್ಧದ ಆಧಾರರಹಿತ ಪ್ರಕರಣಗಳು. ನಾನು ಬೆಳಿಗ್ಗೆ 11 ಗಂಟೆಗೆ ಸ್ವಲ್ಪ ಮುಂಚಿತವಾಗಿ ನ್ಯಾಯಾಲಯವನ್ನು ತಲುಪಿದೆ ಮತ್ತು ನನಗೆ ಬೇರೆ ಕಾರ್ಯಕ್ರಮ ಇರುವುದರಿಂದ ಪ್ರಕರಣವನ್ನು ತ್ವರಿತಗೊಳಿಸುವಂತೆ ವಿನಂತಿಸಿದೆ. ವಿನಾಯತಿ ಅರ್ಜಿಯನ್ನು ಹಾಕುವಂತೆ ವಕೀಲರಲ್ಲಿ ವಿನಂತಿಸಿದೆ. ನಂತರ ನಾನು ಅಲ್ಲಿಂದ ಹೊರಟೆ. ನಾನು ನಾಲ್ಕು ಗಂಟೆಗಳ ಕಾಲ ಸಮಾರಂಭದಲ್ಲಿದ್ದೆ ಮತ್ತು ಇತರ ಕಾರ್ಯಕ್ರಮದಕಲ್ಲಿ ಭಾಗವಹಿಸಿದ್ದೆ. ಇದರ ನಂತರ ನನ್ನ ವಿರುದ್ಧ ಆರೋಪಗಳನ್ನು ಮಾಡಲು ಪ್ರಾರಂಭಿಸಲಾಗಿದೆ” ಎಂದು ಸಚನ್ ತಿಳಿಸಿದ್ದಾರೆ.

“ಬೇಕಿದ್ದರೆ ಕೋರ್ಟ್‌ನಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಿ. ನಾನು ನಾಳೆ ನ್ಯಾಯಾಲಯಕ್ಕೆ ಹೋಗುತ್ತೇನೆ, ನನ್ನ ವಕೀಲರ ಮೂಲಕ ನನ್ನ ಕಡೆಯ ವಾದವನ್ನು ಪ್ರಸ್ತುತಪಡಿಸುತ್ತೇನೆ” ಎಂದು ಸಚನ್ ಹೇಳಿದ್ದಾರೆ.

ಇದನ್ನೂ ಓದಿ: ಸಂದರ್ಶನ: ಕಾಂಗ್ರೆಸ್ ತತ್ವ ಸಿದ್ಧಾಂತ ಇಷ್ಟ, ಅದಕ್ಕಾಗಿ ಕಾಂಗ್ರೆಸ್ ಸೇರುತ್ತಿದ್ದೇನೆ- ಪೂರ್ವಜ್ ವಿಶ್ವನಾಥ್‌

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷ ರಾಕೇಶ್ ಸಚನ್ ಅವರಿಗೆ 35 ವರ್ಷಗಳ ಹಿಂದಿನ ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಶಿಕ್ಷೆಯನ್ನು ಕೇಳಿದ ಸಚಿವರು ನ್ಯಾಯಾಲಯದಿಂದ ತಪ್ಪಿಸಿಕೊಂಡರು. ಇದು ಬಿಜೆಪಿ ಜನರ ನಿಜವಾದ ಗುಣ ಎಂದು ಹೇಳಿದೆ.

ಸಚಿವ ರಾಕೇಶ್ ಸಚನ್ ವಿರುದ್ಧ ಐಪಿಸಿ ಸೆಕ್ಷನ್ 389 ಮತ್ತು 411 ರ ಅಡಿಯಲ್ಲಿ ರೈಲ್ವೆ ಗುತ್ತಿಗೆ ಪಡೆದಿದ್ದಾಗ ರೈಲ್ವೇ ಸಲಕರಣೆಯನ್ನು ಕಳ್ಳತನ ಮಾಡಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿತ್ತು ಎಂದು ಇಟಿವಿ ಹಿಂದಿ ವರದಿ ಮಾಡಿದೆ. ಕಳ್ಳತನ ಮಾಡಲಾಗಿದ್ದ ಬ್ಯಾಲೆಸ್ಟ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣ ನ್ಯಾಯಾಲಯದಲ್ಲಿ ಬಾಕಿ ಇತ್ತು. ಕಳೆದ ಶನಿವಾರ ನ್ಯಾಯಾಲಯವು ತೀರ್ಪಿನ ದಿನವನ್ನು ನಿಗದಿಪಡಿಸಿತು. ತಾನು ತಪ್ಪಿತಸ್ಥ ಎಂದು ತಿಳಿದ ನಂತರ ರಾಕೇಶ್ ಸಚನ್ ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದಾರೆ ಎಂದು ಇಟಿವಿ ವರದಿ ಮಾಡಿದೆ.

“ಯುಪಿಯಲ್ಲಿ ಬಿಜೆಪಿ ಗಂಟಲಿನ ತನಕ ಭ್ರಷ್ಟಾಚಾರದಲ್ಲಿ ಮುಳುಗಿದೆ. ಯೋಗಿ ಸರ್ಕಾರದ ಕ್ಯಾಬಿನೆಟ್ ಸಚಿವ ರಾಕೇಶ್ ಸಚನ್ ಅವರಿಗೆ 35 ವರ್ಷಗಳ ಹಿಂದಿನ ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಶಿಕ್ಷೆಯನ್ನು ಕೇಳಿದ ಸಚಿವರು ನ್ಯಾಯಾಲಯದಿಂದ ತಪ್ಪಿಸಿಕೊಂಡರು. ಎಷ್ಟೊಂದು ಮುಜುಗರ! ಇದು ಬಿಜೆಪಿ ಜನರ ನಿಜವಾದ ಗುಣ. ಮುಖ್ಯಮಂತ್ರಿ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಪಡೆಯಬೇಕು” ಎಂದು ಸಮಾಜವಾದಿ ಪಕ್ಷ ಹೇಳಿದ್ದು, ಪತ್ರಿಕಾ ವರದಿಯನ್ನು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...